ವಿಷಯಕ್ಕೆ ಹೋಗಿ

ನನಗೆ ಹೋರಾಟ ಮಾಡುವ ಶಕ್ತಿಯಿದೆ ,ಅವಕಾಶ ಕೊಡಿ : ಮಾಧುಸ್ವಾಮಿ

ಹುಳಿಯಾರು ಸಮೀಪದ ಚಿಕ್ಕಬಿದರೆ ಚಂದ್ರಣ್ಣನವರ ತೋಟದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಧುಸ್ವಾಮಿ ಮಾತನಾಡಿದರು.


               ರಾಜ್ಯ ಹಾಗೂ ತಮ್ಮ ಕ್ಷೇತ್ರದ ಅಭಿವೃದ್ದಿಯಲ್ಲಿನ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶಾಸಕರಾದವರು ಎಂತಹುದ್ದೇ ಹೋರಾಟಕ್ಕಾದರೂ ಸಿದ್ದರಿರಬೇಕು, ಆದರೆ ಕ್ಷೇತ್ರದ ಹಾಲಿ ಶಾಸಕರು ಇಂತಹ ಯಾವುದೇ ಗೂಜಿಗೆ ಹೋಗದೆ ತಮಗೂ ಹೋರಾಟಗಳಿಗೂ ಸಂಬಂಧವಿಲ್ಲ ಎಂಬಂತೆ ಇರುವುದನ್ನು ತಾವೆಲ್ಲಾ ಕಂಡಿದ್ದು, ನನಗೆ ಹೋರಾಟ ಮಾಡುವ ಶಕ್ತಿಯಿದೆ.ನನ್ನನ್ನು ಈ ಬಾರಿ ಗೆಲ್ಲಿಸುವ ಮೂಲಕ ಸದನದಲ್ಲಿ ನಿಮ್ಮಗಳ ಧ್ವನಿಯಾಗಲು, ಹೋರಾಟ ಮಾಡುಲು ಅವಕಾಶ ಮಾಡಿಕೊಡಿ ಎಂದು ಚಿ.ನಾ.ಹಳ್ಳಿ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಮಾಧುಸ್ವಾಮಿ ನುಡಿದರು.

ಹುಳಿಯಾರು ಸಮೀಪದ ಚಿಕ್ಕಬಿದರೆ ಚಂದ್ರಣ್ಣನವರ ತೋಟದಲ್ಲಿ ಆಯೋಜಿಸಿದ್ದ ಕೆಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಎಂಎಲ್ ಎ ಸ್ಥಾನವನ್ನು ಯಾವುದೊ ಒಂದು ಊರು, ಹೋಬಳಿ,ಕ್ಷೇತ್ರಕ್ಕೆ ಮಾತ್ರ ಸೀಮಿತ ಮಾಡಬೇಡಿ,ನಮಗೆಲ್ಲಾ ಗೆಲ್ಲುವುದಕ್ಕೆ ಒಂದು ಕ್ಷೇತ್ರ ಗೆದ್ದ ನಂತರ ಈಡಿ ರಾಜ್ಯಕ್ಕೆ ನಾವು ಶಾಸಕರಾಗುತ್ತೇವೆ. ರಾಜ್ಯಕ್ಕೆ ಮಾರಕವಾಗುವಂತ ಕಾರ್ಯಗಳ ವಿರುದ್ದ ಹೋರಾಟಕ್ಕೆ ಮುಂದಾಗಬೇಕಿದೆ ಎಂದರು. ಸದನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ, ಚರ್ಚೆ ಮಾಡ ಬೇಕೇ ಹೊರತು ಮೂಕ ಪ್ರೇಕ್ಷಕರಂತೆ ಕೂರುವುದು ಎಷ್ಟರಮಟ್ಟಿಗೆ ಸರಿ ಎಂದರು.

ತಾವು ಸದನದಲ್ಲಿದ್ದಾಗ ಪ್ರತಿಯೊಂದು ಬಿಲ್ ಪಾವತಿಸಲು ತಮ್ಮ ಕಡೆ ನೋಡಿ ನಂತರ ಅದನ್ನು ಪಾಸ್ ಮಾಡುತ್ತಿದ್ದರು, ಯಾವುದೇ ಒಂದು ಕಾನೂನು,ಬಿಲ್ ಗಳನ್ನು ಪಾಸ್ ಮಾಡುವಲ್ಲಿ ಅದರ ಸಮಗ್ರ ಮಾಹಿತಿ ಪಡೆಯಲು ಗಂಟೆಗಟ್ಟಲೇ ಚರ್ಚೆ ನಡೆಸುತ್ತಿದ್ದೇವು. ಆದರೆ ಈಗ ಪ್ರಶ್ನೆ ಮಾಡುವವರೇ ಇದಂತಾಗಿದ್ದು,ನಿಮಿಷಗಳಲ್ಲೇ ಬಿಲ್ ಗಳು ಪಾಸ್ ಆಗುತ್ತಿದ್ದು,ಕಾನೂನುಗಳ ರಚನೆಯಾಗುತ್ತಿವೆ ಇದರಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಸಂಭವಿಸುತ್ತಿದೆ ಎಂದು ವಿಷಾದಿಸಿದರು.

ಇಂದು ಸರ್ಕಾರಿ ಅಧಿಕಾರಿಗಳು ಮಾಡುವ ತಪ್ಪಿಗೆ ಸಾಮನ್ಯ ಜನ ಸರ್ಕಾರಿ ಕಛೇರಿಗಳ ಬಾಗಿಲಿಗೆ ಅಲೆಯುವಂತಾಗಿದೆ,ಪಹಣಿ ಬರೆಯುವಾಗ ತಪ್ಪು ಮಾಡುವ ಅಧಿಕಾರಿಗಳು ಅದನ್ನು ಸರಿ ಪಡಿಸಲು ನಿಮಿಷದ ಕೆಲಸವಾಗಿದ್ದರೂ ಸಹ ತಿದ್ದುಪಡಿ ಮಾಡಿಸಲು ದಂಡಕಟ್ಟಿ ತಿರುಗುವುದು ಸಾಮಾನ್ಯ ಜನರ ಪಾಡಗಿದೆ,ಇದನ್ನು ಕೇಳುವವರು ಯಾರು ಇಲ್ಲ,ರೈತರಿಗಾಗುವ ಅನ್ಯಾಯವನ್ನು ತಡೆಯಲು ಸಮರ್ಥರು ಬೇಕಿದೆ.ತಾವು ಯಾರಿಗೆ ಮತ ನೀಡಿದರೆ ತಮಗೆ ಉತ್ತಮ ಆಡಳಿತ ದೊರೆಯುತ್ತದೆ ಎಂಬುದನ್ನು ಇಂದು ಮತದಾರರು ಆಲೋಚನೆ ಮಾಡಬೇಕಿದ್ದು ಇದರ ಬದಲು, ಹಣ,ಮದ್ಯ ನೀಡುವವರಿಗೆ ತಾವು ಮತಹಾಕುತ್ತೇವೆಂದರೆ ನನ್ನದೇನು ಅಭ್ಯಂತರವಿಲ್ಲ ಎಂದರು

ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿರಾಜ್ ಕುಮಾರ್,ಜಿ.ಪಂ.ಸದಸ್ಯೆ ಲೋಹಿತಾ ಬಾಯಿ,ತಿರುಮಲಾಪುರ ಗ್ರಾ.ಪಂ.ಅಧ್ಯಕ್ಷೆ ರಾಜಮ್ಮ,ಜಿ.ಪಂ.ಮಾಜಿ ಸದಸ್ಯೆ ಲಕ್ಷ್ಮಿಅಂದಾನಪ್ಪ, ಮುಖಂಡರಾದ ಚಿಕ್ಕಬಿದರೆ ಚಂದ್ರಣ್ಣ, ಕೆಂಕೆರೆಶಿವಕುಮಾರ್,ಬಡ್ಡಿಪುಟ್ಟಣ್ಣ ಸೇರಿದಂತೆ ಕಾರ್ಯಕರ್ತರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...