ವಿಷಯಕ್ಕೆ ಹೋಗಿ

ತಾಲ್ಲೂಕಿನ 26 ಕೆರೆಗಳಿಗೆ ಹೇಮಾವತಿ ನೀರು: ಕಾಮಗಾರಿಗೆ ಚಾಲನೆ:ಕೆ.ಎಸ್.ಕೆ

ಚಿಕ್ಕನಾಯಕನಹಳ್ಳಿ ತಾಲ್ಲೂಕಿನಾದ್ಯಂತ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶಂಕುಸ್ಥಾಪನೆ ನೆರವೇರಿಸಿದ್ದ ತಾಲ್ಲೂಕಿನ 26 ಕೆರೆಗಳಿಗೆ ಹೇಮಾವತಿ ನೀರು ಹರಿಸುವ 102ಕೋಟಿ ರೂಗಳ ಕಾಮಗಾರಿ ಶನಿವಾರ ವಿದ್ಯುಕ್ತವಾಗಿ ಚಾಲನೆಗೊಂಡಿರುವುದು ಬಿಜೆಪಿ ಸರ್ಕಾರವು ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಚಿ.ನಾ.ಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ತಿಳಿಸಿದರು.

ಹುಳಿಯಾರಿನ ತಮ್ಮ ನಿವಾಸಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ಪ್ರಸ್ತಾವಿಸಿದ ಅವರು ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಸರ್ಕಾರಿ ಜಾಗಗಳಲ್ಲಿ ಮಾತ್ರ ಕಾಮಗಾರಿ ನಡೆಯಲಿದ್ದು ನಂತರದ ದಿನಗಳಲ್ಲಿ ಸಂಪೂರ್ಣವಾಗಿ ಕಾಮಗಾರಿ ನಡೆಯುತ್ತದೆ ಎಂದರು.ಕ್ಷೇತ್ರದಲ್ಲಿ ವಿರೋಧ ಪಕ್ಷ ಅಧಿಕಾರದಲ್ಲಿದರೂ ಸಹ ಕ್ಷೇತ್ರದ ಅಭಿವೃದ್ದಿಯನ್ನು ಮನಗಂಡು ಬಿಜೆಪಿ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿದೆ ,ಆದರೆ ಹಾಲಿ ಶಾಸಕರು ತಮ್ಮ ಕ್ಷೇತ್ರದಲ್ಲಿನ ಆಗಬೇಕಿರುವ ಅಭಿವೃದ್ದಿ ಕಾರ್ಯಗಳು,ಇರುವ ಸಮಸ್ಯೆಗಳ ಬಗ್ಗೆ ಯಾವುದೇ ಕರಡುಗಳು ಸರ್ಕಾರದ ಮುಂದಿಟ್ಟಿರುವ ನಿದರ್ಶನಗಳಿಲ್ಲ,ಆದರೂ ಕ್ಷೇತ್ರದಲ್ಲಿ ಮೂರಾರ್ಜಿ ವಸತಿ ಶಾಲಾ ಕಟ್ಟಡ ನಿರ್ಮಾಣ,ಅಗ್ನಿಶಾಮಕ ಠಾಣೆ,ಶಾಲೆಲಾಕಟ್ಟಡಗಳು ಮಂಜೂರಾಗಿವೆ,ಹರಿಜನ ಕಾಲೋನಿಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ,ಸುವರ್ಣ ಗ್ರಾಮಯೋಜನೆಯನ್ನು ಹಲವಾರು ಗ್ರಾಮಗಳಲ್ಲಿ ಪ್ರಾಯೋಗಿಕವಾಗಿ ಚಾಲನೆಗೆ ತಂದಿರುವುದಲ್ಲದೆ,ತಾಲ್ಲೂಕಿನ ಅಭಿವೃದ್ದಿಗಾಗಿ ಒಟ್ಟು 300ಕೋಟಿ ಅನುದಾನವನ್ನು ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದು ,ಬಿಜೆಪಿ ಸರ್ಕಾರದಲ್ಲಿ ಯಾವುದೇ ತಾರತಮ್ಯ ಮನೋಬಾವವಿಲ್ಲ ಎಂಬುದನ್ನು ತೋರ್ಪಡಿಸಿದೆ ಎಂದರು. 

ಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರುಗಳ ಸಮಯಸಾಧಕತನವನ್ನು ಲೇವಡಿ ಮಾಡಿದ ಅವರು ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತು ಜನರಿಂದ ಅಂತರವನ್ನು ಕಾಯ್ದುಕೊಂಡ ಹಾಲಿ ಶಾಸಕರು ಕೆಡಿಪಿ ಮೀಟಿಂಗ್ ಗಳಾಗಲಿ,ಬಗರ್ ಹುಕುಂ ಮೀಟಿಂಗ್ ಗಳನ್ನಾಗಲಿ ಸೂಕ್ತ ಸಮಯದಲ್ಲಿ ನಡೆಸದೆ ತಾಲ್ಲೂಕಿಗೆ ಅನ್ಯಾಯ ಎಸಗಿದ್ದಾರೆ.ವಿರೋಧ ಪಕ್ಷದ ಶಾಸಕನಾಗಿರುವುದರಿಂದ ಹಾಲಿ ಬಿಜೆಪಿ ಸರ್ಕಾರ ಕ್ಷೇತ್ರಕ್ಕೆ ಅನುದಾನ ನೀಡಲಿಲ್ಲವಾದ್ದರಿಂದ ಅಭಿವೃದ್ದಿಯಲ್ಲಿ ಹಿನ್ನಡೆಯಾಯಿತು ಎಂದು ಹೇಳಿಕೊಳ್ಳುತ್ತಾ ಮತ್ತೊಮ್ಮೆ ಮತಯಾಚನೆಗೆ ಹೊರಟಿದ್ದಾರೆ.ಆದರೆ ರಾಜ್ಯದಲ್ಲಿ ವಿರೋಧಪಕ್ಷದ ಶಾಸಕರುಗಳಿರುವ ಇನ್ಯಾವುದೆ ಕ್ಷೇತ್ರಗಳು ಅಭಿವೃದ್ದಿಯಾಗಿಲ್ಲವೆ ಎಂದು ಪ್ರಶ್ನಿಸಿದರು. 

ತಾಲ್ಲೂಕಿಗೆ ಹೇಮಾವತಿ ನದಿ ನೀರು ಹರಿಸುವ ಸಲುವಾಗಿ ಹೋರಾಟಗಳು ನಡೆಯುವಾಗ ಈ ಭಾಗಕ್ಕೆ ಹೇಮಾವತಿ ಯೋಜನೆ ಕಾರ್ಯರೂಪಕ್ಕೆ ಬರುವುದು ಅಸಾಧ್ಯ ಎನ್ನುತ್ತಿದ್ದ ಮಾಜಿ ಶಾಸಕರು ಹಾಗೇನಾದರೂ ನೀರು ಹರಿದರೆ ತಾವು ರಾಜಕೀಯ ನಿವೃತ್ತಿ ಹೊಂದುವುದಾಗಿ ಹೇಳಿಕೆ ನೀಡುತ್ತಿದ್ದರು.ಈಗ ನೋಡಿದರೆ ಅದೇ ನೀರನ್ನು ದಾಳವಾಗಿಟ್ಟುಕೊಂಡು ಯಡಿಯೂರಪ್ಪನವರು ಆ ಯೋಜನೆ ಜಾರಿಗೆ ತಂದಂತಹ ವ್ಯಕ್ತಿ ಅವರನ್ನು ಬೆಂಬಲಿಸುವುದು ಅನಿವಾರ್ಯ ಎನ್ನುತ್ತಾ ಇದ್ದ ಪಕ್ಷವನ್ನು ತೊರೆದು ಕೆಜೆಪಿ ಸೇರಿ ಪ್ರಚಾರಕ್ಕೆ ಮುಂದಾಗಿರಿವುದನ್ನು ನೋಡಿದರೆ ಜೆಟ್ಟಿ ಸೋತು ನೆಲ್ಲಕ್ಕೆ ಬಿದ್ದರೂ ತನ್ನ ಮೀಸೆ ಮಣ್ಣಾಗಲಿಲ್ಲ ಎನ್ನುವಂತಾಗಿದೆ ಎಂದು ವ್ಯಂಗ್ಯವಾಡಿದರು. ಶಾಸಕರಾಗಲೇ ಬೇಕೆಂಬ ಹಟಕ್ಕೆ ಬಿದ್ದು ತಮ್ಮ ತತ್ವ ಸಿದ್ದಾಂತಗಳಿಗೆ ತಿಲಾಂಜಲಿ ಇಟ್ಟು ಬೈದವರ ಜೊತೆಗೆ ಸೇರಿ ಮತಗಳಿಕೆಗೆ ಮುಂದಾಗಿರುವುದು ದುರದೃಷ್ಟಕರ ಎಂದರು.

ತಾಪಂ ಅಧ್ಯಕ್ಷ ಜಗದೀಶ್,ಮಾಜಿ ಅಧ್ಯಕ್ಷ ಸೀತಾರಾಮಯ್ಯ,ಸದಸ್ಯ ಕೆಂಕೆರೆ ನವೀನ್,ಗ್ರಾಪಂ ಅಧ್ಯಕ್ಷ ಶ್ರೀನಿವಾಸ್,ವಕೀಲ ರಮೇಶ್ ಬಾಬು,ಮುಖಂಡರಾದ ಕೆ.ಕೆ.ಹನುಮಂತಪ್ಪ,ನಂದೀಹಳ್ಳಿ ಮಲ್ಲೇಶಯ್ಯ,ಧನಂಜಯ, ದಯಾನಂದ, ರಾಮಯ್ಯ, ಪ್ರದೀಪ,ಗಣೇಶ ಇನ್ನತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...