ವಿಷಯಕ್ಕೆ ಹೋಗಿ

ಚುನಾವಣೆಯಲ್ಲಿ ಸೋಲಲಿ - ಗೆಲ್ಲಲಿ ನಿರಂತರ ಹೋರಾಟ ಬಿಡಲ್ಲ : ಕೆಂಕೆರೆ ಸತೀಶ್

ಸದಾಕಾಲ ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುತ್ತಾ, ಜನಪರ ಹೋರಾಟಗಳನ್ನು ಮಾಡಿಕೊಂಡು ತಾಲ್ಲೂಕಿನಾದ್ಯಂತ ಗಮನ ಸೆಳೆದಿರುವ ಕೆಂಕೆರೆ ಸತೀಶ್ ತಾವು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ರೈತಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಚುನಾವಣೆಯಲ್ಲಿ ಗೆಲ್ಲಲಿ,ಸೋಲಲ್ಲಿ ತನ್ನ ಹೋರಾಟವನ್ನು ಕೈಬಿಡದೆ ಮುಂದುವರಿಸಿಕೊಂಡು ರೈತರಿಗಾಗಿ ಅವಿರತ ದುಡಿಯುವುದಾಗಿ ತಿಳಿಸಿದ್ದಾರೆ.

                 ನಾಮಪತ್ರ ಸಲ್ಲಿಸಿದ ನಂತರ ಹುಳಿಯಾರಿನಲ್ಲಿ ಪತ್ರಿಕೆಯೊಂದಿಗೆ ತಮ್ಮ ಅನುಭವವನ್ನು ಅವರು ಹಂಚಿಕೊಂಡರು ದೇಶಾದ್ಯಂತ ರೈತ ಹಾಗೂ ಕೃಷಿ ಕ್ಷೇತ್ರಕ್ಕೆ ಆಗುತ್ತಿರುವಷ್ಟು ಅನ್ಯಾಯ,ತೊಂದರೆಗಳು ಬೇರಾವುದೇ ಕ್ಷೇತ್ರದಲ್ಲಿ ಹೆಚ್ಚಾಗಿ ಕಂಡುಬರುತ್ತಿಲ್ಲ, ಚುನಾವಣೆಯಲ್ಲಿ ಗೆಲ್ಲುವವರೆಗೆ ರೈತರ ಬಗ್ಗೆ ಮಾತಾಡುವ ರಾಜಕೀಯ ವ್ಯಕ್ತಿಗಳು ತಾವು ಗೆದ್ದ ನಂತರ ಅನೇಕ ಕಂಟುನೆಪಗಳನ್ನು ಹೇಳುತ್ತಾ ರೈತರಿಂದ ದೂರ ಉಳಿಯುವ ಮಾರ್ಗಗಳನ್ನು ಹುಡುಕುತ್ತಿರುತ್ತಾರೆ.ಅಲ್ಲದೆ ರೈತರ ಸಮಸ್ಯೆಗಳನ್ನು ಅಲಿಸದಿರುವ ವ್ಯಕ್ತಿಗಳಿಗೆ ಮತ ಹಾಕಿ ರಾಜ್ಯದ ಆಡಳಿತ ನಡೆಸಲು ಕಳುಹಿಸಬೇಕೆ ಎಂಬ ಪ್ರಶ್ನೆ ಮತದಾರರಲ್ಲಿ ಮೂಡಬೇಕಿದೆ ಎಂದರು.
ಆಡಳಿತದ ಚುಕ್ಕಾಣಿ ಹಿಡಿಯುವಾಗ ಮಾತ್ರ ರೈತರ ವೇಷ ತೊಡುವ ರಾಜಕಾರಣಿಗಳಿಗಿಂತ ಒಬ್ಬ ರೈತನಾಗಿ ರೈತರ ಸಮಸ್ಯೆಗಳನ್ನು ಹತ್ತಿರದಿಂದ ಕಂಡವನಾಗಿರುವ ನನಗೆ ರೈತರ ಕಷ್ಟದ ಅರಿವಿದ್ದು ಬಗೆಹರಿಸಲು ಶಕ್ತನಾಗಿದ್ದೇನೆ. ಸೇವಾ ಮನೋಭಾವದಿಂದ ಚನಾವಣೆಯಲ್ಲಿ ಸ್ಪರ್ಥಿಸುತ್ತಿರುವ ನನಗೆ ರೈತರು ಸೇರಿದಂತೆ ಎಲ್ಲಾ ವರ್ಗದವರ ಅತ್ಯಮೂಲ್ಯ ಮತ ಬೇಕಾಗಿದೆ ಎಂದರು.
ಪ್ರಸ್ತುತ ದಿನಗಳಲ್ಲಿ ಚುನಾವಣೆಯೆಂದರೆ ಕೋಟಿಗಟ್ಟಲೆ ಹಣದ ಹೊಳೆ ಹರಿಸ ಬೇಕು ಎಂಬುದು ಎಲ್ಲರ ಮನೋಭಾವ ಆದರೆ ತಾವು ಮೂರರಿಂದ ನಾಲ್ಕು ಲಕ್ಷ ರೂಗಳ ವೆಚ್ಚದ್ದ ಲೆಖ್ಖಹಾಕಿದ್ದು,ಆ ವೆಚ್ಚದ ಹಣವನ್ನು ರೈತರೇ ಬರಿಸಲಿದ್ದಾರೆ,ಚುನಾವಣಾ ಪ್ರಚಾರದಲ್ಲಿ ತಾವು ಯಾರನ್ನೂ ಬನ್ನಿ ಎಂದು ಕರೆಯುವುದಿಲ್ಲ ಕಾರಣ ತಮ್ಮ ಹೋರಾಟಗಳನ್ನು ಗಮನಿಸಿ ಎಲ್ಲರೂ ತಮ್ಮೊಂದಿಗೆ ಕೈಜೋಡಿಸಿ ಬರುತ್ತಾರೆಂಬ ವಿಶ್ವಾಸವಿದ್ದು,ರೈತರ ಮನೆಯಲ್ಲೇ ಊಟ,ತಿಂಡಿ ಮಾಡುತ್ತಾ ತಮ್ಮ ಪ್ರಚಾರ ಮಾಡುತ್ತಿದ್ದು,ತಮ್ಮಲ್ಲಿ ಯಾವುದೇ ಜಾತಿ,ಬಡವ,ಬಲ್ಲಿದ,ಮೇಲುಕೀಳು ಎಂಬ ಯಾವುದೇ ತಾರತಮ್ಯ ಮನೋಭಾವವಿಲ್ಲ ಎಲ್ಲರೂ ತಮ್ಮಂತೆಯೇ ಎಂದು ನಂಬಿ ನಡೆಯುತ್ತಿದ್ದೇವೆ ಎಂದರು.
ತಾಲ್ಲೂಕಿಗೆ ನೀರು ಹರಿಸುವ ನಿಟ್ಟಿನಲ್ಲಿ ನಡೆದ ಸುಮಾರು ಎರಡೂ ತಿಂಗಳುಗಳ ಕಾಲದ ನೀರಾವರಿ ಹೋರಾಟದಲ್ಲಿ ಎಲ್ಲಾ ಸಂಘ ಸಂಸ್ಥೆಗಳ ಜೊತೆ ಬೆರತು ಹೋರಾಟ ಮಾಡಿರುವುದು,ತಾಲ್ಲೂಕಿನಲ್ಲಿ ಯಾವುದೇ ರೈತರಿಗೆ ಅನ್ಯಾಯವಾಗಿದ್ದರೂ ಅವರಿಗೆ ನ್ಯಾಯ ದೊರಕಿಸಿಕೊಟ್ಟಿರುವ ಹತ್ತಾರು ನಿದರ್ಶನಗಳು ಜನರ ಕಣ್ಮುಂದಿದ್ದು ತಮಗೆ ಮತದಾರ ಗೆಲ್ಲಿಸುತ್ತಾರೆಂಬ ನಂಬಿಕೆ ಹೊಂದಿರುವುದಾಗಿ ತಿಳಿಸಿದರು.
ಚುನಾವಣೆ ಬಂತೆಂದೆ ಸಾಕು ಓಟು ಗಿಟ್ಟಿಸಿಕೊಳ್ಳಲು ಐದು ವರ್ಷಗಳಲ್ಲಿ ಆಗದಿರುವಂತಹ ಹತ್ತಾರು ಅಭಿವೃದ್ದಿ ಕಾರ್ಯಗಳನ್ನು ಮಾಡಲು ಮುಂದಾಗುವಂತರ ರಾಜಕೀಯ ವ್ಯಕ್ತಿಗಳಂತೆ ಬಣ್ಣ ಬದಲಾಯಿಸುವ ಪ್ರವೃತ್ತಿಹೊಂದಿಲ್ಲ, ಚುನಾವಣೆಯಲ್ಲಿ ಗೆಲ್ಲಲ್ಲಿ,ಸೋಲಲ್ಲಿ ರಾಜ್ಯ ಹಾಗೂ ತಮ್ಮ ಕ್ಷೇತ್ರಕ್ಕೆ ನ್ಯಾಯವಾಗಿ ದೊರೆಯಬೇಕಾದ ಸವಲತ್ತುಗಳನ್ನು ಪಡೆಯುವ ನಿಟ್ಟಿನಲ್ಲಿ ನಿರಂತರ ಹೋರಾಡುತ್ತಾ ಜನ ಸೇವೆ ಮಾಡುವುದಾಗಿ ತಿಳಿಸಿದರು.

 ಚಿಕ್ಕನಾಯಕನಹಳ್ಳಿ ಕ್ಷೇತ್ರದ ರೈತಸಂಘದ ಅಭ್ಯರ್ಥಿಯಾದ ಕೆಂಕೆರೆ ಸತೀಶ್ ಚುನಾವಣಾಧಿಕಾರಿ ಪ್ರಕಾಶ್ ಅವರಿಗೆ ನಾಮಪತ್ರ ಸಲ್ಲಿಸಿದರು.

ರೈತ ಪರ ಅಭ್ಯರ್ಥಿಯ ಸ್ವ ಮಾಹಿತಿ: ಕೆಂಕೆರೆ ಗ್ರಾಮದ ಇವರ ಹೆಸರಲ್ಲಿ ಸರ್ವೆ ನಂ.190 ಮತ್ತು 193ರಲ್ಲಿ ಒಟ್ಟು 1.31 ಗುಂಟೆ ಬಾಗಾಯ್ತು ,ಮಡದಿಯ ಹೆಸರಲ್ಲಿ 190/1ರಲ್ಲಿ 1.16ಗುಂಟೆ ಜಮೀನಿದೆ.ಇವರ ವಿದ್ಯಾಭ್ಯಾಸಕ್ಕೆ ಬಂದರೆ ಕನಕದಾಸ ಶಾಲೆಯಲ್ಲಿ 9ನೇತರಗತಿ ಮುಗಿಸಿ ನಂತರ ರೈತರ ಸಂಕಷ್ಟಗಳನ್ನು ಕಂಡು ರೈತರಿಗಾಗಿ ಹೋರಾಟಗಳಲ್ಲಿ ಮುಂದಾಗಿ ಇದುವರೆವಿಗೂ ಹತ್ತಾರು ಹೋರಾಟಗಳನ್ನು ಮಾಡುತ್ತಾ ಸಾಗುತ್ತಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...