ವಿಷಯಕ್ಕೆ ಹೋಗಿ

ಪ್ರತಿನಿತ್ಯ ಕನಿಷ್ಠ ಒಂದುವರೆ ತಾಸಿನ ನಡಿಗೆ ಉತ್ತಮ ಆರೋಗ್ಯಕ್ಕೆ ಸೋಪಾನ : ಡಾ|| ಖಾದರ್

                    ಯಾಂತ್ರಿಕತೆಗೆ ಮಾರು ಹೋಗಿರುವ ಮಾನವ ತನ್ನ ತನವನ್ನು ಮರೆತು ಯಂತ್ರಗಳೊಂದಿಗೆ ಬೆರೆತು ಜೀವನ ಸಾಗಿಸುತ್ತಾ ಜೀವನದ ಉತ್ತಮ ಆರೋಗ್ಯ ಸ್ಥಿತಿಯನ್ನು ಕಳೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಸಾಕಷ್ಟು ಹಣವ್ಯಯಿಸಿ ಉತ್ತಮ ಆರೋಗ್ಯ ಪಡೆಯಲು ಮುಂದಾಗುತ್ತಿರುವ ಜನ ದಿನನಿತ್ಯ ಕನಿಷ್ಠ ಒಂದುವರೆ ತಾಸು ನಡಿಯುವುದರಿಂದ ದೇಹದಲ್ಲಿನ ಕಲ್ಮಶ ತೊಲಗಿ ಉತ್ತಮ ಆರೋಗ್ಯ ಪಡೆಯಬಹುದಾಗಿದೆ ಎಂದು ಮೈಸೂರಿನ ಆಯುರ್ವೇದ ಡಾ||ಖಾದರ್ ತಿಳಿಸಿದ್ದಾರೆ. 

ಡಾ||ಖಾದರ್ ಮಹಿಳೆಯರು ಯಾವ ರೀತಿ ಉತ್ತಮ ಆರೋಗ್ಯ ಪಾಡಿಕೊಳ್ಳ ಬಹುದೆಂದು ಮಾಹಿತಿ ನೀಡುತ್ತಿರುವುದು.
                        ಹುಳಿಯಾರಿನ ಬಸವೇಶ್ವರನಗರ ಬಡಾವಣೆಯಲ್ಲಿ ಸೃಜನ ಮಹಿಳಾ ವೇದಿಕೆಯವರ ಸಹಯೋಗದಲ್ಲಿ ಆಯೋಜಿಸಿದ್ದ ಮಹಿಳೆಯರು ತಮ್ಮ ಹಾಗೂ ಸಂಸಾರದ ಸ್ವಾಸ್ಥ್ಯವನ್ನು ಯಾವರೀತಿ ಕಾಪಾಡಿಕೊಳ್ಳಬೇಕೆಂಬ ವಿಚಾರಗಳನ್ನು ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
                              ಮನುಷ್ಯರಾದ ತಾವು ಆರೋಗ್ಯದಿಂದಿರ ಬೇಕೆಂದು ಬಯಸುವುದು ಎಷ್ಟು ಮುಖ್ಯವೋ, ಉತ್ತಮ ಆರೋಗ್ಯವನ್ನು ಯಾವ ರೀತಿ ಪಡೆಯಬೇಕು, ದೇಹಕ್ಕೆ ಆಗತ್ಯವಾದ ಪೋಷಕಾಂಶ,ದೇಹದ ಸ್ವಚ್ಚತೆ,ರೋಗಗಳು ತಮ್ಮ ದೇಹವನ್ನು ಬಾದಿಸದೆಂತೆ ವಹಿಸ ಬೇಕಾದ ಎಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಅಷ್ಟೇ ಮುಖ್ಯವಾಗಿದೆ ಎಂದರು.ಆರೋಗ್ಯವನ್ನು ಕಾಡುವ ಮೂಕ್ಕಾಲು ಪಾಲು ಜವಬ್ದಾರಿ ಮಹಿಳೆಯರದ್ದು,ಪುರುಷರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದರೆ ಅದನ್ನು ಗುರುತಿಸಿ ಸೂಕ್ತ ಕ್ರಮಕೈಗೊಳ್ಳುವ ಕಾರ್ಯವನ್ನು ಮನೆಯ ಮಡಿದಿ ಮಾಡಬೇಕಿದ್ದು,ಮಹಿಳೆಯರು ಯಾವ ಆಹಾರ ಕ್ರಮವನ್ನು ಅನುಸರಿಸಬೇಕು,ಯಾವ ತರಕಾರಿ,ಸೊಪ್ಪು,ಕಾಳು,ಕಡ್ಡಿಗಳನ್ನು ಬಳಸಬೇಕು, ಯಾವುದನ್ನು ತ್ಯೆಜಿಸಬೇಕು ಎಂಬುದನ್ನು ಮನಗಂಡು ಸಂಸಾರ ನಡೆಸಬೇಕು ಎಂದು ತಿಳಿಸಿದರು. 
                    ನಮ್ಮ ಅಕ್ಕಪಕ್ಕ ಸಿಗುವಂತಹ,ಔಷಧಿ ಗುಣವುಳ್ಳ ಗರಿಕೆ,   ಅಮೃತಬಳ್ಳಿ, ಬೇವು, ಅರಳಿ,ಬಿಲ್ವ,ಹೊಂಗೆ,ತುಳಸಿ ಎಲೆಗಳನ್ನು ದಿನನಿತ್ಯ ಉಪಯೋಗಿಸುವುದರಿಂದ     ದೇಹಕ್ಕೆ ಬರುವ ಅನೇಕ ಕಾಯಿಲೆಗಳಿಂದ ದೂರವಿರಬಹುದಾಗಿದ್ದು, ಆಸ್ಪತ್ರೆಗಳಿಗೆ ಅಲೆಯುತ್ತಾ,ಹಣವ್ಯಯ ಮಾಡುವುದು ತಪ್ಪುತ್ತದೆ ಎಂದರು.ದೇಹ ಅಗುರಾದಷ್ಟು ನಮ್ಮ ಆರೋಗ್ಯದಲ್ಲಿ ಚೇತರಿಕೆಯುಂಟಾಗುವುದಲ್ಲದೆ,ದೇಹದ ರೋಗ ನಿರೋಧಕ ಶಕ್ತಿ ದ್ವಿಗುಣಗೊಳ್ಳುತ್ತದೆ. ದಿನನಿತ್ಯದ ನಮ್ಮ ಕೆಲಸಗಳನ್ನು ನಾವೇ ಮಾಡಿಕೊಳ್ಳದೆ ಒಂದೇ ಸ್ಥಳದಲ್ಲಿ ಕೂತರೆ ನಮ್ಮ ದೇಹ ಮೊಲೆಯಲ್ಲಿ ಬಿದ್ದ ಕಬ್ಬಿಣದಂತೆ ತುಕ್ಕು ಹಿಡಿಯುತ್ತದೆ. 
               ಆಸ್ಪತ್ರೆಗಳಲ್ಲಿ ಆರೋಗ್ಯವಿಲ್ಲ: ಇಂದು ನಾವೆಲ್ಲ ನೋಡಿರುವಂತೆ ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಮೂಲಸೌಕರ್ಯಗಳಿಲ್ಲದೆ ಗ್ರಾಮೀಣ ಭಾಗದ ಜನರಿಗೆ ಉತ್ತಮ ಜೌಷಧಿಗಳಾಗಲಿ.ಚಿಕಿತ್ಸೆಯಾಗಲಿ ಲಭಿಸುತ್ತಿಲ್ಲ. ಇನ್ನೊಂದೆಡೆ ಖಾಸಗಿ ಆಸ್ಪತ್ರೆಗಳಲ್ಲಿ ಹಣದ ವ್ಯಾಮೋಹದಿಂದ ಸಣ್ಣ ಕಾಯಿಲೆಗೆ ಅಗತ್ಯಕ್ಕಿಂತ ಹೆಚ್ಚಿನ ಚಿಕಿತ್ಸೆ ಮಾಡುತ್ತಾ,ಕಾಯಿಲೆ ತಕ್ಕ ಲಸಿಕೆ ನೀಡದೆ ಜನರಲ್ಲಿ ಆಸ್ಪತ್ರೆಗಳೆಂದರೆ ಭಯಪಡುವಂತಹ ಮನೋಭಾವ ಮೂಡುತ್ತಿರುವುದು ವಿಷಾದನೀಯ ಎಂದರು.
        ಈ ಸಂಧರ್ಭದಲ್ಲಿ ಕೃಷಿ ಭಾರತ್ ಪತ್ರಿಕೆಯ ಸಂಪಾದಕ ಚಂದ್ರಶೇಖರ್ ಬಾಲೆ,ಜಿಲ್ಲಾ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ರಾಮಕೃಷ್ಣಪ್ಪ, ರವೀಂದ್ರ ದೇಸಾಯಿ,ಪ್ರಗತಿಪರ ರೈತ ಕೋರಗೆರೆ ರಾಜಶೇಖರ್,ಸಿದ್ದಬಸಪ್ಪ,ಕೆಂಕೆರೆ ಬಸವರಾಜು ಸೇರಿದಂತೆ ಸೃಜನಾ ಮಹಿಳಾ ವೇದಿಕೆಯ ನೂರಾರು ಮಹಿಳೆಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.