ವಿಷಯಕ್ಕೆ ಹೋಗಿ

ಪೋಲೀಸ್ ಸಿಬ್ಬಂದಿಗಳಲ್ಲಿ ಕೋ-ಆರ್ಡಿನೇಷನ್ ಇರಬೇಕು : ಪಿಎಸೈ ಟಿ.ರಾಜು

                  ಯಾವುದೇ ಒಂದು ಕಾರ್ಯದಲ್ಲಿ ಸಂಪೂರ್ಣ ಯಶಸ್ಸು ಲಭಿಸಬೇಕಾದರೇ ಆ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲರೂ ಶ್ರದ್ದೆ ಹಾಗೂ ಒಂದೇ ಮನೋಭಾವದಿಂದ ದುಡಿದಾಗ ಮಾತ್ರ ಸಾಧ್ಯವಿದ್ದು, ಪೋಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳ ನಡುವೆ ಕೋ-ಆರ್ಡಿನೇಷನ್ ಇದ್ದಾಗ ಯಾರೊಬ್ಬರಲ್ಲಿಯೂ ಭಿನ್ನಾಭಿಪ್ರಾಯಗಳು ಮೂಡದೆ ತಮ್ಮ ತಮ್ಮ ಕಾರ್ಯಗಳನ್ನು ಮಾಡಬಹುದಾಗಿದೆ ಎಂದು ಪಿಎಸೈ ಟಿ.ವಿ.ರಾಜು ತಿಳಿಸಿದರು.
          ಹುಳಿಯಾರು ಪೋಲೀಸ್ ಠಾಣೆಯಲ್ಲಿ ಏಳು ತಿಂಗಳ ಕಾಲ ಕಾರ್ಯ ನಿರ್ವಹಿಸಿ ಚುನಾವಣ ಆಯೋಗದ ನಿಯಮದಂತೆ ವರ್ಗಾವಣೆಯಾದ ಅವರು ಸಿಬ್ಬಂದಿ ವರ್ಗದವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
            ಸರ್ಕಾರಿ ಕೆಲಸ ನಿಂತ ನೀರಲ್ಲ ಸದಾ ಹರಿಯುವ ಸ್ವಚ್ಚ ನೀರಿನಂತಿದ್ದು, ಸರ್ಕಾರಿ ನೌಕರರಿಗೆ ವರ್ಗಾವಣೆ ಎಂಬುದು ಕಟ್ಟಿಟ್ಟ ಬುತ್ತಿಯಾಗಿದೆ. ಅದರ ನಿಯಮದಂತೆ ವರ್ಗಾವಣೆಯಾಗಿದೆ ಇದಕ್ಕೆ ಎಲ್ಲರೂ ಬದ್ದರಾಗಿರಬೇಕು ಎಂದರು.ಪೋಲೀಸ್ ಕೆಲಸವು ನೀರಮೇಲಿನ ಗುಳ್ಳೆಯಂತಿದ್ದು,ದಿನದ ಇಪ್ಪತ್ನಾಲು ಗಂಟೆಗಳ ಕಾಲ ಎಚ್ಚೆತ್ತು ಕರ್ತವ್ಯ ನಿರ್ವಹಿಸಬೇಕಿದೆ ಎಂದ ಅವರು ತಾವು ಕಾರ್ಯ ನಿರ್ವಹಿಸಿದ ಹುಳಿಯಾರು ಹಾಗೂ ಹಂದನಕೆರೆ ಠಾಣಾ ವ್ಯಾಪ್ತಿಯಲ್ಲಿನ ಜನರು ತಮ್ಮೊಂದಿಗೆ ಉತ್ತಮ ಸಹಕಾರ ಮನೋಭಾವ ಹೊಂದಿದ್ದರು,ಅಲ್ಲದೆ ಠಾಣ ಸಿಬ್ಬಂದಿ ವರ್ಗದವರು ತಮಗೆ ವಹಿಸಿದ ಕೆಲಸವನ್ನು ಚಾಚು ತಪ್ಪದೆ ಮಾಡುತ್ತಿದ್ದರು ಎಂದು ಶ್ಲಾಘಿಸಿದರು.
                      
ಸಿಪಿಐ ಪ್ರಭಾಕರ್ ಮಾತನಾಡಿ.ಪೋಲೀಸರಿಗೆ ಸಾರ್ವಜನಿಕರೊಂದಿಗೆ ಸಹಕಾರ ಅಗತ್ಯವಿದ್ದು,ಹಾಗಿದ್ದಾಗ ಮಾತ್ರವೇ ತಾವು ನಡೆಸುವ ತನಿಖೆಗೆ ಸೂಕ್ತ ಮಾಹಿತಿಗಳು ದೊರೆಯುತ್ತವೆ ಎಂದರು. ರಾಜು ಅವರು ತಮ್ಮ ವೃತ್ತದಲ್ಲಿ ಅನುಭವಿ ಹಾಗೂ ಹಿರಿಯ ಪಿಎಸೈ ಆಗಿದ್ದು,ತಮ್ಮ ಠಾಣಾ ವ್ಯಾಪ್ತಿಯಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಸುಲಲಿತವಾಗಿ ಬಗೆ ಹರಿಸುವ ಚಾಣಾಕ್ಷತೆಯನ್ನು ಹೊಂದಿದ್ದ ಇವರು ಹುಳಿಯಾರು ಠಾಣೆಗೆ ಬಂದಾಗಿನಿಂದ ಸಾಕಸ್ಟು ಕ್ರೈಂಗಳು ಕಡಿಮೆಯಾಗಿತ್ತು ಎಂದರು.

                             ಬೀಳ್ಕೊಡಿಗೆ ಸಮಾರಂಭದಲ್ಲಿ ಚಿ.ನಾ.ಹಳ್ಳಿ ಪಿಎಸೈ ಗೋವಿಂದಯ್ಯ,ಹಂದನಕೆರೆ ಪಿಎಸೈ ಮಂಜು,ಎಎಸೈ ಗಂಗಾಧರ್,ಕೃಷ್ಣಮೂರ್ತಾಚಾರ್, ಹಿರಿಯ ಪೇದೆಗಳಾದ ಬಸವರಾಜು, ಸಿದ್ದರಾಮಣ್ಣ, ಸಿಬ್ಬಂದಿ ವರ್ಗದ ಕುಮಾರ್, ನಾಗಭೂಷಣ್, ಮಹೇಶ್, ರಂಗಸ್ವಾಮಿ, ಕಾಂತರಾಜು, ಮಹಿಳಾ ಪೇದೆ ಕುಮುದಾ,ಸ್ಥಳೀಯರಾದ ನಾಗರಾಜು,ಮಹೇವಪ್ಪ,ಕೆಂಕೆರೆ ಸತೀಶ್, ಮಲ್ಲಿಕಣ್ಣ,ನಂದಿಹಳ್ಳಿ ಶಿವಣ್ಣ,ಏಜೆಂಟ್ ಕುಮಾರ್,ಬೀರಪ್ಪ ಹಾಗೂ ಇತರರು.
ಪಿಎಸೈ ಟಿ.ವಿ.ರಾಜು ಅವರನ್ನು ತಾಲ್ಲೂಕು ಒಕ್ಕಲಿಗ ನೌಕರ ವೇದಿಕೆವತಿಯಿಂದ ಸನ್ಮಾನಿಸಿ ಬಿಳ್ಕೊಟ್ಟರು. ಅಧ್ಯಕ್ಷ ಹೆಚ್.ಎಸ್.ಪ್ರಕಾಶ್,ಗೌರವಾಧ್ಯಕ್ಷ ಗಂಗಾಧರಪ್ಪ,ಜಿ.ಸಿ.ಲೋಕೇಶ್,ವೆಂಕಟೇಶ್,ವಕೀಲ ಸದಾಶಿವಯ್ಯ,ಮೋಹನ್ ಹಾಗೂ ಇತರರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.