ವಿಷಯಕ್ಕೆ ಹೋಗಿ

ಹಿಂದೂ ಸಂಸ್ಕೃತಿ ಹಾಗೂ ಸಂಘಟನೆಗಳ ಮೇಲೆ ಪ್ರಹಾರ ನಡೆಯುತ್ತಿದೆ : ಪ್ರಮೋದ್ ಮುತಾಲಿಕ್

 ದಾವಣಗೆರೆಗೆ ತೆರಳುತ್ತಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮಾರ್ಗ ಮಧ್ಯೆ ಹುಳಿಯಾರಿನ ಹಿಂದೂಪರ ಸಂಘಟಕರೊಂದಿಗೆ ಮಾತನಡಿದು.ಜೊತೆಗೆ ಸಂಘಟಕರು ಅಭಿನಂದನೆ ಸಲ್ಲಿಸಿದರು.
ಪಸ್ತುತದಲ್ಲಿ ನಾವು ಗಮನಿಸಿದಂತೆ ನಮ್ಮ ಅನೇಕ ಟಿ.ವಿ ಚಾನಲ್ ಗಳು ಹಾಗೂ ಚಲನಚಿತ್ರಗಳಲ್ಲಿ ನಮ್ಮ ಹಿಂದೂ ದೇವರುಗಳ ಪಾತ್ರಗಳನ್ನು ನಟಿಸುತ್ತಾ ಹಿಂದೂ ದೇವತೆಗಳ, ಸಂಸ್ಕೃತಿ ಹಾಗೂ ಸ್ವಾಮೀಜಿಗಳ ,ಸಂಘಟನೆಗಳ ಮೇಲೆ ದೃಶ್ಯ ಮಾಧ್ಯಮಗಳು ವ್ಯವಸ್ಥಿತ ಪ್ರಹಾರ ನಡೆಸುತ್ತಿದ್ದಾರೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು.
ದಾವಣಗೆರೆಯಲ್ಲಿ ನಡೆಯಲಿರುವ ಕಾರ್ಯಕರ್ತರ ಸಭೆಗೆ ತೆರಳುತ್ತಿದ್ದ ಅವರು ಮಾರ್ಗ ಮಧ್ಯೆ ಹುಳಿಯಾರಿನ ಹಿಂದೂ ಜಾಗರಣ ವೇದಿಕಕೆಯ ಹಾಗೂ ಶ್ರೀ ರಾಮ ಸೇನೆಯ ಸಂಘಟಕರೊಂದಿಗೆ ಕೆಲ ಕಾಲ ಮಾತನಾಡಿದರು.
ಸಿನಿಮಾ ಮಾಧ್ಯಮಗಳಲ್ಲಿ,ಧಾರವಾಹಿಗಳಲ್ಲಿ,ನಾಟಕಗಳಲ್ಲಿ,ಅಸಭ್ಯ,ಆಶ್ಲೀಲ ಪಾತ್ರಗಳನ್ನು ಅಭಿನಯಿಸುತ್ತಿದ್ದಾರೆ ಹಾಗೂ ಸಂಭಾಷಣೆಯನ್ನು ಬಳಸುತ್ತಿದ್ದು ಸಮಾಜದ ಮೇಲೆ ದುಷ್ಪರಿಣಾಮ ಬೀರುತಿವೆ,ಇದು ಉತ್ತಮ ಬೆಳವಣಿಗೆಯಲ್ಲ ಎಂದರು.ದೃಶ್ಯ ಮಾಧ್ಯಮಗಳಲ್ಲಿ ಅಸಭ್ಯ,ಆಶ್ಲೀಲತೆಯನ್ನು ತೋರಿಸಿದರೆ ಅದು ಕಾನೂನು ಬಾಹಿರವಾಗುತ್ತದೆ.ಅದರೂ ಕೆಲ ಚಾಲನ್ ಗಳಲ್ಲಿ ಇಂತಹ ದೃಶ್ಯಗಳು ಹೆಗ್ಗಿಲ್ಲದೆ ಬಿತ್ತರವಾಗುತ್ತಿವೆ.ತಿರುಪತಿ ತಿರುಮಲ ಎಂಬ ಹಿಂದೂ ದೇವರ ಹೆಸರನ್ನು ಅಪಹಾಸ್ಯವನ್ನಾಗಿ ಮಾಡಿ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿದ್ದು,ಅದನ್ನು ತಾವು ವಿರೋಧಿಸಿದ್ದು,ನೂರಕ್ಕೂ ಹೆಚ್ಚು ಕಂಪ್ಲೇಂಟ್ ಳನ್ನು ಸೆನ್ ಸಾರ್ ಮಂಡಳಿಯವರಿಗೂ ನೀಡಲಾಗಿದೆ.ಇದನ್ನು ನಿಲ್ಲಿಸದೇ ಹೋದರೆ ಮುಂದೆ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು.
ಈ ರೀತಿಯ ಕೆಟ್ಟ ಪ್ರವೃತ್ತಿ ಹಿಂದೂ ಧರ್ಮದ ದೇವತೆಗಳ ಮೇಲೆ ಮಾತ್ರ ಆಗುತ್ತಿದೆ,ನಮ್ಮದೇಶದಲ್ಲಿ ಹಿಂದೂದೇವರುಗಳಂತೆ ಇತರ ಧರ್ಮಗಳ ದೇವರುಗಳಿವೆ ಅವುಗಳ ಬಗ್ಗೆ ಈ ರೀತಿ ತೋರಿಸುವುದಿಲ್ಲ ಯಾಕೆ? ಎಂದು ಪ್ರಶ್ನಿಸಿದರು. ಇಂದು ಎಲ್ಲಾ ಮಾಧ್ಯಮಗಳು ಒಂದೆಡೆಯಾಗಿ ಸಮಗ್ರ ವಿಷಯಗಳ ಸರಿ ತಪ್ಪುಗಳನ್ನು ಜನರ ಮುಂದಿಡುವ ಕಾರ್ಯ ಮಾಡಬೇಕಿದೆ ಎಂದರು.
ತಾ.ಪಂ.ಸದಸ್ಯ ಕೆಂಕೆರೆ ನವೀನ್,ಏಜೆಂಟ್ ಗಂಗಣ್ಣ,ಚುರುಮುರಿ ರಘು ಕುಮಾರ್,ಶ್ರೀಧರ್ ಅಂಬೇಕರ್,ರುದ್ರೇಶ್,ಭಗವಂತಾಚಾರ್ ,ರವಿ,ಗ್ರಾ.ಪಂ ಸದಸ್ಯ ಹೇಮಂತ್ ಸೇರಿದಂತೆ ಇತರರು ಇದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...