ವಿಷಯಕ್ಕೆ ಹೋಗಿ

ಕನಕಪತ್ತಿನ ಸಹಕಾರದಲ್ಲಿ ಮೂರು ಕೋಟಿ ವ್ಯವಹಾರ,ಉತ್ತಮ ಲಾಭಾಂಶ

ಹುಳಿಯಾರಿನ ಶ್ರೀಕನಕ ಪತ್ತಿನ ಸಹಕಾರ ಸಂಘದ 2011-12 ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆಯ ಉದ್ಘಾಟನೆಯಲ್ಲಿ ಸಂಘದ ಅಧ್ಯಕ್ಷ ವೈ.ಸಿ.ಸಿದ್ದರಾಮಯ್ಯ, ನಿರ್ದೇಶಕರಾದ ಕೆಚ್. ಆಶೋಕ್, ಎನ್.ಬಿ.ಗವಿರಂಗಯ್ಯ,ಎಸ್.ಜಿ.ಶಿವಣ್ಣ,ಶಿವಮ್ಮ,ಜಯಣ್ಣ ಇದ್ದಾರೆ.
ಹೋಬಳಿಯ ಶ್ರೀಕನಕ ಪತ್ತಿನ ಸಹಕಾರ ಸಂಘದ 2011-12 ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆ ಭಾನುವಾರ ಸಂಘದ ಕಛೇರಿ ಆವರಣದಲ್ಲಿ ಸಂಘದ ಅಧ್ಯಕ್ಷ ವೈ.ಸಿ.ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಾರಂಭವನ್ನು ಉದ್ಘಾಟಿಸಿದ ಸಂಘದ ನಿರ್ದೇಶಕ ಹೆಚ್. ಆಶೋಕ್ ಮಾತನಾಡಿ,ಇಂದು ಕನಕಪತ್ತಿನ ಸಹಕಾರ ಸಂಘ ಒಂದು ಉತ್ತಮ ಸ್ಥಾನದಲ್ಲಿದೆ ಎಂದರೆ ಅದಕ್ಕೆ ಕಾರಣ ಸಂಘದ ಸರ್ವ ಸದಸ್ಯರು.ಈ ಸಂಘ ಸುಮಾರು 600 ಸದಸ್ಯರನ್ನೊಳಗೊಂಡಿದೆ..ಆದರೆ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಕೆಲವೇ ಮಂದಿ ಹಾಜರಿರುವುದು ನಮ್ಮ ಸಂಘದಲ್ಲಿ ಒಗ್ಗಟಿಲ್ಲವೇನೂ ಅನಿಸುತ್ತದೆ. ಸಭೆಯಲ್ಲಿ ನಡೆಯುವಂತಹ ಕಾರ್ಯಗಳ ಬಗ್ಗೆ ಹಾಗೂ ತೆಗೆದು ಕೊಳ್ಳುವ ತೀರ್ಮಾನ ಸರಿಯೋ,ತಪ್ಪೋ ಎಂಬುದನ್ನು ತಿಳಿದು,ಸಲಹೆಗಳನ್ನು ನೀಡಲು ಸದಸ್ಯರುಗಳು ಮುಂದೆ ಬರಬೇಕಿದೆ ಅದಕ್ಕಾಗಿ ದಿನನಿತ್ಯ ಸಂಘದ ಕಛೇರಿಗೆ ಬರದೇ ಹೋದರು ಸಹ ಇಂತಹ ಸಭೆಗಳಿಗೆ ಬಂದು ಕಾರ್ಯಕಾರಿ ಮಂಡಳಿಯ ಆಡಳಿತದ ಏರಿಳಿತಗಳ ಬಗ್ಗೆ ಕೇಳುವಂತಾಗಿ ಎಂದರು.

ಸಂಘದ ಅಧ್ಯಕ್ಷರಾದ ವೈ.ಸಿ.ಸಿದ್ದರಾಮಯ್ಯನವರು ಬೈಲಾತಿದ್ದುಪಡಿಗೆ ಅನುಮೋದನೆ ನೀಡಿ,ಸಂಘ ಸ್ಥಾಪನೆಯಾಗಿ ಎರಡು ವರ್ಷ ಕಳೆದು ಮೂರನೇವರ್ಷದಲ್ಲಿ ಸಾಗುತ್ತಿದ್ದು,ಸುಮಾರು ಎರಡರಿಂದ ಮೂರು ಕೋಟಿ ವ್ಯವಹಾರವನ್ನು ಮಾಡಿದ್ದು,ಉತ್ತಮ ಲಾಭಾಂಶಾವನ್ನು ಹೊಂದಿದೆ.ಈ ಬಾರಿ ಸದಸ್ಯರಿಗೆ ಅನುಕೂಲವಾಗುವಂತೆ ಕೆಲ ಬಡ್ಡಿ ದರಗಳನ್ನು ಕಡಿತ ಮಾಡಲಾಗಿದೆ ಎಂದರು.ಸದಸ್ಯರು ಕೇಳುವಂತೆ ಸಂಘಕ್ಕೆ ಬಂದ ಲಾಭಾಂಶವನ್ನು ಹಂಚಿಕೆ ಮಾಡುವ ಬದಲು ನಮ್ಮದೇ ಆದ ಒಂದು ನೀವೇಶನವನ್ನು ಖರೀದಿಸಲು ವಿನಿಯೋಗಿಸೋಣ,ಇಲ್ಲ ತಮಗೆ ಡಿವಿಡೆಂಟ್ ಬೇಕೆ ಬೇಕು ಎಂದಾದರೆ ಕಾರ್ಯಕಾರಿ ಮಂಡಳಿ ಸಭೆ ಸೇರಿ ಈ ಬಗ್ಗೆ ತಿರ್ಮಾನ ಕೈಗೊಳುವುದಾಗಿ ತಿಳಿಸಿದರು. ಕನಕ ಪತ್ತಿನ ಸಹಕಾರ ಸಂಘದಲ್ಲಿ ಎಲ್ಲಾ ಸಮುದಾಯದವರು ಇದ್ದಾರೆ.ಮುಂದಿನ ದಿನಗಳಲ್ಲಿ ಹೆಚ್ಚಿನ ಸದಸ್ಯರನ್ನು ಹೊಂದುವ ಮೂಲಕ ಸಂಘ ಬೆಳೆಯಲಿ ಎಂದು ಆಶಿಸಿದರು.

ಸಮಾರಂಭದಲ್ಲಿ ಅತಿಥಿಗಳಾಗಿ ನಿರ್ದೇಶಕರಾದ ಎನ್.ಬಿ.ಗವಿರಂಗಯ್ಯ,ಎಸ್.ಜಿ.ಶಿವಣ್ಣ,ಶಿವಮ್ಮ, ಜಿ.ವಿ.ಮಂಜುನಾಥ್, ಜಯಣ್ಣ ಹಾಗೂ ಗ್ರಾ.ಪಂ.ಸದಸ್ಯರಾದ ರಂಗನಾಥ್,ಆಶೋಕ್ ಬಾಬು,ಶಿವಣ್ಣ ಉಪಸ್ಥಿತರಿದ್ದು,ಅಂಜನ ಪ್ರಾರ್ಥಿಸಿ,ರಮೇಶ್ ಸ್ವಾಗತಿಸಿ,ಶಿಕ್ಷಕ ಕೃಷ್ಣಮೂರ್ತಿ ನಿರೂಪಿಸಿ,ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...