ವಿಷಯಕ್ಕೆ ಹೋಗಿ

ಜೆಡಿಎಸ್ ರಾಜ್ಯದ ಚುಕ್ಕಾಣಿ ಹಿಡಿದರೆ ರೈತ ಸಂಪೂರ್ಣ ಸಾಲ ಮನ್ನಾ : ಹೆಚ್ಡಿಕೆ ಭರವಸೆ

                ರೈತನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ಆಡಳಿತ ನಡೆಸಲು ಮುಂದಾದ ಬಿಜೆಪಿ ಸರ್ಕಾರ ರಾಜ್ಯದ ರೈತರ ಹಿತವನ್ನು ಕಾಪಾಡುವುದನ್ನು ಮರೆತು ತಮ್ಮದೇ ಆದ ಆಡಳಿತವನ್ನು ನಡೆಸುತ್ತಾ ಹಲವಾರು ಹಗರಣಗಳನ್ನು ಮಾಡುವ ಮೂಲಕ ರಾಜ್ಯವನ್ನು ಕೊಳ್ಳೆ ಹೊಡೆಯುವ ಕಾರ್ಯದಲ್ಲಿ ತೊಡಗಿದ್ದಾರೆ,ಈಗ ಇದಕ್ಕೆಲ್ಲಾ ಕಡಿವಾಣ ಹಾಕಿ ರಾಜ್ಯದಲ್ಲಿ ಬದಲಾವಣೇ ತರುವ ನಿಟ್ಟಿನಲ್ಲಿ ಈಗಿನ ಚುನಾವಣೆಯಲ್ಲಿ ಮತದಾರ ಎಚ್ಚೆತ್ತು ಕೊಂಡು ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಬಹುಮತದಿಂದ ಆಯ್ಕೆ ಮಾಡಿದಲ್ಲಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ಮೊದಲ ದಿನವೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಮಾಜಿ ಸಿಎಂ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.


              ಚಿಕ್ಕನಾಯಕನಹಳ್ಳಿ ಕ್ಷೇತ್ರದ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು ಪರ ಪ್ರಚಾರಕ್ಕಾಗಿ ಹುಳಿಯಾರಿಗೆ ಆಗಮಿಸಿದ್ದ ಅವರು ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದರು.


ಹುಳಿಯಾರಿನಲ್ಲಿ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು ಪರ ಚುನಾವಣಾ ಪ್ರಚಾರ ಮಾಡುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ.
ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ,ಅಲ್ಲಲ್ಲೆ ಗ್ರಾಮವಾಸ್ತವ್ಯ ಮಾಡುವ ಮೂಲಕ ಹರಿಜನ,ದಲಿತ ಎಂದು ಜಾತಿತಾರತಮ್ಯ ಮಾಡದೇ ಎಲ್ಲಾ ಜನಾಂಗದವರು ಒಂದೇ ಎಂದು ಭಾವಿಸಿ ಅವರ ಸಂಕಷ್ಟವನ್ನು ತಿಳಿದಿದ್ದೇನೆ. ಆಗ ನನ್ನ ಗ್ರಾಮವಾಸ್ತವ್ಯದ ಬಗ್ಗೆ ಲೇವಡಿ ಮಾಡಿದ ಕಾಂಗ್ರೇಸಿಗರು ಇದೇ ಕಾರ್ಯವನ್ನೇ ರಾಹುಲ್ ಗಾಂಧಿಯವರ ಮೂಲಕ ಮಾಡಿಸಿ ನಾಟಕೀಯವಾಗಿ ಜನರಲ್ಲಿ ಮತಯಾಚಿಸುತ್ತಿದ್ದಾರೆ. ಅಲ್ಲದೆ ಕೇಂದ್ರದ ಕಾಂಗ್ರೆಸ್ ಸರ್ಕಾರ ನಮ್ಮ ರಾಜ್ಯದಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಿಸುವ ಮೂಲಕ ತಮಿಳುನಾಡಿಗೆ ಮಾರುಹೋಗಿದ್ದು,ಕರ್ನಾಟಕ ರಾಜ್ಯವನ್ನು ಕಡೆಗಣಿಸಿದೆ.ಇಂತಹ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯದ ಮುಂದಿನ ಸ್ಥಿತಿಯನ್ನು ಯಾವ ಮಟ್ಟಕ್ಕೆ ಕೊಂಡೈಯುತ್ತಾರೆ ಎಂಬುದನ್ನು ಮತದಾರರು ಪರಾಮರ್ಷಿಸಬೇಕಿದೆ ಎಂದರು.


ಜೆಡಿಎಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ನೆಪ ಮಾತ್ರಕ್ಕೆ ಬಿಡುಗಡೆ ಮಾಡಿಲ್ಲ,ರಾಜ್ಯದ ಹಿತವನ್ನು ಮನಗಂಡು ಹತ್ತಾರು ಯೋಜನೆಗಳನ್ನು ಒಳಗೊಂಡಂತೆ,ಅದರಲ್ಲೂ ಹೆಚ್ಚಾಗಿ ರೈತರಿಗೆ ನೆರವಾಗುವಂತಹ ರೂಪುರೇಷೆಗಳನ್ನು ಸಿದ್ದಪಡಿಸಲಾಗಿದ್ದು,ಅಂಗವಿಕಲರಿಗೆ,ವಿಧವೆಯರಿಗೆ,ವಯೋವೃದ್ದರಿಗೆ ಎರಡು ಸಾವಿರದವರೆಗೆ ಮಾಸಾಶನ ನೀಡುವುದಾಗಿದ್ದು,ಎಪ್ಪತ್ತುವರ್ಷ ಮೇಲ್ಪಟ್ಟವರಿಗೆ ತಿಂಗಳಿಗೆ ಐದುಸಾವಿರ ನೀಡುವ ಮೂಲಕ ಅವರುಗಳು ತಮ್ಮ ವೃದ್ದಾಪ್ಯದಲ್ಲಿ ಯಾರ ಹಂಗಿಲ್ಲದೆ ಜೀವನ ನಡೆಸುವಂತೆ ಮಾಡುವ ಗುರಿ ಹೊಂದಿದೆ.ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಮುಗಿಸಿ ಕೆಲಸವಿಲ್ಲದೆ ಇರುವವರಿಗೆ ತಿಂಗಳಿಗೆ ಹತ್ತುಸಾವಿರ ಸಂಬಳ ದೊರೆಯುವಂತಹ ಉದ್ಯೋಗಗಳನ್ನು ಕಲ್ಪಿಸಿ ಕೊಡುವ ನಿಲುವು ಹೊಂದಿರುವುದಾಗಿ ತಿಳಿಸಿದ ಅವರು ಪ್ರಸ್ತುತ ರೈತರು ತಾವು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರೆಯದೆ , ಬೆಳೆ ಬೆಳೆಯಲು ಮಾಡಿದ್ದ ಸಾಲವನ್ನು ತೀರಿಸಲಾಗದೇ ಅನೇಕ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ನಮ್ಮ ಕಣ್ಮುಂದಿದ್ದು ರೈತರು ಬೆಳೆದ ಬೆಳೆಗಳಿಗೆ ಸೂಕ್ತ ರೀತಿಯಲ್ಲಿ ಪ್ರೋತ್ಸಾಹಧನ ನೀಡುವ ಮೂಲಕ ಅವರಿಗೆ ನೆರವಾಗುವುದಾಗಿ ತಿಳಿಸಿದ್ದಾರೆ.


ಸಿ.ಬಿ.ಸುರೇಶ್ ಬಾಬು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು.ಬಡವ ಬಲ್ಲಿದರಿಗೆ ಸದಾ ಸ್ಪಂದಿಸುತ್ತಾ ಬಂದಿದ್ದು,ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಹೊಂದಿದವರಾಗಿದ್ದಾರೆ.ಇವರ ತಂದೆ ಬಸವಯ್ಯ ಸಚಿವರಾಗಿದ್ದು ಹೊರತು ಪಡಿಸಿದರೆ ಇತ್ತೀಚಿನವರೆಗೆ ಚಿ.ನಾ.ಹಳ್ಳಿಯವರಿಗೆ ಸಚಿವ ಸ್ಥಾನ ದೊರೆಯದಿರುವುದು ದುರಂತ.ಈ ಬಾರಿ ಚುನಾವಣೆಯಲ್ಲಿ ಸುರೇಶ್ ಬಾಬು ಗೆಲ್ಲಿಸಿದಲ್ಲಿ ಜೆಡಿಎಸ್ ನಿಂದ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ತಿಳಿಸಿದರು. 


ಚಿ.ನಾ.ಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಶಾಸಕ ಸಿ.ಬಿ.ಸುರೇಶ್ ಬಾಬು ತಮ್ಮ ಸಾಧನೆಯ ಬಗ್ಗೆ ವಿವರಿಸಿ ಕ್ಷೇತ್ರದ ಅಭಿವೃದ್ದಿಗಾಗಿ ಮತ್ತೊಂದು ಬಾರಿ ಚುನಾಯಿಸಬೇಕೆಂದು ಕೋರಿದರು. ಸಮಾರಂಭದಲ್ಲಿ ಹಿರಿಯೂರು ಕ್ಷೇತ್ರದ ಅಭ್ಯರ್ಥಿ ಎ.ಕೃಷ್ಣಪ್ಪ ಮಾತನಾಡಿದರು,ಜೆಡಿಎಸ್ ಜಿಲ್ಲಾಧ್ಯಕ್ಷ ಹುಲಿನಾಯ್ಕರ್,ಜಿ.ಪಂ.ಸದಸ್ಯೆಯರಾದ ಮಂಜುಳಾ,ಜಾನಮ್ಮ,ಮುಖಂಡರಾದ ಮಹದೇವಪ್ಪ,ರಾಮಹಾಲ್ ನ ಬಾಲೇಶ್,ತಿಮ್ಮಯ್ಯ, ನಂದಿಹಳ್ಳಿ ಶಿವಣ್ಣ,ವಕೀಲ ಸದಾಶಿವಯ್ಯ,ಮೋಹನ್, ಬುಕ್ಕಾಪಟ್ಟಣ ಜಯಪ್ರಕಾಶ್,ರೇವಣ್ಣಓಡೆಯರ್ ಸೇರಿದಂತೆ ಅಪಾರ ಸಂಖ್ಯೆಯ ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.

ಹುಳಿಯಾರಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು ಪರ ಮಾಜಿ ಸಿಎಂ ಕುಮಾರಸ್ವಾಮಿ ಮತಯಾಚಿಸಿದರು.ಎ.ಕೃಷ್ಣಪ್ಪ ಇದ್ದಾರೆ.
ಗ್ರೂಪ್ ಫೋಟೊ;ಶಾಸಕರೊಂದಿಗೆ ಅಭಿಮಾನಿಗಳು
ಕುಮಾರಣ್ಣನ ನಿರೀಕ್ಷೆಯಲ್ಲಿ......
ಅಂತೂ ಬಂತು...
ಇಳಿಸ್ಕೊಳಕ್ಕೆ ರೆಡಿ.
ಎಲ್ರಿಗೂ ನಮಸ್ಕಾರ
ಆಯ್ತಪ್ಪ...ಬಂದೆ ತಡಿರೀ...ಮಾತಾಡ್ತೀನಿ

ಅಬ್ಬಬ್ಬಾ ಅಂತೂ ಕುಮಾರಣ್ಣ ನನ್ನ ಪರ ಮತಯಾಚನೆ ಮಾಡಿದರು









ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...