ವಿಷಯಕ್ಕೆ ಹೋಗಿ

ಹೀಗೊಬ್ಬ ಮತದಾರರಿಗೆ ಅರಿವು ಮೂಡಿಸುವ ಅಜ್ಜ

ಅಭ್ಯರ್ಥಿಗಳ ಸಾಧನೆ ಬಗ್ಗೆ ಪ್ರಶ್ನಿಸಿ: ಕ್ಷೇತ್ರದ ಬೇಡಿಕೆಗಳನಿಟ್ಟು, ಈಡೇರಿಸುವಂತೆ ಒತ್ತಾಯಿಸಿ:
----------------------------------------------------------------------------
ಹೀಗೊಬ್ಬ ಮತದಾರರಿಗೆ ಅರಿವು ಮೂಡಿಸುವ ಅಜ್ಜ
---------------------------------------------
            ಭ್ರಷ್ಟಾಚಾರ,ಲಂಚಗುಳಿತನವೇ ತಾಂಡವವಾಡುತ್ತಿರುವ ಸಮಾಜದಲ್ಲಿ ವಿದ್ಯಾವಂತ ಮತದಾರರು ಸರ್ಕಾರ,ಶಾಸಕರು ಸರಿಯಿಲ್ಲವೆಂದು ಟೀಕಿಸುತ್ತಾ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುವ ಬದಲು ಕಡ್ಡಾಯ ಮತದಾನದ ಮೂಲಕ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಬೇಕು.ಗ್ರಾಮೀಣ ಮತದಾರರು ಹಣ,ಹೆಂಡಕ್ಕೆ ಮಾರು ಹೋಗುವ ಬದಲು ಜಾಗೃತರಾಗಿ ಕ್ಷೇತ್ರದ ಸಮಸ್ಯೆಗೆ ಸ್ಪಂದಿಸುವ ವ್ಯಕ್ತಿಯನ್ನು ಚುನಾಯಿಸಬೇಕು ಎಂಬ ಆಶೊತ್ತರ ಹೊಂದಿ ಕಡ್ಡಾಯ ಮತದಾನ ಮತ್ತು ಮತದಾರರ ಹಕ್ಕುಗಳ ಬಗ್ಗೆ ಸಾರ್ವಜನಿಕರನ್ನು ಜಾಗೃತಗೊಳಿಸಿ, ,ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಪಣತೊಟ್ಟು,ಪ್ರತಿ ಚುನಾವಣೆಗಳಲ್ಲಿ ಕ್ಷೇತ್ರದ ಜ್ವಲಂತ ಸಮಸ್ಯೆಗಳನ್ನೊಳಗೊಂಡ ಭಿತ್ತಿ ಪತ್ರಗಳನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ಮತದಾನದ ಮಹತ್ವವನ್ನು ಸಾರುತ್ತಾ ಸಮಾಜಕ್ಕೆ ತಮ್ಮದೇ ಆದ ಸೇವೆ ಮಾಡುತ್ತಿದ್ದಾರೆ ಹುಳಿಯಾರಿನ ಗಾಂಧಿಪೇಟೆಯಲ್ಲಿರುವ ಶ್ರೀನಿವಾಸ್ ಪವರ್ ಪ್ರಸ್ ನ  ಸಮಾಜ ಚಿಂತಕ,ಹಿರಿಯಜ್ಜ ಬಿ.ಎ.ಕೇಶವಮೂರ್ತಿ.

ಹುಳಿಯಾರಿನ ಹಿರಿಯಜ್ಜ,ಸಮಾಜ ಚಿಂತಕ ಬಿ.ಎ.ಕೇಶವಮೂರ್ತಿ(ಕನ್ನಡಕ ಧರಿಸಿರುವವರು).ಅವರು ಚುನಾವಣೆಯ ಬಗ್ಗೆ ಮತದಾರರನ್ನು ಎಚ್ಚರಿಸುವ ನಿಟ್ಟಿನಲ್ಲಿ ಹತ್ತಾರು ಬೇಡಿಕೆಗಳನ್ನೊಳಗೊಂಡ ಭಿತ್ತಿಪತ್ರಗಳನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.
        ಚುನಾವಣೆ ಸಂಧರ್ಭದಲ್ಲಿ ಮನೆ ಬಾಗಿಲ ಬಳಿ ಬಂದು ಮತಯಾಚಿಸುವಾಗ ಹತ್ತಾರು ಭರವಸೆಗಳ ಮೂಟೆಯನ್ನು ಮತದಾರರ ಮುಂದಿಟ್ಟು ಗೆದ್ದ ನಂತರ ನೀಡಿದ್ದ ಭರವಸೆಗಳಿಗೂ ತಮಗೂ ಸಂಬಂಧವಿಲ್ಲ ಎಂಬಂತೆ ಅಧಿಕಾರ ನಡೆಸುವ ಜನಪ್ರತಿನಿಧಿಗಳ ಆಯ್ಕೆಯಲ್ಲಿ ಜನರು ಎಚ್ಚೆತ್ತು ಕೊಳ್ಳಬೇಕಾಗಿದೆ ಎನ್ನುವ ಅವರು ದೇಶದಲ್ಲಿ ಉತ್ತಮ ಆಡಳಿತ ವ್ಯವಸ್ಥೆ ರಚನೆಯಾಗಬೇಕಾದರೆ ಅದು ಮತದಾರರಿಂದ ಮಾತ್ರ ಸಾಧ್ಯವಿದ್ದು,ಅವರುಗಳು ಯೋಗ್ಯ ಹಾಗೂ ಪ್ರಜ್ಞಾವಂತ ಜನಪ್ರತಿನಿಧಿಗಳನ್ನು ಚುನಾಯಿಸಿದಾಗ ಮಾತ್ರ ಇದು ಸಾಧ್ಯ ಎನ್ನುತ್ತಾರೆ.  
                 ತಾವು ಹಲವವಾರು ಚುನಾವಣೆಗಳನ್ನು ಕಂಡಿದ್ದು,ಈ ಹಿಂದೆ ನಡೆಯುತ್ತಿದ್ದ ಚುನಾವಣೆಗಳಿಗೂ ಈಗಿನ ಚುನಾವಣೆಗಳಿಗೂ ಅಜಗಜಾಂತರ ವ್ಯತ್ಯಾಸಗಳಾಗಿದ್ದು,ಚುನಾವಣೆಗಳಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಬೇಕು. ಅದರೆ ಇಂದು ಜನ ತಮಗೆ ಯಾವ ಪಕ್ಷದಿಂದ ಅಧಿಕಾರ, ಹಣ,ಮದ್ಯ ಸಿಗುತ್ತದೆ ಆ ಪಕ್ಷಗಳ ಬಗ್ಗೆ ಒಲವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಷಾದಿಸಿದರು.


ಮತದಾರರಿಗಾಗಿ ಸಿದ್ದಗೊಳಿಸಿರುವ "ಮತದಾರರೇ ಎಚ್ಚರ" ಎಂಬ ಬಿತ್ತಿಪತ್ರದಲ್ಲಿ ಕ್ಷೇತ್ರದ ಅದರಲ್ಲೂ ಪ್ರಮುಖವಾಗಿ ಹುಳಿಯಾರಿನ ಜ್ವಲಂತ ಸಮಸ್ಯೆಗಳಾನ್ನೊಳಗೊಂಡ ಇಪ್ಪತ್ತೊಂದು ಬೇಡಿಕೆಗಳನಿಟ್ಟಿರುವ ಅವರು ಅವುಗಳನ್ನು ಮತಯಾಚಿಸಲು ಬರುವ ಅಭ್ಯ್ರರ್ಥಿಗಳ ಮುಂದಿಟ್ಟು ಈಡೇರಿಸುವಂತೆ ಒತ್ತಾಯಿಸುವ ಕಾರ್ಯಕ್ಕೆ ಎಲ್ಲಾ ಮತದಾರರು ಮುಂದಾಗುವಂತೆ ಕರೆ ನೀಡಿದ್ದಾರೆ.ಅಲ್ಲದೆ ತಾವು ನೀಡುವ ಕರಪತ್ರವನ್ನು ಓದಿ ತಿಳಿದ ವಿದ್ಯಾವಂತರು ಅನಕ್ಷರಸ್ಥರಿಗೂ ಚುನಾವಣೆಯ ಮಹತ್ವದ ಬಗ್ಗೆ ತಿಳಿಹೇಳ ಬೇಕು ಎಂದು ಬಯಸುತ್ತಾರೆ.ಒಟ್ಟಾರೆ ಶುದ್ದ ಹಾಗೂ ಪ್ರಬುದ್ದ ರಾಜಕಾರಣಿಯನ್ನು ಆಯ್ಕೆ ಮಾಡುವತ್ತ ಎಲ್ಲರೂ ಎಚ್ಚರವಹಿಸಬೇಕೆನ್ನುತ್ತಾರೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.