ವಿಷಯಕ್ಕೆ ಹೋಗಿ

ಜಾತಿ,ಅಧಿಕಾರ,ಹಣ ಮುಂದಿಟ್ಟು ಮತ ಕೇಳುತ್ತಿಲ್ಲ : ಕೆ.ಎಸ್.ಕೆ


            ಚುನಾವಣೆಯಲ್ಲಿ ಮತದಾರರ ಮನವೊಲಿಸಲು ಕ್ಷೇತ್ರದ ಕೆಲ ಅಭ್ಯರ್ಥಿಗಳು ತಮ್ಮ ಜಾತಿಯವರೆಲ್ಲಾ ಒಂದಾಗ ಬೇಕೆಂದು,ತಾವು ಅಧಿಕಾರಕ್ಕೆ ಬಂದರೆ ನಿಮ್ಮ ಎಲ್ಲಾ ಕೆಲಸಗಳನ್ನು ಮಾಡಿ ಕೊಡಿಸುತ್ತೇವೆಂದು, ತಮ್ಮಲ್ಲಿ ಹಣವಿದೆ ಹಣ ಕೊಟ್ಟುರೆ ಓಟು ಹಾಕುತ್ತಾರೆಂದು ಹೇಳುತ್ತಾ ಸಾಗುತ್ತಿದ್ದಾರೆ.ಆದರೆ ತಾವು ಇಂತಹ ಯಾವುದೇ ಅಮಿಷಗಳನ್ನು ಜನರ ಮುಂದಿಡುತ್ತಿಲ್ಲ ಬದಲಿಗೆ ನಾನು ಶಾಸಕನಲ್ಲದಿದ್ದ ಸಮಯದಲ್ಲೂ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ಮತದಾರರು ಗಮನಿಸಿ ನನ್ನನ್ನು ಚುನಾಯಿಸಬೇಕೆಂದು ಚಿ.ನಾ.ಹಳ್ಳಿ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಕೋರಿದರು.

ಹುಳಿಯಾರು ಸಮೀಪದ ಹಂದನಕೆರೆ ಹೋಬಳಿ ಚೌಳಕಟ್ಟೆಯಲ್ಲಿ ನಡೆದ ಬಿಜೆಪಿ ಸೇರ್ಪಡೆ ಹಾಗೂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಚಿ.ನಾ.ಹಳ್ಳಿ ಕ್ಷೇತ್ರದ ಹಾಲಿ ಶಾಸಕರು ಬೆಂಗಳೂರಲ್ಲೇ ಕುಳಿತು ಚಿ.ನಾ.ಹಳ್ಳಿ ಕ್ಷೇತ್ರದ ಅಧಿಕಾರ ನಡೆಸುತ್ತಾ, ಮೂರ್ನಾಲ್ಕು ತಿಂಗಳು ಕಳೆದರೂ ಕ್ಷೇತ್ರದ ಕಡೆ ಬಾರದಿರುವುದು ಸಾರ್ವಜನಿಕರಿಗೆ ತಿಳಿದಿರುವ ವಿಷಯವಾಗಿದೆ.ಅಂದೊಮ್ಮೆ,ಇಂದೊಮ್ಮೆ ತಾಲ್ಲೂಕಿಗೆ ಬಂದು ಯಾವುದೋ ಐಬಿಯಲ್ಲಿ ಕುಳಿತು ಸಭೆ ಸೇರಿ ಅಲ್ಲಿಗೆ ಬಂದ ಸಾರ್ವಜನಿಕರನ್ನು ಅಣ್ಣ,ಅಕ್ಕ ಎಂದು ಕರೆಯುತ್ತಾ,ಊಟ ಹಾಕಿಸುವುದು,ಮದುವೆ,ಮುಂಜಿ,ಜಾತ್ರೆಗಳಿಗೆ ಹಣ ಕೊಡುವುದನ್ನು ಬಿಟ್ಟರೆ, ಜನರು ಹೊತ್ತು ತಂದಿರುವ ಸಮಸ್ಯೆಗಳನ್ನು ಕೇಳುವುದಕ್ಕೂ ಅವರಿಗೆ ಸಮಯವಿಲ್ಲ.ಕ್ಷೇತ್ರದ ಸಮಸ್ಯೆಗಳನ್ನು ಆಲಿಸಲು ಸಮಯವಿಲ್ಲದ ಶಾಸಕರು ಮತ್ತೊಮ್ಮೆ ಅಧಿಕಾರ ವಹಿಸಿ ಕೊಂಡರೆ,ಈಗ ಬೆಂಗಳೂರಲ್ಲಿದ್ದು ನಡೆಸುತ್ತಿರುವ ಅಧಿಕಾರವನ್ನು ದೂರದ ವಿದೇಶಗಳಲ್ಲಿ ಕೂತು ಅಧಿಕಾರ ನಡೆಸುವ ಕಾಲ ಬರುತ್ತದೆ. ಈ ಬಗ್ಗೆ ಮತದಾರರು ಎಚ್ಚರವಹಿಸ ಬೇಕಿದೆ ಎಂದರು.

ಸದನ ಶೂರರೆಂದು ಕರೆಸಿ ಕೊಳ್ಳುವ ಮತ್ತೋರ್ವ ಮಾಜಿ ಶಾಸಕರು ಸದನದಲ್ಲಿ ರಾಜ್ಯದ ಬಗ್ಗೆ ಧ್ವನಿಯೆತ್ತಿರುವರೆ ಹೊರತು ಒಮ್ಮೆಯಾದರೂ ಚಿ.ನಾ.ಹಳ್ಳಿ ಕ್ಷೇತ್ರದ ಬಗ್ಗೆ ಮಾತನಾಡಿರುವ ನಿದರ್ಶನನಗಳಿಲ್ಲ, ನೈಸ್ ರಸ್ತೆ,ಇಸ್ಕಾನ್ ಟೆಂಪಲ್,ಕ್ಯಾಪಿಟಲ್ ಹೋಟೆಲ್ ನ ಬಗ್ಗೆ ಮಾತನಾಡುವ ಅವರು ಚಿ.ನಾ.ಹಳ್ಳಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯ ಬಗ್ಗೆ ಏಕೆ ಮಾತಾಡಲಿಲ್ಲ, ತಾಲ್ಲೂಕಿಗೆ ಸಂಬಂಧವಿಲ್ಲದವುಗಳ ಬಗ್ಗೆ ಚರ್ಚಿಸುತ್ತಾ ಕ್ಷೇತ್ರದ ಸಮಸ್ಯೆಗಳನ್ನು ಮರೆತು ತಮಗೆ ಯಾವುದರಿಂದ ಆದಾಯ ಬರುತ್ತದೆ ಎಂಬುದನ್ನು ಎದುರು ನೋಡುವ ಜನಪ್ರತಿನಿಧಿಗಳು ಬೇಕೆ,ಬೇಡವೆ ಎಂದು ಮತದಾರರೇ ಯೋಚಿಸಿ ಚುನಾವಣೆಯಲ್ಲಿ ಬುದ್ದಿವಂತಿಕೆಯಿಂದ ಮತ ಚಲಾಯಿಸಬೇಕಿದೆ ಎಂದರು.

ಕಳೆದ ಚುನಾವಣೆಯಲ್ಲಿ ಕ್ಷೇತ್ರಕ್ಕೆ ತಾವು ಹೊಸಬರಾಗಿದ್ದೆವು. ಆದರೆ ಈಗ ಕ್ಷೇತ್ರದೆಲ್ಲೆಡೆ ಪ್ರವಾಸ ಮಾಡಿ ಕ್ಷೇತ್ರದ ಜ್ವಲಂತ ಸಮಸ್ಯೆಗಳನ್ನು ತಿಳಿದಿದ್ದೇನೆ. ತಾಲ್ಲೂಕಿಗೆ ಹೇಮಾವತಿ ನದಿ ನೀರನ್ನು ಹರಿಸಲು ಸಾಧ್ಯವಿಲ್ಲ, ಚೆಂಬಲ್ಲೇನಾದರೂ ತರಬೇಕಷ್ಟೆ ಎಂದು ಹೇಳಿದವರ ಬಾಯಿ ಮುಚ್ಚಿಸಲು,ಅಂದೆ ನಿರ್ಧರಿಸಿ ತನಗೆ ಅಧಿಕಾರವಿಲ್ಲದಿದ್ದರೂ ಚಿ.ನಾ.ಹಳ್ಳಿ ತಾಲ್ಲೂಕಿಗೆ ಹೇಮಾವತಿ ನೀರು ಹರಿಸುವ ಕಾರ್ಯಕ್ಕೆ 102 ಕೋಟಿ ರೂ ಹಣ ಬಿಡುಗಡೆ ಮಾಡಿಸಿದ್ದೂ ಅಲ್ಲದೆ ಶಂಕುಸ್ಥಾಪನೆಯನ್ನು ಕೂಡ ನೆರವೇರಿಸಿರುವೆ ಇದರಿಂದ ತಾಲ್ಲೂಕಿನ 26ಕೆರೆಗಳಿಗೆ ನೀರು ಹರಿಯುವುದಾಗಿ ತಿಳಿಸಿದರು.ಅಲ್ಲದೆ ಮುಂದೆ ಹಂದನಕೆರೆ ಭಾಗಕ್ಕೂ ನೀರು ಹರಿಸುವ ಯೋಜನೆಯನ್ನು ಕೈಗೊಂಡಿದ್ದು ಅದನ್ನು ನೆರವೇರಿಸುವುದಾಗಿ ತಿಳಿಸಿದರು.

ಕಿರಣ್ ಕುಮಾರ್ ಐದು ಕೋಟಿಗೆ ಡೀಲ್ ಆಗಿ ಗುಬ್ಬಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆಂದು ಅಪಪ್ರಚಾರ ಮಾಡುತ್ತಿರುವವ ಬಾಯಿಗೆ ಬೀಗ ಹಾಕಲು ತಾವು ನಾಮಪತ್ರ ಸಲ್ಲಿಕೆ ಯ ಮೊದಲ ದಿನವಾದ ಬುಧವಾರವೇ ನಾಮಪತ್ರ ಸಲ್ಲಿಸಲಿದ್ದು, ಚಿ.ನಾ.ಹಳ್ಳಿಯಲ್ಲಿಯೇ ತನ್ನ ಸ್ಪರ್ಧೆ,ಬಿಜೆಪಿಗೆ ಜಯ ಎಂದು ದೃಢಕಾಯದಿಂದ ನುಡಿದರು.

ಸಭೆಯಲ್ಲಿ ತಾ.ಪಂ.ಅಧ್ಯಕ್ಷ ಜಗದೀಶ್,ಜಿ.ಪಂ.ಸದಸ್ಯ ಶೆಟ್ಟಿಕೆರೆ ಪಂಚಾಕ್ಷರಿ,ತಾಲ್ಲೂಕು ಬಿಜೆಪಿ ಅಧ್ಯಕ್ಷ ಮಿಲ್ಟ್ರಿಶಿವಣ್ಣ, ಜನಜಾಗೃತಿ ವೇದಿಕೆಯ ಅಧ್ಯಕ್ಷೆ ಕವಿತಾಕಿರಣ್ , ಮುಖಂಡರಾದ ರಾಮಣ್ಣ,ಬಸವರಾಜು,ಜಯಣ್ಣ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.