ವಿಷಯಕ್ಕೆ ಹೋಗಿ

ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆ ಹೆಚ್ಚು : ಡಾ||ಸಿದ್ದರಾಮಯ್ಯ

ಹುಳಿಯಾರಿನ ಬ್ರಹ್ಮಕುಮಾರೀ ಈಶ್ವರೀಯ ರಾಜಯೋಗ ಭವನದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ವೈದ್ಯರ ಹಾಗೂ ಪತ್ರಕರ್ತರ ದಿನಾಚರಣಾ ಸಮಾರಂಭದ ಉದ್ಘಾಟನೆಯನ್ನು ಹೋಬಳೀಯ ವೈದ್ಯರು ಹಾಗೂ ಪತ್ರಕರ್ತರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಹುಳಿಯಾರಿನ ಬ್ರಹ್ಮಕುಮಾರೀ ಈಶ್ವರೀಯ ವಿದ್ಯಾಲಯದ ರಾಜಯೋಗ ಭವನದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ವೈದ್ಯರ ಹಾಗೂ ಪತ್ರಕರ್ತರ ದಿನಾಚರಣಾ ಸಮಾರಂಭದಲ್ಲಿ ವಿದ್ಯಾಲಯದ ಗೀತಕ್ಕ ಪ್ರಾಸ್ತಾವಿಕ ನುಡಿನುಡಿದರು.

ಇಂದು ನಮ್ಮ ದೇಶದಲ್ಲಿ ಸಾಕಷ್ಟು ವೈದ್ಯಕೀಯ ವಿದ್ಯಾಲಯಗಳಿದ್ದು,ಪ್ರತಿ ವರ್ಷ ಸಾವಿರಾರು ಮಂದಿ ವೈದ್ಯಕೀಯ ವಿಷಯದಲ್ಲಿ ಅಧ್ಯಯನ ಮಾಡುವ ಮೂಲಕ ವೈದ್ಯ ವೃತ್ತಿಯನ್ನು ಪ್ರಾರಂಭಿಸುತ್ತಿದ್ದಾರೆ. ಆದರೆ ಇಂದಿನ ಅನೇಕ ವೈದ್ಯರು ತಮ್ಮ ವೃತ್ತಿಯನ್ನು ನಗರ ಪ್ರದೇಶ ಹಾಗೂ ವಿದೇಶಗಳಲ್ಲಿ ಮಾಡಲು ಮುಂದಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ವೈದ್ಯ ವೃತ್ತಿ ಮಾಡುವವರ ಸಂಖ್ಯೆ ಬೆರಳೆಣಿಕೆಯಷ್ಟಿದ್ದು, ವೈದ್ಯರ ಕೊರತೆಯಿದೆ ಎಂದು ಸಿದ್ದಶ್ರೀ ಕ್ಲಿನಿಕ್ ನ ಡಾ|| ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಹುಳಿಯಾರಿನ ಬ್ರಹ್ಮಕುಮಾರೀ ಈಶ್ವರೀಯ ರಾಜಯೋಗ ಭವನದಲ್ಲಿ ಜುಲೈ ಒಂದರ ಭಾನುವಾರ ಸಂಜೆ ಆಯೋಜಿಸಿದ್ದ ವೈದ್ಯರ ಹಾಗೂ ಪತ್ರಕರ್ತರ ದಿನಾಚರಣಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅವರು ತಮ್ಮ ಅನಿಸಿಕೆಗಳನ್ನು ತಿಳಿಸಿದರು.
ಪ್ರತಿಯೊಬ್ಬ ಮಾನವನ ಜೀವನದಲ್ಲಿ ಸಂತೋಷದಿಂದ ಇರಬೇಕೆಂದರೆ,ಮೊದಲು ಆತನ ಆರೋಗ್ಯ ಉತ್ತಮವಾಗಿರಬೇಕು. ಅದಕ್ಕಾಗಿ ಮಾನವ ತನ್ನ ದೈಹಿಕ,ಮಾನಸಿಕ,ಆಧ್ಯಾತ್ಮಿಕ ಆರೋಗ್ಯದ ಕಡೆ ಹೆಚ್ಚು ಲಕ್ಷ್ಯವನ್ನಿಟ್ಟುಕೊಂಡಿರಬೇಕು ಎಂದರು.ಈಡಿ ನಮ್ಮ ದೇಶದಲ್ಲಿ ಹೆಚ್ಚಿನ ಹಾಗೂ ಪ್ರತಿಭಾವಂತ ವೈದ್ಯರಿರುವುದು ಕರ್ನಾಟಕದಲ್ಲಿ ಆಗಿದ್ದು ,ಅದು ನಮೆಲ್ಲರಿಗೂ ಹಾಗೂ ರಾಜ್ಯಕ್ಕೂ ಹೆಮ್ಮೆ ತರುವಂತಹ ಸಂಗತಿಯಾಗಿದೆ.ಇಂದು ಗಮನಿಸಿದರೆ ಬೆಂಗಳೂರಿಗೆ ನಾನಾ ರಾಜ್ಯಗಳು,ದೇಶಗಳಿಂದ ಜನರು ಬಂದು ತಮ್ಮ ಅನೇಕ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.ಬಿ.ಸಿ.ರಾಯ್ ಅವರ ಸ್ಮರಣಾರ್ಥ ಈ ವೈದ್ಯರ ದಿನಾಚರಣೆಯನ್ನು ಆಚರಿಸುತ್ತಿದ್ದು, ಪ್ರತಿ ವರ್ಷ ಸ್ನೇಹಿತರೊಂದಿಗೆ ನಮ್ಮ ದಿನಾಚರಣೆಯನ್ನು ಆಚರಿಸುತ್ತಿದ್ದೆವು,ಆದರೆ ಈ ಬಾರಿ ಬ್ರಹ್ಮಕುಮಾರೀ ಈಶ್ವರೀಯ ವಿದ್ಯಾಲಯದ ಗೀತಕ್ಕನವರು ನಮನ್ನೆಲ್ಲಾ ಆಹ್ವಾನಿಸಿ ದಿನಾಚರಣೆ ನಡೆಸಿದ್ದಾರೆ ಅವರಿಗೆ ನಮ್ಮ ವೈದ್ಯವೃಂದ ಪರವಾಗಿ ಕೃತಜ್ಞತೆಗಳನ್ನು ತಿಳಿಸಿದರು.
ಪತ್ರಕರ್ತ ಕಿರಣ್ ಮಾತನಾಡಿ ಇಂದು ಮಾರುಕಟ್ಟೆಯಲ್ಲಿ ಎಲ್ಲಾ ವಸ್ತುಗಳ ಬೆಲೆ ಹೆಚ್ಚಾಗಿದೆ.ಆದರೂ ಸಹ ತನ್ನ ಉತ್ಪಾದನೆಗೆ ತಗುಲುವ ಉತ್ಪಾದನ ವೆಚ್ಚಕ್ಕಿಂತ ಕಡಿಮೆ ಬೆಲೆಗೆ ದೊರೆಯುವಂತಹದ್ದು ದಿನಪತ್ರಿಗಳು,ಪ್ರಸ್ತುತದಲ್ಲಿ ಒಂದು ಪತ್ರಿಕೆ ಮುದ್ರಣವಾಗಲು ೧೪ ರಿಂದ ೧೫ರೂ ವೆಚ್ಚವಾಗುತ್ತದೆ ಎಂದರು.ಇಂದು ಪತ್ರಿಕೆಯನ್ನು ಕೊಂಡು ಓದುವರ ಸಂಖ್ಯೆ ಕ್ಷಿಣಿಸಿದೆ.ಸಮಾಜಕ್ಕೆ ಹಾಗೂ ಜನರಿಗೆ ಅನುಕೂಲವಾಗುವಂತಹ ಅನೇಕ ವಿಚಾರಗಳು ಪತ್ರಿಕೆಯಿಂದ ಲಭ್ಯವಾಗುತ್ತವೆ.ಅನೇಕರು ಪತ್ರಿಕೆಯಲ್ಲೇನಿದೆ ಎನ್ನುತ್ತಾರೆ.ಪತ್ರಿಕೆ ಪ್ರಸ್ತುತ ಸಮಾಜಕ್ಕೆ,ಜನಜೀವನಕ್ಕೆ ಬೇಕಾದ ಅನೇಕಾನೇಕ ವಿಚಾರಗಳ ಕಣಜವಾಗಿದೆ ಎಂದರು.
ರೋಗಿಗಳು ವೈದ್ಯರೊಂದಿಗೆ ಉತ್ತಮ ಸಂಭಂದವನ್ನು ಹೊಂದಿರುವುದರ ಜೊತೆಗೆ ವೈದ್ಯರಿಗೆ ಸ್ಪಂದಿಸಿ ನಡೆಯಬೇಕಿದೆ ಎಂದು ಸ್ಪಂದನ ನರ್ಸಿಂಗ್ ಹೋಮ್ ನ ಡಾ||ಕೆ.ಎಚ್.ನಾಗರಾಜ್ ತಿಳಿಸಿದರು.ಸಮಾರಂಭದಲ್ಲಿ ಚನ್ನಬಸವೇಶ್ವರ ಆಸ್ಪತ್ರೆಯ ಡಾ||ಕೆ.ಪಿ.ರಾಜಶೇಖರ್,ಡಾ||ರಾಜೇಂದ್ರ,ಡಾ||ಪ್ರೇಮನಾಗರಾಜ್,ಡಾ||ಚಂದ್ರದರ,ಡಾ||ಲಕ್ಷ್ಮಿ , ಪತ್ರಕರ್ತರಾದ ಹೆಚ್.ಎ.ರಮೇಶ್,ಆರ್.ಸಿ.ಮಹೇಶ್ ,ಬ್ರಹ್ಮಕುಮಾರೀ ಈಶ್ವರೀಯ ವಿದ್ಯಾಲಯದ ಗೀತಕ್ಕ, ಬ್ಯಾಂಕ್ ಮರುಳಯ್ಯ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.