ವಿಷಯಕ್ಕೆ ಹೋಗಿ

ಕನಕಪತ್ತಿನ ಸಹಕಾರದಲ್ಲಿ ಮೂರು ಕೋಟಿ ವ್ಯವಹಾರ,ಉತ್ತಮ ಲಾಭಾಂಶ

ಹುಳಿಯಾರಿನ ಶ್ರೀಕನಕ ಪತ್ತಿನ ಸಹಕಾರ ಸಂಘದ 2011-12 ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆಯ ಉದ್ಘಾಟನೆಯಲ್ಲಿ ಸಂಘದ ಅಧ್ಯಕ್ಷ ವೈ.ಸಿ.ಸಿದ್ದರಾಮಯ್ಯ, ನಿರ್ದೇಶಕರಾದ ಕೆಚ್. ಆಶೋಕ್, ಎನ್.ಬಿ.ಗವಿರಂಗಯ್ಯ,ಎಸ್.ಜಿ.ಶಿವಣ್ಣ,ಶಿವಮ್ಮ,ಜಯಣ್ಣ ಇದ್ದಾರೆ.
ಹೋಬಳಿಯ ಶ್ರೀಕನಕ ಪತ್ತಿನ ಸಹಕಾರ ಸಂಘದ 2011-12 ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆ ಭಾನುವಾರ ಸಂಘದ ಕಛೇರಿ ಆವರಣದಲ್ಲಿ ಸಂಘದ ಅಧ್ಯಕ್ಷ ವೈ.ಸಿ.ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಾರಂಭವನ್ನು ಉದ್ಘಾಟಿಸಿದ ಸಂಘದ ನಿರ್ದೇಶಕ ಹೆಚ್. ಆಶೋಕ್ ಮಾತನಾಡಿ,ಇಂದು ಕನಕಪತ್ತಿನ ಸಹಕಾರ ಸಂಘ ಒಂದು ಉತ್ತಮ ಸ್ಥಾನದಲ್ಲಿದೆ ಎಂದರೆ ಅದಕ್ಕೆ ಕಾರಣ ಸಂಘದ ಸರ್ವ ಸದಸ್ಯರು.ಈ ಸಂಘ ಸುಮಾರು 600 ಸದಸ್ಯರನ್ನೊಳಗೊಂಡಿದೆ..ಆದರೆ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಕೆಲವೇ ಮಂದಿ ಹಾಜರಿರುವುದು ನಮ್ಮ ಸಂಘದಲ್ಲಿ ಒಗ್ಗಟಿಲ್ಲವೇನೂ ಅನಿಸುತ್ತದೆ. ಸಭೆಯಲ್ಲಿ ನಡೆಯುವಂತಹ ಕಾರ್ಯಗಳ ಬಗ್ಗೆ ಹಾಗೂ ತೆಗೆದು ಕೊಳ್ಳುವ ತೀರ್ಮಾನ ಸರಿಯೋ,ತಪ್ಪೋ ಎಂಬುದನ್ನು ತಿಳಿದು,ಸಲಹೆಗಳನ್ನು ನೀಡಲು ಸದಸ್ಯರುಗಳು ಮುಂದೆ ಬರಬೇಕಿದೆ ಅದಕ್ಕಾಗಿ ದಿನನಿತ್ಯ ಸಂಘದ ಕಛೇರಿಗೆ ಬರದೇ ಹೋದರು ಸಹ ಇಂತಹ ಸಭೆಗಳಿಗೆ ಬಂದು ಕಾರ್ಯಕಾರಿ ಮಂಡಳಿಯ ಆಡಳಿತದ ಏರಿಳಿತಗಳ ಬಗ್ಗೆ ಕೇಳುವಂತಾಗಿ ಎಂದರು.

ಸಂಘದ ಅಧ್ಯಕ್ಷರಾದ ವೈ.ಸಿ.ಸಿದ್ದರಾಮಯ್ಯನವರು ಬೈಲಾತಿದ್ದುಪಡಿಗೆ ಅನುಮೋದನೆ ನೀಡಿ,ಸಂಘ ಸ್ಥಾಪನೆಯಾಗಿ ಎರಡು ವರ್ಷ ಕಳೆದು ಮೂರನೇವರ್ಷದಲ್ಲಿ ಸಾಗುತ್ತಿದ್ದು,ಸುಮಾರು ಎರಡರಿಂದ ಮೂರು ಕೋಟಿ ವ್ಯವಹಾರವನ್ನು ಮಾಡಿದ್ದು,ಉತ್ತಮ ಲಾಭಾಂಶಾವನ್ನು ಹೊಂದಿದೆ.ಈ ಬಾರಿ ಸದಸ್ಯರಿಗೆ ಅನುಕೂಲವಾಗುವಂತೆ ಕೆಲ ಬಡ್ಡಿ ದರಗಳನ್ನು ಕಡಿತ ಮಾಡಲಾಗಿದೆ ಎಂದರು.ಸದಸ್ಯರು ಕೇಳುವಂತೆ ಸಂಘಕ್ಕೆ ಬಂದ ಲಾಭಾಂಶವನ್ನು ಹಂಚಿಕೆ ಮಾಡುವ ಬದಲು ನಮ್ಮದೇ ಆದ ಒಂದು ನೀವೇಶನವನ್ನು ಖರೀದಿಸಲು ವಿನಿಯೋಗಿಸೋಣ,ಇಲ್ಲ ತಮಗೆ ಡಿವಿಡೆಂಟ್ ಬೇಕೆ ಬೇಕು ಎಂದಾದರೆ ಕಾರ್ಯಕಾರಿ ಮಂಡಳಿ ಸಭೆ ಸೇರಿ ಈ ಬಗ್ಗೆ ತಿರ್ಮಾನ ಕೈಗೊಳುವುದಾಗಿ ತಿಳಿಸಿದರು. ಕನಕ ಪತ್ತಿನ ಸಹಕಾರ ಸಂಘದಲ್ಲಿ ಎಲ್ಲಾ ಸಮುದಾಯದವರು ಇದ್ದಾರೆ.ಮುಂದಿನ ದಿನಗಳಲ್ಲಿ ಹೆಚ್ಚಿನ ಸದಸ್ಯರನ್ನು ಹೊಂದುವ ಮೂಲಕ ಸಂಘ ಬೆಳೆಯಲಿ ಎಂದು ಆಶಿಸಿದರು.

ಸಮಾರಂಭದಲ್ಲಿ ಅತಿಥಿಗಳಾಗಿ ನಿರ್ದೇಶಕರಾದ ಎನ್.ಬಿ.ಗವಿರಂಗಯ್ಯ,ಎಸ್.ಜಿ.ಶಿವಣ್ಣ,ಶಿವಮ್ಮ, ಜಿ.ವಿ.ಮಂಜುನಾಥ್, ಜಯಣ್ಣ ಹಾಗೂ ಗ್ರಾ.ಪಂ.ಸದಸ್ಯರಾದ ರಂಗನಾಥ್,ಆಶೋಕ್ ಬಾಬು,ಶಿವಣ್ಣ ಉಪಸ್ಥಿತರಿದ್ದು,ಅಂಜನ ಪ್ರಾರ್ಥಿಸಿ,ರಮೇಶ್ ಸ್ವಾಗತಿಸಿ,ಶಿಕ್ಷಕ ಕೃಷ್ಣಮೂರ್ತಿ ನಿರೂಪಿಸಿ,ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.