ವಿಷಯಕ್ಕೆ ಹೋಗಿ

ಕರ್ನಾಟಕದ ಪ್ರತಿಯೊಬ್ಬರಲ್ಲೂ ನಾವೆಲ್ಲಾ ಒಂದೇ ಎಂಬ ಭಾವನೆ ಮೂಡಬೇಕು: ಮಾಜಿ ಶಾಸಕ ಕೆ.ಎಸ್.ಕೆ.


ಹುಳಿಯಾರು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆಯವರು ಬುಧವಾರ ಸಂಜೆ ಎಂಪಿಎಸ್ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ 57ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿರುವ ಮಾಜಿಶಾಸಕ ಕೆ.ಎಸ್.ಕಿರಣ್ ಕುಮಾರ್, ರೈತಸಂಘದ ಕೆಂಕೆರೆ ಸತೀಶ್,ತಾಪಂ ಸದಸ್ಯ ನವೀನ್

ಕರ್ನಾಟಕ ರಾಜ್ಯದಲ್ಲಿರುವ ಪ್ರತಿಯೊಬ್ಬರು ಕನ್ನಡ ನಮ್ಮ ಮಾತೃಭಾಷೆ,ಅದನ್ನು ಪೋಷಿಸಿ,ಬೆಳೆಸಬೇಕು ಹಾಗೂ ನಮ್ಮಲ್ಲಿಯೇ ಸ್ಥಳೀಯ ಸಮಸ್ಯೆಗಳನ್ನೇ ದೊಡ್ಡದು ಮಾಡಿ ನೆರೆಹೊರೆ ರಾಜ್ಯದವರು ಬೆರಳಿಟ್ಟು ತೋರಿಸುವಂತೆ ಮಾಡದೇ ಕನ್ನಡ ನಾಡಿನ ಪ್ರಜೆಗಳೆಲ್ಲಾ ಒಂದೇ ಭಾವನೆ ನಮ್ಮಲ್ಲಿ ಮೂಡಲಿ ಎಂದು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ತಿಳಿಸಿದರು.
ಹುಳಿಯಾರು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಹಿಳಾ ಕರವೇ ಘಟಕ,ಹೋಬಳಿಯ ಕನ್ನಡಪರ ಸಂಘಟನೆಗಳ ಸಹಯೋಗದೊಂದಿಗೆ ಬುಧವಾರ ಸಂಜೆ ಎಂಪಿಎಸ್ ಶಾಲಾ ಮೈದಾನದಲ್ಲಿ ನಡೆದ 57ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯೋತ್ಸವವನ್ನು ನವಂಬರ್ ಒಂದರಿಂದ ತಿಂಗಳಾಂತ್ಯದವರೆಗೆ ಅನೇಕ ಕನ್ನಡಪರ ಸಂಘಟನೆಯವರು ಆಚರಿಸುತ್ತಾರೆ ಇದರಿಂದ ಕನ್ನಡಭಾಷೆಯ ಸ್ಥಾನ ಎಂತಹದ್ದು ಎಂಬುದು ತಿಳಿಯುತ್ತದೆ.ಕರ್ನಾಟಕಕ್ಕೆ ಇಂದು ನೆರಹೊರೆಯ ರಾಜ್ಯಗಳ ಹಾವಳಿ ಹೆಚ್ಚಿ, ಗಡಿ ಭಾಗಗಳಲ್ಲಿ ಅನೇಕ ಸಮಸ್ಯೆ ಉಲ್ಭಣವಾಗುತ್ತಿವೆ,ಇದನ್ನು ನಾವು ಮಾಧ್ಯಮಗಳ ಮೂಲಕ ತಿಳಿಯುತ್ತೇವೆ .ಆದರೆ ಅಲ್ಲಿನ ಜನ ಅನುಭವಿಸುವಂತಹ ತೊಂದರೆಗಳ ಕಾವು ನಮಗಾಗದಿದ್ದರೂ ಸಹ, ಅವರ ನೋವುಗಳಿಗೆ ಸ್ಪಂದಿಸಿ ಕರ್ನಾಟಕ ನಮ್ಮದು ಅದನ್ನು ಯಾರಿಗೂ ಬಿಟ್ಟು ಕೊಡುವುದಿಲ್ಲ ಎಂಬ ಧ್ಯೇಯವನ್ನು ಹೊಂದಬೇಕಿದೆ ಎಂದರು.
ಪ್ರಸ್ತುತದಲ್ಲಿ ಅಭಿವೃದ್ದಿಯ ನೆಪದಲ್ಲಿ ಅನೇಕ ಸಾಫ್ಟ್ ವೇರ್ ಕಂಪನಿಗಳು ಕರ್ನಾಟಕದ ಹೃದಯ ಭಾಗವಾದ ಬೆಂಗಳೂರಿಗೆ ಲಗ್ಗೆಯಿಟ್ಟು,ಇತರೆ ರಾಜ್ಯದವರಿಗೆ ಹೆಚ್ಚಿನ ಉದ್ಯೋಗ ಕೊಡುವ ಮೂಲಕ ಕನ್ನಡಿಗರನ್ನೇ ಮೂಲೆ ಗುಂಪು ಮಾಡಿದೆಯೆಂದು ವಿಷಾಧಿಸಿದರು.
ಚಿಕ್ಕನಾಯಕನಹಳ್ಳಿ ಭಾಗಕ್ಕೆ ಹೇಮಾವತಿ ನೀರನ್ನು ಹರಿಸುವಲ್ಲಿ ಹೋಬಳಿಯ ಎಲ್ಲಾ ಸಂಘಟನೆಗಳು ಸಕ್ರೀಯವಾಗಿ ಪಾಲ್ಗೊಂಡಿದ್ದರ ಫಲವಾಗಿ ಕೆಲ ದಿನಗಳಲ್ಲೇ ಹೇಮಾವತಿ ನೀರು ಈ ಭಾಗಕ್ಕೆ ಹರಿಯುತ್ತದೆ.ನ.23ರಂದು ಅಡಿಗಲ್ಲು ಹಾಕುವ ಕಾರ್ಯ ನೆಡೆಯಬೇಕಿತ್ತು ಆದರೆ ಕಾರಣಾಂತರದಿಂದ ಮುಂದೂಡಲ್ಪಟ್ಟಿದೆ,ಇದರಲ್ಲಿ ಯಾವುದೇ ರೀತಿಯ ರಾಜಕೀಯ ದುರುದ್ದೇಶವಿಲ್ಲ ಕೇಂದ್ರದಿಂದಲ್ಲೇ ಈ ಯೋಜನೆಗೆ ಅನುಮತಿ ಇರುವುದರಿಂದ ಯಾರೇ ಏನೇ ಮಾಡಿದರು ಸಹ ಈಭಾಗಕ್ಕೆ ಹೇಮಾವತಿ ನೀರು ಬರುವುದನ್ನು ನಿಲ್ಲಿಸಲು ಆಗದು ಎಂದು ತಿಳಿಸಿದರು.
ಸಮಾರಂಭ ಉದ್ಘಾಟಿಸಿದ ರೈತಸಂಘದ ಕೆಂಕೆರೆ ಸತೀಶ್ ಮಾತನಾಡಿ, ನೀರಾವರಿ ಹೋರಾಟದಲ್ಲಿ ಹೋಬಳಿಯ ಎಲ್ಲಾ ಸಂಘಟನೆಗಳು ನಮ್ಮೊಂದಿಗೆ ಸಹಕರಿಸಿದ್ದು ಸ್ಮರಣೀಯ. ಇಂದು ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಪಡೆಯಬೇಕಾದರೆ ಸರ್ಕಾರವನ್ನು ಕೂಗಿ ಕೇಳಬೇಕಿದ್ದು,ಸಂಘಟನೆಗಳು ಬರಿ ಕಾರ್ಯಕ್ರಮಗಳನ್ನು ಮಾತ್ರ ಆಯೋಜಿಸದೆ ಹೋರಾಟಕ್ಕೆ ಮುಂದಾಗಿ ಸರ್ಕಾರದ ತಪ್ಪುಗಳನ್ನು ಗುರ್ತಿಸಿ ಅದರಿಂದಾಗುವ ಅನಾನುಕೂಲತೆಯನ್ನು ತಿಳಿಯುವಂತೆ ಮಾಡುವ ಕಾರ್ಯ ಮಾಡಬೇಕಿದೆ. ಕನ್ನಡ ನಾಡಿನ ಹಿತಕ್ಕಾಗಿ ನಡೆಯುವ ಹೋರಾಟಗಳಿಗೆ ರೈತಸಂಘ ಸದಾಸಿದ್ದ ಎಂದರು.
ಉಪನ್ಯಾಸಕ ಕಣ್ಣಯ್ಯ ಪ್ರಾಸ್ತಾವಿಕ ನುಡಿ ನುಡಿದರು.ಪಿಎಸೈ ರಾಜು,ಜಿ.ಪಂ.ಸದಸ್ಯೆ ಮಂಜುಳಾ,ತಾ.ಪಂ.ಉಪಾಧ್ಯಕ್ಷೆ ಬೀಬೀಫಾತೀಮ,ತಾ.ಪಂ.ಸದಸ್ಯ ಕೆಂಕೆರೆ ನವೀನ್,ಗ್ರಾ.ಪಂ.ಅಧ್ಯಕ್ಷ ಅನ್ಸರ್ ಅಲಿ,ಉಪಾಧ್ಯಕ್ಷೆ ವೆಂಕಟಮ್ಮ,ಜೆಡಿಎಸ್ ಮುಂಖಂಡರಾದ ಲಲಿತಾಪ್ರಕಾಶ್,ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಹುಳಿಯಾರು ಕರವೇ ಅಧ್ಯಕ್ಷ ಕೋಳಿ ಶ್ರೀನಿವಾಸ್,ಗೌರವಾಧ್ಯಕ್ಷ ರಂಗಸ್ವಾಮಿ,ಬೀರಪ್ಪ,ಮಹಿಳಾ ಕರವೇ ಘಟಕ ಅಧ್ಯಕ್ಷೆ ರತ್ನರಂಜನಿ,ಹಂದನಕೆರೆ ಕರವೇ ಅಧ್ಯಕ್ಷ ರಂಗನಾಥ್,ಜಯಕರ್ನಾಟಕ ಸಂಘದ ಸುರೇಶ್ ರೈ,ವೆಂಕಟೇಶ್,ನಂದಿಹಳ್ಳಿ ಶಿವಣ್ಣ,ಗ್ರಾ.ಪಂ ಸದಸ್ಯರು ಅತಿಥಿಗಳಾಗಿ ಆಗಮಿಸಿದ್ದ ಸಮಾರಂಭದಲ್ಲಿ ಶಿಕ್ಷಕ ದಯಾನಂದ್ ನಿರೂಪಿಸಿ, ಕಿರಣ್ ಸ್ವಾಗತಿಸಿ,ಶಿಕ್ಷಕ ಗಂಗಾಧರಯ್ಯ ವಂದಿಸಿದರು.ಇದೇ ವೇಳೆ
ಪಂಡಿತ್ ಬಸವರಾಜು ಹಾಗೂ ಕರವೇ ಪೋಷಕ ಮತ್ತು ಸಂಚಾಲಕ ಕೆ.ಕುಮಾರ್ ಅವರನ್ನು ಸನ್ಮಾನಿಸಲಾಯಿತು.
.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.