ವಿಷಯಕ್ಕೆ ಹೋಗಿ

ಮದ್ಯವ್ಯಸನಿಗಳೇ ಮನಸ್ಸನು ಪಕ್ವವಾಗಿಸಿಕೊಂಡು ಕುಡಿತವನ್ನು ಬಿಡಿ : ಸ್ವಾಮೀಜಿ

           
    ಹುಳಿಯಾರಿನ ಸೀತಾರಾಮ ಕಲ್ಯಾಣಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯವರು ಆಯೋಜಿಸಿದ್ದ 577ನೇ ಮದ್ಯವರ್ಜನ  ಶಿಬಿರದ ಉದ್ಘಾಟನೆಯಲ್ಲಿ ಅಧ್ಯಕ್ಷ ಎಂಎಸ್ ಆರ್ ನಟರಾಜ್ ಗುಪ್ತ, ಸಿದ್ದರಾಮದೇಶಿಕೇಂದ್ರ ಮಹಾಸ್ವಾಮಿ, ಪುರುಷೋತ್ತಮ್, ಹೆಚ್.ಎಸ್.ಲಕ್ಷ್ಮಿನರಸಿಂಹಯ್ಯ, ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್ ಇದ್ದಾರೆ.
    ಕುಡಿತಕ್ಕೆ ದಾಸರಾಗಿ ಜೀವನದಲ್ಲಿ ತಾವು ನೆಮ್ಮದಿಯಿಂದಿರದೆ ತಮ್ಮ ಸಂಸಾರದಲ್ಲಿನ ನೆಮ್ಮದೆಯನ್ನು ಹಾಳುಮಾಡಿಕೊಂಡು,ಸಮಾಜದ ಜನರಿಂದ ದಿನ ನಿತ್ಯ ಹಿಡಿಶಾಪ ಹಾಕಿಸಿಕೊಳ್ಳುತ್ತಾ, ಜೀವನವನ್ನು ನರಕದತ್ತ ಕೊಂಡೈಯುತ್ತಿರುವ ಮದ್ಯವ್ಯಸನಿಗಳೇ ತಮ್ಮ ಮನಸ್ಸನ್ನು ಪರಿಪಕ್ವವಾಗಿಸಿಕೊಂಡು ಕುಡಿತವನ್ನು ಬಿಟ್ಟು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಅರಸೀಕೆರೆ ಮಹಾಸಂಸ್ಥಾನದ ಸಿದ್ದರಾಮದೇಶಿಕೇಂದ್ರ ಮಹಾಸ್ವಾಮಿಗಳು ಕಿವಿಮಾತು ಹೇಳಿದರು.
                 ಹುಳಿಯಾರಿನ ಸೀತಾರಾಮ ಕಲ್ಯಾಣಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಗ್ರಾಮಾಭಿವೃದ್ದಿ ಯೋಜನೆಯಡಿ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ,ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ,ವಿಪ್ರಪ್ರತಿಷ್ಠಾನ,ಮದ್ಯವರ್ಜನ ವ್ಯವಸ್ಥಾಪನ ಸಮಿತಿಯ ಸಹಯೋಗದಲ್ಲಿ ಆಯೋಜಿಸಿರುವ ಒಂದುವಾರಗಳ ಕಾಲದ 577ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ ನೆರವೇರಿಸಿ, ಅವರು ಆಶೀರ್ವಚನ ನೀಡಿದರು.
          ಮಾನವ ಜನ್ಮವೆಂಬುದು ಶ್ರೇಷ್ಥವಾದ್ದು,ನಾವು ನಮ್ಮ ಮನಸ್ಸಿನ ಚೆಂಚಲತೆಗೆ ಬಲಿಯಾಗಿ ಹತ್ತು ಹಲವು ಕಾರ್ಯಗಳನ್ನು ಕಾರಣವಿಲ್ಲದೆ ಮಾಡುತ್ತೇವೆ ಅಂತಹ ಕಾರ್ಯಗಳಗಳಲ್ಲಿ ಮದ್ಯಪಾನ ಮಾಡುವುದನ್ನು ಕಲಿಯುತ್ತಾರೆ. ಆದರೆ ಕುಡಿಯುವರಿಗೆ ತಾವು ಮಾಡುತ್ತಿರುವುದು ತಪ್ಪು,ಅದರಿಂದ ಆಗುವಂತ ನಷ್ಟ,ತೊಂದರೆ,ಸಮಸ್ಯೆಗಳು ಎಂತಹವು ಎಂಬುದನ್ನು ಮನವರಿಕೆ ಮಾಡಿಕೊಡುವ ಕಾರ್ಯ ಆಗಬೇಕಿದ್ದು,ಆ ಕಾರ್ಯಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆ ಮುಂದಾಗಿದೆ. ಜೀವನದಲ್ಲಿ ನಮ್ಮ ನಡೆ,ನುಡಿ,ದಿನನಿತ್ಯದ ಕಾರ್ಯಚಟುವಟಿಕೆಗಳು ಉತ್ತವಾಗಿದ್ದಾಗ ನಮ್ಮನ್ನು ಸಮಾಜ ಗೌರವಿಸುತ್ತದೆ ಎಂದರು.
ಸಿದ್ದರಾಮದೇಶಿಕೇಂದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡುತ್ತಿರುವುದು
                  ಚುನಾವಣೆ ಸಂಧರ್ಭಗಳಲ್ಲಿ ಕುಡಿತದ ತೀವ್ರತೆ ಹೆಚ್ಚಾಗುವುದು ಸರ್ವೆ ಸಾಮಾನ್ಯವಾಗಿದ್ದು,ಸಾಕಷ್ಟು ಜನ ಕುಡಿತಕ್ಕೆ ದಾಸರಾಗುತ್ತಾ ಉತ್ತಮ ಜನಪ್ರತಿನಿಧಿಗಳ ಆಯ್ಕೆ ಮಾಡುವಲ್ಲಿ ವಿಫಲರಾಗುತ್ತಿದ್ದು,ಬಾಟಲಿಯ ಆಸೆಗೆ ಬಾಯೊಡ್ಡದೇ ಯಾರು ತಮ್ಮ ಸಮಾಜಕ್ಕೆ ಉತ್ತಮ ಕಾರ್ಯ ಮಾಡುತ್ತಾರೆ ಎಂಬುದನ್ನು ಅರಿತುಕೊಂಡು ಮತಚಲಾಯಿಸಿ ಎಂದರು.ಮಾನವನ ಜೀವನದಲ್ಲಿ ಬದಲಾವಣೆಯಾದರೆ ಸಮಾಜವೇ ಬದಲಾಣೆಯಾಗುತ್ತದೆ ಇದಕ್ಕೆಲ್ಲಾ ನಮ್ಮ ನಾಗರೀಕತೆಗಳು ಬೆಳೆದು ಬಂದ ಮಾರ್ಗ ನಮಗೆಲ್ಲ ತಿಳಿದಿರುವ ವಿಷಯವಾಗಿದೆ ಎಂದರು.ಮದ್ಯವರ್ಜನ ಶಿಭಿರದಲ್ಲಿ ಪಾಲ್ಗೊಂಡಿರುವ ಮದ್ಯವ್ಯಸನಿಗಳು ಮುಂದಿನ ಒಂದು ವಾರದ ನಂತರ ಪಾನಮುಕ್ತರಾಗಿ ದೇಶ,ತಮ್ಮ ಸಂಸಾರಕ್ಕೆ ಉತ್ತಮ ಪ್ರಜೆಯಾಗಿ ಎಂದು ಹಾರೈಸಿದರು.
          ಸಮಾರಂಭದಲ್ಲಿ ಜಿಲ್ಲಾ ನಿರ್ದೇಶಕ ಪುರುಷೋತ್ತಮ್,ಮದ್ಯವರ್ಜನ ಶಿಬಿರದ ಅಧ್ಯಕ್ಷ ನಟರಾಜ್ ಗುಪ್ತ,ನಿವೃತ್ತ ಶಿಕ್ಷಕ ಹೆಚ್.ಎಸ್.ಲಕ್ಷ್ಮಿನರ್ಸಿಂಹಯ್ಯ,ಮುಖಂಡರಾದ ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್,ಧರ್ಮಸ್ಥಳ ಸಂಘದ ಶಿಭಿರಾಧಿಕಾರಿ ನಾಗೇಶ್,ಆರೋಗ್ಯಾಧಿಕಾರಿ ಜಯಲಕ್ಷ್ಮಿ, ರೋಹಿತಾಕ್ಷ,ಕಮಾಲಕರ್,ಕೆಂಕೆರೆ ಲೋಕೇಶ್,ಹೇಮಲತ ಸೇರಿದಂತೆ ಹೋಬಳಿಯ ಎಲ್ಲಾ ಧರ್ಮಸ್ಥಳ ಸಂಘದ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...