ವಿಷಯಕ್ಕೆ ಹೋಗಿ

ತಾಯಿ ಎದೆಹಾಲು ಎಲ್ಲಕಿಂತ ಅಮೂಲ್ಯ : ವೈದ್ಯೆ ಚಂದನ

ಹುಳಿಯಾರು ಹೋಬಳಿ ಗಾಣಧಾಳು ಗ್ರಾ.ಪಂ.ಯ ಸೋಮೇನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಮಹಿಳೆ ಹಾಗೂ ಮಕ್ಕಳ ಅಭಿವೃದ್ದಿ ಇಲಾಖೆಯವರು ನಡೆಸಿ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಶಿಶು ಮತ್ತು ಮಕ್ಕಳ ಕಲ್ಯಾಭಿವೃದ್ದಿ ಅಧಿಕಾರಿ ಅನೀಸ್ ಕೈಸರ್ ಉದ್ಘಾಟಿಸಿದರು.ಆಯುಶ್ ವೈದ್ಯೆ ಚಂದನ ,ತಾ.ಪಂ.ಸದಸ್ಯ ಆರ್.ಪಿ.ವಸಂತಯ್ಯ,ಎಸಿಡಿಪಿಓ ಪರಮೇಶ್ವರಪ್ಪ,ಗ್ರಾ.ಪಂ.ಯ ಲಕ್ಷ್ಮಿದೇವಿ,ಕಲ್ಪನಾಬಾಯಿ ,ಶಿಕ್ಷಕಿ ಸವಿತಾ,ಲಕ್ಷ್ಮಮ್ಮ ಇದ್ದಾರೆ.
ಇಂದಿನ ಆಧುನಿಕ ಜಗತ್ತಿನಲ್ಲಿ ಜನರು ಕೆಲವೊಂದು ವಸ್ತುಗಳ ಮಹತ್ವವನ್ನು ಮರೆತಿದ್ದು,ಅವುಗಳಿಂದ ಆಗುವಂತ ಉತ್ತಮ ಪ್ರಯೋಜನಗಳನ್ನು ತಿಳಿಯದೇ ಹೋಗಿದ್ದಾರೆ.ಅಲ್ಲದೆ ಹಿಂದಿನ ಅನೇಕ ಮಹಿಳೆಯರಿಗೆ ತಾಯಿತನ ಹಾಗೂ ತಾಯಿ ಎದೆಹಾಲಿನ ಅಮೂಲ್ಯತೆ ತಿಳಿದೇ ಹೋಗಿರುವ ಸನ್ನಿವೇಶದಲ್ಲಿ ಎದೆ ಹಾಲೇ ಅಮೂಲ್ಯವೆಂದು ಆಯುಶ್ ವೈದ್ಯೆ ಚಂದನ ತಿಳಿಸಿದರು.
ಹುಳಿಯಾರು ಹೋಬಳಿ ಗಾಣಧಾಳು ಗ್ರಾ.ಪಂ.ಯ ಸೋಮೇನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಮಹಿಳೆ ಹಾಗೂ ಮಕ್ಕಳ ಅಭಿವೃದ್ದಿ ಇಲಾಖೆಯವರು ನಡೆಸಿ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ತಾಯಿ ಎದೆಹಾಲಿನ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ತಾಯಿಯ ಎದೆಹಾಲು ಅಮೃತಕ್ಕೆ ಸಮನಾದುದು ಎದೆಹಾಲಿನಲ್ಲಿ ಮಗುವಿನ ಆರೋಗ್ಯಕರ ಬೆಳವಣಿಗೆಗೆ ಬೇಕಾಗುವಂತಹ ಅನೇಕ ಅಂಶಗಳು ಇದ್ದು,ಮಗು ದಷ್ಟ-ಪುಷ್ಟವಾಗಿ ಬೆಳೆಯಲು ಸಹಕಾರಿಯಾಗಿರುತ್ತದೆ.ಪ್ರತಿಯೊಬ್ಬ ವೈದ್ಯರು ಸಹ ಎದೆಹಾಲಿನ ಮಹತ್ವವನ್ನು ಒತ್ತಿ ಹೇಳುತ್ತಾರೆ ಆದರೆ ಕೆಲ ತಾಯಂದಿರು ತಮ್ಮ ತಪ್ಪು ತಿಳುವಳಿಕೆಯಿಂದ ಮಗುವಿಗೆ ಎದೆಹಾಲು ನೀಡದಿದರೆ ತಮ್ಮ ಸೌಂದರ್ಯ ನಶಿಸಿ ಹೋಗುತ್ತದೆಂದು ನಿರ್ಲಕ್ಷ್ಯ ವಹಿಸುತ್ತಾರೆ.ಆದರೆ ತಾಯಿಯ ಹಾಲು ಅನ್ನೋದು ಅಮೃತಕ್ಕೆ ಸಮಾನವೆಂಬುದು ಅಕ್ಷರಷಹ ಸತ್ಯವಾಗಿದ್ದು ಮಗುವಿಗೆ ಸಂಪೂರ್ಣ ಪೋಷಕಾಂಶ ಲಭಿಸುತ್ತದೆ.ಮಗುವಿನ ಜನನದ ಪ್ರಥಮ ಆರು ತಿಂಗಳು ಕಡ್ಡಾಯವಾಗಿ ತಾಯಿ ಹಾಲನ್ನು ಬಿಟ್ಟು ಬೇರೇನನ್ನೂ ನೀಡಬಾರದು,ಆರು ತಿಂಗಳ ನಂತರ ಇತರ ಪೂರಕ ಆಹಾರವನ್ನು ಸ್ವಲ್ಪ ಪ್ರಮಾಣದಲ್ಲಿ ನೀಡುತ್ತಾ ಎದೆಹಾಲನ್ನು ಕನಿಷ್ಠ ಎರಡು ವರ್ಷದ ವರೆಗೆ ನೀಡಬೇಕು ಎಂದರು.
ಸಮಾರಂಭ ಉದ್ಘಾಟಿಸಿದ ಶಿಶು ಮತ್ತು ಮಕ್ಕಳ ಕಲ್ಯಾಣಾಭಿವೃದ್ದಿ ಅಧಿಕಾರಿ ಅನೀಸ್ ಕೈಸರ್ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯು ಆಗಸ್ಟ್ 1ರಿಂದ 7ರ ವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ  (ಇಂಟರ್ ನ್ಯಾಷನಲ್ ಬ್ರೆಸ್ಟ್ ಫೀಡಿಂಗ್ ವೀಕ್) ವನ್ನು 20 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ. ವಿಶ್ವದ ಅನೇಕ ದೇಶಗಳಲ್ಲಿ ಇದನ್ನೂ ಆಚರಿಸಲಾಗುತ್ತದೆ ಎಂದರು. ಎದೆಹಾಲಿನಲ್ಲಿ ವಿಟಮಿನ್, ಪ್ರೋಟೀನ್, ಕೊಬ್ಬಿನ ಅಂಶ ಸರಿಯಾದ ಪ್ರಮಾಣದಲ್ಲಿರುತ್ತದೆ. ಎದೆಹಾಲು ಇತರ ಆಹಾರಗಳಿಗಿಂತ ಬೇಗನೆ ಜೀರ್ಣವಾಗುತ್ತದೆ. ಎದೆಹಾಲು ಸಾಕಷ್ಟು ಸಿಕ್ಕಿದ ಮಕ್ಕಳಿಗೆ ಅಸ್ತಮಾ, ಅಲರ್ಜಿ, ಸೋಂಕು, ಜ್ವರ, ಶ್ವಾಸಕೋಶದ, ಹೃದರಯದ ಕಾಯಿಲೆ ವಿರಳ ಎಂದು ತಿಳಿಸಿದರು.
ತಾ.ಪಂ.ಸದಸ್ಯ ಆರ್.ಪಿ.ವಸಂತಯ್ಯ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಎಸಿಡಿಪಿಓ ಪರಮೇಶ್ವರಪ್ಪ,ಗ್ರಾ.ಪಂ.ಯ ಲಕ್ಷ್ಮಿದೇವಿ,ಕಲ್ಪನಾಬಾಯಿ ,ಶಿಕ್ಷಕಿ ಸವಿತಾ,ಲಕ್ಷ್ಮಮ್ಮ,ಎಸ್,ಡಿ.ಎಂ.ಸಿ.ಯ ಆರ್.ಸಿ.ಮಹೇಶ್ ಹಾಜರಿದ್ದರು.ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮಮ್ಮ ನಿರೂಪಿಸಿ,ಶಿವಣ್ಣ ಸ್ವಾಗತಿಸಿ,ಪರಮೇಶ್ವರಪ್ಪ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...