ವಿಷಯಕ್ಕೆ ಹೋಗಿ

ಬಿಜೆಪಿ ಪಕ್ಷ ಮುಳುಗುವ ಹಡಗು, ಈ ಚುನಾವಣೆಯಲ್ಲಿ ಮುಳುಗುವುದು ಶತಸಿದ್ದ : ಬಿಎಸ್ ವೈ

            ರಾಜ್ಯದಲ್ಲಿ ತಮ್ಮದು ಬಲಿಷ್ಠ ಪಕ್ಷ ಎಂದು ಬೀಗುತ್ತಿರುವ ಬಿಜೆಪಿ ಪಕ್ಷದ ನಾಯಕರು ರಾಜ್ಯದ ಅಭಿವೃದ್ದಿಗಾಗಿ ತಾನು ಕೈಗೊಂಡ ಕಾರ್ಯಗಳನ್ನು ಸಹಿಸದೆ ಹಲವರು ಸಂಚು ಮಾಡಿ ತಮ್ಮ ಅಭಿವೃದ್ದಿ ಕಾರ್ಯಗಳಿಗೆ ತಡೆಯೊಡ್ಡುವ ಕೃತ್ಯ ಮಾಡಿದರು. ಇದಕ್ಕೆಲ್ಲಾ ಪ್ರತ್ಯುತ್ತರವಾಗಿ ಈ ಬಾರಿಯ ಚುನಾವಣೆ ತಕ್ಕ ಪಾಠ ಕಲಿಸಲಿದೆ.ಪ್ರಸ್ತುತ ರಾಜಕೀಯ ಎಂಬ ಸಮುದ್ರದಲ್ಲಿ ಬಿಜೆಪಿ ಎಂಬ ಹಡಗು,ಪ್ರಾದೇಶಿಕ ಪಕ್ಷಗಳ ಎದುರು ಮುಳುಗುವುದು ಶತಸಿದ್ದ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಚಿಕ್ಕನಾಯಕನಹಳ್ಳಿ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಜೆ.ಸಿ.ಮಾಧುಸ್ವಾಮಿ ಪರ ಪ್ರಚಾರಕ್ಕಾಗಿ ಹುಳಿಯಾರಿಗೆ ಆಗಮಿಸಿದ್ದ ಅವರು ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಈ ಭಾಗಕ್ಕೆ ನೀರು ತರಲು ಭಗೀರಥ ಪ್ರಯತ್ನ ಮಾಡಿದ್ದು ತಾವೆಂದು ಹೇಳುತ್ತಿರುವ ಕೆ.ಎಸ್.ಕಿರಣ್ ಕುಮಾರ್, ಈ ಭಾಗಕ್ಕೆ ಹೇವಾವತಿ ನೀರು ಹರಿಸುವ ಬೃಹತ್ ಯೋಜನೆಯನ್ನು ಮಂಜೂರು ಮಾಡಿದವರು ಯಾರೆಂಬುದನ್ನು ಮರೆತು ಜನರ ಕಣ್ ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ,ತಮ್ಮೊಂದಿಗೆ ಆಪ್ತರಾಗಿದ್ದು ಕೊಂಡು ಈರೀತಿ ಮಾಡುತ್ತಿರುವ ಕಿರಣ್ ಕುಮಾರ್ ಅವರನ್ನು ಮನೆಗೆ ಕಳುಹಿಸಿ, ಮಾಧುಸ್ವಾಮಿ ಅವರನ್ನು ವಿಧಾಸಭೆಗೆ ಕಳುಹಿಸುವ ಮೂಲಕ ಚಿ.ನಾ.ಹಳ್ಳಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಕಾರ್ಯಕ್ಕೆ ತಾವೆಲ್ಲ ಕೈಜೊಡಿಸಿ ಎಂದು ಕರೆ ನೀಡಿದರು. ಇಂದು ಜನಕ್ಕೆ ಪರಾಮರ್ಷಿಸುವ ತಿಳುವಳಿಕೆಯಿದ್ದು ಯಾರು ಸರಿಯಾಗಿ ನಡೆಯುತ್ತಿದ್ದಾರೆ,ಯಾರಿಂದ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂಬುದನ್ನು ತುಲಾಭಾರ ಮಾಡುವ ಮೂಲಕ ಮತ ನೀಡುವಂತೆ ಕೋರಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಯಜಮಾನ ಗುಲಾಮ ಸಂಬಂದವಿದ್ದು,ಕೇಂದ್ರ ಕೈಗೊಂಬೆಯಾಗಿದ್ದು, ರಾಜ್ಯಕ್ಕೆ ದೊರೆಯಬೇಕಾದ ಸೌಲಭ್ಯಗಳು ದೂರ ಉಳಿವೆ. ಇಂತಹ ತಾರತಮ್ಯ ಮನೋಭಾವವನ್ನು ಕಿತ್ತೊಗೆಯುವ ಬದಲು ಕಂಡು ಕಾಣದಂತೆ ಬಿಜೆಪಿ ಸರ್ಕಾರ ತನ್ನ ಆಡಳಿತ ನಡೆಸುತ್ತಿದ್ದು, ರಾಜ್ಯವನ್ನು ಎಷ್ಟರ ಮಟ್ಟಿಗೆ ಅಭಿವೃದ್ದಿಯತ್ತ ಕೊಂಡೈಯುತ್ತದೆ ಎಂದು ಪ್ರಶ್ನಿಸಿದರು.ದೇಶಾದ್ಯಂತ ಪ್ರಾದೇಶಿಕ ಪಕ್ಷಗಳು ಹುಟ್ಟಿ ಬೆಳೆದು,ರಾಜ್ಯವನ್ನು ಅಭಿವೃದ್ದಿಪತದತ್ತ ಕೊಂಡೈಯುವ ಕಾರ್ಯವಾಗಬೇಕಿದೆ ಎಂದರು. ತಾವು ಭರವಸೆ ನೀಡುವ ವ್ಯಕ್ತಿಯಲ್ಲು ನುಡಿದಂತೆ ನಡೆಯುವನಾಗಿದ್ದು,ತಾನು ಹೇಳಿದಂತೆ ನಡೆಯದಿದ್ದ ಮತದಾರರೇ ನೀವೆ ನನ್ನನ್ನು ಪ್ರಶ್ನಿಸಿ ಎಂದರು.
ಜಾತಿ ಹೆಸರಿನಲ್ಲಿ ರಾಜ್ಯದ್ಯಾಂತ ವಿಷಬೀಜ ಬಿತ್ತಲು ಅನೇಕರು ಮುಂದಾಗಿದ್ದು,ಜಾತಿ ಜಾತಿಗಳ ನಡುವೆ, ಅಲ್ಪಸಂಖ್ಯಾತರ ನಡುವೆ ಕಲಹಗಳುಂಟಾಗುವಂತೆ ಮಾಡುತ್ತಾ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುವ ಬದಲು ದೊಂಬರಾಟ ನಡೆಸುತ್ತಿದ್ದು,ಇದಕ್ಕೆಲ್ಲಾ ಕಡಿವಾಣ ಹಾಕಬೇದಾರೆ ಸದನದಲ್ಲಿ ಸದ್ದು ಮಾಡುವವರು ಬೇಕು, ಆ ಧೈರ್ಯ ಮಾಧುಸ್ವಾಮಿಯವರಲಿದ್ದು ಅವರಿಗೆ ತಮ್ಮ ಮತನೀಡುವ ಮೂಲಕ ವಿಧಾನ ಸಭೆಗೆ ಕಳುಹಿಸಿ ಎಂದು ತಿಳಿಸಿದರು. ಸಭೆಗೂ ಮುನ್ನಾ ಪಟ್ಟಣದ ಬಿ.ಎಚ್.ರಸ್ತೆಯಲ್ಲಿ ಮೆರವಣಿಗೆ ನಡೆಯಲಾಯಿತು.

ಸಭೆಯಲ್ಲಿ ಚಿ.ನಾ.ಹಳ್ಳಿ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಜೆ.ಸಿ.ಮಾಧುಸ್ವಾಮಿ, ಸಿಂಗದಳ್ಳಿ ರಾಜ್ ಕುಮಾರ್, ಜಿ.ಎಸ್.ಬಸವರಾಜು, ಹಳೆಮನೆ ಶಿವನಂಜಪ್ಪ,ಜಿ.ಪಂ.ಸದಸ್ಯೆ ಲೋಹಿತಾ ಬಾಯಿ,ಮುಖಂಡರಾದ ಚಿಕ್ಕಬಿದರೆ ಚಂದ್ರಣ್ಣ,ಮೈಲಾರಪ್ಪ,ಯಳನಡು ಮಲ್ಲಿಕಣ್ಣ, ಜಹೀರ್ ಸಾಬ್, ಬ್ಯಾಂಕ್ ಮರುಳಯ್ಯ,ಬಡ್ಡಿಪುಟ್ಟರಾಜು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...