ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಅಕ್ಟೋಬರ್, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ
ವಾಲ್ಮೀಕಿ ಜಯಂತಿ:   ಹುಳಿಯಾರು ಸಮೀಪದ ದಸೂಡಿಯಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್ ಕುಮಾರ್ ,ಹುಳಿಯಾರು ಎಪಿಎಂಸಿಯ ಎಲ್.ಆರ್.ಬಾಲಾಜಿ ಸೇರಿದಂತೆ ಅನೇಕ ಗ್ರಾಮಸ್ಥರು ಪಾಲ್ಗೊಂಡಿದ್ದರು.. ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಭೇಟಿ: ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಹುಳಿಯಾರಿನಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದರು.

ಜಿಲ್ಲಾ ಕಸಾಪ ಅಧ್ಯಕ್ಷರ ಭೇಟಿ

ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸೋ.ಮು.ಭಾಸ್ಕರಾಚಾರ್ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಎಂ.ಎಸ್.ರವಿಕುಮಾರ್ ನಿವೃತ್ತ ಉಪನ್ಯಾಸಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನ ಪಂಡಿತ್ ತ.ಶಿ.ಬಸವಮೂರ್ತಿ ಅವರ ನಿವಾಸಕ್ಕೆ ಸೋಮವಾರ ಭೇಟಿಯಿತ್ತು ತಾಲ್ಲೂಕಿನಲ್ಲಿ ನಡೆಸಲು ಉದ್ದೇಶಿಸಿರುವ ಕಸಾಪ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದರು.ತಾಲ್ಲೂಕು ಕಾರ್ಯಕಾರಿ ಸಮಿತಿಯಲ್ಲಿ ಅವರನ್ನು ಗೌರವಾಧ್ಯಕ್ಷರಾಗಿ ಮುಂದುವರಿಯುವಂತೆ ಹಾಗೂ ಕಸಾಪದ ಎಲ್ಲಾ ಚಟುವಟಿಕೆಗಳಲ್ಲು ಪಾಲ್ಗೊಳ್ಳುವಂತೆ ಕೋರಿದರು. ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾಗಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವಮೂರ್ತಿ ಅವರನ್ನು ಸಕಾರಣವಿಲ್ಲದೆ ಏಕಾಏಕಿ ಅಧ್ಯಕ್ಷ ಸ್ಥಾನದಿಂದ ಕಿತ್ತೊಗೆದ ಬಗ್ಗೆ ಹಾಗೂ ಜಿಲ್ಲಾಧ್ಯಕ್ಷರು ಈ ಪ್ರಕರಣದಲ್ಲಿ ಮೌನದಿಂದಿದ್ದ ಬಗ್ಗೆ ಜಿಲ್ಲಾಧ್ಯಕ್ಷರಾದ ಸೋ.ಮು.ಭಾಸ್ಕರಾಚಾರ್ ರೊಂದಿಗೆ ಮಾತಿನ ಚಕಮಕಿ ನಡೆಯಿತು. ಹುಳಿಯಾರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಹೆಚ್.ಕೆ. ರಾಮಯ್ಯ,ಕನ್ನಡ ಸಾಹಿತ್ಯ ಪರಿಷತ್ ನ ತಾಲ್ಲೂಕು ಸಂಚಾಲಕರಾದ ಶಬ್ಬಿರ್,ಮಂಜುರಾಜ್ ಅರಸ್,ತಾಲ್ಲುಕು ಕರವೇ ಅಧ್ಯಕ್ಷ ಸಿ.ಟಿ.ಗುರುಮುರ್ತಿ,ಹುಳಿಯಾರು ಕರವೇ ಅಧ್ಯಕ್ಷ ಶ್ರೀನಿವಾಸ್,ಚನ್ನಬಸವಯ್ಯ,ಕುಮಾರ್,ದಿವಾಕರ್,ನವೀನ್ ಹಾಗೂ ಇತರರಿದ್ದರು.ಜಿಲ್ಲಾಧ್ಯಕ್ಷರಾದ ಸೋ.ಮು.ಭಾಸ್ಕರಾಚಾರ್ ಅವರನ್ನು ಕರ್ನಾಟಕ ರ

ಕರ್ನಾಟಕ ಬಂದ್ ಗೆ ಹುಳಿಯಾರಿನಲ್ಲಿ ವ್ಯಾಪಕ ಬೆಂಬಲ

ಕಾವೇರಿ ನದಿ ನೀರಿಗಾಗಿ ನಡೆದಿರುವ ಹೋರಾಟದ ಅಂಗವಾಗಿ ಕರೆಯಲಾಗಿದ್ದ ಕರ್ನಾಟಕ ಬಂದ್ ಗೆ ಹುಳಿಯಾರಿನ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು ಹುಳಿಯಾರು ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಕರ್ನಾಟಕ ರಕ್ಷಣಾ ವೇದಿಕೆ,ರೈತ ಸಂಘ,ಬಾಪೂಜಿ ಟೈಲರ್ ಸಂಘ, ಯುತ್ ಕಾಂಗ್ರೆಸ್, ಜಯಕರ್ನಾಟಕ ಸಂಘ, ಟಿಪ್ಪು ಯುವಕರ ಸಂಘ,ಕನ್ನಡ ಸೇನೆ,ವರ್ತಕರ ಸಂಘ,ದಲಿತ ಸಹಾಯವಾಣಿ,ಕನಕದಾಸ ಹಿರಿಯ ವಿದ್ಯಾರ್ಥಿ ಸಂಘ,ಟಿಪ್ಪು ಚಾರಿಟಬಲ್ ಟ್ರಸ್ಟ್,ರೋಟರಿ ಸಂಸ್ಥೆ,ಛಾಯಾಗ್ರಾಹಕರ ಸಂಘ,ಎಬಿವಿಪಿ,ದೇವರಾಜು ಅರಸ್ಸು ವೇದಿಕೆ ಹಾಗೂ ವಿವಿಧ ಸಂಘ ಸಂಸ್ಥೆಯವರು,ಸಾರ್ವಜನಿಕರು ಪಾಲ್ಗೊಂಡು ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದರು.   ಇಲ್ಲಿನ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಅಂಗವಾಗಿ ಹೆದ್ದಾರಿಗೆ ತಡೆಯೊಡ್ಡಿ ರಸ್ತೆಯಲ್ಲೇ ಟೀ ಮಾಡುವ ಮೂಲಕ ಪ್ರತಿಭಟಿಸಿದ್ದರಿಂದ ವಾಹನಗಳೂ ರಸ್ತೆಯ ಇಬ್ಬದಿಯಲ್ಲೂ ಸಾಲುಗಟ್ಟಿ ನಿಂತಿದ್ದವು ಪಟ್ಟಣದ ಪರಿವೀಕ್ಷಣಾ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದ ವಿವಿಧ ಸಂಘ ಸಂಸ್ಥೆಯವರು ಬಿ.ಹೆಚ್.ರಸ್ತೆ ಮಾರ್ಗವಾಗಿ ಸಂಚರಿಸಿ,ರಾಂಗೋಪಾಲ್ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಸಭೆ ನಡೆಸಿ,ನಂತರ ಗಾಂಧೀಪೇಟೆ ಮಾರ್ಗವಾಗಿ ನಗರದ ಬಸ್ ನಿಲ್ದಾಣದಲ್ಲಿ ಸಂಚರಿಸುತ್ತಾ ತಮಿಳುನಾಡು ಹಾಗೂ ಕೇಂದ್ರ ಸರ್ಕಾರದ ವಿರುದ್ದ ಉರಿಯುವ ಬಿಸಿಲಿನಲ್ಲಿ ಘೋಷಣೆ ಕೂಗಿದರು.ಕಾವೇರಿ ನೀರು