ವಿಷಯಕ್ಕೆ ಹೋಗಿ

ಸರ್ಕಾರದ ಸುವರ್ಣಭೂಮಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ:ತಾ.ಪಂ.ಅಧ್ಯಕ್ಷ ಸೀತಾರಾಂ

 ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ಕೃಷಿ ಇಲಾಖೆಯ ಸುವರ್ಣಭೂಮಿ ಯೋಜನೆಯಡಿ ಫಲಾನುಭವಿಗಳನ್ನು ತಾ.ಪಂ.ಅಧ್ಯಕ್ಷ ಜಿ.ಆರ್.ಸೀತಾರಾಂ ಅವರು ಲಾಟರಿ ಎತ್ತುವ ಮೂಲಕ ಆಯ್ಕೆ ಮಾಡಿದರು.ನೋಡೆಲ್ ಅಧಿಕಾರಿ ಆನಂದ್ ,ಜಿ.ಪಂ.ಸದಸ್ಯರಾದ ಮಂಜುಳಮ್ಮ,ನಿಂಗಮ್ಮ, ತಾ.ಪಂ.ಸದಸ್ಯರಾದ ನವೀನ್,ವಸಂತಯ್ಯ ಇದ್ದಾರೆ.

ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಕೃಷಿ ಇಲಾಖೆಯವರು ನಡೆಸಿದ 2012-13 ನೇ ಸಾಲಿನ ಸುವರ್ಣಭೂಮಿ ಯೋಜನೆಯಡಿ ಲಾಟರಿ ಮೂಲಕ ಅರ್ಹಫಲಾನುಭವಿಗಳ ಆಯ್ಕೆಯ ಸಮಾರಂಭವನ್ನು ತಾ.ಪಂ.ಅಧ್ಯಕ್ಷ ಜಿ.ಆರ್.ಸೀತಾರಾಂ ಉದ್ಘಾಟಿಸಿದರು.ನೋಡೆಲ್ ಅಧಿಕಾರಿ ಆನಂದ್ ,ಜಿ.ಪಂ.ಸದಸ್ಯರಾದ ಮಂಜುಳಮ್ಮ,ನಿಂಗಮ್ಮ, ತಾ.ಪಂ.ಸದಸ್ಯರಾದ ನವೀನ್,ವಸಂತಯ್ಯ ಇದ್ದಾರೆ.

ಸರ್ಕಾರದಿಂದ ರೈತರಿಗಾಗಿ ಅನೇಕ ಯೋಜನೆಗಳಿದ್ದು,ಅಂತಹ ಯೋಜನೆಗಳಲ್ಲಿ ಈ ರ್ಸುವರ್ಣಭೂಮಿ ಯೋಜನೆಯು ಸಹ ಒಂದಾಗಿದೆ ಇದರಿಂದ ಸಿಗುವಂತಹ ಹಣದ ಸದುಪಯೋಗವನ್ನು ರೈತರು ಮಾಡಿಕೊಳ್ಳಬೇಕಿದೆ ಎಂದು ತಾ.ಪಂ.ಅಧ್ಯಕ್ಷ ಜಿ.ಆರ್.ಸೀತಾರಾಂ ತಿಳಿಸಿದರು.
ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಕೃಷಿ ಇಲಾಖೆಯವರು ನಡೆಸಿದ 2012-13 ನೇ ಸಾಲಿನ ಸುವರ್ಣಭೂಮಿ ಯೋಜನೆಯಡಿ ಲಾಟರಿ ಮೂಲಕ ಅರ್ಹಫಲಾನುಭವಿಗಳ ಆಯ್ಕೆಯ ಸಮಾರಂಭದ ಉದ್ಘಾಟನೆ ನೆರವೇರಿಸಿದ ಅವರು ಮಾತನಾಡಿದರು.
ರಾಜ್ಯಾದಂತ ತೀವ್ರ ಬರಗಾಲ ತಲೆದೂರಿದ್ದು ರೈತರು ಒಂದು ಹೊತ್ತಿನ ಅನ್ನಕ್ಕೂ ಪರಿತಪಿಸುವಂತಾಗಿದೆ.ಅಲ್ಲದೆ ತಮ್ಮ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ, ಮೇವಿಲ್ಲದೆ ಖಾಸಾಯಿಖಾನೆಗೆ ಹಟ್ಟುತ್ತಿದ್ದಾರೆ.ಅಲ್ಲದೆ ಜನ ಸಾಕಷ್ಟು ತೊಂದರೆಯಲ್ಲಿ ಸಿಲುಕಿದ್ದಾರೆ ಇಂತಹ ಅನೇಕ ಸಮಸ್ಯೆಗಳನ್ನು ಮನಗಂಡ ಸರ್ಕಾರ ರೈತರಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ರೂಪಿಸಿ,ಸ್ವಸಹಾಯ ಸಂಘಗಳ ರಚನೆ ಮಾಡಿ ಅವುಗಳ ಮೂಲಕ ಜನರಿಗೆ ಸಹಾಯಧನವನ್ನು ನೀಡುತ್ತಿದೆ.ಜೋತೆಗೆ ಅರ್ಹ ರೈತರಿಗೆ ಸಹಾಯ ಧನ ವಿತರಣೆಯನ್ನು ಮಾಡುತ್ತಿದೆ ಎಂದರು. ಸುವರ್ಣಭೂಮಿ ಯೋಜನೆಯಡಿ ಸಿಗುವಂತಹ ಹಣವನ್ನು ಪೋಲುಮಾಡದೆ ಬಳಸಿಕೊಳ್ಳಿ ಎಂದರು.
ಅರ್ಹಫಲಾನುಭವಿಗಳ ಆಯ್ಕೆಯು ಲಾಟರಿ ಮೂಲಕ,ರೈತರ ಸಮ್ಮುಖದಲ್ಲಿ ನಡೆದಿದ್ದು ಹುಳಿಯಾರು ಹೋಬಳಿಯಲ್ಲಿ ಸಾಕಷ್ಟು ಅರ್ಜಿಗಳು ಬಂದಿದ್ದು,ಅವುಗಳಲ್ಲಿ ಪರಿಶಿಷ್ಟ ಜಾತಿ,ಪಂಗಡ ಹಾಗೂ ಸಾಮಾನ್ಯ ವರ್ಗದ ಮಹಿಳೆಯರು ಮತ್ತು ಪುರುಷರಿಗೆ ಸರ್ಕಾರದ ನಿಯಮಾನುಸಾರ ಫಲಾನುಭವಿಗಳನ್ನು ಆಯ್ಕೆಮಾಡುತ್ತಿರುವುದಾಗಿ ಕೃಷಿ ಸಹಾಯಕ ನೂರುಲ್ಲಾ ತಿಳಿಸಿದರು.
ಸಮಾರಂಭದಲ್ಲಿ ಜಿಲ್ಲಾಪಂಚಾಯ್ತಿ ಸಹಾಯಕ ಇಂಜಿನಿಯರ್ ಆನಂದ್,ತಾ.ಪಂ.ಉಪಾಧ್ಯಕ್ಷೆ ಬೀಬೀ ಫಾತೀಮ, ಜಿ.ಪಂ.ಸದಸ್ಯರಾದ ಮಂಜುಳಮ್ಮ,ನಿಂಗಮ್ಮ,ತಾ.ಪಂ.ಸದಸ್ಯರಾದ ನವೀನ್,ವಸಂತಯ್ಯ.ಕೃಷಿ ಇಲಾಖೆಯ ತಿಪ್ಪೇಸ್ವಾಮಿ,ಶಿವಣ್ಣ,ಕೃಷಿಕ ಸಮಾಜದ ಮಹೇಶ್ ,ತೋಟಗಾರಿಕೆ ಇಲಾಖೆಯ ಹರ್ಷ.ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...