ವಿಷಯಕ್ಕೆ ಹೋಗಿ

ರಾಜ್ಯದ ಬಗ್ಗೆ ಕಾಂಗ್ರೆಸ್ ನವರಿಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಸಿಎಂ ಜಗದೀಶ್ ಶೆಟ್ಟರ್

ಪ್ರಸ್ತುತದಲ್ಲಿ ಕೇಂದ್ರ ಸರ್ಕಾರ 2ಜಿ,ಕಲ್ಲಿದ್ದಲು,ಹೆಲಿಕ್ಯಾಪ್ಟರ್ ಹೀಗೆ ಹಗರಣಗಳ ಸುಳಿಯಲ್ಲಿ ಮುಳುಗಿದ್ದು ಕಾಂಗ್ರೆಸ್ ನಾಯಕರುಗಳು ಸಹ ಹಲವು ಹಗರಣಗಳಲ್ಲಿ ಸಿಲುಕಿ ರಾಷ್ಟ್ರದ ಮರ್ಯಾದೆಯನ್ನು ಹರಾಜು ಹಾಕಿದ್ದಾರೆ .ರಾಹುಲ್ ಗಾಧಿ,ಸೋನಿಯಗಾಂಧಿ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರುಗಳು ಉತ್ತಮ ಆಡಳಿತ ನೀಡಿರುವ ಕರ್ನಾಟಕದ ಬಿಜೆಪಿ ಸರ್ಕಾರದ ಬಗ್ಗೆ , ರಾಜ್ಯದ ಬಗ್ಗೆ ಹಾಗೂ ಬಿಜೆಪಿ ಪಕ್ಷದ ಬಗ್ಗೆ ಯಾವುದೇ ರೀತಿಯ ಮಾತನಾಡುವ,ಟೀಕಿಸುವ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುಡುಗಿದರು.
ಚಿಕ್ಕನಾಯಕನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಕಿರಣ್ ಕುಮಾರ್ ಪರ ಚುನಾವಣಾ ಪ್ರಚಾರಕ್ಕಾಗಿ ಹುಳಿಯಾರಿಗೆ ಆಗಮಿಸಿದ್ದ ಅವರು ಕಾರ್ಯಕರ್ತರ ಬೃಹತ್ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ತನ್ನ ಐದು ವರ್ಷದ ಅವಧಿಯಲ್ಲಿ ಸಂಪೂರ್ಣ ಬದಲಾವಣೆ ತಂದಿದ್ದು,ರಾಜ್ಯಾಂದ್ಯತ ಕೃಷಿ ಬಜೆಟ್‌, ಸುವರ್ಣ ಗ್ರಾಮ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆ,ಭೂ ಚೇತನ ಯೋಜನೆ ಸೇರಿದಂತೆ ನಮ್ಮ ಗ್ರಾಮ-ನಮ್ಮ ರಸ್ತೆಯಂತಹ ಮಹತ್ವಾಕಾಂಕ್ಷಿ ಯೋಜನೆಗಳನ್ನು ರೂಪಿಸಿ,ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಿಕೊಂಡು ಬಂದಿದ್ದು, ಕೃಷಿ,ಕೈಗಾರಿಕೆ ಸೇರಿದಂತೆ  ಇನ್ನಿತರ ಕ್ಷೇತ್ರಗಳ ಅಭಿವೃದ್ದಿಗಾಗ ಮುಂದಾಗಿ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿರುವುದು ಬಿಜೆಪಿಯ ಸಾಧನೆಯಾಗಿದೆ.ಅಲ್ಲದೆ ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂಭತ್ತು ತಿಂಗಳು ಕಳೆಯುವಷ್ಟರಲ್ಲೇ ಬಿದ್ದು ಹೋಗುತ್ತಾರೆಂದು ಹಲವರು ನುಡಿದಿದ್ದರು ಆದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನಪರ ಆಡಳಿತ ನೀಡುತ್ತಾ ಇಲ್ಲಿಯವಗೆ ಸಾಗಿದ್ದೇನೆ ಇದು ತಮಗೆ ತೃಪ್ತಿ ತಂದಿದೆ ಎಂದರು.

ಪ್ರಸ್ತುತ ಚುನಾವಣೆಯಲ್ಲಿ ಜೆಡಿಎಸ್, ಬಿಎಸ್ ಅರ್ ಕಾಂಗ್ರೆಸ್ ಬಹುಮತ ಪಡೆಯುವ ಪಕ್ಷಗಳಲ್ಲ. ಇವರೆಲ್ಲಾ ಮತದಾರರನ್ನು ತಮ್ಮತ್ತ ಬಾಗಿಸಲು ಹಲವು ಆಮಿಷಗಳನ್ನು ಒಡ್ಡುತ್ತಿದ್ದು,ಇಂತಹ ಆಮಿಷಗಳಿಗೆ ಮತದಾರರು ಒಳಗಾಗದೇ ಯಾರಿಂದ ರಾಜ್ಯದ ಅಭಿವೃದ್ದಿ ಸಾಧ್ಯ ವೆಂಬುದನ್ನು ಮನಗಂಡು ಮತಚಲಾಯಿಸುವಂತೆ ಕೋರಿದರು.

ಕೆಜೆಪಿಯ ಯಡಿಯೂರಪ್ಪ ಚುನಾವಣೆಗೂ ಮುಂಚೆಯೇ ಈ ಬಾರಿ ಅತಂತ್ರ ವಿಧಾನಸಭೆ ಎಂದಿದ್ದು,ಕೆಜೆಪಿ ವ್ಯಕ್ತಿಗತವಾಗಿ ಮೂರರಿಂದ ನಾಲ್ಕು ಸ್ಥಾನಗಳಿಸಬಹುದು ಎಂದರು.ಧನಂಜಯ್ ಕುಮಾರ್ ನಂತವರು ಹಗಲಿನಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕರುಗಳ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ ಸಂಜೆ ಯಡಿಯೂರಪ್ಪ ಕ್ಷಮೆಯಾಚಿಸುವುದು ವಿಪರ್ಯಾಸದ ಸಂಗತಿಯೆಂದು ಲೇವಡಿ ಮಾಡಿದರು.
ಇವರ್ಯಾರಿ ಮುಖ್ಯಮಂತ್ರಿ ಮಾಡಲಿಕ್ಕೆ : 1967ರ ಜನಸಂಘದಲ್ಲಿ ಆಯ್ಕೆಯಾದ ನಾಲ್ಕು ಮಂದಿಯಲ್ಲಿ ಒಬ್ಬರು ನಮ್ಮ ಚಿಕ್ಕಪ್ಪ ಆಗಿದ್ದರು,1983ರಲ್ಲಿ ಆಯ್ಕೆಯಾದ 18ಮಂದಿಯಲ್ಲಿ ನಾವಿದ್ದೆವು,ಜನಸಂಘದಿಂದಲೂ ನಮ್ಮ ಕುಟುಂಬ ಗುರ್ತಿಸಿಕೊಂಡಿದ್ದು ಅಂದು ಯಡಿಯೂರಪ್ಪ ಎಲ್ಲಿದ್ದರು? ಎಂದು ಹರಿಹಾಯ್ದ ಅವರು ಇವರ್ಯಾರಿ ನನ್ನ ಮುಖ್ಯಮಂತ್ರಿ ಮಾಡುವುದಕ್ಕೆ ಎಂದು ಪ್ರಶ್ನಿಸಿದರು.ಕೆಜೆಪಿ ಗಂಟು ಮೂಟೆ ಕಟ್ಟುವ ಸಮಯ ಬಂದಿದ್ದು,ಇವರ ಭವಿಷ್ಯ ಇನ್ನು ಐದೇ ದಿನದಲ್ಲಿ ಗೊತ್ತಾಗಲಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಗಳಿಸಲಿದೆ ಎಂಬ ಸಮೀಕ್ಷೆಗಳನ್ನು ಸತ್ಯಕ್ಕೆ ದೂರವಾಗಿದೆ.85ವರ್ಷದ ಜಾಫರ್ ಷರೀಫ್ ಕೂಡ ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ನಲ್ಲಿ ಎಲ್ಲರೂ ಮುಖ್ಯಮಂತ್ರಿ ಕನಸು ಕಾಣುತ್ತಿದ್ದು ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಘೋಷಿಸದೆ ತಮ್ಮಲ್ಲೇ ಸಂಘರ್ಷ ನಡೆಸುತ್ತಿರುವ ಇವರು ರಾಜ್ಯದಲಿ ಎಂತಹ ಆಡಳಿತ ನಡೆಸುತ್ತಾರೆಂದು ಟೀಕಿಸಿದರು.

ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯುವುದು ನಿಶ್ವಿತ,ಈ ಹಿನ್ನೆಲೆಯಲ್ಲಿ ಕಿರಣ್ ಕುಮಾರ್ ಅವರನ್ನು ಗೆಲ್ಲಿಸಿ ವಿಧಾನ ಸಭೆ ಕಳುಹಿಸಿ,ಮತ್ತೆ ಜಗದೀಶ್ ಶೆಟ್ಟರ್ ಸಿಎಂ ಆಗುತ್ತಾರೆ,ಕಿರಣ್ ಅವರಿಗೆ ಸಚಿವ ಸ್ಥಾನ ಕಟ್ಟಿಟ್ಟ ಬುತ್ತಿಯಾಗಿದೆ ಎಂದರು.

ಸಭೆಯಲ್ಲಿ ಮಾಜಿ ಶಾಸಕ ಹಾಗೂ ಚಿ.ನಾ.ಹಳ್ಳಿ ಕ್ಷೇತ್ರದ ಅಭ್ಯರ್ಥಿ ಕೆ.ಎಸ್.ಕಿರಣ್ ಕುಮಾರ್,ಜಿ.ಪಂ.ಸದಸ್ಯ ಪಂಚಾಕ್ಷರಿ ಮಾತನಾಡಿದರು.ಮಹಿಳಾ ಮೋರ್ಚಾದ ಕವಿತಾ ಕಿರಣ್ ಕುಮಾರ್,ತಾ.ಪಂ.ಅಧ್ಯಕ್ಷ ಜಗದೀಶ್,ತಾಲ್ಲೂಕು ಬಿಜೆಪಿ ಅಧ್ಯಕ್ಷ ಮಿಲ್ಟ್ರಿ ಶಿವಣ್ಣ,ತಾ.ಪಂ.ಸದಸ್ಯ ಕೆಂಕೆರೆ ನವೀನ್, ಮುಖಂಡರಾದ ಬುಕ್ಕಾಪಟ್ಟಣ ಬೊಮ್ಮಣ್ಣ,ರಮೇಶ್ ಬಾಬು ಸೇರಿದಂತೆ ಹಲವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...