ವಿಷಯಕ್ಕೆ ಹೋಗಿ

ಜೆಡಿಎಸ್ ಪಕ್ಷದಲ್ಲಿ ಯಾವುದೇ ಜಾತಿ ತಾರತಮ್ಯವಿಲ್ಲ: ಜಮೀರ್ ಅಹಮದ್

ಹುಳಿಯಾರಿನ ಮದಿನಾ ಶಾದಿಮಹಲ್ ಗೆ ಭೇಟಿನೀಡಿದ ಸಂಧರ್ಭದಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಮುಸ್ಲಿಂ ಬಾಂಧವರನ್ನು ಕುರಿತು ಮಾತನಾಡಿದರು.
              ಬದಲಾದ ರಾಜಕೀಯ ಸನ್ನಿವೇಷದಲ್ಲಿ ಇಂದು ಹಲವು ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರುಗಳು ಸೀಮಿತ ಜಾತಿಯನ್ನು ಒಲೈಸಿಕೊಂಡು ಸಾಗುತ್ತಿರುವುದು ದುರಂತದ ವಿಷಯ.ಆದರೆ ಜಾತ್ಯಾತೀತ ಜನತಾ ದಳ ಮಾತ್ರ ಹೆಸರಿಗೆ ತಕ್ಕಂತೆ ಯಾವುದೊಂದು ಜಾತಿ,ಮತಕ್ಕೆ ಸೀಮಿತವಾಗದೆ ಹಿಂದುಳಿದ,ಅಲ್ಪಸಂಖ್ಯಾತ,ದಲಿತರ,ಹಿಂದೂ,ಮುಸ್ಲಿಂ ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗುತ್ತಿರುವ ಏಕೈಕ ಪಕ್ಷವಾಗಿರುವುದು ಹೆಗ್ಗಳಿಕೆಯ ವಿಚಾರ ಎಂದು ಜಮೀರ್ ಅಹಮದ್ ಖಾನ್ ತಿಳಿಸಿದರು.
            ಹುಳಿಯಾರಿಗೆ ಸೋಮವಾರ ಭೇಟಿ ನೀಡಿದ ಅವರು ಮದೀನಾ ಶಾದಿ ಮಹಲ್ ನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮತದಾರರ    ಮನವೊಲಿಸಲು      ರಾಜ್ಯದಲ್ಲಿ   ಸಾಕಷ್ಟು ಅಭಿವೃದ್ದಿ ಕಾರ್ಯ ಮಾಡಿದ್ದೇವೆಂದು ಸುಳ್ಳೆ ಬೀಗುತ್ತಿರುವ ಬಿಜೆಪಿ ನಾಯಕರುಗಳ ಭ್ರಷ್ಟತನ ರಾಜ್ಯದ ಜನತೆಗೆ ತಿಳಿದಿದ್ದು,ಪ್ರಸ್ತುತ ಚುನಾವಣೆಯಲ್ಲಿ ಮತದಾರರೇ ಇದಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದರು. ಟಿಪ್ಪು ಕರ್ನಾಟಕ್ಕೆ ಮಾತ್ರ ಸೀಮಿತವಾದ ವ್ಯಕ್ತಿಯಲ್ಲ,ಇಡಿ ದೇಶದಲ್ಲಿ ಪ್ರಖ್ಯಾತನಾಗಿದ್ದು ಟಿಪ್ಪುವಿನ ಹೆಸರು ವಿಶ್ವವಿದ್ಯಾನಿಲಯಕ್ಕೆ ನಾಮಕರಣ ಮಾಡುವುದಕ್ಕೆ ಕೆಲ ರಾಜಕೀಯ ಪಕ್ಷದವರು ತಡೆಯೊಡ್ಡುತ್ತಿರುವುದು ಅಲ್ಪಸಂಖ್ಯಾತರ ಮೇಲೆ ಅವರ ನಿಲುವನ್ನು ಎತ್ತಿ ತೋರಿಸುತ್ತದೆ ಎಂದರು.ಜಾತಿ ರಾಜಕೀಯ ಗೊತ್ತಿಲ್ಲದ ಶಾಸಕ ಸುರೇಶ್ ಬಾಬು ಮುಸ್ಲಿಂರನ್ನು ಅಣ್ಣ ತಮ್ಮಂದಿರಂತೆ ಗೌರವಯುತವಾಗಿ ಕಾಣುತ್ತಿದ್ದು,ಅವರಿಗೆ ತಮ್ಮ ಮತ ಹಾಕಿ ಈ ಬಾರಿ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲಿಸಿದರೆ ತಾವೆಲ್ಲ ನನನ್ನು ಗೆಲ್ಲಿಸಿದಂತೆ ಎಂದರು.
ಹುಳಿಯಾರಿಗೆ ಆಗಮಿಸಿದ ಮಾಜಿ ಸಚಿವ ಜಮೀರ್ ಅಹಮದ್ ಹಾಗೂ ಶಾಸಕ ಸಿ.ಬಿ.ಸುರೇಶ್ ಬಾಬು ಅವರನ್ನು ಜೆಡಿಎಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.                                                        
         ಶಾಸಕ ಸುರೇಶ್ ಬಾಬು ಮಾತನಾಡಿ ಚುನಾವಣೆಯ ಸಂಧರ್ಭದಲ್ಲಿನ ಚುನಾವಣಾ ಗಿಮಿಕ್ ಗಳಿಗೆ ಮತದಾರರು ಕಿವಿಗೊಡದೆ,ಯಾರಿಂದ ತಮ್ಮ ಪ್ರದೇಶಗಳ ಅಭಿವೃದ್ದಿ ಕಾರ್ಯಗಳಾಗಿವೆ ಎಂಬುದನ್ನು ತಿಳಿದು ಮತ ಚಲಾಯಿಸಿ ಎಂದರಲ್ಲದೆ ತಾವು ಕ್ಷೇತ್ರಕ್ಕಾಗಿ ಸಾಕಷ್ಟು ಶ್ರಮಿಸಿದ್ದು,ಮುಂದೆಯೂ ಸಹ ಇದೇ ರೀತಿ ನಡೆದುಕೊಳ್ಳುವ ಭರವಸೆ ನೀಡಿದರು.ಯಾರೋಬ್ಬರೂ ಸಹ ನೆಪ ಮಾತ್ರಕ್ಕೆ ಮತ ಹಾಕದೇ ಒಂದೊಂದು ಓಟಿನ ಮಹತ್ವ ಅರಿತು ಮತ ಚಲಾಯಿಸಿ ತಮ್ಮನ್ನು ಜಯಶಾಲಿಯನ್ನಾಗಿ ಮಾಡುವಂತೆ ಕೋರಿದರು. ದೇವೇಗೌಡ ಅವರು ಪ್ರಧಾನಿಯಾದ ಸಂದರ್ಭದಲ್ಲಿ ಮುಸ್ಲಿಂ ರ ಅನೇಕ ಸಮಸ್ಯೆಗಳನ್ನು ಬಗೆಹರಿಸಿರುವುದು ಎಲ್ಲರಿಗೂ ತಿಳಿದಿದ್ದು,ಎಲ್ಲರೂ ಸಂಘಟಿತರಾಗಿ ಜೆಡಿಎಸ್ ಗೆ ತಮ್ಮ ಮತ ನೀಡುವಂತೆ ನಿವೇದಿಸಿದರು.
           ಈ ಸಂದರ್ಭದಲ್ಲಿ ಮುತುವಲ್ಲಿ ಬಬೀವುಲ್ಲಾ,ಜೆಡಿಎಸ್ ರಾಜ್ಯ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಶಕೀಲ್ ನವಾಬ್ ಸಾಬ್,ಜಲಾಲ್ ಸಾಬ್,ಹಂನಕೆರೆ ರಘುನಾಥ್,ಜಿ.ಪಂ.ಸದಸ್ಯೆ ಮಂಜುಳಾ, ತಾ.ಪಂ.ಮಾಜಿ ಉಪಾಧ್ಯಕ್ಷೆ ಬೀಬಿ ಫಾತೀಮಾ,ಗ್ರಾ.ಪಂ.ಮಾಜಿ ಅಧ್ಯಕ್ಷ ಅನ್ಸರ್ ಅಲಿ,ಚಿ.ನಾ.ಹಳ್ಳಿ ಪುರಸಭೆಯ ರಂಗಸ್ವಾಮಿ,ಕೌನ್ಸಿಲರ್ ಖಲಂದರ್ ಸಾಬ್,ಯುವ ಮುಖಂಡ ಇಮ್ರಾಜ್ ಸೇರಿದಂತೆ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...