ವಿಷಯಕ್ಕೆ ಹೋಗಿ

ಹಿಂದೂ ಸಂಸ್ಕೃತಿ ಹಾಗೂ ಸಂಘಟನೆಗಳ ಮೇಲೆ ಪ್ರಹಾರ ನಡೆಯುತ್ತಿದೆ : ಪ್ರಮೋದ್ ಮುತಾಲಿಕ್

 ದಾವಣಗೆರೆಗೆ ತೆರಳುತ್ತಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮಾರ್ಗ ಮಧ್ಯೆ ಹುಳಿಯಾರಿನ ಹಿಂದೂಪರ ಸಂಘಟಕರೊಂದಿಗೆ ಮಾತನಡಿದು.ಜೊತೆಗೆ ಸಂಘಟಕರು ಅಭಿನಂದನೆ ಸಲ್ಲಿಸಿದರು.
ಪಸ್ತುತದಲ್ಲಿ ನಾವು ಗಮನಿಸಿದಂತೆ ನಮ್ಮ ಅನೇಕ ಟಿ.ವಿ ಚಾನಲ್ ಗಳು ಹಾಗೂ ಚಲನಚಿತ್ರಗಳಲ್ಲಿ ನಮ್ಮ ಹಿಂದೂ ದೇವರುಗಳ ಪಾತ್ರಗಳನ್ನು ನಟಿಸುತ್ತಾ ಹಿಂದೂ ದೇವತೆಗಳ, ಸಂಸ್ಕೃತಿ ಹಾಗೂ ಸ್ವಾಮೀಜಿಗಳ ,ಸಂಘಟನೆಗಳ ಮೇಲೆ ದೃಶ್ಯ ಮಾಧ್ಯಮಗಳು ವ್ಯವಸ್ಥಿತ ಪ್ರಹಾರ ನಡೆಸುತ್ತಿದ್ದಾರೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು.
ದಾವಣಗೆರೆಯಲ್ಲಿ ನಡೆಯಲಿರುವ ಕಾರ್ಯಕರ್ತರ ಸಭೆಗೆ ತೆರಳುತ್ತಿದ್ದ ಅವರು ಮಾರ್ಗ ಮಧ್ಯೆ ಹುಳಿಯಾರಿನ ಹಿಂದೂ ಜಾಗರಣ ವೇದಿಕಕೆಯ ಹಾಗೂ ಶ್ರೀ ರಾಮ ಸೇನೆಯ ಸಂಘಟಕರೊಂದಿಗೆ ಕೆಲ ಕಾಲ ಮಾತನಾಡಿದರು.
ಸಿನಿಮಾ ಮಾಧ್ಯಮಗಳಲ್ಲಿ,ಧಾರವಾಹಿಗಳಲ್ಲಿ,ನಾಟಕಗಳಲ್ಲಿ,ಅಸಭ್ಯ,ಆಶ್ಲೀಲ ಪಾತ್ರಗಳನ್ನು ಅಭಿನಯಿಸುತ್ತಿದ್ದಾರೆ ಹಾಗೂ ಸಂಭಾಷಣೆಯನ್ನು ಬಳಸುತ್ತಿದ್ದು ಸಮಾಜದ ಮೇಲೆ ದುಷ್ಪರಿಣಾಮ ಬೀರುತಿವೆ,ಇದು ಉತ್ತಮ ಬೆಳವಣಿಗೆಯಲ್ಲ ಎಂದರು.ದೃಶ್ಯ ಮಾಧ್ಯಮಗಳಲ್ಲಿ ಅಸಭ್ಯ,ಆಶ್ಲೀಲತೆಯನ್ನು ತೋರಿಸಿದರೆ ಅದು ಕಾನೂನು ಬಾಹಿರವಾಗುತ್ತದೆ.ಅದರೂ ಕೆಲ ಚಾಲನ್ ಗಳಲ್ಲಿ ಇಂತಹ ದೃಶ್ಯಗಳು ಹೆಗ್ಗಿಲ್ಲದೆ ಬಿತ್ತರವಾಗುತ್ತಿವೆ.ತಿರುಪತಿ ತಿರುಮಲ ಎಂಬ ಹಿಂದೂ ದೇವರ ಹೆಸರನ್ನು ಅಪಹಾಸ್ಯವನ್ನಾಗಿ ಮಾಡಿ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿದ್ದು,ಅದನ್ನು ತಾವು ವಿರೋಧಿಸಿದ್ದು,ನೂರಕ್ಕೂ ಹೆಚ್ಚು ಕಂಪ್ಲೇಂಟ್ ಳನ್ನು ಸೆನ್ ಸಾರ್ ಮಂಡಳಿಯವರಿಗೂ ನೀಡಲಾಗಿದೆ.ಇದನ್ನು ನಿಲ್ಲಿಸದೇ ಹೋದರೆ ಮುಂದೆ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು.
ಈ ರೀತಿಯ ಕೆಟ್ಟ ಪ್ರವೃತ್ತಿ ಹಿಂದೂ ಧರ್ಮದ ದೇವತೆಗಳ ಮೇಲೆ ಮಾತ್ರ ಆಗುತ್ತಿದೆ,ನಮ್ಮದೇಶದಲ್ಲಿ ಹಿಂದೂದೇವರುಗಳಂತೆ ಇತರ ಧರ್ಮಗಳ ದೇವರುಗಳಿವೆ ಅವುಗಳ ಬಗ್ಗೆ ಈ ರೀತಿ ತೋರಿಸುವುದಿಲ್ಲ ಯಾಕೆ? ಎಂದು ಪ್ರಶ್ನಿಸಿದರು. ಇಂದು ಎಲ್ಲಾ ಮಾಧ್ಯಮಗಳು ಒಂದೆಡೆಯಾಗಿ ಸಮಗ್ರ ವಿಷಯಗಳ ಸರಿ ತಪ್ಪುಗಳನ್ನು ಜನರ ಮುಂದಿಡುವ ಕಾರ್ಯ ಮಾಡಬೇಕಿದೆ ಎಂದರು.
ತಾ.ಪಂ.ಸದಸ್ಯ ಕೆಂಕೆರೆ ನವೀನ್,ಏಜೆಂಟ್ ಗಂಗಣ್ಣ,ಚುರುಮುರಿ ರಘು ಕುಮಾರ್,ಶ್ರೀಧರ್ ಅಂಬೇಕರ್,ರುದ್ರೇಶ್,ಭಗವಂತಾಚಾರ್ ,ರವಿ,ಗ್ರಾ.ಪಂ ಸದಸ್ಯ ಹೇಮಂತ್ ಸೇರಿದಂತೆ ಇತರರು ಇದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...