ವಿಷಯಕ್ಕೆ ಹೋಗಿ

ಕರವೇಯಿಂದ ಕನ್ನಡ ರಾಜ್ಯೋತ್ಸವ ಆಚರಣೆ


ಹುಳಿಯಾರು: ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಹಿಳಾ ಕರವೇ ಘಟಕ,ಹೋಬಳಿಯ ಕನ್ನಡಪರ ಸಂಘಟನೆಗಳ ಸಹಯೋಗದೊಂದಿಗೆ ಇಂದು(ತಾ.28)ರ ಬುಧವಾರ 57ನೇ ಕನ್ನಡ ರಾಜ್ಯೋತ್ಸವ ಹಾಗೂ ಪ್ರತಿಭಾಪುರಸ್ಕಾರ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ.
ಇಂದು ಬೆಳಿಗ್ಗೆ 9 ಗಂಟೆಗೆ ಹುಳಿಯಾರಿನ ಕರವೇ ವೃತ್ತದಲ್ಲಿ ಧ್ವಜಾರೋಹಣ ಕಾರ್ಯ ನಡೆಯಲಿದ್ದು ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಧ್ವಾಜಾರೋಹಣ ನೆರವೇರಿಸುವರು.ಕರವೇ ಜಿಲ್ಲಾಧ್ಯಕ್ಷ ಎನ್.ಎಸ್.ವಿಷ್ಣುವರ್ಧನ ಉದ್ಘಾಟನೆಯನ್ನು,ಉಪನ್ಯಾಸಕ ಹಾಲಪ್ಪ ಪ್ರಾಸ್ತಾವಿಕ ನುಡಿ ನುಡಿಯುವರು.ಚಿ.ನಾ.ಹಳ್ಳಿ ತಾಲ್ಲೂಕು ಕರವೇ ಅಧ್ಯಕ್ಷ ಗುರುಮೂರ್ತಿ,ಪಿಎಸೈ ರಾಜು,ತಾ.ಪಂ.ಸದಸ್ಯ ಜಯಣ್ಣ,ಹುಳಿಯಾರು ಕರವೇ ಗೌರವಾಧ್ಯಕ್ಷ ರಂಗಸ್ವಾಮಿ,ಮಹಿಳಾ ಘಟಕದ ಅಧ್ಯಕ್ಷೆ ರತ್ನರಂಜನಿ,ತಾ.ಪಂ.ಮಾಜಿ ಸದಸ್ಯ ಮಲ್ಲಿಕಾರ್ಜುನಯ್ಯ,ಕೊಬ್ಬರಿ ವರ್ತಕ ಚಂದ್ರಣ್ಣ,ಮೆಡಿಕಲ್ ದೇವಣ್ಣ,ಗ್ರಾ.ಪಂ.ಸದಸ್ಯ ಬಡ್ಡಿ ಪುಟ್ಟರಾಜು ಅತಿಥಿಗಳಾಗಿ ಆಗಮಿಸುವರು.
ಇದೇ ದಿನ ಮಧ್ಯಾಹ್ನ ನಡೆಯುವ ಶ್ರೀ ಭುವನೇಶ್ವರಿದೇವಿಯ ಭವ್ಯ ಮೆರವಣಿಗೆಯಲ್ಲಿ ನಾಸಿಕ್ ಡೋಲು,ವೀರಗಾಸೆ,ಡೋಳ್ಳುಕುಣಿತ,ಮದ್ದುಗುಂಡು,ಸ್ತಬ್ದಚಿತ್ರಗಳು ಹಾಗೂ ಜಾನಪದ ಕಲಾತಂಡಗಳು ಪಾಲ್ಗೊಳಲ್ಲಿವೆ.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು,ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಉದ್ಘಾಟನೆ ನೆರವೇಸುವರು.ಶಾಸಕ ಸಿ.ಬಿ.ಸುರೇಶ್ ಬಾಬು ಅಧ್ಯಕ್ಷತೆವಹಿಸುವರು.ಉಪನ್ಯಾಸಕ ಕಣ್ಣಯ್ಯ ಪ್ರಾಸ್ತಾವಿಕ ನುಡಿ ನುಡಿಯಲಿದ್ದು,ಶಿರಾ ಶಾಸಕ ಟಿ.ಬಿ.ಜಯಚಂದ್ರ,ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ರಾಜೇಂದ್ರ,ಜಿ.ಪಂ.ಅಧ್ಯಕ್ಷೆ ಪ್ರೇಮಾ,ಸದಸ್ಯೆ ಮಂಜುಳಾ,ತಾ.ಪಂ ಮಾಜಿ ಅಧ್ಯಕ್ಷ ಸೀತಾರಾಂ,ಮಾಜಿ ಉಪಾಧ್ಯಕ್ಷೆ ಬೀಬೀಫಾತೀಮ,ತಾ.ಪಂ.ಸದಸ್ಯರಾದ ಜಯಣ್ಣ,ಕೆಂಕೆರೆ ನವೀನ್,ಗ್ರಾ.ಪಂ.ಅಧ್ಯಕ್ಷ ಅನ್ಸರ್ ಅಲಿ,ರೈತ ಸಂಘದ ಸತೀಶ್,ಹೃದಯ ತಜ್ಞ ಡಾ||ಪರಮೇಶ್ವರಪ್ಪ,ತಹಶೀಲ್ದಾರ್ ಉಮೇಶ್ಚಂದ್ರ,ಎಸೈ ಪ್ರಭಾಕರ್,ಬಿಇಓ ಸಾ.ಚಿ.ನಾಗೇಶ್,ಉಪ ತಹಶೀಲ್ದಾರ್ ಕೃಷ್ಣಮೂರ್ತಿ,ಬೆಸ್ಕಾಂನ ಉಮೇಶ್ ನಾಯ್ಕ, ಪತ್ರಕರ್ತ ಸಂಘದ ಅಧ್ಯಕ್ಷ ನರೇಂದ್ರಬಾಬು,ಬಿ.ಎಸ್.ಆರ್ ಕಾಂಗ್ರೇಸ್ ನ ಬಾಲಕುಮಾರಸ್ವಾಮಿ,ಜೆಡಿಎಸ್ ಮುಂಖಂಡರಾದ ಲಲಿತಾಪ್ರಕಾಶ್,ತಾಲ್ಲೂಕು ಯುವ ಕಾಂಗ್ರೇಸ್ ಅಧ್ಯಕ್ಷ ವೆಂಕಟೇಶ್ ಅತಿಥಿಗಳಾಗಿ ಆಗಮಿಸಲಿದ್ದು ರಾತ್ರಿ ಎಂಟು ಗಂಟೆಗೆ ರಸ ಮಂಜರಿ ಕಾರ್ಯಕ್ರಮವಿದ್ದು,ಹೋಬಳಿಯ ಎಲ್ಲಾ ಕನ್ನಡಪರ ಸಂಘಟನೆಯವರು ಹಾಗೂ ಸಾರ್ವಜನಿಕರು ರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಕೋರಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...