ವಿಷಯಕ್ಕೆ ಹೋಗಿ

ಬಿಜೆಪಿ ಪಕ್ಷ ಮುಳುಗುವ ಹಡಗು, ಈ ಚುನಾವಣೆಯಲ್ಲಿ ಮುಳುಗುವುದು ಶತಸಿದ್ದ : ಬಿಎಸ್ ವೈ

            ರಾಜ್ಯದಲ್ಲಿ ತಮ್ಮದು ಬಲಿಷ್ಠ ಪಕ್ಷ ಎಂದು ಬೀಗುತ್ತಿರುವ ಬಿಜೆಪಿ ಪಕ್ಷದ ನಾಯಕರು ರಾಜ್ಯದ ಅಭಿವೃದ್ದಿಗಾಗಿ ತಾನು ಕೈಗೊಂಡ ಕಾರ್ಯಗಳನ್ನು ಸಹಿಸದೆ ಹಲವರು ಸಂಚು ಮಾಡಿ ತಮ್ಮ ಅಭಿವೃದ್ದಿ ಕಾರ್ಯಗಳಿಗೆ ತಡೆಯೊಡ್ಡುವ ಕೃತ್ಯ ಮಾಡಿದರು. ಇದಕ್ಕೆಲ್ಲಾ ಪ್ರತ್ಯುತ್ತರವಾಗಿ ಈ ಬಾರಿಯ ಚುನಾವಣೆ ತಕ್ಕ ಪಾಠ ಕಲಿಸಲಿದೆ.ಪ್ರಸ್ತುತ ರಾಜಕೀಯ ಎಂಬ ಸಮುದ್ರದಲ್ಲಿ ಬಿಜೆಪಿ ಎಂಬ ಹಡಗು,ಪ್ರಾದೇಶಿಕ ಪಕ್ಷಗಳ ಎದುರು ಮುಳುಗುವುದು ಶತಸಿದ್ದ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಚಿಕ್ಕನಾಯಕನಹಳ್ಳಿ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಜೆ.ಸಿ.ಮಾಧುಸ್ವಾಮಿ ಪರ ಪ್ರಚಾರಕ್ಕಾಗಿ ಹುಳಿಯಾರಿಗೆ ಆಗಮಿಸಿದ್ದ ಅವರು ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಈ ಭಾಗಕ್ಕೆ ನೀರು ತರಲು ಭಗೀರಥ ಪ್ರಯತ್ನ ಮಾಡಿದ್ದು ತಾವೆಂದು ಹೇಳುತ್ತಿರುವ ಕೆ.ಎಸ್.ಕಿರಣ್ ಕುಮಾರ್, ಈ ಭಾಗಕ್ಕೆ ಹೇವಾವತಿ ನೀರು ಹರಿಸುವ ಬೃಹತ್ ಯೋಜನೆಯನ್ನು ಮಂಜೂರು ಮಾಡಿದವರು ಯಾರೆಂಬುದನ್ನು ಮರೆತು ಜನರ ಕಣ್ ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ,ತಮ್ಮೊಂದಿಗೆ ಆಪ್ತರಾಗಿದ್ದು ಕೊಂಡು ಈರೀತಿ ಮಾಡುತ್ತಿರುವ ಕಿರಣ್ ಕುಮಾರ್ ಅವರನ್ನು ಮನೆಗೆ ಕಳುಹಿಸಿ, ಮಾಧುಸ್ವಾಮಿ ಅವರನ್ನು ವಿಧಾಸಭೆಗೆ ಕಳುಹಿಸುವ ಮೂಲಕ ಚಿ.ನಾ.ಹಳ್ಳಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಕಾರ್ಯಕ್ಕೆ ತಾವೆಲ್ಲ ಕೈಜೊಡಿಸಿ ಎಂದು ಕರೆ ನೀಡಿದರು. ಇಂದು ಜನಕ್ಕೆ ಪರಾಮರ್ಷಿಸುವ ತಿಳುವಳಿಕೆಯಿದ್ದು ಯಾರು ಸರಿಯಾಗಿ ನಡೆಯುತ್ತಿದ್ದಾರೆ,ಯಾರಿಂದ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂಬುದನ್ನು ತುಲಾಭಾರ ಮಾಡುವ ಮೂಲಕ ಮತ ನೀಡುವಂತೆ ಕೋರಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಯಜಮಾನ ಗುಲಾಮ ಸಂಬಂದವಿದ್ದು,ಕೇಂದ್ರ ಕೈಗೊಂಬೆಯಾಗಿದ್ದು, ರಾಜ್ಯಕ್ಕೆ ದೊರೆಯಬೇಕಾದ ಸೌಲಭ್ಯಗಳು ದೂರ ಉಳಿವೆ. ಇಂತಹ ತಾರತಮ್ಯ ಮನೋಭಾವವನ್ನು ಕಿತ್ತೊಗೆಯುವ ಬದಲು ಕಂಡು ಕಾಣದಂತೆ ಬಿಜೆಪಿ ಸರ್ಕಾರ ತನ್ನ ಆಡಳಿತ ನಡೆಸುತ್ತಿದ್ದು, ರಾಜ್ಯವನ್ನು ಎಷ್ಟರ ಮಟ್ಟಿಗೆ ಅಭಿವೃದ್ದಿಯತ್ತ ಕೊಂಡೈಯುತ್ತದೆ ಎಂದು ಪ್ರಶ್ನಿಸಿದರು.ದೇಶಾದ್ಯಂತ ಪ್ರಾದೇಶಿಕ ಪಕ್ಷಗಳು ಹುಟ್ಟಿ ಬೆಳೆದು,ರಾಜ್ಯವನ್ನು ಅಭಿವೃದ್ದಿಪತದತ್ತ ಕೊಂಡೈಯುವ ಕಾರ್ಯವಾಗಬೇಕಿದೆ ಎಂದರು. ತಾವು ಭರವಸೆ ನೀಡುವ ವ್ಯಕ್ತಿಯಲ್ಲು ನುಡಿದಂತೆ ನಡೆಯುವನಾಗಿದ್ದು,ತಾನು ಹೇಳಿದಂತೆ ನಡೆಯದಿದ್ದ ಮತದಾರರೇ ನೀವೆ ನನ್ನನ್ನು ಪ್ರಶ್ನಿಸಿ ಎಂದರು.
ಜಾತಿ ಹೆಸರಿನಲ್ಲಿ ರಾಜ್ಯದ್ಯಾಂತ ವಿಷಬೀಜ ಬಿತ್ತಲು ಅನೇಕರು ಮುಂದಾಗಿದ್ದು,ಜಾತಿ ಜಾತಿಗಳ ನಡುವೆ, ಅಲ್ಪಸಂಖ್ಯಾತರ ನಡುವೆ ಕಲಹಗಳುಂಟಾಗುವಂತೆ ಮಾಡುತ್ತಾ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುವ ಬದಲು ದೊಂಬರಾಟ ನಡೆಸುತ್ತಿದ್ದು,ಇದಕ್ಕೆಲ್ಲಾ ಕಡಿವಾಣ ಹಾಕಬೇದಾರೆ ಸದನದಲ್ಲಿ ಸದ್ದು ಮಾಡುವವರು ಬೇಕು, ಆ ಧೈರ್ಯ ಮಾಧುಸ್ವಾಮಿಯವರಲಿದ್ದು ಅವರಿಗೆ ತಮ್ಮ ಮತನೀಡುವ ಮೂಲಕ ವಿಧಾನ ಸಭೆಗೆ ಕಳುಹಿಸಿ ಎಂದು ತಿಳಿಸಿದರು. ಸಭೆಗೂ ಮುನ್ನಾ ಪಟ್ಟಣದ ಬಿ.ಎಚ್.ರಸ್ತೆಯಲ್ಲಿ ಮೆರವಣಿಗೆ ನಡೆಯಲಾಯಿತು.

ಸಭೆಯಲ್ಲಿ ಚಿ.ನಾ.ಹಳ್ಳಿ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಜೆ.ಸಿ.ಮಾಧುಸ್ವಾಮಿ, ಸಿಂಗದಳ್ಳಿ ರಾಜ್ ಕುಮಾರ್, ಜಿ.ಎಸ್.ಬಸವರಾಜು, ಹಳೆಮನೆ ಶಿವನಂಜಪ್ಪ,ಜಿ.ಪಂ.ಸದಸ್ಯೆ ಲೋಹಿತಾ ಬಾಯಿ,ಮುಖಂಡರಾದ ಚಿಕ್ಕಬಿದರೆ ಚಂದ್ರಣ್ಣ,ಮೈಲಾರಪ್ಪ,ಯಳನಡು ಮಲ್ಲಿಕಣ್ಣ, ಜಹೀರ್ ಸಾಬ್, ಬ್ಯಾಂಕ್ ಮರುಳಯ್ಯ,ಬಡ್ಡಿಪುಟ್ಟರಾಜು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.