ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಶ್ರದ್ದಾಭಕ್ತಿಯಿಂದ ರಾಮನವಮಿಯ ಆಚರಣೆ

 ರಾಮನವಮಿ ಅಂಗವಾಗಿ ಪಟ್ಟಣದ ಮನೆಮನೆಗಳಲ್ಲಿ, ದೇವಸ್ಥಾನಗಳಲ್ಲಿ ವಿಶೇಷ ಪೂಜೆ,ವಿವಿಧ ಧಾರ್ಮಿಕ  ಕೈಂಕರ್ಯಗಳೊಂದಿಗೆ ಶ್ರೀರಾಮನ ಭಜನೆ ಪಠಿಸುತ್ತಾ ಶ್ರೀರಾಮನನ್ನು ಆರಾಧಸಿ, ನಂತರ ಕೋಸಂಬರಿ, ಬೇಲವತೇ ಹಣ್ಣಿನ ಪಾನಕ,ಮಜ್ಜಿಗೆ,ಕಡಲೆಕಾಲು ಹುಸಲಿಯ ನೈವೇದ್ಯವನ್ನು ಸಂತರ್ಪಣೆ ಮಾಡಿ,ಸಾರ್ವಜನಿಕರಿಗೆ ವಿತರಿಸುವ ಮೂಲಕ ಶ್ರೀರಾಮಚಂದ್ರ ಸ್ವಾಮಿಯ ಜನ್ಮ ದಿನವಾದ ರಾಮನವಮಿಯನ್ನು ಶ್ರದ್ದಾಭಕ್ತಿಯಿಂದ ಶುಕ್ರವಾರ ಅದ್ಧೂರಿಯಾಗಿ ಆಚರಿಸಲಾಯಿತು.
ಮಾರುತಿನಗರದ ಜೈ ಮಾರುತಿ ಯುವಕ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ರಾಮನವಮಿ ಅಂಗವಾಗಿ ಶ್ರೀಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ.ಕಡಳೆಕಾಲು ಹುಸಲಿ ವಿತರಿಸಿದರು.
ಪಟ್ಟಣದ ಶ್ರೀಅಂಜನೇಯಸ್ವಾಮಿ ಸನ್ನಿಧಿ,ಶ್ರೀಅನಂತಶಯನ ರಂಗನಾಥಸ್ವಾಮಿ ಸನ್ನಿಧಿ,ಗಾಂಧಿಪೇಟೆಯ ಶನೇಶ್ವರಸ್ವಾಮಿ ದೇವಾಲಯ,ಕಾಳಿಕಾಂಭ ದೇವಾಲಯ,ಗ್ರಾಮದೇವತೆ ಹುಳಿಯಾರಮ್ಮನ ದೇವಾಲಯದಲ್ಲಿ ಶ್ರೀರಾಮಚಂದ್ರ ಹುಟ್ಟಿದ ದಿನವಾದ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯ ದಿನದ ಅಂಗವಾಗಿ ಶುಕ್ರವಾರ ಬೆಳಗಿನಿಂದಲೇ ವಿಶೇಷ ಅರ್ಚನೆ, ಪೂಜೆ ಕೈಂಕರ್ಯಗಳು ವಿಜೃಂಭಣೆಯಿಂದ ನಡೆದಿದ್ದವು.ಅಲ್ಲದೆ ಅನೇಕ ಮನೆಗಳಲ್ಲಿ ಶ್ರೀರಾಮ ಹಾಗೂ ರಾಮಭಂಟ ಆಂಜನೇಯನಿಗೆ ಪೂಜೆ ಸಲ್ಲಿಸುತ್ತಿರುವುದು ಕಂಡುಬಂದಿತ್ತು.
ಹುಳಿಯಾರಿನ ಶ್ರೀದುರ್ಗಮ್ಮ ದೇವಿ,ಹುಳಿಯಾರಮ್ಮ ಹಾಗೂ ಲಿಂಗಪ್ಪನಪಾಳ್ಯದ ಶ್ರೀರಾಮದೇವರುಗಳನ್ನು ರಾಮನವಮಿಗೆ ಅಂಗವಾಗಿ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.
ಬೇಸಿಗೆಯ ಧಗೆಯನ್ನು ಲೆಕ್ಕಿಸದ ನೂರಾರು ಭಕ್ತರು ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಿದ್ದರು, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪಾನಕ, ಕಡಲೆಕಾಳು ಕೋಸಂಬರಿ, ಮಜ್ಜಿಗೆ ಸಂತರ್ಪಣೆ ಸಾಮಾನ್ಯವಾಗಿದ್ದು, ಗ್ರಾಮದೇವತೆಗಳಾದ   ಹುಳಿಯಾರಮ್ಮ,
ದುರ್ಗಮ್ಮ ಮತ್ತು ಲಿಂಗಪ್ಪನಪಾಳ್ಯದ ಶ್ರೀರಾಮ ದೇವರುಗಳನ್ನು ಮೆರವಣಿಗೆ ಮೂಲಕ ಆಂಜನೇಯಸ್ವಾಮಿ ದೇವಾಲಯಕ್ಕೆ ಕರೆತಂದು ಪೂಜೆ ಸಲ್ಲಿಸಿ, ಆಗಮಿಸಿದ್ದ ನೂರಾರು ಭಕ್ತಾಧಿಗಳಿಗೆ ಪಾನಕ ಪನಿವಾರ ವಿತರಿಸಲಾಯಿತು. ಭಕ್ತಾಧಿಗಳು ಬೇಸಿಗೆಯ ಧಗೆಯನ್ನು ಲೆಕ್ಕಿಸದೆ ಆಗಮಿಸಿ ಪೂಜೆ ಜಪಗಳ ಕಾರ್ಯಗಳಲ್ಲಿ ಭಾಗವಹಿಸಿದ್ದರಲ್ಲದೆ, ರಾಮ ಅಷ್ಟೋತ್ತರ,ರಾಮ ರಕ್ಷಾ ಸ್ತೋತ್ರ,ರಾಮ ಅಷ್ಟಕ ,
ರಾಮ ಸಹಸ್ರನಾಮ ಜಪಿಸುತ್ತಾ, ರಾಮಕೀರ್ತನೆಯನ್ನು ಪಠಿಸುತ್ತಾ ಶ್ರೀರಾಮನನ್ನು ಧ್ಯಾನಿಸುತ್ತಿದ್ದರು.

   ಶ್ರೀಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಜೈ ಮಾರುತಿ ಯುವಕ ಸೇವಾ ಚಾರಿಟಬಲ್ ಟ್ರಸ್ಟ್ ನ ಯುವಕರು ಪೆಂಡಾಲನ್ನು ಹಾಕಿ ಮಜ್ಜಿಗೆ ಕಡಳೆಕಾಲು ಉಸಲಿ ವಿತರಿಸಿದರು. ಸಂಘದ ಅಧ್ಯಕ್ಷ ಚನ್ನಬಸವಯ್ಯ,ಗೌರವಾಧ್ಯಕ್ಷ ಆಶೊಕ್ ಬಾಬು,ಹರೀಶ್,ಮಂಜುನಾಥ,ರಾಜು,ಮನು ಸೇರಿದಂತೆ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...