ವಿಷಯಕ್ಕೆ ಹೋಗಿ

ಕನ್ನಡನಾಡಿನ ನೆಲ,ನುಡಿಯ ಋಣವನ್ನು ಪ್ರತಿಯೊಬ್ಬರು ತೀರಿಸಬೇಕಿದೆ : ಮಾಧುಸ್ವಾಮಿ

ಕರ್ನಾಟಕದಲ್ಲಿ ಜನಿಸಿರುವಂತಹ ಕನ್ನಡಾಂಬೆಯ ಮಕ್ಕಳಾದ ಪ್ರತಿಯೊಬ್ಬ ಪ್ರಜೆಯೂ ಕನ್ನಡನಾಡಿನ ನೆಲ,ನುಡಿ,ಜಲ,ಸಂಸ್ಕೃತಿಯನ್ನು ಪುಕ್ಕಟ್ಟೆಯಾಗಿ ಬಳಸಿಕೊಳ್ಳುತ್ತಿದ್ದೇವೆ ಅದರಂತೆಯೇ ಕನ್ನಡನಾಡಿನ ಬಗೆಗೆ ಗೌರವಹೊಂದಿ ಕನ್ನಡ ಭಾಷೆಗೆ ನೆಲ,ಜಲಕ್ಕೆ ಧಕ್ಕೆಯಾಗದಂತೆ ನಡೆದುಕೊಂಡು,ಕನ್ನಡನಾಡು ನಮ್ಮದು ಎಂಬ ಅಭಿಮಾನದಿಂದ ಕನ್ನಡ ನಾಡಿನ ಋಣವನ್ನು ತೀರಿಸಬೇಕಿದೆ ಮಾಜಿ ಶಾಸಕ ಜಿ.ಸಿ.ಮಾಧುಸ್ವಾಮಿ ತಿಳಿಸಿದರು.

ಹುಳಿಯಾರು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆಯವರು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಮಾಜಿ ಶಾಸಕ ಜಿ.ಸಿ.ಮಾಧುಸ್ವಾಮಿ ಉದ್ಘಾಟಿಸಿದರು. ತಾ.ಪಂ.ಸದಸ್ಯ ಜಯಣ್ಣ,ತಾ.ಪಂ.ಮಾಜಿ ಸದಸ್ಯ ಮಲ್ಲಿಕಾರ್ಜುನಯ್ಯ,ಮೆಡಿಕಲ್ ದೇವಣ್ಣ,ಗ್ರಾ.ಪಂ.ಸದಸ್ಯ ಬಡ್ಡಿ ಪುಟ್ಟರಾಜು,ಮಹಿಳಾ ಘಟಕದ ಅಧ್ಯಕ್ಷೆ ರತ್ನರಂಜನಿ ಇತರರು.

           ಹುಳಿಯಾರು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಹಿಳಾ ಕರವೇ ಘಟಕ,ಹೋಬಳಿಯ ಕನ್ನಡಪರ ಸಂಘಟನೆಗಳ ಸಹಯೋಗದೊಂದಿಗೆ ಬುಧವಾರ ಬೆಳಿಗ್ಗೆ ನಡೆದ 57ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
               ಕರ್ನಾಟಕ ಏಕೀಕರಣಗೊಂಡು 57ವರ್ಷಗಳು ಕಳೆದಿದ್ದು ಅದರ ಆಚರಣೆ ಅಂದಿನಿಂದ ಇಂದಿನವರೆಗೂ ನಡೆಸಿಕೊಂಡು ಬಂದಿರುವುದು ಸಂತಸವನ್ನುಂಟುಮಾಡಿದೆ.ಇಂದು ನಾವು ಅಭಿವೃದ್ದಿಯಾಗದೇ ಬರಿ ನಮ್ಮ ರಕ್ಷಣೆಯಲ್ಲಿಯೇ ಸಾಗುತ್ತಿದ್ದೇವೆ,ಏಕೀಕರಣ ಸಂಧರ್ಭದಲ್ಲಿ ಅನೇಕ ವಿರೋಧ ವ್ಯಕ್ತವಾಗಿತ್ತು ಆದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ನೀತಿಯಿಂದ ಕರ್ನಾಟಕ ಏಕೀಕರಣಗೊಂಡಿದ್ದರಿಂದ ಮೈಸೂರು ಅರಸರನ್ನು ಇಂದು ಸ್ಮರಿಸಬೇಕಿದೆ ಎಂದರು.ನಾವು ಇತರೆ ರಾಜ್ಯದವರೊಂದಿಗೆ ಸಂವಹನ ನಡೆಸುವಾಗ ಕನ್ನಡದಲ್ಲಿ ಮಾತಾಡದೇ ಹಿಂದಿ,ತಮಿಳು,ತೆಲುಗು ಇತರೆ ಭಾಷೆಯಲ್ಲಿ ಮಾತಾಡಲು ಮುಂದಾಗುತ್ತೇವೆ,ಈ ರೀತಿ ಮಾಡದೇ ಕನ್ನಡ ಭಾಷೆಯಲ್ಲೇ ಮಾತಾಡಿ,ಯಾವ ಸಾಹಿತ್ಯವನ್ನು ಹೆಚ್ಚು ಬಳಸುತ್ತಾ ಹೋಗುತ್ತೇವೆ ಆ ಸಾಹಿತ್ಯ ಬೆಳೆಯುತ್ತದೆ ಇಲ್ಲವಾದರೆ ನಶಿಸುತ್ತದೆ ಎಂದರು.ವ್ಯವಹಾರಿಕವಾಗಿ ಯಾವುದೇ ಭಾಷೆ ಬಳಸಿ ಆದರೆ ಕನ್ನಡ ಭಾಷೆಯನ್ನು ಮರೆಯಬೇಡಿ,ಕಾವೇರಿಯಿಂದ ಗೋದಾವರಿಯವರೆಗೆ ಇದ್ದ ಕನ್ನಡನಾಡಿನ ಹಿರಿಮೆಯನ್ನು ಉಳಿಸಿ,ಬೆಳೆಸಿ ಎಂದು ತಿಳಿಸಿದರು.ಪ್ರತಿಯೊಬ್ಬರೂ ಸ್ವಾಭಿಮಾನದಿಂದ ಬಾಳಲು ಶಿಕ್ಷಣ ಬೇಕು.ಇಂದು ರಾಜಕಾರಣ,ಹೋರಾಟ,ಸಂಘಟನೆಗಳನ್ನು ಮಾಡಬಹುದು ಆದರೆ ಆಡಳಿತ ಮಾಡುವುದು ಸುಲಭದ ಮಾತಲ್ಲ.ಕನ್ನಡ ಭಾಷೆ ನೋವು ನಲಿವುನಲ್ಲಿಯೋ ನಮ್ಮೊಂದಿಗೆ ಇರುತ್ತದೆ ಎಂದರು.ಯಾವುದೇ ಭಾಷೆಯ ಅನಿಮಾರ್ಯತೆ ನಮಗಿಲ್ಲ. ಇನ್ಪೋಸಿಸ್ ,ವಿಪ್ರೋ ನಂತಹ ಅನೇಕ ಸಾಫ್ ವೇರ್ ಕಂಪನಿಗಳು ಅಭಿವೃದ್ದಿಯ ನೆಪದಲ್ಲಿ ಸ್ಥಾಪನೆಯಾಗಿ ಕನ್ನಡನಾಡಿನ ಜನತೆಯನ್ನೇ ಮರೆತಿದ್ದಾರೆಂದು ವಿಷಾದಿಸಿದರು.

ಮಧ್ಯಾಹ್ನದ ನಂತರ ಪಟ್ಟಣದ ರಾಜ ಬೀದಿಗಳಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಿ,ಶ್ರೀ ಭುವನೇಶ್ವರಿದೇವಿಯ ಭವ್ಯ ಮೆರವಣಿಗೆಯಲ್ಲಿ ನಾಸಿಕ್ ಡೋಲು,ವೀರಗಾಸೆ,ಡೋಳ್ಳುಕುಣಿತ,ಮದ್ದುಗುಂಡು,ಸ್ತಬ್ದಚಿತ್ರಗಳು ಹಾಗೂ ಜಾನಪದ ಕಲಾತಂಡಗಳಿಂದ ವಿವಿಧ ಪ್ರದರ್ಶನಗಳು ನಡೆದವು.
ರೈತಸಂಘದ ಕೆಂಕೆರೆ ಸತೀಶ್,ಚಿ.ನಾ.ಹಳ್ಳಿ ತಾಲ್ಲೂಕು ಕರವೇ ಕಾರ್ಯದರ್ಶಿ ರೇಣುಕ ಮಾರ್ತಿ,ತಾ.ಪಂ.ಸದಸ್ಯ ಜಯಣ್ಣ,ಹುಳಿಯಾರು ಕರವೇ ಗೌರವಾಧ್ಯಕ್ಷರಾದ ರಂಗಸ್ವಾಮಿ,ಬೀರಪ್ಪ,ಮಹಿಳಾ ಘಟಕದ ಅಧ್ಯಕ್ಷೆ ರತ್ನರಂಜನಿ,ತಾ.ಪಂ.ಮಾಜಿ ಸದಸ್ಯ ಮಲ್ಲಿಕಾರ್ಜುನಯ್ಯ,ಮೆಡಿಕಲ್ ದೇವಣ್ಣ,ಗ್ರಾ.ಪಂ.ಸದಸ್ಯ ಬಡ್ಡಿ ಪುಟ್ಟರಾಜು,ಯಳನಡು ವಿಎಸ್.ಎಸ್.ನ ಅಧ್ಯಕ್ಷ ಕುಮಾರ್,ಸಜ್ಜಾದ್,ಖಾಸಗಿ ಬಸ್ ಏಜೆಂಟ್ ಸಂಘದ ಲೋಕೇಶಣ್ಣ ಅತಿಥಿಗಳಾಗಿ ಆಗಮಿಸಿದ್ದು,ಉಪನ್ಯಾಸಕ ಹಾಲಪ್ಪ ಪ್ರಾಸ್ತಾವಿಕ ನುಡಿ ನುಡಿದರು.ಶಿಕ್ಷಕ ಗಂಗಾಧರಯ್ಯ ನಿರೂಪಿಸಿ,ವಂದಿಸಿದರು.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...