ವಿಷಯಕ್ಕೆ ಹೋಗಿ

ಕನ್ನಡನಾಡಿನ ನೆಲ,ನುಡಿಯ ಋಣವನ್ನು ಪ್ರತಿಯೊಬ್ಬರು ತೀರಿಸಬೇಕಿದೆ : ಮಾಧುಸ್ವಾಮಿ

ಕರ್ನಾಟಕದಲ್ಲಿ ಜನಿಸಿರುವಂತಹ ಕನ್ನಡಾಂಬೆಯ ಮಕ್ಕಳಾದ ಪ್ರತಿಯೊಬ್ಬ ಪ್ರಜೆಯೂ ಕನ್ನಡನಾಡಿನ ನೆಲ,ನುಡಿ,ಜಲ,ಸಂಸ್ಕೃತಿಯನ್ನು ಪುಕ್ಕಟ್ಟೆಯಾಗಿ ಬಳಸಿಕೊಳ್ಳುತ್ತಿದ್ದೇವೆ ಅದರಂತೆಯೇ ಕನ್ನಡನಾಡಿನ ಬಗೆಗೆ ಗೌರವಹೊಂದಿ ಕನ್ನಡ ಭಾಷೆಗೆ ನೆಲ,ಜಲಕ್ಕೆ ಧಕ್ಕೆಯಾಗದಂತೆ ನಡೆದುಕೊಂಡು,ಕನ್ನಡನಾಡು ನಮ್ಮದು ಎಂಬ ಅಭಿಮಾನದಿಂದ ಕನ್ನಡ ನಾಡಿನ ಋಣವನ್ನು ತೀರಿಸಬೇಕಿದೆ ಮಾಜಿ ಶಾಸಕ ಜಿ.ಸಿ.ಮಾಧುಸ್ವಾಮಿ ತಿಳಿಸಿದರು.

ಹುಳಿಯಾರು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆಯವರು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಮಾಜಿ ಶಾಸಕ ಜಿ.ಸಿ.ಮಾಧುಸ್ವಾಮಿ ಉದ್ಘಾಟಿಸಿದರು. ತಾ.ಪಂ.ಸದಸ್ಯ ಜಯಣ್ಣ,ತಾ.ಪಂ.ಮಾಜಿ ಸದಸ್ಯ ಮಲ್ಲಿಕಾರ್ಜುನಯ್ಯ,ಮೆಡಿಕಲ್ ದೇವಣ್ಣ,ಗ್ರಾ.ಪಂ.ಸದಸ್ಯ ಬಡ್ಡಿ ಪುಟ್ಟರಾಜು,ಮಹಿಳಾ ಘಟಕದ ಅಧ್ಯಕ್ಷೆ ರತ್ನರಂಜನಿ ಇತರರು.

           ಹುಳಿಯಾರು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಹಿಳಾ ಕರವೇ ಘಟಕ,ಹೋಬಳಿಯ ಕನ್ನಡಪರ ಸಂಘಟನೆಗಳ ಸಹಯೋಗದೊಂದಿಗೆ ಬುಧವಾರ ಬೆಳಿಗ್ಗೆ ನಡೆದ 57ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
               ಕರ್ನಾಟಕ ಏಕೀಕರಣಗೊಂಡು 57ವರ್ಷಗಳು ಕಳೆದಿದ್ದು ಅದರ ಆಚರಣೆ ಅಂದಿನಿಂದ ಇಂದಿನವರೆಗೂ ನಡೆಸಿಕೊಂಡು ಬಂದಿರುವುದು ಸಂತಸವನ್ನುಂಟುಮಾಡಿದೆ.ಇಂದು ನಾವು ಅಭಿವೃದ್ದಿಯಾಗದೇ ಬರಿ ನಮ್ಮ ರಕ್ಷಣೆಯಲ್ಲಿಯೇ ಸಾಗುತ್ತಿದ್ದೇವೆ,ಏಕೀಕರಣ ಸಂಧರ್ಭದಲ್ಲಿ ಅನೇಕ ವಿರೋಧ ವ್ಯಕ್ತವಾಗಿತ್ತು ಆದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ನೀತಿಯಿಂದ ಕರ್ನಾಟಕ ಏಕೀಕರಣಗೊಂಡಿದ್ದರಿಂದ ಮೈಸೂರು ಅರಸರನ್ನು ಇಂದು ಸ್ಮರಿಸಬೇಕಿದೆ ಎಂದರು.ನಾವು ಇತರೆ ರಾಜ್ಯದವರೊಂದಿಗೆ ಸಂವಹನ ನಡೆಸುವಾಗ ಕನ್ನಡದಲ್ಲಿ ಮಾತಾಡದೇ ಹಿಂದಿ,ತಮಿಳು,ತೆಲುಗು ಇತರೆ ಭಾಷೆಯಲ್ಲಿ ಮಾತಾಡಲು ಮುಂದಾಗುತ್ತೇವೆ,ಈ ರೀತಿ ಮಾಡದೇ ಕನ್ನಡ ಭಾಷೆಯಲ್ಲೇ ಮಾತಾಡಿ,ಯಾವ ಸಾಹಿತ್ಯವನ್ನು ಹೆಚ್ಚು ಬಳಸುತ್ತಾ ಹೋಗುತ್ತೇವೆ ಆ ಸಾಹಿತ್ಯ ಬೆಳೆಯುತ್ತದೆ ಇಲ್ಲವಾದರೆ ನಶಿಸುತ್ತದೆ ಎಂದರು.ವ್ಯವಹಾರಿಕವಾಗಿ ಯಾವುದೇ ಭಾಷೆ ಬಳಸಿ ಆದರೆ ಕನ್ನಡ ಭಾಷೆಯನ್ನು ಮರೆಯಬೇಡಿ,ಕಾವೇರಿಯಿಂದ ಗೋದಾವರಿಯವರೆಗೆ ಇದ್ದ ಕನ್ನಡನಾಡಿನ ಹಿರಿಮೆಯನ್ನು ಉಳಿಸಿ,ಬೆಳೆಸಿ ಎಂದು ತಿಳಿಸಿದರು.ಪ್ರತಿಯೊಬ್ಬರೂ ಸ್ವಾಭಿಮಾನದಿಂದ ಬಾಳಲು ಶಿಕ್ಷಣ ಬೇಕು.ಇಂದು ರಾಜಕಾರಣ,ಹೋರಾಟ,ಸಂಘಟನೆಗಳನ್ನು ಮಾಡಬಹುದು ಆದರೆ ಆಡಳಿತ ಮಾಡುವುದು ಸುಲಭದ ಮಾತಲ್ಲ.ಕನ್ನಡ ಭಾಷೆ ನೋವು ನಲಿವುನಲ್ಲಿಯೋ ನಮ್ಮೊಂದಿಗೆ ಇರುತ್ತದೆ ಎಂದರು.ಯಾವುದೇ ಭಾಷೆಯ ಅನಿಮಾರ್ಯತೆ ನಮಗಿಲ್ಲ. ಇನ್ಪೋಸಿಸ್ ,ವಿಪ್ರೋ ನಂತಹ ಅನೇಕ ಸಾಫ್ ವೇರ್ ಕಂಪನಿಗಳು ಅಭಿವೃದ್ದಿಯ ನೆಪದಲ್ಲಿ ಸ್ಥಾಪನೆಯಾಗಿ ಕನ್ನಡನಾಡಿನ ಜನತೆಯನ್ನೇ ಮರೆತಿದ್ದಾರೆಂದು ವಿಷಾದಿಸಿದರು.

ಮಧ್ಯಾಹ್ನದ ನಂತರ ಪಟ್ಟಣದ ರಾಜ ಬೀದಿಗಳಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಿ,ಶ್ರೀ ಭುವನೇಶ್ವರಿದೇವಿಯ ಭವ್ಯ ಮೆರವಣಿಗೆಯಲ್ಲಿ ನಾಸಿಕ್ ಡೋಲು,ವೀರಗಾಸೆ,ಡೋಳ್ಳುಕುಣಿತ,ಮದ್ದುಗುಂಡು,ಸ್ತಬ್ದಚಿತ್ರಗಳು ಹಾಗೂ ಜಾನಪದ ಕಲಾತಂಡಗಳಿಂದ ವಿವಿಧ ಪ್ರದರ್ಶನಗಳು ನಡೆದವು.
ರೈತಸಂಘದ ಕೆಂಕೆರೆ ಸತೀಶ್,ಚಿ.ನಾ.ಹಳ್ಳಿ ತಾಲ್ಲೂಕು ಕರವೇ ಕಾರ್ಯದರ್ಶಿ ರೇಣುಕ ಮಾರ್ತಿ,ತಾ.ಪಂ.ಸದಸ್ಯ ಜಯಣ್ಣ,ಹುಳಿಯಾರು ಕರವೇ ಗೌರವಾಧ್ಯಕ್ಷರಾದ ರಂಗಸ್ವಾಮಿ,ಬೀರಪ್ಪ,ಮಹಿಳಾ ಘಟಕದ ಅಧ್ಯಕ್ಷೆ ರತ್ನರಂಜನಿ,ತಾ.ಪಂ.ಮಾಜಿ ಸದಸ್ಯ ಮಲ್ಲಿಕಾರ್ಜುನಯ್ಯ,ಮೆಡಿಕಲ್ ದೇವಣ್ಣ,ಗ್ರಾ.ಪಂ.ಸದಸ್ಯ ಬಡ್ಡಿ ಪುಟ್ಟರಾಜು,ಯಳನಡು ವಿಎಸ್.ಎಸ್.ನ ಅಧ್ಯಕ್ಷ ಕುಮಾರ್,ಸಜ್ಜಾದ್,ಖಾಸಗಿ ಬಸ್ ಏಜೆಂಟ್ ಸಂಘದ ಲೋಕೇಶಣ್ಣ ಅತಿಥಿಗಳಾಗಿ ಆಗಮಿಸಿದ್ದು,ಉಪನ್ಯಾಸಕ ಹಾಲಪ್ಪ ಪ್ರಾಸ್ತಾವಿಕ ನುಡಿ ನುಡಿದರು.ಶಿಕ್ಷಕ ಗಂಗಾಧರಯ್ಯ ನಿರೂಪಿಸಿ,ವಂದಿಸಿದರು.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.