ವಿಷಯಕ್ಕೆ ಹೋಗಿ

ಪ್ರತಿನಿತ್ಯ ಕನಿಷ್ಠ ಒಂದುವರೆ ತಾಸಿನ ನಡಿಗೆ ಉತ್ತಮ ಆರೋಗ್ಯಕ್ಕೆ ಸೋಪಾನ : ಡಾ|| ಖಾದರ್

                    ಯಾಂತ್ರಿಕತೆಗೆ ಮಾರು ಹೋಗಿರುವ ಮಾನವ ತನ್ನ ತನವನ್ನು ಮರೆತು ಯಂತ್ರಗಳೊಂದಿಗೆ ಬೆರೆತು ಜೀವನ ಸಾಗಿಸುತ್ತಾ ಜೀವನದ ಉತ್ತಮ ಆರೋಗ್ಯ ಸ್ಥಿತಿಯನ್ನು ಕಳೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಸಾಕಷ್ಟು ಹಣವ್ಯಯಿಸಿ ಉತ್ತಮ ಆರೋಗ್ಯ ಪಡೆಯಲು ಮುಂದಾಗುತ್ತಿರುವ ಜನ ದಿನನಿತ್ಯ ಕನಿಷ್ಠ ಒಂದುವರೆ ತಾಸು ನಡಿಯುವುದರಿಂದ ದೇಹದಲ್ಲಿನ ಕಲ್ಮಶ ತೊಲಗಿ ಉತ್ತಮ ಆರೋಗ್ಯ ಪಡೆಯಬಹುದಾಗಿದೆ ಎಂದು ಮೈಸೂರಿನ ಆಯುರ್ವೇದ ಡಾ||ಖಾದರ್ ತಿಳಿಸಿದ್ದಾರೆ. 

ಡಾ||ಖಾದರ್ ಮಹಿಳೆಯರು ಯಾವ ರೀತಿ ಉತ್ತಮ ಆರೋಗ್ಯ ಪಾಡಿಕೊಳ್ಳ ಬಹುದೆಂದು ಮಾಹಿತಿ ನೀಡುತ್ತಿರುವುದು.
                        ಹುಳಿಯಾರಿನ ಬಸವೇಶ್ವರನಗರ ಬಡಾವಣೆಯಲ್ಲಿ ಸೃಜನ ಮಹಿಳಾ ವೇದಿಕೆಯವರ ಸಹಯೋಗದಲ್ಲಿ ಆಯೋಜಿಸಿದ್ದ ಮಹಿಳೆಯರು ತಮ್ಮ ಹಾಗೂ ಸಂಸಾರದ ಸ್ವಾಸ್ಥ್ಯವನ್ನು ಯಾವರೀತಿ ಕಾಪಾಡಿಕೊಳ್ಳಬೇಕೆಂಬ ವಿಚಾರಗಳನ್ನು ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
                              ಮನುಷ್ಯರಾದ ತಾವು ಆರೋಗ್ಯದಿಂದಿರ ಬೇಕೆಂದು ಬಯಸುವುದು ಎಷ್ಟು ಮುಖ್ಯವೋ, ಉತ್ತಮ ಆರೋಗ್ಯವನ್ನು ಯಾವ ರೀತಿ ಪಡೆಯಬೇಕು, ದೇಹಕ್ಕೆ ಆಗತ್ಯವಾದ ಪೋಷಕಾಂಶ,ದೇಹದ ಸ್ವಚ್ಚತೆ,ರೋಗಗಳು ತಮ್ಮ ದೇಹವನ್ನು ಬಾದಿಸದೆಂತೆ ವಹಿಸ ಬೇಕಾದ ಎಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಅಷ್ಟೇ ಮುಖ್ಯವಾಗಿದೆ ಎಂದರು.ಆರೋಗ್ಯವನ್ನು ಕಾಡುವ ಮೂಕ್ಕಾಲು ಪಾಲು ಜವಬ್ದಾರಿ ಮಹಿಳೆಯರದ್ದು,ಪುರುಷರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದರೆ ಅದನ್ನು ಗುರುತಿಸಿ ಸೂಕ್ತ ಕ್ರಮಕೈಗೊಳ್ಳುವ ಕಾರ್ಯವನ್ನು ಮನೆಯ ಮಡಿದಿ ಮಾಡಬೇಕಿದ್ದು,ಮಹಿಳೆಯರು ಯಾವ ಆಹಾರ ಕ್ರಮವನ್ನು ಅನುಸರಿಸಬೇಕು,ಯಾವ ತರಕಾರಿ,ಸೊಪ್ಪು,ಕಾಳು,ಕಡ್ಡಿಗಳನ್ನು ಬಳಸಬೇಕು, ಯಾವುದನ್ನು ತ್ಯೆಜಿಸಬೇಕು ಎಂಬುದನ್ನು ಮನಗಂಡು ಸಂಸಾರ ನಡೆಸಬೇಕು ಎಂದು ತಿಳಿಸಿದರು. 
                    ನಮ್ಮ ಅಕ್ಕಪಕ್ಕ ಸಿಗುವಂತಹ,ಔಷಧಿ ಗುಣವುಳ್ಳ ಗರಿಕೆ,   ಅಮೃತಬಳ್ಳಿ, ಬೇವು, ಅರಳಿ,ಬಿಲ್ವ,ಹೊಂಗೆ,ತುಳಸಿ ಎಲೆಗಳನ್ನು ದಿನನಿತ್ಯ ಉಪಯೋಗಿಸುವುದರಿಂದ     ದೇಹಕ್ಕೆ ಬರುವ ಅನೇಕ ಕಾಯಿಲೆಗಳಿಂದ ದೂರವಿರಬಹುದಾಗಿದ್ದು, ಆಸ್ಪತ್ರೆಗಳಿಗೆ ಅಲೆಯುತ್ತಾ,ಹಣವ್ಯಯ ಮಾಡುವುದು ತಪ್ಪುತ್ತದೆ ಎಂದರು.ದೇಹ ಅಗುರಾದಷ್ಟು ನಮ್ಮ ಆರೋಗ್ಯದಲ್ಲಿ ಚೇತರಿಕೆಯುಂಟಾಗುವುದಲ್ಲದೆ,ದೇಹದ ರೋಗ ನಿರೋಧಕ ಶಕ್ತಿ ದ್ವಿಗುಣಗೊಳ್ಳುತ್ತದೆ. ದಿನನಿತ್ಯದ ನಮ್ಮ ಕೆಲಸಗಳನ್ನು ನಾವೇ ಮಾಡಿಕೊಳ್ಳದೆ ಒಂದೇ ಸ್ಥಳದಲ್ಲಿ ಕೂತರೆ ನಮ್ಮ ದೇಹ ಮೊಲೆಯಲ್ಲಿ ಬಿದ್ದ ಕಬ್ಬಿಣದಂತೆ ತುಕ್ಕು ಹಿಡಿಯುತ್ತದೆ. 
               ಆಸ್ಪತ್ರೆಗಳಲ್ಲಿ ಆರೋಗ್ಯವಿಲ್ಲ: ಇಂದು ನಾವೆಲ್ಲ ನೋಡಿರುವಂತೆ ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಮೂಲಸೌಕರ್ಯಗಳಿಲ್ಲದೆ ಗ್ರಾಮೀಣ ಭಾಗದ ಜನರಿಗೆ ಉತ್ತಮ ಜೌಷಧಿಗಳಾಗಲಿ.ಚಿಕಿತ್ಸೆಯಾಗಲಿ ಲಭಿಸುತ್ತಿಲ್ಲ. ಇನ್ನೊಂದೆಡೆ ಖಾಸಗಿ ಆಸ್ಪತ್ರೆಗಳಲ್ಲಿ ಹಣದ ವ್ಯಾಮೋಹದಿಂದ ಸಣ್ಣ ಕಾಯಿಲೆಗೆ ಅಗತ್ಯಕ್ಕಿಂತ ಹೆಚ್ಚಿನ ಚಿಕಿತ್ಸೆ ಮಾಡುತ್ತಾ,ಕಾಯಿಲೆ ತಕ್ಕ ಲಸಿಕೆ ನೀಡದೆ ಜನರಲ್ಲಿ ಆಸ್ಪತ್ರೆಗಳೆಂದರೆ ಭಯಪಡುವಂತಹ ಮನೋಭಾವ ಮೂಡುತ್ತಿರುವುದು ವಿಷಾದನೀಯ ಎಂದರು.
        ಈ ಸಂಧರ್ಭದಲ್ಲಿ ಕೃಷಿ ಭಾರತ್ ಪತ್ರಿಕೆಯ ಸಂಪಾದಕ ಚಂದ್ರಶೇಖರ್ ಬಾಲೆ,ಜಿಲ್ಲಾ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ರಾಮಕೃಷ್ಣಪ್ಪ, ರವೀಂದ್ರ ದೇಸಾಯಿ,ಪ್ರಗತಿಪರ ರೈತ ಕೋರಗೆರೆ ರಾಜಶೇಖರ್,ಸಿದ್ದಬಸಪ್ಪ,ಕೆಂಕೆರೆ ಬಸವರಾಜು ಸೇರಿದಂತೆ ಸೃಜನಾ ಮಹಿಳಾ ವೇದಿಕೆಯ ನೂರಾರು ಮಹಿಳೆಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...