ವಿಷಯಕ್ಕೆ ಹೋಗಿ

ತಾಯಿ ಎದೆಹಾಲು ಎಲ್ಲಕಿಂತ ಅಮೂಲ್ಯ : ವೈದ್ಯೆ ಚಂದನ

ಹುಳಿಯಾರು ಹೋಬಳಿ ಗಾಣಧಾಳು ಗ್ರಾ.ಪಂ.ಯ ಸೋಮೇನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಮಹಿಳೆ ಹಾಗೂ ಮಕ್ಕಳ ಅಭಿವೃದ್ದಿ ಇಲಾಖೆಯವರು ನಡೆಸಿ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಶಿಶು ಮತ್ತು ಮಕ್ಕಳ ಕಲ್ಯಾಭಿವೃದ್ದಿ ಅಧಿಕಾರಿ ಅನೀಸ್ ಕೈಸರ್ ಉದ್ಘಾಟಿಸಿದರು.ಆಯುಶ್ ವೈದ್ಯೆ ಚಂದನ ,ತಾ.ಪಂ.ಸದಸ್ಯ ಆರ್.ಪಿ.ವಸಂತಯ್ಯ,ಎಸಿಡಿಪಿಓ ಪರಮೇಶ್ವರಪ್ಪ,ಗ್ರಾ.ಪಂ.ಯ ಲಕ್ಷ್ಮಿದೇವಿ,ಕಲ್ಪನಾಬಾಯಿ ,ಶಿಕ್ಷಕಿ ಸವಿತಾ,ಲಕ್ಷ್ಮಮ್ಮ ಇದ್ದಾರೆ.
ಇಂದಿನ ಆಧುನಿಕ ಜಗತ್ತಿನಲ್ಲಿ ಜನರು ಕೆಲವೊಂದು ವಸ್ತುಗಳ ಮಹತ್ವವನ್ನು ಮರೆತಿದ್ದು,ಅವುಗಳಿಂದ ಆಗುವಂತ ಉತ್ತಮ ಪ್ರಯೋಜನಗಳನ್ನು ತಿಳಿಯದೇ ಹೋಗಿದ್ದಾರೆ.ಅಲ್ಲದೆ ಹಿಂದಿನ ಅನೇಕ ಮಹಿಳೆಯರಿಗೆ ತಾಯಿತನ ಹಾಗೂ ತಾಯಿ ಎದೆಹಾಲಿನ ಅಮೂಲ್ಯತೆ ತಿಳಿದೇ ಹೋಗಿರುವ ಸನ್ನಿವೇಶದಲ್ಲಿ ಎದೆ ಹಾಲೇ ಅಮೂಲ್ಯವೆಂದು ಆಯುಶ್ ವೈದ್ಯೆ ಚಂದನ ತಿಳಿಸಿದರು.
ಹುಳಿಯಾರು ಹೋಬಳಿ ಗಾಣಧಾಳು ಗ್ರಾ.ಪಂ.ಯ ಸೋಮೇನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಮಹಿಳೆ ಹಾಗೂ ಮಕ್ಕಳ ಅಭಿವೃದ್ದಿ ಇಲಾಖೆಯವರು ನಡೆಸಿ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ತಾಯಿ ಎದೆಹಾಲಿನ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ತಾಯಿಯ ಎದೆಹಾಲು ಅಮೃತಕ್ಕೆ ಸಮನಾದುದು ಎದೆಹಾಲಿನಲ್ಲಿ ಮಗುವಿನ ಆರೋಗ್ಯಕರ ಬೆಳವಣಿಗೆಗೆ ಬೇಕಾಗುವಂತಹ ಅನೇಕ ಅಂಶಗಳು ಇದ್ದು,ಮಗು ದಷ್ಟ-ಪುಷ್ಟವಾಗಿ ಬೆಳೆಯಲು ಸಹಕಾರಿಯಾಗಿರುತ್ತದೆ.ಪ್ರತಿಯೊಬ್ಬ ವೈದ್ಯರು ಸಹ ಎದೆಹಾಲಿನ ಮಹತ್ವವನ್ನು ಒತ್ತಿ ಹೇಳುತ್ತಾರೆ ಆದರೆ ಕೆಲ ತಾಯಂದಿರು ತಮ್ಮ ತಪ್ಪು ತಿಳುವಳಿಕೆಯಿಂದ ಮಗುವಿಗೆ ಎದೆಹಾಲು ನೀಡದಿದರೆ ತಮ್ಮ ಸೌಂದರ್ಯ ನಶಿಸಿ ಹೋಗುತ್ತದೆಂದು ನಿರ್ಲಕ್ಷ್ಯ ವಹಿಸುತ್ತಾರೆ.ಆದರೆ ತಾಯಿಯ ಹಾಲು ಅನ್ನೋದು ಅಮೃತಕ್ಕೆ ಸಮಾನವೆಂಬುದು ಅಕ್ಷರಷಹ ಸತ್ಯವಾಗಿದ್ದು ಮಗುವಿಗೆ ಸಂಪೂರ್ಣ ಪೋಷಕಾಂಶ ಲಭಿಸುತ್ತದೆ.ಮಗುವಿನ ಜನನದ ಪ್ರಥಮ ಆರು ತಿಂಗಳು ಕಡ್ಡಾಯವಾಗಿ ತಾಯಿ ಹಾಲನ್ನು ಬಿಟ್ಟು ಬೇರೇನನ್ನೂ ನೀಡಬಾರದು,ಆರು ತಿಂಗಳ ನಂತರ ಇತರ ಪೂರಕ ಆಹಾರವನ್ನು ಸ್ವಲ್ಪ ಪ್ರಮಾಣದಲ್ಲಿ ನೀಡುತ್ತಾ ಎದೆಹಾಲನ್ನು ಕನಿಷ್ಠ ಎರಡು ವರ್ಷದ ವರೆಗೆ ನೀಡಬೇಕು ಎಂದರು.
ಸಮಾರಂಭ ಉದ್ಘಾಟಿಸಿದ ಶಿಶು ಮತ್ತು ಮಕ್ಕಳ ಕಲ್ಯಾಣಾಭಿವೃದ್ದಿ ಅಧಿಕಾರಿ ಅನೀಸ್ ಕೈಸರ್ ಮಾತನಾಡಿ ವಿಶ್ವ ಆರೋಗ್ಯ ಸಂಸ್ಥೆಯು ಆಗಸ್ಟ್ 1ರಿಂದ 7ರ ವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ  (ಇಂಟರ್ ನ್ಯಾಷನಲ್ ಬ್ರೆಸ್ಟ್ ಫೀಡಿಂಗ್ ವೀಕ್) ವನ್ನು 20 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ. ವಿಶ್ವದ ಅನೇಕ ದೇಶಗಳಲ್ಲಿ ಇದನ್ನೂ ಆಚರಿಸಲಾಗುತ್ತದೆ ಎಂದರು. ಎದೆಹಾಲಿನಲ್ಲಿ ವಿಟಮಿನ್, ಪ್ರೋಟೀನ್, ಕೊಬ್ಬಿನ ಅಂಶ ಸರಿಯಾದ ಪ್ರಮಾಣದಲ್ಲಿರುತ್ತದೆ. ಎದೆಹಾಲು ಇತರ ಆಹಾರಗಳಿಗಿಂತ ಬೇಗನೆ ಜೀರ್ಣವಾಗುತ್ತದೆ. ಎದೆಹಾಲು ಸಾಕಷ್ಟು ಸಿಕ್ಕಿದ ಮಕ್ಕಳಿಗೆ ಅಸ್ತಮಾ, ಅಲರ್ಜಿ, ಸೋಂಕು, ಜ್ವರ, ಶ್ವಾಸಕೋಶದ, ಹೃದರಯದ ಕಾಯಿಲೆ ವಿರಳ ಎಂದು ತಿಳಿಸಿದರು.
ತಾ.ಪಂ.ಸದಸ್ಯ ಆರ್.ಪಿ.ವಸಂತಯ್ಯ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಎಸಿಡಿಪಿಓ ಪರಮೇಶ್ವರಪ್ಪ,ಗ್ರಾ.ಪಂ.ಯ ಲಕ್ಷ್ಮಿದೇವಿ,ಕಲ್ಪನಾಬಾಯಿ ,ಶಿಕ್ಷಕಿ ಸವಿತಾ,ಲಕ್ಷ್ಮಮ್ಮ,ಎಸ್,ಡಿ.ಎಂ.ಸಿ.ಯ ಆರ್.ಸಿ.ಮಹೇಶ್ ಹಾಜರಿದ್ದರು.ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮಮ್ಮ ನಿರೂಪಿಸಿ,ಶಿವಣ್ಣ ಸ್ವಾಗತಿಸಿ,ಪರಮೇಶ್ವರಪ್ಪ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...