ವಿಷಯಕ್ಕೆ ಹೋಗಿ

ಜಾತಿ,ಅಧಿಕಾರ,ಹಣ ಮುಂದಿಟ್ಟು ಮತ ಕೇಳುತ್ತಿಲ್ಲ : ಕೆ.ಎಸ್.ಕೆ


            ಚುನಾವಣೆಯಲ್ಲಿ ಮತದಾರರ ಮನವೊಲಿಸಲು ಕ್ಷೇತ್ರದ ಕೆಲ ಅಭ್ಯರ್ಥಿಗಳು ತಮ್ಮ ಜಾತಿಯವರೆಲ್ಲಾ ಒಂದಾಗ ಬೇಕೆಂದು,ತಾವು ಅಧಿಕಾರಕ್ಕೆ ಬಂದರೆ ನಿಮ್ಮ ಎಲ್ಲಾ ಕೆಲಸಗಳನ್ನು ಮಾಡಿ ಕೊಡಿಸುತ್ತೇವೆಂದು, ತಮ್ಮಲ್ಲಿ ಹಣವಿದೆ ಹಣ ಕೊಟ್ಟುರೆ ಓಟು ಹಾಕುತ್ತಾರೆಂದು ಹೇಳುತ್ತಾ ಸಾಗುತ್ತಿದ್ದಾರೆ.ಆದರೆ ತಾವು ಇಂತಹ ಯಾವುದೇ ಅಮಿಷಗಳನ್ನು ಜನರ ಮುಂದಿಡುತ್ತಿಲ್ಲ ಬದಲಿಗೆ ನಾನು ಶಾಸಕನಲ್ಲದಿದ್ದ ಸಮಯದಲ್ಲೂ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ಮತದಾರರು ಗಮನಿಸಿ ನನ್ನನ್ನು ಚುನಾಯಿಸಬೇಕೆಂದು ಚಿ.ನಾ.ಹಳ್ಳಿ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಕೋರಿದರು.

ಹುಳಿಯಾರು ಸಮೀಪದ ಹಂದನಕೆರೆ ಹೋಬಳಿ ಚೌಳಕಟ್ಟೆಯಲ್ಲಿ ನಡೆದ ಬಿಜೆಪಿ ಸೇರ್ಪಡೆ ಹಾಗೂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಚಿ.ನಾ.ಹಳ್ಳಿ ಕ್ಷೇತ್ರದ ಹಾಲಿ ಶಾಸಕರು ಬೆಂಗಳೂರಲ್ಲೇ ಕುಳಿತು ಚಿ.ನಾ.ಹಳ್ಳಿ ಕ್ಷೇತ್ರದ ಅಧಿಕಾರ ನಡೆಸುತ್ತಾ, ಮೂರ್ನಾಲ್ಕು ತಿಂಗಳು ಕಳೆದರೂ ಕ್ಷೇತ್ರದ ಕಡೆ ಬಾರದಿರುವುದು ಸಾರ್ವಜನಿಕರಿಗೆ ತಿಳಿದಿರುವ ವಿಷಯವಾಗಿದೆ.ಅಂದೊಮ್ಮೆ,ಇಂದೊಮ್ಮೆ ತಾಲ್ಲೂಕಿಗೆ ಬಂದು ಯಾವುದೋ ಐಬಿಯಲ್ಲಿ ಕುಳಿತು ಸಭೆ ಸೇರಿ ಅಲ್ಲಿಗೆ ಬಂದ ಸಾರ್ವಜನಿಕರನ್ನು ಅಣ್ಣ,ಅಕ್ಕ ಎಂದು ಕರೆಯುತ್ತಾ,ಊಟ ಹಾಕಿಸುವುದು,ಮದುವೆ,ಮುಂಜಿ,ಜಾತ್ರೆಗಳಿಗೆ ಹಣ ಕೊಡುವುದನ್ನು ಬಿಟ್ಟರೆ, ಜನರು ಹೊತ್ತು ತಂದಿರುವ ಸಮಸ್ಯೆಗಳನ್ನು ಕೇಳುವುದಕ್ಕೂ ಅವರಿಗೆ ಸಮಯವಿಲ್ಲ.ಕ್ಷೇತ್ರದ ಸಮಸ್ಯೆಗಳನ್ನು ಆಲಿಸಲು ಸಮಯವಿಲ್ಲದ ಶಾಸಕರು ಮತ್ತೊಮ್ಮೆ ಅಧಿಕಾರ ವಹಿಸಿ ಕೊಂಡರೆ,ಈಗ ಬೆಂಗಳೂರಲ್ಲಿದ್ದು ನಡೆಸುತ್ತಿರುವ ಅಧಿಕಾರವನ್ನು ದೂರದ ವಿದೇಶಗಳಲ್ಲಿ ಕೂತು ಅಧಿಕಾರ ನಡೆಸುವ ಕಾಲ ಬರುತ್ತದೆ. ಈ ಬಗ್ಗೆ ಮತದಾರರು ಎಚ್ಚರವಹಿಸ ಬೇಕಿದೆ ಎಂದರು.

ಸದನ ಶೂರರೆಂದು ಕರೆಸಿ ಕೊಳ್ಳುವ ಮತ್ತೋರ್ವ ಮಾಜಿ ಶಾಸಕರು ಸದನದಲ್ಲಿ ರಾಜ್ಯದ ಬಗ್ಗೆ ಧ್ವನಿಯೆತ್ತಿರುವರೆ ಹೊರತು ಒಮ್ಮೆಯಾದರೂ ಚಿ.ನಾ.ಹಳ್ಳಿ ಕ್ಷೇತ್ರದ ಬಗ್ಗೆ ಮಾತನಾಡಿರುವ ನಿದರ್ಶನನಗಳಿಲ್ಲ, ನೈಸ್ ರಸ್ತೆ,ಇಸ್ಕಾನ್ ಟೆಂಪಲ್,ಕ್ಯಾಪಿಟಲ್ ಹೋಟೆಲ್ ನ ಬಗ್ಗೆ ಮಾತನಾಡುವ ಅವರು ಚಿ.ನಾ.ಹಳ್ಳಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯ ಬಗ್ಗೆ ಏಕೆ ಮಾತಾಡಲಿಲ್ಲ, ತಾಲ್ಲೂಕಿಗೆ ಸಂಬಂಧವಿಲ್ಲದವುಗಳ ಬಗ್ಗೆ ಚರ್ಚಿಸುತ್ತಾ ಕ್ಷೇತ್ರದ ಸಮಸ್ಯೆಗಳನ್ನು ಮರೆತು ತಮಗೆ ಯಾವುದರಿಂದ ಆದಾಯ ಬರುತ್ತದೆ ಎಂಬುದನ್ನು ಎದುರು ನೋಡುವ ಜನಪ್ರತಿನಿಧಿಗಳು ಬೇಕೆ,ಬೇಡವೆ ಎಂದು ಮತದಾರರೇ ಯೋಚಿಸಿ ಚುನಾವಣೆಯಲ್ಲಿ ಬುದ್ದಿವಂತಿಕೆಯಿಂದ ಮತ ಚಲಾಯಿಸಬೇಕಿದೆ ಎಂದರು.

ಕಳೆದ ಚುನಾವಣೆಯಲ್ಲಿ ಕ್ಷೇತ್ರಕ್ಕೆ ತಾವು ಹೊಸಬರಾಗಿದ್ದೆವು. ಆದರೆ ಈಗ ಕ್ಷೇತ್ರದೆಲ್ಲೆಡೆ ಪ್ರವಾಸ ಮಾಡಿ ಕ್ಷೇತ್ರದ ಜ್ವಲಂತ ಸಮಸ್ಯೆಗಳನ್ನು ತಿಳಿದಿದ್ದೇನೆ. ತಾಲ್ಲೂಕಿಗೆ ಹೇಮಾವತಿ ನದಿ ನೀರನ್ನು ಹರಿಸಲು ಸಾಧ್ಯವಿಲ್ಲ, ಚೆಂಬಲ್ಲೇನಾದರೂ ತರಬೇಕಷ್ಟೆ ಎಂದು ಹೇಳಿದವರ ಬಾಯಿ ಮುಚ್ಚಿಸಲು,ಅಂದೆ ನಿರ್ಧರಿಸಿ ತನಗೆ ಅಧಿಕಾರವಿಲ್ಲದಿದ್ದರೂ ಚಿ.ನಾ.ಹಳ್ಳಿ ತಾಲ್ಲೂಕಿಗೆ ಹೇಮಾವತಿ ನೀರು ಹರಿಸುವ ಕಾರ್ಯಕ್ಕೆ 102 ಕೋಟಿ ರೂ ಹಣ ಬಿಡುಗಡೆ ಮಾಡಿಸಿದ್ದೂ ಅಲ್ಲದೆ ಶಂಕುಸ್ಥಾಪನೆಯನ್ನು ಕೂಡ ನೆರವೇರಿಸಿರುವೆ ಇದರಿಂದ ತಾಲ್ಲೂಕಿನ 26ಕೆರೆಗಳಿಗೆ ನೀರು ಹರಿಯುವುದಾಗಿ ತಿಳಿಸಿದರು.ಅಲ್ಲದೆ ಮುಂದೆ ಹಂದನಕೆರೆ ಭಾಗಕ್ಕೂ ನೀರು ಹರಿಸುವ ಯೋಜನೆಯನ್ನು ಕೈಗೊಂಡಿದ್ದು ಅದನ್ನು ನೆರವೇರಿಸುವುದಾಗಿ ತಿಳಿಸಿದರು.

ಕಿರಣ್ ಕುಮಾರ್ ಐದು ಕೋಟಿಗೆ ಡೀಲ್ ಆಗಿ ಗುಬ್ಬಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆಂದು ಅಪಪ್ರಚಾರ ಮಾಡುತ್ತಿರುವವ ಬಾಯಿಗೆ ಬೀಗ ಹಾಕಲು ತಾವು ನಾಮಪತ್ರ ಸಲ್ಲಿಕೆ ಯ ಮೊದಲ ದಿನವಾದ ಬುಧವಾರವೇ ನಾಮಪತ್ರ ಸಲ್ಲಿಸಲಿದ್ದು, ಚಿ.ನಾ.ಹಳ್ಳಿಯಲ್ಲಿಯೇ ತನ್ನ ಸ್ಪರ್ಧೆ,ಬಿಜೆಪಿಗೆ ಜಯ ಎಂದು ದೃಢಕಾಯದಿಂದ ನುಡಿದರು.

ಸಭೆಯಲ್ಲಿ ತಾ.ಪಂ.ಅಧ್ಯಕ್ಷ ಜಗದೀಶ್,ಜಿ.ಪಂ.ಸದಸ್ಯ ಶೆಟ್ಟಿಕೆರೆ ಪಂಚಾಕ್ಷರಿ,ತಾಲ್ಲೂಕು ಬಿಜೆಪಿ ಅಧ್ಯಕ್ಷ ಮಿಲ್ಟ್ರಿಶಿವಣ್ಣ, ಜನಜಾಗೃತಿ ವೇದಿಕೆಯ ಅಧ್ಯಕ್ಷೆ ಕವಿತಾಕಿರಣ್ , ಮುಖಂಡರಾದ ರಾಮಣ್ಣ,ಬಸವರಾಜು,ಜಯಣ್ಣ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...