ವಿಷಯಕ್ಕೆ ಹೋಗಿ

ಓಟು ಕೊಡಿ,ನೋಟು ಕೊಡಿ ಎಂದು ಪ್ರಚಾರ ಪ್ರಾರಂಭಿಸಿದ ರೈತಸಂಘದ ಅಭ್ಯರ್ಥಿ ಕೆಂಕೆರೆ ಸತೀಶ್

             ಮತದಾರರೇ ಒಂದು ಓಟು ಕೊಡುವುದರ ಜೊತೆ ಒಂದು ನೋಟು ಕೊಟ್ಟು ತಮ್ಮನ್ನು ಜಯಶೀಲರನ್ನಾಗಿ ಮಾಡಿ ಎನ್ನುವ ಘೋಷವಾಕ್ಯದೊಂದಿಗೆ ಚುನಾವಣಾ ಪ್ರಚಾರ ಪ್ರಾರಂಬಿಸಿದ್ದಾರೆ ಚಿಕ್ಕನಾಯಕನಹಳ್ಳಿ ಕ್ಷೇತ್ರದ ರೈತಸಂಘದ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿರುವ ಹೋರಾಟಗಾರ ಕೆಂಕೆರೆ ಸತೀಶ್.

ಹುಳಿಯಾರಿನ ಅಂಬೇಡ್ಕರ್ ಕಾಲೋನಿಯಿಂದ ತಮ್ಮ ಚುನಾವಣಾ ಪ್ರಚಾರ ಪ್ರಾರಂಭಿಸಿದ ಅವರು ತರಕಾರಿ ರಾಮಣ್ಣ ಅವರಿಂದ ನೋಟು ಪಡೆಯುವ ಮೂಲಕ ಪ್ರಚಾರಕ್ಕೆ ಮುಂದಾಗಿದ್ದು,ಮನೆಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.ತಾವು ರೈತಸಂಘದೊಂದಿಗೆ ತಾಲ್ಲೂಕಿನಾದ್ಯಂತ ಅನೇಕ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದು, ಚುನಾವಣೆಯಲ್ಲಿ ಗೆದ್ದರೂ,ಸೋತರೂ ತಮ್ಮ ಹೋರಾಟದ ಹಾದಿಯನ್ನು ಬಿಡುವುದಿಲ್ಲ,ಎಲ್ಲೆ ರೈತರಿಗೆ ಅನ್ಯಾಯವಾದರೂ ಅವರ ಜೊತೆ ಕೈಜೋಡಿಸು ನ್ಯಾಯ ದೊರಕಿಸುವ ಕಾರ್ಯದಲ್ಲಿ ಮುನ್ನೆಡೆಯುತ್ತಾ ಸಾಗುವುದಾಗಿ ತಿಳಿಸಿದರು.ತಾವು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ರೈತಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಚುನಾವಣೆಯಲ್ಲಿ ಗೆಲ್ಲಲಿ,ಸೋಲಲ್ಲಿ ತನ್ನ ಹೋರಾಟವನ್ನು ಕೈಬಿಡದೆ ಮುಂದುವರಿಸಿಕೊಂಡು ರೈತರಿಗಾಗಿ ಅವಿರತ ದುಡಿಯುವುದಾಗಿ ಹೇಳಿದರು.
ಒಬ್ಬ ರೈತನಾಗಿ ರೈತರ ಸಮಸ್ಯೆಗಳನ್ನು ಹತ್ತಿರದಿಂದ ಕಂಡವನಾಗಿರುವ ನನಗೆ ರೈತರ ಕಷ್ಟದ ಅರಿವಿದ್ದು ಬಗೆಹರಿಸಲು ಶಕ್ತನಾಗಿದ್ದೇನೆ. ಸೇವಾ ಮನೋಭಾವದಿಂದ ಚನಾವಣೆಯಲ್ಲಿ ಸ್ಪರ್ಥಿಸುತ್ತಿರುವ ನನಗೆ ರೈತರು ಸೇರಿದಂತೆ ಎಲ್ಲಾ ವರ್ಗದವರ ಅತ್ಯಮೂಲ್ಯ ಮತ ಬೇಕಾಗಿದೆ ಎಂದರು.

ಪ್ರಸ್ತುತ ದಿನಗಳಲ್ಲಿ ಚುನಾವಣೆಯೆಂದರೆ ಕೋಟಿಗಟ್ಟಲೆ ಹಣದ ಹೊಳೆ ಹರಿಸ ಬೇಕು ಎಂಬುದು ಎಲ್ಲರ ಮನೋಭಾವ ಆದರೆ ತಾವು ಹಣ,ಹೆಂಡ ಹಂಚುವುದಿಲ್ಲ .ನಮ್ಮ ಖರ್ಚು ಮೂರರಿಂದ ನಾಲ್ಕು ಲಕ್ಷ ರೂಗಳ ತಗುಲಲಿದ್ದು, ಆ ವೆಚ್ಚದ ಹಣವನ್ನು ಮತದಾರರು ಹಾಗೂ ರೈತಬಂಧುಗಳೇ ಭರಿಸಲಿದ್ದಾರೆ ಎಂದರು. ,ಚುನಾವಣಾ ಪ್ರಚಾರದಲ್ಲಿ ಓಟಿನೊಂದಿಗೆ ನೋಟು ಕೇಳುತ್ತಾ ಸಾಗುತ್ತಿರುವ ಅವರೊಂದಿಗೆ ಪತ್ನಿ ಚಂದ್ರಕಲಾ ಹಾಗೂ ನೂರಾರು ಸಂಖ್ಯೆಯ ರೈತ ಬಾಂಧವರು ಸಾತ್ ನೀಡುತ್ತಿದ್ದಾರೆ.
ಚಿ.ನಾ.ಹಳ್ಳಿ ಕ್ಷೇತ್ರದ ರೈತಸಂಘದ ಅಭ್ಯರ್ಥಿ ಕೆಂಕೆರೆ ಸತೀಶ್ ಹುಳಿಯಾರಿನ ಅಂಬೇಡ್ಕರ್ ಕಾಲೋನಿಯಲ್ಲಿ ಓಟು-ನೋಟು ಅಡಿಯಲ್ಲಿ ತರಕಾರಿ ರಾಮಣ್ಣ ಅವರಿಂದ ನೋಟು ಪಡೆಯುವ ಮೂಲಕ ಪ್ರಚಾರ ಆರಂಭಿಸಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...