ಬಿರು ಬಿಸಿಲನ್ನು ಲೆಕ್ಕಿಸದೆ ಪಟ್ಟಣದಾದ್ಯಂತೆ ಗುರುವಾರ ವಿವಿಧ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಬ್ಬರದ ಪ್ರಚಾರ ನಡೆಸಿದರು.ಒಂದು ಕಡೆ ಬಿಜೆಪಿ ಪಕ್ಷದ ಕಿರಣ್ ಕುಮಾರ್ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಮನೆಮನೆಗಳಿಗೆ ತೆರಳಿ ಮತಯಾಚಿಸುತ್ತಿದ್ದು,ಕಾರ್ಯಕರ್ತರು ಜೈಕಾರಗಳನ್ನು ಹಾಕುತ್ತಾ ತಮ್ಮ ನಾಯಕನಿಗೆ ಓಟು ಕೊಡಿ ಎಂದು ಕೇಳುತ್ತಿದ್ದರು.
ಮತ್ತೊಂದೆಡೆ ರೈತಸಂಘದ ಅಭ್ಯರ್ಥಿ ಕೆಂಕೆರೆ ಸತೀಶ್ ಮಾರ್ಕೆಟ್ ಯಾರ್ಡ್,ವಠಾರ, ಶಂಕರಪುರ,ವಸಂತನಗರ,ಅಮಾನಿಕೆರೆ ಹೀಗೆ ವಿವಿಧ ಬಡಾವಣೆಗಳಲ್ಲಿ ಅಪಾರ ಸಂಖ್ಯೆಯ ರೈತರೊಂದಿಗೆ ಸುತ್ತಿ ಕ್ಷೇತ್ರದ ಅಭಿವೃದ್ಧಿಗೆ ಉದ್ದೇಶಿಸಿರುವ ಯೋಜನೆಗಳ ಬಗ್ಗೆ ಭಿತ್ತಿಪತ್ರಗಳನ್ನು ಹಂಚುತ್ತಾ ಓಟಿನೊಂದಿಗೆ ಒಂದು ನೋಟು ಕೊಡಿ ಎಂದು ಸಾಗುತ್ತಾ ನಡೆದರೆ, ಜೆಡಿಎಸ್ ಪಕ್ಷದ ಸಿ.ಬಿ.ಸುರೇಶ್ ಬಾಬು ಅವರ ಅನುಪಸ್ಥಿಯಲ್ಲಿಯೂ ಅವರ ಪರ ಮುಖಂಡರಾದ ಬೈಜು ಸಾಬ್.ಮಾಜಿ ತಾಪಂ ಸದಸ್ಯ ಶಿವನಂಜಪ್ಪ ,ತರಕಾರಿ ರಘು,ಲಲಿತ ಹಾಗೂ ಶೌಕತ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮನೆಮನೆಗಳಿಗೆ ತೆರಳಿ ಜೇಡಿಎಸ್ ಪಕ್ಷಕ್ಕೆ ಮತಯಾಚಿಸುತ್ತಿದ್ದರು.
ಕೆಜೆಪಿ ಪಕ್ಷದ ಜೆ.ಸಿ.ಮಾಧುಸ್ವಾಮಿ ಪರವಾಗಿ ಸ್ಥಳಿಯ ಮುಖಂಡರುಗಳಾದ ಜಹೀರ್ ಸಾಬ್, ಕಾರ್ಗಿಲ್ ಸತೀಶ್,ಗ್ರಾಪಂ ಸದಸ್ಯರುಗಳಾದ ಬಡ್ಡಿ ಪುಟ್ಟಣ್ಣ, ಭೈರೇಶ್, ಅಶೋಕ್ ಬಾಬು ಸೇರದಂತೆ ಅಪಾರ ಅಭಿಮಾನಿಗಳು ಪಟ್ಟಣದ ವಿವಿಧ ಬದಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಾಧನೆಗಳನ್ನು ಬಿಂಬಿಸಿ,ಕ್ಷೇತ್ರದ ಬಗ್ಗೆ ಮಾಧುಸ್ವಾಮಿಯವರ ಸಾಧನೆಗಳುಳ್ಳ ಕರಪತ್ರ ಹಂಚುತ್ತಾ ಸಾಗಿದರು.ಒಟ್ಟಾರೆ ಇಂದು ಪಟ್ಟಣದಲ್ಲಿ ಗುರುವಾರದ ಸಂತೆ ಇದ್ದು ಹೋಬಳಿಯ ಸುತ್ತಮುತ್ತಲಿನ ಹಳ್ಳಿಗಳ ಸಾಕಷ್ಟು ಜನ ಬರುತ್ತಾರೆ ಎಂಬುದನ್ನು ಮನಗಂಡು ವಿವಿಧ ಪಕ್ಷದವರು ಒಂದೇ ದಿನ ಪಟ್ಟಣದಾದ್ಯಂತ ಪ್ರಚಾರ ನಡೆಸಿದ್ದಾರೆ.
ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ