ವಿಷಯಕ್ಕೆ ಹೋಗಿ

ಸತತ 2ನೇ ಬಾರಿ ಜೆಡಿಎಸ್ ಗೆ ಒಲಿದ ಚಿ.ನಾ.ಹಳ್ಳಿ ಕ್ಷೇತ್ರ

ಚಿ.ನಾ.ಹಳ್ಳಿ ಕ್ಷೇತ್ರದಲ್ಲಿ ಒಂದು ಬಾರಿ ಗೆದ್ದವರು ಪುನ: ಗೆಲ್ಲುವುದಿಲ್ಲ ಎಂಬ ಮೌಡ್ಯತೆಯನ್ನು ಹುಸಿಗೊಳಿಸುವ ಮೂಲಕ ಜೆಡಿಎಸ್ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು 60,759 ಮತಗಳನ್ನು ಪಡೆದು ಸತತ ಎರಡನೇ ಬಾರಿ ವಿಜಯಯ ಮಾಲೆ ಧರಿಸಿ.ಮರು ಆಯ್ಕೆಯಾಗಿ ಕ್ಷೇತ್ರದ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಈ ಬಾರಿಯ ಚಿ.ನಾ.ಹಳ್ಳಿ ಕ್ಷೇತ್ರದ ಮತ ಎಣಿಕೆಯಲ್ಲಿ ಕೆಜೆಪಿ,ಜೆಡಿಎಸ್,ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆದಿದ್ದು ಮೊದಲ ಹಂತದ ಮತಎಣಿಕೆ ಸಂಧರ್ಭದಲ್ಲಿ ಕೆಜೆಪಿ ಅಭ್ಯರ್ಥಿ ಮಾಧುಸ್ವಾಮಿ ಅವರು ಮುಂದಿರುವುದು ಕಂಡು ಬಂದಿದ್ದು, ಬಿಜೆಪಿ ಹಾಗೂ ಕೆಜೆಪಿ ಪಕ್ಷಗಳ ತೀವ್ರ ಪೈಪೂಟಿಯ ನಡುವೆಯೂ ನಂತರದ ಸುತ್ತುಗಳಲ್ಲಿ ಜೆಡಿಎಸ್ ಅಂತರವನ್ನು ಕಾಯ್ದುಕೊಂಡು ಕೆಜೆಪಿಯ ಮಾಧುಸ್ವಾಮಿಯವರಿಗಿಂತ 11,139 ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ಜೆಡಿಎಸ್ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು ಜಯಶೀಲರಾಗಿದ್ದು ಕ್ಷೇತ್ರದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದೆ.
ಕಳೆದ ಬಾರಿ 67046 ಮತಗಳನ್ನು ಪಡೆದು 29044 ಮತಗಳ ಅಂತರದಲ್ಲಿ ಚುನಾಯಿತರಾಗಿದ್ದ ಸಿಬಿಎಸ್, ಈ ಬಾರಿ ಬಿಜೆಪಿ ಹಾಗೂ ಕೆಜೆಪಿ ಪಕ್ಷಗಳ ತೀವ್ರ ಪೈಪೂಟಿಯ ನಡುವೆಯೂ 11,139 ಮತಗಳ ಅಂತರದಲ್ಲಿ ಜಯಗಳಿಸಿದ್ದು ಮೊದಲನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಯುನಿಂದ ಸ್ಪರ್ಥಿಸಿದ್ದ ಮಾಧುಸ್ವಾಮಿ ಮೂರನೇ ಸ್ಥಾನ ಪಡೆದಿದ್ದರು.ಆದರೆ ಈ ಬಾರಿ ಜೆಡಿಯು ತೊರೆದು ಯಡಿಯೂರಪ್ಪನವರೊಂದಿಗೆ ಸೇರಿ ನೂತನ ಕೆಜೆಪಿಯಿಂದ ಕಣಕಿಳಿದಿದ್ದು 49,620 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಕಳೆದ ಚುನಾವಣೆಯಲ್ಲಿ 38,002 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದ ಬಿಜೆಪಿಯ ಕೆ.ಎಸ್.ಕಿರಣ್ ಕುಮಾರ್ ಈ ಬಾರಿ 29,150 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಸಾಸಲು ಸತೀಶ್ 10,344 ಮತಗಳನ್ನು ಪಡೆದು ನಾಲ್ಕನೇ ಸ್ಥಾನವನ್ನು ಹಾಗೂ ರೈತಸಂಘದ ಅಭ್ಯರ್ಥಿ ಕೆಂಕೆರೆ ಸತೀಶ್ 2086 ಪಡೆದಿದ್ದು,ಇತರೆ ಅಭ್ಯರ್ಥಿಗಳು 8082 ಮತಗಳನ್ನು ಪಡೆದಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 1,60,041ರಷ್ಟು ಮತದಾನವಾಗಿದೆ.
ಜೆಡಿಎಸ್ ಪಕ್ಷದಿಂದ ಹಾಲಿ ಶಾಸಕರಾಗಿದ್ದ ಸಿ.ಬಿ.ಸುರೇಶ್ ಬಾಬು ಮತ್ತೆ ಮರು ಆಯ್ಕೆ ಬಯಸಿ ಈ ಬಾರಿ ಕಣದಲಿದ್ದರು. ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ದಿ ಕಾರ್ಯ ಮಾಡಿಲ್ಲ,ಗೆದ್ದ ಮೇಲೆ ಜನರ ಕೈಗೆ ಸಿಗದಂತೆ ಬೆಂಗಳೂರಲ್ಲಿ ಕುಳಿತು ಆಡಳಿತ ನಡೆಸುತ್ತಾರೆಂಬ ಪ್ರತಿ ಪಕ್ಷಗಳ ಪ್ರತಿರೋಧಗಳ ನಡುವೆ ಈ ಬಾರಿ ಜಯಶೀಲರಾಗಿದ್ದು, ಕಳೆದ ಬಾರಿ 67046 ಮತಗಳನ್ನು ಪಡೆದಿದ್ದ ಇವರು 29044 ಮತಗಳ ಅಂತರದಲ್ಲಿ ಗೆದಿದ್ದರು.ಆದರೆ ಈ ಬಾರಿ 60,759 ಮತಗಳನ್ನು ಪಡೆದು 11,139 ಮತಗಳ ಅಂತರದಲ್ಲಿ ಜಯಗಳಿಸಿದ್ದರೂ ಸಹ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 17,905 ಮತಗಳು ಕಡಿಮೆಯಾಗಿರುವುದು ಸ್ವಲ್ಪ ಹಿನ್ನೆಡೆಯೆ ಎನ್ನಬಹುದಾಗಿದೆ. ಕುರುಬ ಸಮುದಾಯಕ್ಕೆ ಸೇರಿರುವ ಇವರನ್ನು ಈ ಬಾರಿಯೂ ಕ್ಷೇತ್ರದ ಜನ ಬೆಂಬಲಿಸಿದ್ದು ,ತಮ್ಮ ಮತ ಹಾಕುವ ಮೂಲಕ ಅವರನ್ನು ಗೆಲುವಿನ ದಾರಿಯಲ್ಲಿ ಕೊಂಡುಯ್ಯದಿದ್ದು, ಸತತ ಎರಡನೇ ಬಾರಿ ಗೆಲ್ಲುವ ಮುಖೇನ ಜನರ ವಿಶ್ವಾಸಕ್ಕೆ ಅರ್ಹರಾಗಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...