ವಿಷಯಕ್ಕೆ ಹೋಗಿ

ಮದ್ಯವ್ಯಸನಿಗಳೇ ಮನಸ್ಸನು ಪಕ್ವವಾಗಿಸಿಕೊಂಡು ಕುಡಿತವನ್ನು ಬಿಡಿ : ಸ್ವಾಮೀಜಿ

           
    ಹುಳಿಯಾರಿನ ಸೀತಾರಾಮ ಕಲ್ಯಾಣಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯವರು ಆಯೋಜಿಸಿದ್ದ 577ನೇ ಮದ್ಯವರ್ಜನ  ಶಿಬಿರದ ಉದ್ಘಾಟನೆಯಲ್ಲಿ ಅಧ್ಯಕ್ಷ ಎಂಎಸ್ ಆರ್ ನಟರಾಜ್ ಗುಪ್ತ, ಸಿದ್ದರಾಮದೇಶಿಕೇಂದ್ರ ಮಹಾಸ್ವಾಮಿ, ಪುರುಷೋತ್ತಮ್, ಹೆಚ್.ಎಸ್.ಲಕ್ಷ್ಮಿನರಸಿಂಹಯ್ಯ, ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್ ಇದ್ದಾರೆ.
    ಕುಡಿತಕ್ಕೆ ದಾಸರಾಗಿ ಜೀವನದಲ್ಲಿ ತಾವು ನೆಮ್ಮದಿಯಿಂದಿರದೆ ತಮ್ಮ ಸಂಸಾರದಲ್ಲಿನ ನೆಮ್ಮದೆಯನ್ನು ಹಾಳುಮಾಡಿಕೊಂಡು,ಸಮಾಜದ ಜನರಿಂದ ದಿನ ನಿತ್ಯ ಹಿಡಿಶಾಪ ಹಾಕಿಸಿಕೊಳ್ಳುತ್ತಾ, ಜೀವನವನ್ನು ನರಕದತ್ತ ಕೊಂಡೈಯುತ್ತಿರುವ ಮದ್ಯವ್ಯಸನಿಗಳೇ ತಮ್ಮ ಮನಸ್ಸನ್ನು ಪರಿಪಕ್ವವಾಗಿಸಿಕೊಂಡು ಕುಡಿತವನ್ನು ಬಿಟ್ಟು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಅರಸೀಕೆರೆ ಮಹಾಸಂಸ್ಥಾನದ ಸಿದ್ದರಾಮದೇಶಿಕೇಂದ್ರ ಮಹಾಸ್ವಾಮಿಗಳು ಕಿವಿಮಾತು ಹೇಳಿದರು.
                 ಹುಳಿಯಾರಿನ ಸೀತಾರಾಮ ಕಲ್ಯಾಣಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಗ್ರಾಮಾಭಿವೃದ್ದಿ ಯೋಜನೆಯಡಿ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ,ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ,ವಿಪ್ರಪ್ರತಿಷ್ಠಾನ,ಮದ್ಯವರ್ಜನ ವ್ಯವಸ್ಥಾಪನ ಸಮಿತಿಯ ಸಹಯೋಗದಲ್ಲಿ ಆಯೋಜಿಸಿರುವ ಒಂದುವಾರಗಳ ಕಾಲದ 577ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ ನೆರವೇರಿಸಿ, ಅವರು ಆಶೀರ್ವಚನ ನೀಡಿದರು.
          ಮಾನವ ಜನ್ಮವೆಂಬುದು ಶ್ರೇಷ್ಥವಾದ್ದು,ನಾವು ನಮ್ಮ ಮನಸ್ಸಿನ ಚೆಂಚಲತೆಗೆ ಬಲಿಯಾಗಿ ಹತ್ತು ಹಲವು ಕಾರ್ಯಗಳನ್ನು ಕಾರಣವಿಲ್ಲದೆ ಮಾಡುತ್ತೇವೆ ಅಂತಹ ಕಾರ್ಯಗಳಗಳಲ್ಲಿ ಮದ್ಯಪಾನ ಮಾಡುವುದನ್ನು ಕಲಿಯುತ್ತಾರೆ. ಆದರೆ ಕುಡಿಯುವರಿಗೆ ತಾವು ಮಾಡುತ್ತಿರುವುದು ತಪ್ಪು,ಅದರಿಂದ ಆಗುವಂತ ನಷ್ಟ,ತೊಂದರೆ,ಸಮಸ್ಯೆಗಳು ಎಂತಹವು ಎಂಬುದನ್ನು ಮನವರಿಕೆ ಮಾಡಿಕೊಡುವ ಕಾರ್ಯ ಆಗಬೇಕಿದ್ದು,ಆ ಕಾರ್ಯಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆ ಮುಂದಾಗಿದೆ. ಜೀವನದಲ್ಲಿ ನಮ್ಮ ನಡೆ,ನುಡಿ,ದಿನನಿತ್ಯದ ಕಾರ್ಯಚಟುವಟಿಕೆಗಳು ಉತ್ತವಾಗಿದ್ದಾಗ ನಮ್ಮನ್ನು ಸಮಾಜ ಗೌರವಿಸುತ್ತದೆ ಎಂದರು.
ಸಿದ್ದರಾಮದೇಶಿಕೇಂದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡುತ್ತಿರುವುದು
                  ಚುನಾವಣೆ ಸಂಧರ್ಭಗಳಲ್ಲಿ ಕುಡಿತದ ತೀವ್ರತೆ ಹೆಚ್ಚಾಗುವುದು ಸರ್ವೆ ಸಾಮಾನ್ಯವಾಗಿದ್ದು,ಸಾಕಷ್ಟು ಜನ ಕುಡಿತಕ್ಕೆ ದಾಸರಾಗುತ್ತಾ ಉತ್ತಮ ಜನಪ್ರತಿನಿಧಿಗಳ ಆಯ್ಕೆ ಮಾಡುವಲ್ಲಿ ವಿಫಲರಾಗುತ್ತಿದ್ದು,ಬಾಟಲಿಯ ಆಸೆಗೆ ಬಾಯೊಡ್ಡದೇ ಯಾರು ತಮ್ಮ ಸಮಾಜಕ್ಕೆ ಉತ್ತಮ ಕಾರ್ಯ ಮಾಡುತ್ತಾರೆ ಎಂಬುದನ್ನು ಅರಿತುಕೊಂಡು ಮತಚಲಾಯಿಸಿ ಎಂದರು.ಮಾನವನ ಜೀವನದಲ್ಲಿ ಬದಲಾವಣೆಯಾದರೆ ಸಮಾಜವೇ ಬದಲಾಣೆಯಾಗುತ್ತದೆ ಇದಕ್ಕೆಲ್ಲಾ ನಮ್ಮ ನಾಗರೀಕತೆಗಳು ಬೆಳೆದು ಬಂದ ಮಾರ್ಗ ನಮಗೆಲ್ಲ ತಿಳಿದಿರುವ ವಿಷಯವಾಗಿದೆ ಎಂದರು.ಮದ್ಯವರ್ಜನ ಶಿಭಿರದಲ್ಲಿ ಪಾಲ್ಗೊಂಡಿರುವ ಮದ್ಯವ್ಯಸನಿಗಳು ಮುಂದಿನ ಒಂದು ವಾರದ ನಂತರ ಪಾನಮುಕ್ತರಾಗಿ ದೇಶ,ತಮ್ಮ ಸಂಸಾರಕ್ಕೆ ಉತ್ತಮ ಪ್ರಜೆಯಾಗಿ ಎಂದು ಹಾರೈಸಿದರು.
          ಸಮಾರಂಭದಲ್ಲಿ ಜಿಲ್ಲಾ ನಿರ್ದೇಶಕ ಪುರುಷೋತ್ತಮ್,ಮದ್ಯವರ್ಜನ ಶಿಬಿರದ ಅಧ್ಯಕ್ಷ ನಟರಾಜ್ ಗುಪ್ತ,ನಿವೃತ್ತ ಶಿಕ್ಷಕ ಹೆಚ್.ಎಸ್.ಲಕ್ಷ್ಮಿನರ್ಸಿಂಹಯ್ಯ,ಮುಖಂಡರಾದ ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್,ಧರ್ಮಸ್ಥಳ ಸಂಘದ ಶಿಭಿರಾಧಿಕಾರಿ ನಾಗೇಶ್,ಆರೋಗ್ಯಾಧಿಕಾರಿ ಜಯಲಕ್ಷ್ಮಿ, ರೋಹಿತಾಕ್ಷ,ಕಮಾಲಕರ್,ಕೆಂಕೆರೆ ಲೋಕೇಶ್,ಹೇಮಲತ ಸೇರಿದಂತೆ ಹೋಬಳಿಯ ಎಲ್ಲಾ ಧರ್ಮಸ್ಥಳ ಸಂಘದ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...