ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಸಂಭ್ರಮದ ಯುಗಾದಿ ಆಚರಣೆ

ಹೊಸವರ್ಷಕ್ಕೆ ಮುನ್ನುಡಿಯಾಗಿರುವ ಹಿಂದೂ ಸಂಪ್ರದಾಯದ ಪ್ರಮುಖ ಹಾಗೂ 'ವಿಜಯ' ನಾಮ ಸಂವತ್ಸರದ ಮೊದಲ ದಿನವಾದ ಯುಗಾದಿ ಹಬ್ಬವನ್ನು ಗುರುವಾರದಂದು ಹುಳಿಯಾರಿನಲ್ಲಿ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸಂಪ್ರದಾಯದಂತೆ ಮನೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ಮನೆಮಂದಿಯೆಲ್ಲ ಅಭ್ಯಂಜಯ ಸ್ನಾನ ಮಾಡಿ ಹೊಸ ಬಟ್ಟೆ ತೊಟ್ಟು ಪೂಜೆ ಸಲ್ಲಿಸಿ ಸಂಭ್ರಮಿಸಿದರು. ಜೀವನದಲ್ಲಿ ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕಸಬೇಕೆಂಬ ಸಂಕೇತ ಸಾರುವ ಬೇವು-ಬೆಲ್ಲ ಸೇವಿಸಿದರು.ಸಂಜೆ ಕುಟುಂಬದೊಡನೆ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.ಯುಗಾದಿಹಬ್ಬದಲ್ಲಿ ಬೇವು ಬೆಲ್ಲದ ಜತೆ ಪಂಚಾಂಗ ಪೂಜೆ ಕೂಡ ಬಹುಮುಖ್ಯ ಆಚರಣೆಯಾಗಿದ್ದು ಅಂದು ಹೊಸ ಪಂಚಾಂಗವನ್ನು ತಂದು ಪೂಜಿಸಿ ಪಂಚಾಂಗ ಶ್ರವಣ ಮಾಡಿ ಆ ವರ್ಷದ ಆಯವ್ಯಯ,ಆರೋಗ್ಯ ಮುಂತಾದವುಗಳನ್ನು ಅವರವರ ರಾಶೀಫಲದ ಮೇಲೆ ತಿಳಿದುಕೊಳ್ಳಲಾಗುವುದು. 
ಗುರುಗಳೆ, ಈ ಉಗಾದಿಯಲ್ಲಿ ನಮ್ಮ ರಾಶಿಫಲ ಚೆನ್ನಾಗಿದೆ ತಾನೆ?...
 ಹಬ್ಬದ ಪ್ರಯುಕ್ತ ಇಲ್ಲಿನ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ವಾಸವಿ ಹಾಗೂ ಬನಶಂಕರಿ ದೇವಾಲಯಗಳಲ್ಲಿ ಸಾಮೂಹಿಕ ಪಂಚಾಂಗ ಶ್ರವಣ ನಡೆಯಿತು. 'ವಿಜಯ' ನಾಮ ಸಂವತ್ಸರದಲ್ಲಿ ಭದ್ರತೆ, ಅಸ್ಥಿರತೆ, ಸಾಮಾಜಿಕ ಏರಿಳಿತ, ನೈಸರ್ಗಿಕ ವಿಕೋಪಗಳನ್ನು ಪಂಚಾಂಗ ಶ್ರವಣದ ಮೂಲಕ ವಿವರಿಸಿದರು.ನೂರಾರು ಮಂದಿ ಈ ವರ್ಷದ ಭವಿಷ್ಯಮ ಮಳೆ-ಬೆಳೆ, ಗ್ರಹ-ನಕ್ಷತ್ರಗಳ ಬಲಾಬಲ, ಮನೆಯ ಮಂದಿಯ ಭವಿಷ್ಯ ಕೇಳುತ್ತಿದ್ದು ವಿಶೇಷವಾಗಿತ್ತು. ಸಂಜೆ ಬಿದಿಗೆ ಚಂದ್ರನ ದರ್ಶನ ಪಡೆದರು. ಒಟ್ಟಾರೆ 2 ದಿನಗಳ ಕಾಲ ಯುಗಾದಿ ಸಂಭ್ರಮ ತುಂಬಿ ತುಳುಕುತ್ತಿತ್ತು. 
ಹಬ್ಬಕ್ಕೆ ಹಣ್ಣು ತುಸು ದುಬಾರಿಯಾದರೂ ಕೊಳ್ಳುವವರೇನೂ ಕಡಿಮೆಯಾಗಿರಲಿಲ್ಲ
 ವರ್ಷದ ತೊಡಕು : ಯುಗಾದಿ ಹಬ್ಬದ ಮಾರನೆಯ ದಿನವನ್ನು ವರ್ಷ ತೊಡಕು ಎಂದು ಆಚರಿಸಲಾಗುತ್ತದೆ. ವರ್ಷ ತೊಡಕು ಎನ್ನುವುದು ಹೊಸ ಕಾರ್ಯಗಳಿಗೆ ತೊಡಗಿಸಿಕೊಳ್ಳುವ ದಿನವಾಗಿದ್ದು, ಅಂದು ವರ್ಷಪೂರ್ತಿ ಯಾವುದೇ ತೊಡಕುಗಳು ಬಾರದಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳಲಾಗುತ್ತದೆ. ಹೀಗಾಗಿ ವರ್ಷ ತೊಡಕಿಗೂ ಯುಗಾದಿ ದಿನದಷ್ಟೇ ಪ್ರಾಮುಖ್ಯತೆ. ಯಾವುದೇ ವ್ಯಕ್ತಿ ಒಳ್ಳೆಯ ಕೆಲಸ ಮಾಡಿದರೆ ಅದನ್ನು ವರ್ಷಪೂರ್ತಿ ಮಾಡುತ್ತಾನೆ ಹಾಗೂ ಅಂದು ದೊರೆತ ಸಂಪತ್ತು ವರ್ಷ ಪೂರ್ತಿ ದೊರೆಯುತ್ತಲೇ ಇರುತ್ತದೆ ಎಂಬ ನಂಬಿಕೆ ಇದೆ. 


ಭರ್ಜರಿ ಮಾಂಸದ ವ್ಯಾಪಾರ : ಯುಗಾದಿ ಹಬ್ಬದ ಮೊದಲ ದಿನ ಎಲ್ಲರೂ ಒಬ್ಬಟ್ಟಿನ ಸಿಹಿತಿಂದು ಹಬ್ಬವನ್ನು ಆಚರಿಸಿದರೆ ಗ್ರಾಮೀಣ ಭಾಗದಲ್ಲಿ ಯುಗಾದಿ ಹಬ್ಬದ ಮಾರನೆಯ ದಿನ ಮಾಂಸಹಾರಿ ವರ್ಗದ ಜನ ಹಬ್ಬವನ್ನು ಕೇವಲ ಒಬ್ಬಟ್ಟಿನ ಊಟಕ್ಕೆ ಸೀಮಿತಗೊಳಿಸದೆ ಕುರಿ ಕೋಳಿ ಅಡಿಗೆ ಮಾಡಿ ಮಾಂಸಾಹಾರಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ವರ್ಷದ ತೊಡಕು ಆಚರಿಸುವುದು ಸಾಮಾನ್ಯ.ಮಾಂಸಾಹಾರಿ ಪ್ರೇಮಿಗಳು ಯುಗಾದಿಗಿಂತ ಈ ದಿನಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತ ಬಂದಿದ್ದು ಇಂದು ಸಂಬಂಧಿಗಳನ್ನು ಹಾಗೂ ಸ್ನೇಹಿತರನ್ನು ಊಟಕ್ಕೆ ಕರೆಯುವುದು ವಾಡಿಕೆ. ಹಬ್ಬದ ಹೊಸ ತೊಡಕು ಪ್ರಯುಕ್ತ ಮುಂಜಾನೆಯಿಂದಲೆ ಪಟ್ಟಣದ ಎಲ್ಲಾ ಕೋಳಿ ಅಂಗಡಿಗಳಲ್ಲಿ ಮಾಂಸದ ವ್ಯಾಪಾರ ಭರ್ಜರಿಯಾಗಿ ನಡೆದರೆ ತರಕಾರಿ ಅಂಗಡಿಯಲ್ಲಿ ಅದಕ್ಕೆ ಕಮ್ಮಿಯಿಲ್ಲದಂತೆ ಶುಂಠಿ,ಕೊತ್ತಂಬರಿ,ಸೌತೆಕಾಯಿ,ನಿಂಬೆಹಣ್ಣು ವ್ಯಾಪಾರ ಭರ್ಜರಿಯಾಗಿ ನಡೆಯಿತು. 
ಶುಂಟಿ,ಕೊತ್ತುಂಬರಿ,ಸೌತೆಕಾಯಿಗೆ ಬಲು ಡಿಮ್ಯಾಂಡು


ಕೋಳಿ ಖಾಲಿಯಾಗಿದೆಯೋ ಹೇಗಪ್ಪ ?
ಖಾರದ ಹಬ್ಬಕ್ಕಾಗಿ ಕೋಳಿ ಕೊಳ್ಳಲು ಅಕ್ಕ-ಪಕ್ಕದ ಹಳ್ಳಿಗಳ ಜನ ಮುಂಜಾನೆಯೆ ಪಟ್ಟಣಕ್ಕೆ ಬಂದ ಕಾರಣ ಒಂದು ರೀತಿಯ ಜಾತ್ರಾ ವಾತಾವರಣ ಉಂಟಾಗಿತ್ತು. 

ಶ್ರೀನಿವಾಸ ಚಿಕನ್ ಸೆಂಟರ್ ನಲ್ಲಿ ಭರ್ಜರಿ ವ್ಯಾಪಾರ.(ತಿರುಪತಿ ದೇವರು ಸಸ್ಯಾಹಾರಿ,ಅವನ ಹೆಸರಿನ ಮಾಂಸಾಹಾರಿ ಅಂಗಡಿಯಲ್ಲಿ ಮಾತ್ರ ಬಿಡುವಿಲ್ಲದ ವ್ಯಾಪಾರ.ಎಲ್ಲಾ ಅವನ ಕೃಪೆ.)

ಏನ್ ರೇಟಿಗೆ ತಗೊಂಡ್ರಿ......


 ಲಾರಿಗಟ್ಟಲೆ ಕೋಳಿ ಭೀಕರಿಯಾಗಿ ಉತ್ತಮ ವ್ಯಾಪಾರ ವಹಿವಾಟು ನಡೆಯಿತು. ಹಳ್ಳಿಗಳಿಂದ ಬಂದ ರೈತರು ಕೈಯಲ್ಲಿ ಮೂರ್ನಾಲ್ಕು ಕೋಳಿ ನೇತು ಹಾಕಿಕೊಂಡು ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...