ವಿಷಯಕ್ಕೆ ಹೋಗಿ

ಎಲ್ಲಾ ಧರ್ಮಿಯರ ಮಧ್ಯೆ ಸೇತುವ ಕಟ್ಟುವ ಕೆಲಸವಾಗಬೇಕು:ಪ್ರೊ.ಕೆ.ಎಸ್.ನಿಸಾರ್ ಅಹ್ಮದ್

:ಹುಳಿಯಾರಿನ ಟಿಪ್ಪುಸುಲ್ತಾನ್ ಸಂಘದ ಸದಸ್ಯರೊಂದಿಗೆ ಕವಿ ಕೆ.ಎಸ್.ನಿಸಾರ್ ಅಹಮದ್ ಹಾಗೂ ರಂಗಭೂಮಿ ಕಲಾವಿದರಾದ ಮಾಸ್ಟರ್ ಹಿರಣಯ್ಯ
ಕನ್ನಡ ನೆಲದಲ್ಲಿರುವ ಎಲ್ಲಾ ಧರ್ಮಿಯರು ಕನ್ನಡಿಗರು.ಇವರುಗಳನ್ನು ಹಿಂದೂ, ಮುಸ್ಲಿಮ್,ಕ್ರಿಶ್ಚಿಯನ್ ಹೀಗೆ ಅನೇಕ ಧರ್ಮಗಳ ಹೆಸರಿನಲ್ಲಿ ಪ್ರತ್ಯೇಕವಾಗಿ ನೋಡುವುದನ್ನು ಕೈ ಬಿಟ್ಟು ಎಲ್ಲಾ ಧರ್ಮ ಧರ್ಮಗಳ ಮಧ್ಯೆ ಸೇತುವೆ ಕಟ್ಟುವ ಕಾರ್ಯ ಮಾಡಬೇಕು, ಹೃದಯಗಳನ್ನು, ಮನಸ್ಸುಗಳನ್ನು ಕಟ್ಟುವ ಪ್ರಯತ್ನ ಮಾಡಬೇಕು ಎಂದು ನಿತ್ಯೋತ್ಸವ ಕವಿ ನಾಡೋಜ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ಅಭಿಪ್ರಾಯಪಟ್ಟರು
ಹುಳಿಯಾರಿನ ಟಿಪ್ಪುಸುಲ್ತಾನ್ ಸಂಘದ ಆತಿಥ್ಯ ಸ್ವೀಕರಿಸಿ ಸದಸ್ಯರುಗಳನ್ನು ಉದ್ದೇಶಿಸಿ ಮಾತನಾಡಿದ ಡಾ.ಕೆ.ಎಸ್.ನಿಸಾರ್ ಅಹ್ಮದ್ ಸಮನ್ವಯ,ಸಾಮರಸ್ಯ,ಸೌಹಾದ೯ತೆ,ಧಮ೯ಸಹಿಷ್ಣುತೆ ಕನ್ನಡಿಗರ ಹುಟ್ಟುಗುಣವಾಗಿದ್ದು, ಟಿಪ್ಪುಸಂಘಟನೆಯವರು ಇಲ್ಲಿನ ಎಲ್ಲಾ ಸಂಘಸಂಸ್ಥೆಗಳೊಂದಿಗೆ ಒಟ್ಟಾಗಿ ಜನಪರವಾಗಿ ಕಾಯ೯ನಿವ೯ಹಿಸಿ, ಜನರ ಮನಸ್ಸಿನಲ್ಲಿ ಚಿರವಾಗಿ ನೆಲೆಸಬೇಕು ಎಂದರು.
ಕೆಲವೇ ಮಂದಿಯ ಸ್ವಾರ್ಥದಿಂದ ಮುಸ್ಲಿಂಮರ ಬಗ್ಗೆ ಜನಮಾನಸದಲ್ಲಿ ಇಸ್ಲಾಂ ಧರ್ಮದ ಬಗ್ಗೆ ಅಪಾರ್ಥಕ್ಕೆಡೆಮಾಡಿಕೊಟ್ಟಿದೆ.ಇದಕ್ಕೆ ಹೊರಗಿನವರು ಕಾರಣರಲ್ಲ ಮುಸ್ಲಿಮರ ಒಳಗಿನ ಒಳಸುಳಿಗಳೇ ಕಾರಣ.ಉಳಿದ ಧರ್ಮಗಳಷ್ಟೆ ಶ್ರೇಷ್ಠ ಉದಾತ್ತ ಧ್ಯೇಯಗಳನ್ನು ಹೊಂದಿರುವ ಇಸ್ಲಾಂ ಧರ್ಮದ ಬಗ್ಗೆ ಎಲ್ಲರಲ್ಲೂ ಅಪನಂಬಿಕೆ ಹೆಚ್ಚುತ್ತಿದೆತ್ತಿದೆ.ಯುವಜನತೆ ಈ ಬಗ್ಗೆ ಎಚ್ಚೆತ್ತುಕ್ಕೊಂಡು ಮತ್ತೆ ನಂಬಿಕೆ ಹುಟ್ಟಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಜಗತ್ತಿನಲ್ಲಿರುವ ಎಲ್ಲ ಧರ್ಮಗಳು ಕೂಡ ಶ್ರೇಷ್ಠ. ಎಲ್ಲ ಧರ್ಮಗಳನ್ನು ಗೌರವಿಸುವ ಒಬ್ಬರಿಗೊಬ್ಬರು ಬೆರೆಯುವ, ಬೆಳೆಯುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿವಿಧ ಧರ್ಮೀಯರನ್ನು ಒಗ್ಗೂಡಿಸಿ ಮನಸ್ಸು- ಮನಸ್ಸುಗಳ ನಡುವೆ ಸೇತುವೆ ಕಟ್ಟುವ ಬದಲು ಗೋಡೆ ಕಟ್ಟುತ್ತಿದ್ದೇವೆ ಎಂದು ವಿಷಾದಿಸಿದರು.
ಖ್ಯಾತ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯನವರು ಮಾತನಾಡಿ ರಾಜಕಾರಣದ ಉದ್ದೇಶದಿಂದ ನಮ್ಮಗಳ ಮಧ್ಯೆ ಜಾತಿ ಗೋಡೆ ನಿರ್ಮಾಣವಾಗುತ್ತಿದ್ದು ಇದರಿಂದ ನಾವೆಲ್ಲಾ ಒಂದೇ ಎನ್ನುವ ಭಾವ ದೂರವಾಗುತ್ತಿದೆ.ಈ ಬಗ್ಗೆ ಯುವಸಮೂಹ ಎಚ್ಚೆತ್ತುಕೊಂಡು ಸಾಮರಸ್ಯದಿಂದ ಬದುಕಬೇಕೆಂದರು.
ಟಿಪ್ಪು ಸುಲ್ತಾನ್ ಯುವಕ ಸಂಘದ ಅಧ್ಯಕ್ಷ ಮಹ್ಮದ್ ರಫೀಕ್, ಉಪಾಧ್ಯಕ್ಷ ಅಪ್ಸರ್ ಅಲಿ ,ಫಯಾಜ್,ಇಮ್ರಾನ್ ಪಾಷ,ಸದ್ದಾಂಹುಸೇನ್,ಮಹ್ಮದ್,ಸಾದಿಕ್ ಪಾಷ,ಇಮ್ರಾಝ್, ಜಾವಿದ್ ಹಾಗೂ ಸಂಘದ ಸದಸ್ಯರುಗಳಲ್ಲದೆ ಮೆಡಿಕಲ್ ಈಶಣ್ಣ,ರಂಗನಾಥ್ ಪ್ರಸಾದ್,ತೋಟದಮನೆ ಸೋಮಶೇಖರ್,ಪ್ರದೀಪ್ ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.