ವಿಷಯಕ್ಕೆ ಹೋಗಿ

ನನಗೆ ಹೋರಾಟ ಮಾಡುವ ಶಕ್ತಿಯಿದೆ ,ಅವಕಾಶ ಕೊಡಿ : ಮಾಧುಸ್ವಾಮಿ

ಹುಳಿಯಾರು ಸಮೀಪದ ಚಿಕ್ಕಬಿದರೆ ಚಂದ್ರಣ್ಣನವರ ತೋಟದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಧುಸ್ವಾಮಿ ಮಾತನಾಡಿದರು.


               ರಾಜ್ಯ ಹಾಗೂ ತಮ್ಮ ಕ್ಷೇತ್ರದ ಅಭಿವೃದ್ದಿಯಲ್ಲಿನ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶಾಸಕರಾದವರು ಎಂತಹುದ್ದೇ ಹೋರಾಟಕ್ಕಾದರೂ ಸಿದ್ದರಿರಬೇಕು, ಆದರೆ ಕ್ಷೇತ್ರದ ಹಾಲಿ ಶಾಸಕರು ಇಂತಹ ಯಾವುದೇ ಗೂಜಿಗೆ ಹೋಗದೆ ತಮಗೂ ಹೋರಾಟಗಳಿಗೂ ಸಂಬಂಧವಿಲ್ಲ ಎಂಬಂತೆ ಇರುವುದನ್ನು ತಾವೆಲ್ಲಾ ಕಂಡಿದ್ದು, ನನಗೆ ಹೋರಾಟ ಮಾಡುವ ಶಕ್ತಿಯಿದೆ.ನನ್ನನ್ನು ಈ ಬಾರಿ ಗೆಲ್ಲಿಸುವ ಮೂಲಕ ಸದನದಲ್ಲಿ ನಿಮ್ಮಗಳ ಧ್ವನಿಯಾಗಲು, ಹೋರಾಟ ಮಾಡುಲು ಅವಕಾಶ ಮಾಡಿಕೊಡಿ ಎಂದು ಚಿ.ನಾ.ಹಳ್ಳಿ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಮಾಧುಸ್ವಾಮಿ ನುಡಿದರು.

ಹುಳಿಯಾರು ಸಮೀಪದ ಚಿಕ್ಕಬಿದರೆ ಚಂದ್ರಣ್ಣನವರ ತೋಟದಲ್ಲಿ ಆಯೋಜಿಸಿದ್ದ ಕೆಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಎಂಎಲ್ ಎ ಸ್ಥಾನವನ್ನು ಯಾವುದೊ ಒಂದು ಊರು, ಹೋಬಳಿ,ಕ್ಷೇತ್ರಕ್ಕೆ ಮಾತ್ರ ಸೀಮಿತ ಮಾಡಬೇಡಿ,ನಮಗೆಲ್ಲಾ ಗೆಲ್ಲುವುದಕ್ಕೆ ಒಂದು ಕ್ಷೇತ್ರ ಗೆದ್ದ ನಂತರ ಈಡಿ ರಾಜ್ಯಕ್ಕೆ ನಾವು ಶಾಸಕರಾಗುತ್ತೇವೆ. ರಾಜ್ಯಕ್ಕೆ ಮಾರಕವಾಗುವಂತ ಕಾರ್ಯಗಳ ವಿರುದ್ದ ಹೋರಾಟಕ್ಕೆ ಮುಂದಾಗಬೇಕಿದೆ ಎಂದರು. ಸದನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ, ಚರ್ಚೆ ಮಾಡ ಬೇಕೇ ಹೊರತು ಮೂಕ ಪ್ರೇಕ್ಷಕರಂತೆ ಕೂರುವುದು ಎಷ್ಟರಮಟ್ಟಿಗೆ ಸರಿ ಎಂದರು.

ತಾವು ಸದನದಲ್ಲಿದ್ದಾಗ ಪ್ರತಿಯೊಂದು ಬಿಲ್ ಪಾವತಿಸಲು ತಮ್ಮ ಕಡೆ ನೋಡಿ ನಂತರ ಅದನ್ನು ಪಾಸ್ ಮಾಡುತ್ತಿದ್ದರು, ಯಾವುದೇ ಒಂದು ಕಾನೂನು,ಬಿಲ್ ಗಳನ್ನು ಪಾಸ್ ಮಾಡುವಲ್ಲಿ ಅದರ ಸಮಗ್ರ ಮಾಹಿತಿ ಪಡೆಯಲು ಗಂಟೆಗಟ್ಟಲೇ ಚರ್ಚೆ ನಡೆಸುತ್ತಿದ್ದೇವು. ಆದರೆ ಈಗ ಪ್ರಶ್ನೆ ಮಾಡುವವರೇ ಇದಂತಾಗಿದ್ದು,ನಿಮಿಷಗಳಲ್ಲೇ ಬಿಲ್ ಗಳು ಪಾಸ್ ಆಗುತ್ತಿದ್ದು,ಕಾನೂನುಗಳ ರಚನೆಯಾಗುತ್ತಿವೆ ಇದರಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಸಂಭವಿಸುತ್ತಿದೆ ಎಂದು ವಿಷಾದಿಸಿದರು.

ಇಂದು ಸರ್ಕಾರಿ ಅಧಿಕಾರಿಗಳು ಮಾಡುವ ತಪ್ಪಿಗೆ ಸಾಮನ್ಯ ಜನ ಸರ್ಕಾರಿ ಕಛೇರಿಗಳ ಬಾಗಿಲಿಗೆ ಅಲೆಯುವಂತಾಗಿದೆ,ಪಹಣಿ ಬರೆಯುವಾಗ ತಪ್ಪು ಮಾಡುವ ಅಧಿಕಾರಿಗಳು ಅದನ್ನು ಸರಿ ಪಡಿಸಲು ನಿಮಿಷದ ಕೆಲಸವಾಗಿದ್ದರೂ ಸಹ ತಿದ್ದುಪಡಿ ಮಾಡಿಸಲು ದಂಡಕಟ್ಟಿ ತಿರುಗುವುದು ಸಾಮಾನ್ಯ ಜನರ ಪಾಡಗಿದೆ,ಇದನ್ನು ಕೇಳುವವರು ಯಾರು ಇಲ್ಲ,ರೈತರಿಗಾಗುವ ಅನ್ಯಾಯವನ್ನು ತಡೆಯಲು ಸಮರ್ಥರು ಬೇಕಿದೆ.ತಾವು ಯಾರಿಗೆ ಮತ ನೀಡಿದರೆ ತಮಗೆ ಉತ್ತಮ ಆಡಳಿತ ದೊರೆಯುತ್ತದೆ ಎಂಬುದನ್ನು ಇಂದು ಮತದಾರರು ಆಲೋಚನೆ ಮಾಡಬೇಕಿದ್ದು ಇದರ ಬದಲು, ಹಣ,ಮದ್ಯ ನೀಡುವವರಿಗೆ ತಾವು ಮತಹಾಕುತ್ತೇವೆಂದರೆ ನನ್ನದೇನು ಅಭ್ಯಂತರವಿಲ್ಲ ಎಂದರು

ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿರಾಜ್ ಕುಮಾರ್,ಜಿ.ಪಂ.ಸದಸ್ಯೆ ಲೋಹಿತಾ ಬಾಯಿ,ತಿರುಮಲಾಪುರ ಗ್ರಾ.ಪಂ.ಅಧ್ಯಕ್ಷೆ ರಾಜಮ್ಮ,ಜಿ.ಪಂ.ಮಾಜಿ ಸದಸ್ಯೆ ಲಕ್ಷ್ಮಿಅಂದಾನಪ್ಪ, ಮುಖಂಡರಾದ ಚಿಕ್ಕಬಿದರೆ ಚಂದ್ರಣ್ಣ, ಕೆಂಕೆರೆಶಿವಕುಮಾರ್,ಬಡ್ಡಿಪುಟ್ಟಣ್ಣ ಸೇರಿದಂತೆ ಕಾರ್ಯಕರ್ತರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...