ವಿಷಯಕ್ಕೆ ಹೋಗಿ

ಜನತೆ ಹಾಗೂ ಅಧಿಕಾರಿಗಳ ನಡುವೆ ಸ್ಪಂದನಾ ಮನೋಭಾವ ಬೆಳೆಯಬೇಕು: ಶಾಸಕ ಸಿ.ಬಿ.ಎಸ್

ಹುಳಿಯಾರಿನ ಎಂಪಿಎಸ್ ಶಾಲಾ ಆವರಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಡಿದರು.


ಪ್ರಸ್ತುತ ಸಮಾದಲ್ಲಿನ ಆಡಳಿತಯಂತ್ರ ಸುಗಮವಾಗಿ ಸಾಗಬೇಕಾದರೆ ಸಾರ್ವಜನಿಕರು ಹಾಗೂ ಅಧಿಕಾರಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆದಾಗ ಮಾತ್ರ ಸಾಧ್ಯ,ಜನತೆ ತಮ್ಮ ಸಮಸ್ಯೆಗಳನ್ನು ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದು ಅವುಗಳ ಪರಿಹಾರಕ್ಕೆ ಆಗ್ರಹಿಸುವುದು ಸಹಜ ಆದರೆ ಸಮಸ್ಯೆಳಿಗೆ ಪರಿಹಾರ ಕಂಡುಕೊಳ್ಳಲು ಕೆಲಸಮಯ ತೆಗೆದು ಕೊಳ್ಳುತ್ತದೆ ಇದನ್ನು ತಿಳಿದ ಜನರು ಅಧಿಕಾರಿಗಳ ನಡುವೆ ಸ್ಪಂದನಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.
ಹುಳಿಯಾರಿನ ಎಂಪಿಎಸ್ ಶಾಲಾ ಆವರಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಅವರು ಮಾತನಾಡಿದರು.
ಇಂದು ನಾವೆಲ್ಲಾ ಗಮನಿಸಿದಂತೆ ಸರ್ಕಾರ ಜನರ ಸಮಸ್ಯೆಗಳನ್ನು ಆಲಿಸುವ ಬದಲು ತಮ್ಮತಮ್ಮಲ್ಲೇ ಕಿತ್ತಾಟವನ್ನು ಮಾಡುತ್ತಾ ಕುರ್ಚಿಯ ವ್ಯಾಮೋಹದಲ್ಲಿ ಸಿಲುಕಿದ್ದು,ರಾಜ್ಯ್ದ ಅಭಿವೃದ್ದಿಯನ್ನೇ ಮರೆತು ಕುಳಿತಿದೆ.ಈರೀತಿಯ ಬೆಳವಣಿಗೆ ಮುಂದುವರೆದರೆ ರಾಜ್ಯದ ಅಭಿವೃದ್ದಿಗೆ ತೊಡಕಾಗಿ ಪರಿಣಮಿಸುತ್ತದೆ ಎಂದರು. ತಾಲ್ಲೂಕಿನಾದ್ಯಂತ ಬರಗಾಲ ಅವರಿಸಿದ್ದು ಕುಡಿಯುವ ನೀರಿಗಾಗಿ ಬೋರ್ ವೆಲ್ ಗಳನ್ನು,ಜಾನುವಾರುಗಳಿಗೆ ಮೇವು,ನೀರಿನ ವ್ಯವಸ್ಥೆಗಾಗಿ ಗೋಶಾಲೆಗಳನ್ನು ತೆರೆಯುವ ಕಾರ್ಯಗಳು ನಡೆಯುತ್ತಿದ್ದು,ಜನರು ಸಹ ತಮ್ಮ ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿ.ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಎಂದರು.
ತಹಶೀಲ್ದಾರ್ ಉಮೇಶ್ ಚಂದ್ರ ಕಂದಾಯ ಇಲಾಖೆಯಲ್ಲಿನ ಯೋಜನೆಗಳು ಹಾಗೂ ಅವುಗಳನ್ನು ಜನರು ಯಾವರೀತಿ ಪಡೆಯಬಹುದು ಎಂಬುದನ್ನು ತಿಳಿದರು.ಅಲ್ಲದೆ ಆರ್ಹ ಫಲಾನುಭವಿಗಳ ಆಯ್ಕೆಗಾಗಿ ನಡೆದ ಗಣತಿಯಲ್ಲಿ ತಾಂತ್ರಿಕ ಕಾರಣದಿಂದ ಕೆಲ ಆರ್ಹಫಲಾನುಭವಿಗಳಿಗೆ ದೊರೆಯಬೇಕಿದ್ದ ಸೌಲಭ್ಯ ಇಲ್ಲದಂತಾಗಿದೆ.ಅರ್ಹತೆ ಹೊಂದಿದ್ದ ಫಲಾನುಭವಿಗಳಿಗೆ ಶೀಘ್ರದಲ್ಲೇ ಪಿಂಚಣಿ ಸೌಲಭ್ಯ,ವೃದ್ಯಾಪ್ಯ ವೇತನ,ಅಂಗವಿಕಲ ವೇತನ,ವಿದವಾ ವೇತನ ಸೇರಿದಂತೆ ಇತರ ಸೌಲಭ್ಯಗಳು ಸಿಗುವಂತೆ ಮಾಡುವುದಾಗಿ ತಿಳಿದರು.
ಜನಸ್ಪಂದನದಲ್ಲಿ ಸಾರ್ವಜನಿಕರಿಂದ ಸಾಕಷ್ಟು ಸಮಸ್ಯೆಗಳು ಕೇಳಿಬರುತ್ತಿತ್ತು.ಜನಸ್ಪಂದನದಲ್ಲಿ ಮಾತ್ರ ಅಧಿಕಾರಿಗಳು ಜನರ ಎಲ್ಲಾ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುತ್ತೇವೆಂದು ತ್ಯಾಪೆ ಹಚ್ಚುವ ಕಾರ್ಯವನ್ನು ಮಾಡುತ್ತಾರೆ ಎಂದು ಸಾರ್ವಜನಿಕರು ದೂರಿದರು. ಸುವರ್ಣಭೂಮಿಯೋಜನೆಗೆ ಅರ್ಜಿಸಲ್ಲಿಸಲು ಬೇಕಾದ ಪಹಣಿ ಪಡೆಯಲು ಹಾಗೂ ಬೆಳೆ ವಿಮೆಗೆ ಬ್ಯಾಂಕ್ ಖಾತೆ ತೆರೆಯಲು ರೈತರು ಪರದಾಡುತ್ತಿದ್ದಾಗ ಯಾವುದೇ ಅಧಿಕಾರಿಗಳು ಇತ್ತ ಗಮನ ಹರಿಸದೇ ಹೋಗಿದ್ದಾರೆ.ರೈತರಿಗೆ ಆಗುವಷ್ಟು ತೊಂದರೆ ಬೇರೆಯಾವುದೇ ಕ್ಷೇತ್ರದಲ್ಲಿಲ್ಲ ಇದರ ಬಗ್ಗೆ ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ರೈತರಿಗೆ ನೆಮ್ಮದಿಯನ್ನು ಕೊಡಿ.
ತೋಟಗಾರಿಕಾ ಇಲಾಖೆಯ ರೇಣುಕಾಪ್ರಸನ್ನ,ಪಶು ವೈದ್ಯ ಹಾಗೂ ಸಹಾಯಕ ನಿರ್ದೇಶಕ ಶಶಿಕುಮಾರ್,ಮಂಜುನಾಥ್,ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜಯಪ್ಪ,ಜಲಾನಯನ ಇಲಾಖೆಯ ಪರುಶುರಾಮಪ್ಪ ಸೇರಿದಂತೆ ಇತರ ಇಲಾಖೆಯವರು ತಮ್ಮ ತಮ್ಮ ಇಲಾಖೆಯಲ್ಲಿನ ಯೋಜನೆಗಳ ಬಗ್ಗೆ ವಿವರಗಳನ್ನು ತಿಳಿಸಿದರು.
ಸಮಾರಂಭದಲ್ಲಿ ಜಿ.ಪಂ.ಸದಸ್ಯೆ ಮಂಜುಳಮ್ಮ,ತಾ.ಪಂ.ಅಧ್ಯಕ್ಷ ಜಿ.ಆರ್.ಸೀತಾರಾಂಯ್ಯ,ಉಪಾಧ್ಯಕ್ಷೆ ಬೀಬೀ ಫಾತೀಮ,ಸದಸ್ಯರಾದ ಕೆಂಕೆರೆ ನವೀನ್,ಗ್ರಾ.ಪಂ.ಉಪಾಧ್ಯಕ್ಷೆ ವೆಂಕಟಮ್ಮ,ಗ್ರಾ.ಪಂ.ಸದಸ್ಯರು ಸೇರಿದಂತೆ ಇಲಾಖಾ ಅಧಿಕಾರಿಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...