ವಿಷಯಕ್ಕೆ ಹೋಗಿ

ಪೋಲೀಸ್ ಸಿಬ್ಬಂದಿಗಳಲ್ಲಿ ಕೋ-ಆರ್ಡಿನೇಷನ್ ಇರಬೇಕು : ಪಿಎಸೈ ಟಿ.ರಾಜು

                  ಯಾವುದೇ ಒಂದು ಕಾರ್ಯದಲ್ಲಿ ಸಂಪೂರ್ಣ ಯಶಸ್ಸು ಲಭಿಸಬೇಕಾದರೇ ಆ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲರೂ ಶ್ರದ್ದೆ ಹಾಗೂ ಒಂದೇ ಮನೋಭಾವದಿಂದ ದುಡಿದಾಗ ಮಾತ್ರ ಸಾಧ್ಯವಿದ್ದು, ಪೋಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳ ನಡುವೆ ಕೋ-ಆರ್ಡಿನೇಷನ್ ಇದ್ದಾಗ ಯಾರೊಬ್ಬರಲ್ಲಿಯೂ ಭಿನ್ನಾಭಿಪ್ರಾಯಗಳು ಮೂಡದೆ ತಮ್ಮ ತಮ್ಮ ಕಾರ್ಯಗಳನ್ನು ಮಾಡಬಹುದಾಗಿದೆ ಎಂದು ಪಿಎಸೈ ಟಿ.ವಿ.ರಾಜು ತಿಳಿಸಿದರು.
          ಹುಳಿಯಾರು ಪೋಲೀಸ್ ಠಾಣೆಯಲ್ಲಿ ಏಳು ತಿಂಗಳ ಕಾಲ ಕಾರ್ಯ ನಿರ್ವಹಿಸಿ ಚುನಾವಣ ಆಯೋಗದ ನಿಯಮದಂತೆ ವರ್ಗಾವಣೆಯಾದ ಅವರು ಸಿಬ್ಬಂದಿ ವರ್ಗದವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
            ಸರ್ಕಾರಿ ಕೆಲಸ ನಿಂತ ನೀರಲ್ಲ ಸದಾ ಹರಿಯುವ ಸ್ವಚ್ಚ ನೀರಿನಂತಿದ್ದು, ಸರ್ಕಾರಿ ನೌಕರರಿಗೆ ವರ್ಗಾವಣೆ ಎಂಬುದು ಕಟ್ಟಿಟ್ಟ ಬುತ್ತಿಯಾಗಿದೆ. ಅದರ ನಿಯಮದಂತೆ ವರ್ಗಾವಣೆಯಾಗಿದೆ ಇದಕ್ಕೆ ಎಲ್ಲರೂ ಬದ್ದರಾಗಿರಬೇಕು ಎಂದರು.ಪೋಲೀಸ್ ಕೆಲಸವು ನೀರಮೇಲಿನ ಗುಳ್ಳೆಯಂತಿದ್ದು,ದಿನದ ಇಪ್ಪತ್ನಾಲು ಗಂಟೆಗಳ ಕಾಲ ಎಚ್ಚೆತ್ತು ಕರ್ತವ್ಯ ನಿರ್ವಹಿಸಬೇಕಿದೆ ಎಂದ ಅವರು ತಾವು ಕಾರ್ಯ ನಿರ್ವಹಿಸಿದ ಹುಳಿಯಾರು ಹಾಗೂ ಹಂದನಕೆರೆ ಠಾಣಾ ವ್ಯಾಪ್ತಿಯಲ್ಲಿನ ಜನರು ತಮ್ಮೊಂದಿಗೆ ಉತ್ತಮ ಸಹಕಾರ ಮನೋಭಾವ ಹೊಂದಿದ್ದರು,ಅಲ್ಲದೆ ಠಾಣ ಸಿಬ್ಬಂದಿ ವರ್ಗದವರು ತಮಗೆ ವಹಿಸಿದ ಕೆಲಸವನ್ನು ಚಾಚು ತಪ್ಪದೆ ಮಾಡುತ್ತಿದ್ದರು ಎಂದು ಶ್ಲಾಘಿಸಿದರು.
                      
ಸಿಪಿಐ ಪ್ರಭಾಕರ್ ಮಾತನಾಡಿ.ಪೋಲೀಸರಿಗೆ ಸಾರ್ವಜನಿಕರೊಂದಿಗೆ ಸಹಕಾರ ಅಗತ್ಯವಿದ್ದು,ಹಾಗಿದ್ದಾಗ ಮಾತ್ರವೇ ತಾವು ನಡೆಸುವ ತನಿಖೆಗೆ ಸೂಕ್ತ ಮಾಹಿತಿಗಳು ದೊರೆಯುತ್ತವೆ ಎಂದರು. ರಾಜು ಅವರು ತಮ್ಮ ವೃತ್ತದಲ್ಲಿ ಅನುಭವಿ ಹಾಗೂ ಹಿರಿಯ ಪಿಎಸೈ ಆಗಿದ್ದು,ತಮ್ಮ ಠಾಣಾ ವ್ಯಾಪ್ತಿಯಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಸುಲಲಿತವಾಗಿ ಬಗೆ ಹರಿಸುವ ಚಾಣಾಕ್ಷತೆಯನ್ನು ಹೊಂದಿದ್ದ ಇವರು ಹುಳಿಯಾರು ಠಾಣೆಗೆ ಬಂದಾಗಿನಿಂದ ಸಾಕಸ್ಟು ಕ್ರೈಂಗಳು ಕಡಿಮೆಯಾಗಿತ್ತು ಎಂದರು.

                             ಬೀಳ್ಕೊಡಿಗೆ ಸಮಾರಂಭದಲ್ಲಿ ಚಿ.ನಾ.ಹಳ್ಳಿ ಪಿಎಸೈ ಗೋವಿಂದಯ್ಯ,ಹಂದನಕೆರೆ ಪಿಎಸೈ ಮಂಜು,ಎಎಸೈ ಗಂಗಾಧರ್,ಕೃಷ್ಣಮೂರ್ತಾಚಾರ್, ಹಿರಿಯ ಪೇದೆಗಳಾದ ಬಸವರಾಜು, ಸಿದ್ದರಾಮಣ್ಣ, ಸಿಬ್ಬಂದಿ ವರ್ಗದ ಕುಮಾರ್, ನಾಗಭೂಷಣ್, ಮಹೇಶ್, ರಂಗಸ್ವಾಮಿ, ಕಾಂತರಾಜು, ಮಹಿಳಾ ಪೇದೆ ಕುಮುದಾ,ಸ್ಥಳೀಯರಾದ ನಾಗರಾಜು,ಮಹೇವಪ್ಪ,ಕೆಂಕೆರೆ ಸತೀಶ್, ಮಲ್ಲಿಕಣ್ಣ,ನಂದಿಹಳ್ಳಿ ಶಿವಣ್ಣ,ಏಜೆಂಟ್ ಕುಮಾರ್,ಬೀರಪ್ಪ ಹಾಗೂ ಇತರರು.
ಪಿಎಸೈ ಟಿ.ವಿ.ರಾಜು ಅವರನ್ನು ತಾಲ್ಲೂಕು ಒಕ್ಕಲಿಗ ನೌಕರ ವೇದಿಕೆವತಿಯಿಂದ ಸನ್ಮಾನಿಸಿ ಬಿಳ್ಕೊಟ್ಟರು. ಅಧ್ಯಕ್ಷ ಹೆಚ್.ಎಸ್.ಪ್ರಕಾಶ್,ಗೌರವಾಧ್ಯಕ್ಷ ಗಂಗಾಧರಪ್ಪ,ಜಿ.ಸಿ.ಲೋಕೇಶ್,ವೆಂಕಟೇಶ್,ವಕೀಲ ಸದಾಶಿವಯ್ಯ,ಮೋಹನ್ ಹಾಗೂ ಇತರರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...