ವಿಷಯಕ್ಕೆ ಹೋಗಿ

ಕರ್ನಾಟಕದ ಪ್ರತಿಯೊಬ್ಬರಲ್ಲೂ ನಾವೆಲ್ಲಾ ಒಂದೇ ಎಂಬ ಭಾವನೆ ಮೂಡಬೇಕು: ಮಾಜಿ ಶಾಸಕ ಕೆ.ಎಸ್.ಕೆ.


ಹುಳಿಯಾರು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆಯವರು ಬುಧವಾರ ಸಂಜೆ ಎಂಪಿಎಸ್ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ 57ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿರುವ ಮಾಜಿಶಾಸಕ ಕೆ.ಎಸ್.ಕಿರಣ್ ಕುಮಾರ್, ರೈತಸಂಘದ ಕೆಂಕೆರೆ ಸತೀಶ್,ತಾಪಂ ಸದಸ್ಯ ನವೀನ್

ಕರ್ನಾಟಕ ರಾಜ್ಯದಲ್ಲಿರುವ ಪ್ರತಿಯೊಬ್ಬರು ಕನ್ನಡ ನಮ್ಮ ಮಾತೃಭಾಷೆ,ಅದನ್ನು ಪೋಷಿಸಿ,ಬೆಳೆಸಬೇಕು ಹಾಗೂ ನಮ್ಮಲ್ಲಿಯೇ ಸ್ಥಳೀಯ ಸಮಸ್ಯೆಗಳನ್ನೇ ದೊಡ್ಡದು ಮಾಡಿ ನೆರೆಹೊರೆ ರಾಜ್ಯದವರು ಬೆರಳಿಟ್ಟು ತೋರಿಸುವಂತೆ ಮಾಡದೇ ಕನ್ನಡ ನಾಡಿನ ಪ್ರಜೆಗಳೆಲ್ಲಾ ಒಂದೇ ಭಾವನೆ ನಮ್ಮಲ್ಲಿ ಮೂಡಲಿ ಎಂದು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ತಿಳಿಸಿದರು.
ಹುಳಿಯಾರು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಹಿಳಾ ಕರವೇ ಘಟಕ,ಹೋಬಳಿಯ ಕನ್ನಡಪರ ಸಂಘಟನೆಗಳ ಸಹಯೋಗದೊಂದಿಗೆ ಬುಧವಾರ ಸಂಜೆ ಎಂಪಿಎಸ್ ಶಾಲಾ ಮೈದಾನದಲ್ಲಿ ನಡೆದ 57ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯೋತ್ಸವವನ್ನು ನವಂಬರ್ ಒಂದರಿಂದ ತಿಂಗಳಾಂತ್ಯದವರೆಗೆ ಅನೇಕ ಕನ್ನಡಪರ ಸಂಘಟನೆಯವರು ಆಚರಿಸುತ್ತಾರೆ ಇದರಿಂದ ಕನ್ನಡಭಾಷೆಯ ಸ್ಥಾನ ಎಂತಹದ್ದು ಎಂಬುದು ತಿಳಿಯುತ್ತದೆ.ಕರ್ನಾಟಕಕ್ಕೆ ಇಂದು ನೆರಹೊರೆಯ ರಾಜ್ಯಗಳ ಹಾವಳಿ ಹೆಚ್ಚಿ, ಗಡಿ ಭಾಗಗಳಲ್ಲಿ ಅನೇಕ ಸಮಸ್ಯೆ ಉಲ್ಭಣವಾಗುತ್ತಿವೆ,ಇದನ್ನು ನಾವು ಮಾಧ್ಯಮಗಳ ಮೂಲಕ ತಿಳಿಯುತ್ತೇವೆ .ಆದರೆ ಅಲ್ಲಿನ ಜನ ಅನುಭವಿಸುವಂತಹ ತೊಂದರೆಗಳ ಕಾವು ನಮಗಾಗದಿದ್ದರೂ ಸಹ, ಅವರ ನೋವುಗಳಿಗೆ ಸ್ಪಂದಿಸಿ ಕರ್ನಾಟಕ ನಮ್ಮದು ಅದನ್ನು ಯಾರಿಗೂ ಬಿಟ್ಟು ಕೊಡುವುದಿಲ್ಲ ಎಂಬ ಧ್ಯೇಯವನ್ನು ಹೊಂದಬೇಕಿದೆ ಎಂದರು.
ಪ್ರಸ್ತುತದಲ್ಲಿ ಅಭಿವೃದ್ದಿಯ ನೆಪದಲ್ಲಿ ಅನೇಕ ಸಾಫ್ಟ್ ವೇರ್ ಕಂಪನಿಗಳು ಕರ್ನಾಟಕದ ಹೃದಯ ಭಾಗವಾದ ಬೆಂಗಳೂರಿಗೆ ಲಗ್ಗೆಯಿಟ್ಟು,ಇತರೆ ರಾಜ್ಯದವರಿಗೆ ಹೆಚ್ಚಿನ ಉದ್ಯೋಗ ಕೊಡುವ ಮೂಲಕ ಕನ್ನಡಿಗರನ್ನೇ ಮೂಲೆ ಗುಂಪು ಮಾಡಿದೆಯೆಂದು ವಿಷಾಧಿಸಿದರು.
ಚಿಕ್ಕನಾಯಕನಹಳ್ಳಿ ಭಾಗಕ್ಕೆ ಹೇಮಾವತಿ ನೀರನ್ನು ಹರಿಸುವಲ್ಲಿ ಹೋಬಳಿಯ ಎಲ್ಲಾ ಸಂಘಟನೆಗಳು ಸಕ್ರೀಯವಾಗಿ ಪಾಲ್ಗೊಂಡಿದ್ದರ ಫಲವಾಗಿ ಕೆಲ ದಿನಗಳಲ್ಲೇ ಹೇಮಾವತಿ ನೀರು ಈ ಭಾಗಕ್ಕೆ ಹರಿಯುತ್ತದೆ.ನ.23ರಂದು ಅಡಿಗಲ್ಲು ಹಾಕುವ ಕಾರ್ಯ ನೆಡೆಯಬೇಕಿತ್ತು ಆದರೆ ಕಾರಣಾಂತರದಿಂದ ಮುಂದೂಡಲ್ಪಟ್ಟಿದೆ,ಇದರಲ್ಲಿ ಯಾವುದೇ ರೀತಿಯ ರಾಜಕೀಯ ದುರುದ್ದೇಶವಿಲ್ಲ ಕೇಂದ್ರದಿಂದಲ್ಲೇ ಈ ಯೋಜನೆಗೆ ಅನುಮತಿ ಇರುವುದರಿಂದ ಯಾರೇ ಏನೇ ಮಾಡಿದರು ಸಹ ಈಭಾಗಕ್ಕೆ ಹೇಮಾವತಿ ನೀರು ಬರುವುದನ್ನು ನಿಲ್ಲಿಸಲು ಆಗದು ಎಂದು ತಿಳಿಸಿದರು.
ಸಮಾರಂಭ ಉದ್ಘಾಟಿಸಿದ ರೈತಸಂಘದ ಕೆಂಕೆರೆ ಸತೀಶ್ ಮಾತನಾಡಿ, ನೀರಾವರಿ ಹೋರಾಟದಲ್ಲಿ ಹೋಬಳಿಯ ಎಲ್ಲಾ ಸಂಘಟನೆಗಳು ನಮ್ಮೊಂದಿಗೆ ಸಹಕರಿಸಿದ್ದು ಸ್ಮರಣೀಯ. ಇಂದು ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಪಡೆಯಬೇಕಾದರೆ ಸರ್ಕಾರವನ್ನು ಕೂಗಿ ಕೇಳಬೇಕಿದ್ದು,ಸಂಘಟನೆಗಳು ಬರಿ ಕಾರ್ಯಕ್ರಮಗಳನ್ನು ಮಾತ್ರ ಆಯೋಜಿಸದೆ ಹೋರಾಟಕ್ಕೆ ಮುಂದಾಗಿ ಸರ್ಕಾರದ ತಪ್ಪುಗಳನ್ನು ಗುರ್ತಿಸಿ ಅದರಿಂದಾಗುವ ಅನಾನುಕೂಲತೆಯನ್ನು ತಿಳಿಯುವಂತೆ ಮಾಡುವ ಕಾರ್ಯ ಮಾಡಬೇಕಿದೆ. ಕನ್ನಡ ನಾಡಿನ ಹಿತಕ್ಕಾಗಿ ನಡೆಯುವ ಹೋರಾಟಗಳಿಗೆ ರೈತಸಂಘ ಸದಾಸಿದ್ದ ಎಂದರು.
ಉಪನ್ಯಾಸಕ ಕಣ್ಣಯ್ಯ ಪ್ರಾಸ್ತಾವಿಕ ನುಡಿ ನುಡಿದರು.ಪಿಎಸೈ ರಾಜು,ಜಿ.ಪಂ.ಸದಸ್ಯೆ ಮಂಜುಳಾ,ತಾ.ಪಂ.ಉಪಾಧ್ಯಕ್ಷೆ ಬೀಬೀಫಾತೀಮ,ತಾ.ಪಂ.ಸದಸ್ಯ ಕೆಂಕೆರೆ ನವೀನ್,ಗ್ರಾ.ಪಂ.ಅಧ್ಯಕ್ಷ ಅನ್ಸರ್ ಅಲಿ,ಉಪಾಧ್ಯಕ್ಷೆ ವೆಂಕಟಮ್ಮ,ಜೆಡಿಎಸ್ ಮುಂಖಂಡರಾದ ಲಲಿತಾಪ್ರಕಾಶ್,ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಹುಳಿಯಾರು ಕರವೇ ಅಧ್ಯಕ್ಷ ಕೋಳಿ ಶ್ರೀನಿವಾಸ್,ಗೌರವಾಧ್ಯಕ್ಷ ರಂಗಸ್ವಾಮಿ,ಬೀರಪ್ಪ,ಮಹಿಳಾ ಕರವೇ ಘಟಕ ಅಧ್ಯಕ್ಷೆ ರತ್ನರಂಜನಿ,ಹಂದನಕೆರೆ ಕರವೇ ಅಧ್ಯಕ್ಷ ರಂಗನಾಥ್,ಜಯಕರ್ನಾಟಕ ಸಂಘದ ಸುರೇಶ್ ರೈ,ವೆಂಕಟೇಶ್,ನಂದಿಹಳ್ಳಿ ಶಿವಣ್ಣ,ಗ್ರಾ.ಪಂ ಸದಸ್ಯರು ಅತಿಥಿಗಳಾಗಿ ಆಗಮಿಸಿದ್ದ ಸಮಾರಂಭದಲ್ಲಿ ಶಿಕ್ಷಕ ದಯಾನಂದ್ ನಿರೂಪಿಸಿ, ಕಿರಣ್ ಸ್ವಾಗತಿಸಿ,ಶಿಕ್ಷಕ ಗಂಗಾಧರಯ್ಯ ವಂದಿಸಿದರು.ಇದೇ ವೇಳೆ
ಪಂಡಿತ್ ಬಸವರಾಜು ಹಾಗೂ ಕರವೇ ಪೋಷಕ ಮತ್ತು ಸಂಚಾಲಕ ಕೆ.ಕುಮಾರ್ ಅವರನ್ನು ಸನ್ಮಾನಿಸಲಾಯಿತು.
.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...