ವಿಷಯಕ್ಕೆ ಹೋಗಿ

ಎಲ್ಲಾ ಧರ್ಮಿಯರ ಮಧ್ಯೆ ಸೇತುವ ಕಟ್ಟುವ ಕೆಲಸವಾಗಬೇಕು:ಪ್ರೊ.ಕೆ.ಎಸ್.ನಿಸಾರ್ ಅಹ್ಮದ್

:ಹುಳಿಯಾರಿನ ಟಿಪ್ಪುಸುಲ್ತಾನ್ ಸಂಘದ ಸದಸ್ಯರೊಂದಿಗೆ ಕವಿ ಕೆ.ಎಸ್.ನಿಸಾರ್ ಅಹಮದ್ ಹಾಗೂ ರಂಗಭೂಮಿ ಕಲಾವಿದರಾದ ಮಾಸ್ಟರ್ ಹಿರಣಯ್ಯ
ಕನ್ನಡ ನೆಲದಲ್ಲಿರುವ ಎಲ್ಲಾ ಧರ್ಮಿಯರು ಕನ್ನಡಿಗರು.ಇವರುಗಳನ್ನು ಹಿಂದೂ, ಮುಸ್ಲಿಮ್,ಕ್ರಿಶ್ಚಿಯನ್ ಹೀಗೆ ಅನೇಕ ಧರ್ಮಗಳ ಹೆಸರಿನಲ್ಲಿ ಪ್ರತ್ಯೇಕವಾಗಿ ನೋಡುವುದನ್ನು ಕೈ ಬಿಟ್ಟು ಎಲ್ಲಾ ಧರ್ಮ ಧರ್ಮಗಳ ಮಧ್ಯೆ ಸೇತುವೆ ಕಟ್ಟುವ ಕಾರ್ಯ ಮಾಡಬೇಕು, ಹೃದಯಗಳನ್ನು, ಮನಸ್ಸುಗಳನ್ನು ಕಟ್ಟುವ ಪ್ರಯತ್ನ ಮಾಡಬೇಕು ಎಂದು ನಿತ್ಯೋತ್ಸವ ಕವಿ ನಾಡೋಜ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ಅಭಿಪ್ರಾಯಪಟ್ಟರು
ಹುಳಿಯಾರಿನ ಟಿಪ್ಪುಸುಲ್ತಾನ್ ಸಂಘದ ಆತಿಥ್ಯ ಸ್ವೀಕರಿಸಿ ಸದಸ್ಯರುಗಳನ್ನು ಉದ್ದೇಶಿಸಿ ಮಾತನಾಡಿದ ಡಾ.ಕೆ.ಎಸ್.ನಿಸಾರ್ ಅಹ್ಮದ್ ಸಮನ್ವಯ,ಸಾಮರಸ್ಯ,ಸೌಹಾದ೯ತೆ,ಧಮ೯ಸಹಿಷ್ಣುತೆ ಕನ್ನಡಿಗರ ಹುಟ್ಟುಗುಣವಾಗಿದ್ದು, ಟಿಪ್ಪುಸಂಘಟನೆಯವರು ಇಲ್ಲಿನ ಎಲ್ಲಾ ಸಂಘಸಂಸ್ಥೆಗಳೊಂದಿಗೆ ಒಟ್ಟಾಗಿ ಜನಪರವಾಗಿ ಕಾಯ೯ನಿವ೯ಹಿಸಿ, ಜನರ ಮನಸ್ಸಿನಲ್ಲಿ ಚಿರವಾಗಿ ನೆಲೆಸಬೇಕು ಎಂದರು.
ಕೆಲವೇ ಮಂದಿಯ ಸ್ವಾರ್ಥದಿಂದ ಮುಸ್ಲಿಂಮರ ಬಗ್ಗೆ ಜನಮಾನಸದಲ್ಲಿ ಇಸ್ಲಾಂ ಧರ್ಮದ ಬಗ್ಗೆ ಅಪಾರ್ಥಕ್ಕೆಡೆಮಾಡಿಕೊಟ್ಟಿದೆ.ಇದಕ್ಕೆ ಹೊರಗಿನವರು ಕಾರಣರಲ್ಲ ಮುಸ್ಲಿಮರ ಒಳಗಿನ ಒಳಸುಳಿಗಳೇ ಕಾರಣ.ಉಳಿದ ಧರ್ಮಗಳಷ್ಟೆ ಶ್ರೇಷ್ಠ ಉದಾತ್ತ ಧ್ಯೇಯಗಳನ್ನು ಹೊಂದಿರುವ ಇಸ್ಲಾಂ ಧರ್ಮದ ಬಗ್ಗೆ ಎಲ್ಲರಲ್ಲೂ ಅಪನಂಬಿಕೆ ಹೆಚ್ಚುತ್ತಿದೆತ್ತಿದೆ.ಯುವಜನತೆ ಈ ಬಗ್ಗೆ ಎಚ್ಚೆತ್ತುಕ್ಕೊಂಡು ಮತ್ತೆ ನಂಬಿಕೆ ಹುಟ್ಟಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಜಗತ್ತಿನಲ್ಲಿರುವ ಎಲ್ಲ ಧರ್ಮಗಳು ಕೂಡ ಶ್ರೇಷ್ಠ. ಎಲ್ಲ ಧರ್ಮಗಳನ್ನು ಗೌರವಿಸುವ ಒಬ್ಬರಿಗೊಬ್ಬರು ಬೆರೆಯುವ, ಬೆಳೆಯುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿವಿಧ ಧರ್ಮೀಯರನ್ನು ಒಗ್ಗೂಡಿಸಿ ಮನಸ್ಸು- ಮನಸ್ಸುಗಳ ನಡುವೆ ಸೇತುವೆ ಕಟ್ಟುವ ಬದಲು ಗೋಡೆ ಕಟ್ಟುತ್ತಿದ್ದೇವೆ ಎಂದು ವಿಷಾದಿಸಿದರು.
ಖ್ಯಾತ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯನವರು ಮಾತನಾಡಿ ರಾಜಕಾರಣದ ಉದ್ದೇಶದಿಂದ ನಮ್ಮಗಳ ಮಧ್ಯೆ ಜಾತಿ ಗೋಡೆ ನಿರ್ಮಾಣವಾಗುತ್ತಿದ್ದು ಇದರಿಂದ ನಾವೆಲ್ಲಾ ಒಂದೇ ಎನ್ನುವ ಭಾವ ದೂರವಾಗುತ್ತಿದೆ.ಈ ಬಗ್ಗೆ ಯುವಸಮೂಹ ಎಚ್ಚೆತ್ತುಕೊಂಡು ಸಾಮರಸ್ಯದಿಂದ ಬದುಕಬೇಕೆಂದರು.
ಟಿಪ್ಪು ಸುಲ್ತಾನ್ ಯುವಕ ಸಂಘದ ಅಧ್ಯಕ್ಷ ಮಹ್ಮದ್ ರಫೀಕ್, ಉಪಾಧ್ಯಕ್ಷ ಅಪ್ಸರ್ ಅಲಿ ,ಫಯಾಜ್,ಇಮ್ರಾನ್ ಪಾಷ,ಸದ್ದಾಂಹುಸೇನ್,ಮಹ್ಮದ್,ಸಾದಿಕ್ ಪಾಷ,ಇಮ್ರಾಝ್, ಜಾವಿದ್ ಹಾಗೂ ಸಂಘದ ಸದಸ್ಯರುಗಳಲ್ಲದೆ ಮೆಡಿಕಲ್ ಈಶಣ್ಣ,ರಂಗನಾಥ್ ಪ್ರಸಾದ್,ತೋಟದಮನೆ ಸೋಮಶೇಖರ್,ಪ್ರದೀಪ್ ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...