ವಿಷಯಕ್ಕೆ ಹೋಗಿ

ಕರ್ನಾಟಕ ಬಂದ್ ಗೆ ಹುಳಿಯಾರಿನಲ್ಲಿ ವ್ಯಾಪಕ ಬೆಂಬಲ

ಕಾವೇರಿ ನದಿ ನೀರಿಗಾಗಿ ನಡೆದಿರುವ ಹೋರಾಟದ ಅಂಗವಾಗಿ ಕರೆಯಲಾಗಿದ್ದ ಕರ್ನಾಟಕ ಬಂದ್ ಗೆ ಹುಳಿಯಾರಿನ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು ಹುಳಿಯಾರು ಸಂಪೂರ್ಣವಾಗಿ ಸ್ತಬ್ಧವಾಗಿತ್ತು.

ಕರ್ನಾಟಕ ರಕ್ಷಣಾ ವೇದಿಕೆ,ರೈತ ಸಂಘ,ಬಾಪೂಜಿ ಟೈಲರ್ ಸಂಘ, ಯುತ್ ಕಾಂಗ್ರೆಸ್, ಜಯಕರ್ನಾಟಕ ಸಂಘ, ಟಿಪ್ಪು ಯುವಕರ ಸಂಘ,ಕನ್ನಡ ಸೇನೆ,ವರ್ತಕರ ಸಂಘ,ದಲಿತ ಸಹಾಯವಾಣಿ,ಕನಕದಾಸ ಹಿರಿಯ ವಿದ್ಯಾರ್ಥಿ ಸಂಘ,ಟಿಪ್ಪು ಚಾರಿಟಬಲ್ ಟ್ರಸ್ಟ್,ರೋಟರಿ ಸಂಸ್ಥೆ,ಛಾಯಾಗ್ರಾಹಕರ ಸಂಘ,ಎಬಿವಿಪಿ,ದೇವರಾಜು ಅರಸ್ಸು ವೇದಿಕೆ ಹಾಗೂ ವಿವಿಧ ಸಂಘ ಸಂಸ್ಥೆಯವರು,ಸಾರ್ವಜನಿಕರು ಪಾಲ್ಗೊಂಡು ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದರು.


 ಇಲ್ಲಿನ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಅಂಗವಾಗಿ ಹೆದ್ದಾರಿಗೆ ತಡೆಯೊಡ್ಡಿ ರಸ್ತೆಯಲ್ಲೇ ಟೀ ಮಾಡುವ ಮೂಲಕ ಪ್ರತಿಭಟಿಸಿದ್ದರಿಂದ ವಾಹನಗಳೂ ರಸ್ತೆಯ ಇಬ್ಬದಿಯಲ್ಲೂ ಸಾಲುಗಟ್ಟಿ ನಿಂತಿದ್ದವು


ಪಟ್ಟಣದ ಪರಿವೀಕ್ಷಣಾ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದ ವಿವಿಧ ಸಂಘ ಸಂಸ್ಥೆಯವರು ಬಿ.ಹೆಚ್.ರಸ್ತೆ ಮಾರ್ಗವಾಗಿ ಸಂಚರಿಸಿ,ರಾಂಗೋಪಾಲ್ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಸಭೆ ನಡೆಸಿ,ನಂತರ ಗಾಂಧೀಪೇಟೆ ಮಾರ್ಗವಾಗಿ ನಗರದ ಬಸ್ ನಿಲ್ದಾಣದಲ್ಲಿ ಸಂಚರಿಸುತ್ತಾ ತಮಿಳುನಾಡು ಹಾಗೂ ಕೇಂದ್ರ ಸರ್ಕಾರದ ವಿರುದ್ದ ಉರಿಯುವ ಬಿಸಿಲಿನಲ್ಲಿ ಘೋಷಣೆ ಕೂಗಿದರು.ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯದ ವಿರುದ್ದ ಕಿಡಿಕಾರಿದರು.

ಈ ಸಂಧರ್ಭದಲ್ಲಿ ಮಾತನಾಡಿದ ರೈತ ಸಂಘದ ಸತೀಶ್ ಮಾತನಾಡಿ,ಕಳೆದ ಹತ್ತು ವರ್ಷಗಳಿಂದ ಕಾವೇರಿ ವಿವಾದ ಬಗೆಹರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಗೆಹರಿಸಲು ದೃಡನಿರ್ಧಾರತಾಳದೆ ಮುಂದುವರೆಸಿಕೊಂಡು ಬಂದಿದ್ದೆ ಸಮಸ್ಯೆಗೆ ಕಾರಣ. ಕಳೆದ ಅ ಹತ್ತುದಿನಗಳಿಂದ ರಾಜ್ಯಾದ್ಯಂತ ನೀರುಹರಿಸದಂತೆ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರ ನೀರು ಹರಿಸುತ್ತಿದೆ. ಈಬಗ್ಗೆ ಎಲ್ಲಾ ಶಾಸಕರು ,ಸಂಸದರು ರಾಜಿನಾಮೆ ನೀಡಿ ಹೋರಾಟದಲ್ಲಿ ತೊಡಗಿಕೊಂಡಿದ್ದರೆ ಕಾವೇರಿ ನೀರು ನಮ್ಮಲೇ ಉಳಿಯುತ್ತಿತ್ತು ಎಂದರು.

ದೇವರಾಜು ಅರಸ್ಸು ವೇದಿಕೆಯ ಬಡಗಿ ರಾಮಣ್ಣ ಮಾತನಾಡಿ,ಕಾವೇರಿ ವಿವಾದದ ಬಗ್ಗೆ ಪೂರಕ ಮಾಹಿತಿಗಳನ್ನು ಸುಪ್ರಿಂಕೋರ್ಟಗೆ ಸಲ್ಲಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದೆ ಸಮಸ್ಯೆ ಬಿಗಡಾಯಿಸಲು ಕಾರಣ. ಈ ಬಾರಿ ರಾಜ್ಯದಲ್ಲಿ ಮಳೆ ಕಡಿಮೆ ಬಿದಿದ್ದು,ಬರಗಾಲದ ಛಾಯೆ ಆವರಿಸಿದ್ದು,ಇಲ್ಲಿನ ರೈತರೇ ಸಮಸ್ಯೆಯಲ್ಲಿದ್ದಾರೆ. ಸುಪ್ರಿಂಕೋರ್ಟ ತಮಿಳುನಾಡಿಗೆ 3ಸಾವಿರ ಕ್ಯೂಸೆಕ್ಸ್ ನೀರು ಬೀಡುತ್ತಿವಂತೆ ಹೇಳಿರುವುದನ್ನು ಖಂಡಿಸಿದ ಅವರು ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಕೂಡದು,ಇದೇ ಮುಂದುವರೆದಿದ್ದೇ ಆದರೆ ಕನ್ನಡ ಸಂಘಟನೆಗಳಿಂದ ಉಗ್ರ ಹೋರಾಟಗಳು ನಡೆಯಲಿವೆ ಎಂದರು.

ಬೆಳಿಗ್ಗೆಯಿಂದಲ್ಲೇ ಕರವೇ ಕಾರ್ಯಕರ್ತರುಗಳು ಗುಂಪಾಗಿ ತೆರಳಿ ಅಲ್ಲಲ್ಲಿ ತೆರೆದಿದ್ದ ಅಂಗಡಿಗಳನ್ನು ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದು ಕಂಡುಬಂತು.ಪಟ್ಟಣದ ರಸ್ತೆಗಳು ಬಿಕೋ ಎನ್ನುತ್ತಿದ್ದು,ಯಾವುದೇ ವ್ಯಾಪಾರ ಚಟುವಟಿಕೆಗಳೂ ನಡೆಯಲಿಲ್ಲ.ಎಲ್ಲಾ ಮುಖ್ಯ ರಸ್ತೆಗಳಿಗೆ ತಡೆಯೊಡಿ ವಾಹನ ಸಂಚಾರವನ್ನು ತಡೆಯಯಲಾಗಿತ್ತು. ಇದರಿಂದಾಗಿ ನೂರಾರು ವಾಹನಗಳು ರಸ್ತೆ ಬದಿಯಲ್ಲಿ ಸಾಲಾಗಿ ನಿಂತಿದ್ದವು,ರಜೆಯೆಂದು ಮನೆ ಸೇರಿದ್ದ ಜನ ಮನರಂಜನೆಗಾಗಿ ನೋಡಲು ಟಿವಿಗಳೂ ಇಲ್ಲದಿದ್ದರು ಸಹ ಮನೆ ಬಿಟ್ಟು ಆಚೆ ಬಾರದಿರುವುದು ದೌರ್ಭಾಗ್ಯ ಎನ್ನುವಂತಾಗಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...