ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದ ಪುರಾಣ ಪ್ರಸಿದ್ದ ಶ್ರೀಚನ್ನಬಸವೇಶ್ವರ ಸ್ವಾಮಿಯ ಕೃತಿಕಾ ಮಹೋತ್ಸವವು ಸ್ವಾಮಿಯ ಮೂಲಸ್ಥಾನವಾದ ಪುರದಮಠದಲ್ಲಿ ಸೋಮವಾರ ಗ್ರಾಮದೇವತೆ ಶ್ರೀಕಾಳಿಕಾಂಭ ದೇವಿ ಹಾಗೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ,ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ವೈಭವಯುತವಾಗಿ ನಡೆಯಿತು. 16ನೇ ಶತಮಾನದ ಸಂತ ಗೋಸಲ ಚನ್ನಬಸವಣ್ಣನವರ ತಪೋಕ್ಷೇತ್ರವೆಂದೇ ಖ್ಯಾತವಾಗಿರುವ ಪುರದ ಮಠದಲ್ಲಿ ಪ್ರತಿವರ್ಷದ ಕಾರ್ತಿಕ ಮಾಸದ ಪೂರ್ಣಿಮದಂದು ಈ ಕಾರ್ತಿಕ ಮಹೋತ್ಸವ ನಡೆಯುತ್ತದೆ. ಅದರಂತೆ ಸೋಮವಾರ ಬೆಳಿಗ್ಗೆ ಕೆಂಕೆರೆ ಗ್ರಾಮದಲ್ಲಿರುವ ಸ್ವಾಮಿಗೆ ವಿಶೇಷ ಪೂಜೆ ನಡೆಸಿ,ನಂತರ ಗ್ರಾಮದೇವತೆ ಕಾಳಮ್ಮ ಹಾಗೂ ಸ್ವಾಮಿಯವರನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿದ್ದಲ್ಲದೆ, ಬಸವನ ಉತ್ಸವದೊಂದಿಗೆ ಮೂಲಸ್ಥಾನ ಪುರದಮಠಕ್ಕೆ ಕರೆದ್ಯೊಯಲಾಯಿತು. ಮೂಲಸ್ಥಾನದಲ್ಲಿರುವ ಸ್ವಾಮಿಯ ಮೂಲವಿಗ್ರಹಕ್ಕೆ ನಟರಾಜ್ ಪೌರೋಹಿತ್ಯದಲ್ಲಿ ಅಭಿಷೇಕ, ಮಾಡಿ ನಂತರ ಬಗೆಬಗೆ ಹೂಗಳಿಂದ ಸಿಂಗರಿಸಿ,ಮಧ್ಯಾಹ್ನ 1 ಗಂಟೆಗೆ ಪುರದಮಠದಲ್ಲಿ ಬಸವನ ಉತ್ಸವ ನಡೆಸಿ, ತಯಾರಿಸಿದ್ದ ಪ್ರಸಾದವನ್ನು ಸ್ವಾಮಿಯ ಗದ್ದಿಗೆ ಇರುವ ಪುರಾತನ ಗುಹೆಗಳಿಗೆ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ನೆರವೇರಿಸಿ ಬಂದ ನಂತರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಯಿತು. ರಾಗಿಮುದ್ದೆಸಾರಿನ ಊಟ : ಇಲ್ಲಿನ ವಿಶೇಷವೆಂದರೆ ಮಹೊತ್ಸವಕ್ಕೆ ಆಗಮಿಸಿದ್ದ ಭಕ್ತಾಧಿಗಳಿಗೆ ರಾಗಿ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070