ವಿಷಯಕ್ಕೆ ಹೋಗಿ

ಹೀಗೊಬ್ಬ ಮತದಾರರಿಗೆ ಅರಿವು ಮೂಡಿಸುವ ಅಜ್ಜ

ಅಭ್ಯರ್ಥಿಗಳ ಸಾಧನೆ ಬಗ್ಗೆ ಪ್ರಶ್ನಿಸಿ: ಕ್ಷೇತ್ರದ ಬೇಡಿಕೆಗಳನಿಟ್ಟು, ಈಡೇರಿಸುವಂತೆ ಒತ್ತಾಯಿಸಿ:
----------------------------------------------------------------------------
ಹೀಗೊಬ್ಬ ಮತದಾರರಿಗೆ ಅರಿವು ಮೂಡಿಸುವ ಅಜ್ಜ
---------------------------------------------
            ಭ್ರಷ್ಟಾಚಾರ,ಲಂಚಗುಳಿತನವೇ ತಾಂಡವವಾಡುತ್ತಿರುವ ಸಮಾಜದಲ್ಲಿ ವಿದ್ಯಾವಂತ ಮತದಾರರು ಸರ್ಕಾರ,ಶಾಸಕರು ಸರಿಯಿಲ್ಲವೆಂದು ಟೀಕಿಸುತ್ತಾ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುವ ಬದಲು ಕಡ್ಡಾಯ ಮತದಾನದ ಮೂಲಕ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಬೇಕು.ಗ್ರಾಮೀಣ ಮತದಾರರು ಹಣ,ಹೆಂಡಕ್ಕೆ ಮಾರು ಹೋಗುವ ಬದಲು ಜಾಗೃತರಾಗಿ ಕ್ಷೇತ್ರದ ಸಮಸ್ಯೆಗೆ ಸ್ಪಂದಿಸುವ ವ್ಯಕ್ತಿಯನ್ನು ಚುನಾಯಿಸಬೇಕು ಎಂಬ ಆಶೊತ್ತರ ಹೊಂದಿ ಕಡ್ಡಾಯ ಮತದಾನ ಮತ್ತು ಮತದಾರರ ಹಕ್ಕುಗಳ ಬಗ್ಗೆ ಸಾರ್ವಜನಿಕರನ್ನು ಜಾಗೃತಗೊಳಿಸಿ, ,ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಪಣತೊಟ್ಟು,ಪ್ರತಿ ಚುನಾವಣೆಗಳಲ್ಲಿ ಕ್ಷೇತ್ರದ ಜ್ವಲಂತ ಸಮಸ್ಯೆಗಳನ್ನೊಳಗೊಂಡ ಭಿತ್ತಿ ಪತ್ರಗಳನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ಮತದಾನದ ಮಹತ್ವವನ್ನು ಸಾರುತ್ತಾ ಸಮಾಜಕ್ಕೆ ತಮ್ಮದೇ ಆದ ಸೇವೆ ಮಾಡುತ್ತಿದ್ದಾರೆ ಹುಳಿಯಾರಿನ ಗಾಂಧಿಪೇಟೆಯಲ್ಲಿರುವ ಶ್ರೀನಿವಾಸ್ ಪವರ್ ಪ್ರಸ್ ನ  ಸಮಾಜ ಚಿಂತಕ,ಹಿರಿಯಜ್ಜ ಬಿ.ಎ.ಕೇಶವಮೂರ್ತಿ.

ಹುಳಿಯಾರಿನ ಹಿರಿಯಜ್ಜ,ಸಮಾಜ ಚಿಂತಕ ಬಿ.ಎ.ಕೇಶವಮೂರ್ತಿ(ಕನ್ನಡಕ ಧರಿಸಿರುವವರು).ಅವರು ಚುನಾವಣೆಯ ಬಗ್ಗೆ ಮತದಾರರನ್ನು ಎಚ್ಚರಿಸುವ ನಿಟ್ಟಿನಲ್ಲಿ ಹತ್ತಾರು ಬೇಡಿಕೆಗಳನ್ನೊಳಗೊಂಡ ಭಿತ್ತಿಪತ್ರಗಳನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.
        ಚುನಾವಣೆ ಸಂಧರ್ಭದಲ್ಲಿ ಮನೆ ಬಾಗಿಲ ಬಳಿ ಬಂದು ಮತಯಾಚಿಸುವಾಗ ಹತ್ತಾರು ಭರವಸೆಗಳ ಮೂಟೆಯನ್ನು ಮತದಾರರ ಮುಂದಿಟ್ಟು ಗೆದ್ದ ನಂತರ ನೀಡಿದ್ದ ಭರವಸೆಗಳಿಗೂ ತಮಗೂ ಸಂಬಂಧವಿಲ್ಲ ಎಂಬಂತೆ ಅಧಿಕಾರ ನಡೆಸುವ ಜನಪ್ರತಿನಿಧಿಗಳ ಆಯ್ಕೆಯಲ್ಲಿ ಜನರು ಎಚ್ಚೆತ್ತು ಕೊಳ್ಳಬೇಕಾಗಿದೆ ಎನ್ನುವ ಅವರು ದೇಶದಲ್ಲಿ ಉತ್ತಮ ಆಡಳಿತ ವ್ಯವಸ್ಥೆ ರಚನೆಯಾಗಬೇಕಾದರೆ ಅದು ಮತದಾರರಿಂದ ಮಾತ್ರ ಸಾಧ್ಯವಿದ್ದು,ಅವರುಗಳು ಯೋಗ್ಯ ಹಾಗೂ ಪ್ರಜ್ಞಾವಂತ ಜನಪ್ರತಿನಿಧಿಗಳನ್ನು ಚುನಾಯಿಸಿದಾಗ ಮಾತ್ರ ಇದು ಸಾಧ್ಯ ಎನ್ನುತ್ತಾರೆ.  
                 ತಾವು ಹಲವವಾರು ಚುನಾವಣೆಗಳನ್ನು ಕಂಡಿದ್ದು,ಈ ಹಿಂದೆ ನಡೆಯುತ್ತಿದ್ದ ಚುನಾವಣೆಗಳಿಗೂ ಈಗಿನ ಚುನಾವಣೆಗಳಿಗೂ ಅಜಗಜಾಂತರ ವ್ಯತ್ಯಾಸಗಳಾಗಿದ್ದು,ಚುನಾವಣೆಗಳಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಬೇಕು. ಅದರೆ ಇಂದು ಜನ ತಮಗೆ ಯಾವ ಪಕ್ಷದಿಂದ ಅಧಿಕಾರ, ಹಣ,ಮದ್ಯ ಸಿಗುತ್ತದೆ ಆ ಪಕ್ಷಗಳ ಬಗ್ಗೆ ಒಲವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಷಾದಿಸಿದರು.


ಮತದಾರರಿಗಾಗಿ ಸಿದ್ದಗೊಳಿಸಿರುವ "ಮತದಾರರೇ ಎಚ್ಚರ" ಎಂಬ ಬಿತ್ತಿಪತ್ರದಲ್ಲಿ ಕ್ಷೇತ್ರದ ಅದರಲ್ಲೂ ಪ್ರಮುಖವಾಗಿ ಹುಳಿಯಾರಿನ ಜ್ವಲಂತ ಸಮಸ್ಯೆಗಳಾನ್ನೊಳಗೊಂಡ ಇಪ್ಪತ್ತೊಂದು ಬೇಡಿಕೆಗಳನಿಟ್ಟಿರುವ ಅವರು ಅವುಗಳನ್ನು ಮತಯಾಚಿಸಲು ಬರುವ ಅಭ್ಯ್ರರ್ಥಿಗಳ ಮುಂದಿಟ್ಟು ಈಡೇರಿಸುವಂತೆ ಒತ್ತಾಯಿಸುವ ಕಾರ್ಯಕ್ಕೆ ಎಲ್ಲಾ ಮತದಾರರು ಮುಂದಾಗುವಂತೆ ಕರೆ ನೀಡಿದ್ದಾರೆ.ಅಲ್ಲದೆ ತಾವು ನೀಡುವ ಕರಪತ್ರವನ್ನು ಓದಿ ತಿಳಿದ ವಿದ್ಯಾವಂತರು ಅನಕ್ಷರಸ್ಥರಿಗೂ ಚುನಾವಣೆಯ ಮಹತ್ವದ ಬಗ್ಗೆ ತಿಳಿಹೇಳ ಬೇಕು ಎಂದು ಬಯಸುತ್ತಾರೆ.ಒಟ್ಟಾರೆ ಶುದ್ದ ಹಾಗೂ ಪ್ರಬುದ್ದ ರಾಜಕಾರಣಿಯನ್ನು ಆಯ್ಕೆ ಮಾಡುವತ್ತ ಎಲ್ಲರೂ ಎಚ್ಚರವಹಿಸಬೇಕೆನ್ನುತ್ತಾರೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...