ವಿಷಯಕ್ಕೆ ಹೋಗಿ

ತಾಲ್ಲೂಕಿನ 26 ಕೆರೆಗಳಿಗೆ ಹೇಮಾವತಿ ನೀರು: ಕಾಮಗಾರಿಗೆ ಚಾಲನೆ:ಕೆ.ಎಸ್.ಕೆ

ಚಿಕ್ಕನಾಯಕನಹಳ್ಳಿ ತಾಲ್ಲೂಕಿನಾದ್ಯಂತ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶಂಕುಸ್ಥಾಪನೆ ನೆರವೇರಿಸಿದ್ದ ತಾಲ್ಲೂಕಿನ 26 ಕೆರೆಗಳಿಗೆ ಹೇಮಾವತಿ ನೀರು ಹರಿಸುವ 102ಕೋಟಿ ರೂಗಳ ಕಾಮಗಾರಿ ಶನಿವಾರ ವಿದ್ಯುಕ್ತವಾಗಿ ಚಾಲನೆಗೊಂಡಿರುವುದು ಬಿಜೆಪಿ ಸರ್ಕಾರವು ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಚಿ.ನಾ.ಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ತಿಳಿಸಿದರು.

ಹುಳಿಯಾರಿನ ತಮ್ಮ ನಿವಾಸಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ಪ್ರಸ್ತಾವಿಸಿದ ಅವರು ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಸರ್ಕಾರಿ ಜಾಗಗಳಲ್ಲಿ ಮಾತ್ರ ಕಾಮಗಾರಿ ನಡೆಯಲಿದ್ದು ನಂತರದ ದಿನಗಳಲ್ಲಿ ಸಂಪೂರ್ಣವಾಗಿ ಕಾಮಗಾರಿ ನಡೆಯುತ್ತದೆ ಎಂದರು.ಕ್ಷೇತ್ರದಲ್ಲಿ ವಿರೋಧ ಪಕ್ಷ ಅಧಿಕಾರದಲ್ಲಿದರೂ ಸಹ ಕ್ಷೇತ್ರದ ಅಭಿವೃದ್ದಿಯನ್ನು ಮನಗಂಡು ಬಿಜೆಪಿ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿದೆ ,ಆದರೆ ಹಾಲಿ ಶಾಸಕರು ತಮ್ಮ ಕ್ಷೇತ್ರದಲ್ಲಿನ ಆಗಬೇಕಿರುವ ಅಭಿವೃದ್ದಿ ಕಾರ್ಯಗಳು,ಇರುವ ಸಮಸ್ಯೆಗಳ ಬಗ್ಗೆ ಯಾವುದೇ ಕರಡುಗಳು ಸರ್ಕಾರದ ಮುಂದಿಟ್ಟಿರುವ ನಿದರ್ಶನಗಳಿಲ್ಲ,ಆದರೂ ಕ್ಷೇತ್ರದಲ್ಲಿ ಮೂರಾರ್ಜಿ ವಸತಿ ಶಾಲಾ ಕಟ್ಟಡ ನಿರ್ಮಾಣ,ಅಗ್ನಿಶಾಮಕ ಠಾಣೆ,ಶಾಲೆಲಾಕಟ್ಟಡಗಳು ಮಂಜೂರಾಗಿವೆ,ಹರಿಜನ ಕಾಲೋನಿಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ,ಸುವರ್ಣ ಗ್ರಾಮಯೋಜನೆಯನ್ನು ಹಲವಾರು ಗ್ರಾಮಗಳಲ್ಲಿ ಪ್ರಾಯೋಗಿಕವಾಗಿ ಚಾಲನೆಗೆ ತಂದಿರುವುದಲ್ಲದೆ,ತಾಲ್ಲೂಕಿನ ಅಭಿವೃದ್ದಿಗಾಗಿ ಒಟ್ಟು 300ಕೋಟಿ ಅನುದಾನವನ್ನು ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದು ,ಬಿಜೆಪಿ ಸರ್ಕಾರದಲ್ಲಿ ಯಾವುದೇ ತಾರತಮ್ಯ ಮನೋಬಾವವಿಲ್ಲ ಎಂಬುದನ್ನು ತೋರ್ಪಡಿಸಿದೆ ಎಂದರು. 

ಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರುಗಳ ಸಮಯಸಾಧಕತನವನ್ನು ಲೇವಡಿ ಮಾಡಿದ ಅವರು ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತು ಜನರಿಂದ ಅಂತರವನ್ನು ಕಾಯ್ದುಕೊಂಡ ಹಾಲಿ ಶಾಸಕರು ಕೆಡಿಪಿ ಮೀಟಿಂಗ್ ಗಳಾಗಲಿ,ಬಗರ್ ಹುಕುಂ ಮೀಟಿಂಗ್ ಗಳನ್ನಾಗಲಿ ಸೂಕ್ತ ಸಮಯದಲ್ಲಿ ನಡೆಸದೆ ತಾಲ್ಲೂಕಿಗೆ ಅನ್ಯಾಯ ಎಸಗಿದ್ದಾರೆ.ವಿರೋಧ ಪಕ್ಷದ ಶಾಸಕನಾಗಿರುವುದರಿಂದ ಹಾಲಿ ಬಿಜೆಪಿ ಸರ್ಕಾರ ಕ್ಷೇತ್ರಕ್ಕೆ ಅನುದಾನ ನೀಡಲಿಲ್ಲವಾದ್ದರಿಂದ ಅಭಿವೃದ್ದಿಯಲ್ಲಿ ಹಿನ್ನಡೆಯಾಯಿತು ಎಂದು ಹೇಳಿಕೊಳ್ಳುತ್ತಾ ಮತ್ತೊಮ್ಮೆ ಮತಯಾಚನೆಗೆ ಹೊರಟಿದ್ದಾರೆ.ಆದರೆ ರಾಜ್ಯದಲ್ಲಿ ವಿರೋಧಪಕ್ಷದ ಶಾಸಕರುಗಳಿರುವ ಇನ್ಯಾವುದೆ ಕ್ಷೇತ್ರಗಳು ಅಭಿವೃದ್ದಿಯಾಗಿಲ್ಲವೆ ಎಂದು ಪ್ರಶ್ನಿಸಿದರು. 

ತಾಲ್ಲೂಕಿಗೆ ಹೇಮಾವತಿ ನದಿ ನೀರು ಹರಿಸುವ ಸಲುವಾಗಿ ಹೋರಾಟಗಳು ನಡೆಯುವಾಗ ಈ ಭಾಗಕ್ಕೆ ಹೇಮಾವತಿ ಯೋಜನೆ ಕಾರ್ಯರೂಪಕ್ಕೆ ಬರುವುದು ಅಸಾಧ್ಯ ಎನ್ನುತ್ತಿದ್ದ ಮಾಜಿ ಶಾಸಕರು ಹಾಗೇನಾದರೂ ನೀರು ಹರಿದರೆ ತಾವು ರಾಜಕೀಯ ನಿವೃತ್ತಿ ಹೊಂದುವುದಾಗಿ ಹೇಳಿಕೆ ನೀಡುತ್ತಿದ್ದರು.ಈಗ ನೋಡಿದರೆ ಅದೇ ನೀರನ್ನು ದಾಳವಾಗಿಟ್ಟುಕೊಂಡು ಯಡಿಯೂರಪ್ಪನವರು ಆ ಯೋಜನೆ ಜಾರಿಗೆ ತಂದಂತಹ ವ್ಯಕ್ತಿ ಅವರನ್ನು ಬೆಂಬಲಿಸುವುದು ಅನಿವಾರ್ಯ ಎನ್ನುತ್ತಾ ಇದ್ದ ಪಕ್ಷವನ್ನು ತೊರೆದು ಕೆಜೆಪಿ ಸೇರಿ ಪ್ರಚಾರಕ್ಕೆ ಮುಂದಾಗಿರಿವುದನ್ನು ನೋಡಿದರೆ ಜೆಟ್ಟಿ ಸೋತು ನೆಲ್ಲಕ್ಕೆ ಬಿದ್ದರೂ ತನ್ನ ಮೀಸೆ ಮಣ್ಣಾಗಲಿಲ್ಲ ಎನ್ನುವಂತಾಗಿದೆ ಎಂದು ವ್ಯಂಗ್ಯವಾಡಿದರು. ಶಾಸಕರಾಗಲೇ ಬೇಕೆಂಬ ಹಟಕ್ಕೆ ಬಿದ್ದು ತಮ್ಮ ತತ್ವ ಸಿದ್ದಾಂತಗಳಿಗೆ ತಿಲಾಂಜಲಿ ಇಟ್ಟು ಬೈದವರ ಜೊತೆಗೆ ಸೇರಿ ಮತಗಳಿಕೆಗೆ ಮುಂದಾಗಿರುವುದು ದುರದೃಷ್ಟಕರ ಎಂದರು.

ತಾಪಂ ಅಧ್ಯಕ್ಷ ಜಗದೀಶ್,ಮಾಜಿ ಅಧ್ಯಕ್ಷ ಸೀತಾರಾಮಯ್ಯ,ಸದಸ್ಯ ಕೆಂಕೆರೆ ನವೀನ್,ಗ್ರಾಪಂ ಅಧ್ಯಕ್ಷ ಶ್ರೀನಿವಾಸ್,ವಕೀಲ ರಮೇಶ್ ಬಾಬು,ಮುಖಂಡರಾದ ಕೆ.ಕೆ.ಹನುಮಂತಪ್ಪ,ನಂದೀಹಳ್ಳಿ ಮಲ್ಲೇಶಯ್ಯ,ಧನಂಜಯ, ದಯಾನಂದ, ರಾಮಯ್ಯ, ಪ್ರದೀಪ,ಗಣೇಶ ಇನ್ನತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.