ವಿಷಯಕ್ಕೆ ಹೋಗಿ

ಜೆಡಿಎಸ್ ರಾಜ್ಯದ ಚುಕ್ಕಾಣಿ ಹಿಡಿದರೆ ರೈತ ಸಂಪೂರ್ಣ ಸಾಲ ಮನ್ನಾ : ಹೆಚ್ಡಿಕೆ ಭರವಸೆ

                ರೈತನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ಆಡಳಿತ ನಡೆಸಲು ಮುಂದಾದ ಬಿಜೆಪಿ ಸರ್ಕಾರ ರಾಜ್ಯದ ರೈತರ ಹಿತವನ್ನು ಕಾಪಾಡುವುದನ್ನು ಮರೆತು ತಮ್ಮದೇ ಆದ ಆಡಳಿತವನ್ನು ನಡೆಸುತ್ತಾ ಹಲವಾರು ಹಗರಣಗಳನ್ನು ಮಾಡುವ ಮೂಲಕ ರಾಜ್ಯವನ್ನು ಕೊಳ್ಳೆ ಹೊಡೆಯುವ ಕಾರ್ಯದಲ್ಲಿ ತೊಡಗಿದ್ದಾರೆ,ಈಗ ಇದಕ್ಕೆಲ್ಲಾ ಕಡಿವಾಣ ಹಾಕಿ ರಾಜ್ಯದಲ್ಲಿ ಬದಲಾವಣೇ ತರುವ ನಿಟ್ಟಿನಲ್ಲಿ ಈಗಿನ ಚುನಾವಣೆಯಲ್ಲಿ ಮತದಾರ ಎಚ್ಚೆತ್ತು ಕೊಂಡು ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಬಹುಮತದಿಂದ ಆಯ್ಕೆ ಮಾಡಿದಲ್ಲಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ಮೊದಲ ದಿನವೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಮಾಜಿ ಸಿಎಂ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.


              ಚಿಕ್ಕನಾಯಕನಹಳ್ಳಿ ಕ್ಷೇತ್ರದ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು ಪರ ಪ್ರಚಾರಕ್ಕಾಗಿ ಹುಳಿಯಾರಿಗೆ ಆಗಮಿಸಿದ್ದ ಅವರು ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದರು.


ಹುಳಿಯಾರಿನಲ್ಲಿ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು ಪರ ಚುನಾವಣಾ ಪ್ರಚಾರ ಮಾಡುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ.
ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ,ಅಲ್ಲಲ್ಲೆ ಗ್ರಾಮವಾಸ್ತವ್ಯ ಮಾಡುವ ಮೂಲಕ ಹರಿಜನ,ದಲಿತ ಎಂದು ಜಾತಿತಾರತಮ್ಯ ಮಾಡದೇ ಎಲ್ಲಾ ಜನಾಂಗದವರು ಒಂದೇ ಎಂದು ಭಾವಿಸಿ ಅವರ ಸಂಕಷ್ಟವನ್ನು ತಿಳಿದಿದ್ದೇನೆ. ಆಗ ನನ್ನ ಗ್ರಾಮವಾಸ್ತವ್ಯದ ಬಗ್ಗೆ ಲೇವಡಿ ಮಾಡಿದ ಕಾಂಗ್ರೇಸಿಗರು ಇದೇ ಕಾರ್ಯವನ್ನೇ ರಾಹುಲ್ ಗಾಂಧಿಯವರ ಮೂಲಕ ಮಾಡಿಸಿ ನಾಟಕೀಯವಾಗಿ ಜನರಲ್ಲಿ ಮತಯಾಚಿಸುತ್ತಿದ್ದಾರೆ. ಅಲ್ಲದೆ ಕೇಂದ್ರದ ಕಾಂಗ್ರೆಸ್ ಸರ್ಕಾರ ನಮ್ಮ ರಾಜ್ಯದಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಿಸುವ ಮೂಲಕ ತಮಿಳುನಾಡಿಗೆ ಮಾರುಹೋಗಿದ್ದು,ಕರ್ನಾಟಕ ರಾಜ್ಯವನ್ನು ಕಡೆಗಣಿಸಿದೆ.ಇಂತಹ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯದ ಮುಂದಿನ ಸ್ಥಿತಿಯನ್ನು ಯಾವ ಮಟ್ಟಕ್ಕೆ ಕೊಂಡೈಯುತ್ತಾರೆ ಎಂಬುದನ್ನು ಮತದಾರರು ಪರಾಮರ್ಷಿಸಬೇಕಿದೆ ಎಂದರು.


ಜೆಡಿಎಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ನೆಪ ಮಾತ್ರಕ್ಕೆ ಬಿಡುಗಡೆ ಮಾಡಿಲ್ಲ,ರಾಜ್ಯದ ಹಿತವನ್ನು ಮನಗಂಡು ಹತ್ತಾರು ಯೋಜನೆಗಳನ್ನು ಒಳಗೊಂಡಂತೆ,ಅದರಲ್ಲೂ ಹೆಚ್ಚಾಗಿ ರೈತರಿಗೆ ನೆರವಾಗುವಂತಹ ರೂಪುರೇಷೆಗಳನ್ನು ಸಿದ್ದಪಡಿಸಲಾಗಿದ್ದು,ಅಂಗವಿಕಲರಿಗೆ,ವಿಧವೆಯರಿಗೆ,ವಯೋವೃದ್ದರಿಗೆ ಎರಡು ಸಾವಿರದವರೆಗೆ ಮಾಸಾಶನ ನೀಡುವುದಾಗಿದ್ದು,ಎಪ್ಪತ್ತುವರ್ಷ ಮೇಲ್ಪಟ್ಟವರಿಗೆ ತಿಂಗಳಿಗೆ ಐದುಸಾವಿರ ನೀಡುವ ಮೂಲಕ ಅವರುಗಳು ತಮ್ಮ ವೃದ್ದಾಪ್ಯದಲ್ಲಿ ಯಾರ ಹಂಗಿಲ್ಲದೆ ಜೀವನ ನಡೆಸುವಂತೆ ಮಾಡುವ ಗುರಿ ಹೊಂದಿದೆ.ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಮುಗಿಸಿ ಕೆಲಸವಿಲ್ಲದೆ ಇರುವವರಿಗೆ ತಿಂಗಳಿಗೆ ಹತ್ತುಸಾವಿರ ಸಂಬಳ ದೊರೆಯುವಂತಹ ಉದ್ಯೋಗಗಳನ್ನು ಕಲ್ಪಿಸಿ ಕೊಡುವ ನಿಲುವು ಹೊಂದಿರುವುದಾಗಿ ತಿಳಿಸಿದ ಅವರು ಪ್ರಸ್ತುತ ರೈತರು ತಾವು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರೆಯದೆ , ಬೆಳೆ ಬೆಳೆಯಲು ಮಾಡಿದ್ದ ಸಾಲವನ್ನು ತೀರಿಸಲಾಗದೇ ಅನೇಕ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ನಮ್ಮ ಕಣ್ಮುಂದಿದ್ದು ರೈತರು ಬೆಳೆದ ಬೆಳೆಗಳಿಗೆ ಸೂಕ್ತ ರೀತಿಯಲ್ಲಿ ಪ್ರೋತ್ಸಾಹಧನ ನೀಡುವ ಮೂಲಕ ಅವರಿಗೆ ನೆರವಾಗುವುದಾಗಿ ತಿಳಿಸಿದ್ದಾರೆ.


ಸಿ.ಬಿ.ಸುರೇಶ್ ಬಾಬು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು.ಬಡವ ಬಲ್ಲಿದರಿಗೆ ಸದಾ ಸ್ಪಂದಿಸುತ್ತಾ ಬಂದಿದ್ದು,ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಹೊಂದಿದವರಾಗಿದ್ದಾರೆ.ಇವರ ತಂದೆ ಬಸವಯ್ಯ ಸಚಿವರಾಗಿದ್ದು ಹೊರತು ಪಡಿಸಿದರೆ ಇತ್ತೀಚಿನವರೆಗೆ ಚಿ.ನಾ.ಹಳ್ಳಿಯವರಿಗೆ ಸಚಿವ ಸ್ಥಾನ ದೊರೆಯದಿರುವುದು ದುರಂತ.ಈ ಬಾರಿ ಚುನಾವಣೆಯಲ್ಲಿ ಸುರೇಶ್ ಬಾಬು ಗೆಲ್ಲಿಸಿದಲ್ಲಿ ಜೆಡಿಎಸ್ ನಿಂದ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ತಿಳಿಸಿದರು. 


ಚಿ.ನಾ.ಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಶಾಸಕ ಸಿ.ಬಿ.ಸುರೇಶ್ ಬಾಬು ತಮ್ಮ ಸಾಧನೆಯ ಬಗ್ಗೆ ವಿವರಿಸಿ ಕ್ಷೇತ್ರದ ಅಭಿವೃದ್ದಿಗಾಗಿ ಮತ್ತೊಂದು ಬಾರಿ ಚುನಾಯಿಸಬೇಕೆಂದು ಕೋರಿದರು. ಸಮಾರಂಭದಲ್ಲಿ ಹಿರಿಯೂರು ಕ್ಷೇತ್ರದ ಅಭ್ಯರ್ಥಿ ಎ.ಕೃಷ್ಣಪ್ಪ ಮಾತನಾಡಿದರು,ಜೆಡಿಎಸ್ ಜಿಲ್ಲಾಧ್ಯಕ್ಷ ಹುಲಿನಾಯ್ಕರ್,ಜಿ.ಪಂ.ಸದಸ್ಯೆಯರಾದ ಮಂಜುಳಾ,ಜಾನಮ್ಮ,ಮುಖಂಡರಾದ ಮಹದೇವಪ್ಪ,ರಾಮಹಾಲ್ ನ ಬಾಲೇಶ್,ತಿಮ್ಮಯ್ಯ, ನಂದಿಹಳ್ಳಿ ಶಿವಣ್ಣ,ವಕೀಲ ಸದಾಶಿವಯ್ಯ,ಮೋಹನ್, ಬುಕ್ಕಾಪಟ್ಟಣ ಜಯಪ್ರಕಾಶ್,ರೇವಣ್ಣಓಡೆಯರ್ ಸೇರಿದಂತೆ ಅಪಾರ ಸಂಖ್ಯೆಯ ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.

ಹುಳಿಯಾರಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು ಪರ ಮಾಜಿ ಸಿಎಂ ಕುಮಾರಸ್ವಾಮಿ ಮತಯಾಚಿಸಿದರು.ಎ.ಕೃಷ್ಣಪ್ಪ ಇದ್ದಾರೆ.
ಗ್ರೂಪ್ ಫೋಟೊ;ಶಾಸಕರೊಂದಿಗೆ ಅಭಿಮಾನಿಗಳು
ಕುಮಾರಣ್ಣನ ನಿರೀಕ್ಷೆಯಲ್ಲಿ......
ಅಂತೂ ಬಂತು...
ಇಳಿಸ್ಕೊಳಕ್ಕೆ ರೆಡಿ.
ಎಲ್ರಿಗೂ ನಮಸ್ಕಾರ
ಆಯ್ತಪ್ಪ...ಬಂದೆ ತಡಿರೀ...ಮಾತಾಡ್ತೀನಿ

ಅಬ್ಬಬ್ಬಾ ಅಂತೂ ಕುಮಾರಣ್ಣ ನನ್ನ ಪರ ಮತಯಾಚನೆ ಮಾಡಿದರು









ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.