ವಿಷಯಕ್ಕೆ ಹೋಗಿ

ಸತತ 2ನೇ ಬಾರಿ ಜೆಡಿಎಸ್ ಗೆ ಒಲಿದ ಚಿ.ನಾ.ಹಳ್ಳಿ ಕ್ಷೇತ್ರ

ಚಿ.ನಾ.ಹಳ್ಳಿ ಕ್ಷೇತ್ರದಲ್ಲಿ ಒಂದು ಬಾರಿ ಗೆದ್ದವರು ಪುನ: ಗೆಲ್ಲುವುದಿಲ್ಲ ಎಂಬ ಮೌಡ್ಯತೆಯನ್ನು ಹುಸಿಗೊಳಿಸುವ ಮೂಲಕ ಜೆಡಿಎಸ್ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು 60,759 ಮತಗಳನ್ನು ಪಡೆದು ಸತತ ಎರಡನೇ ಬಾರಿ ವಿಜಯಯ ಮಾಲೆ ಧರಿಸಿ.ಮರು ಆಯ್ಕೆಯಾಗಿ ಕ್ಷೇತ್ರದ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಈ ಬಾರಿಯ ಚಿ.ನಾ.ಹಳ್ಳಿ ಕ್ಷೇತ್ರದ ಮತ ಎಣಿಕೆಯಲ್ಲಿ ಕೆಜೆಪಿ,ಜೆಡಿಎಸ್,ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆದಿದ್ದು ಮೊದಲ ಹಂತದ ಮತಎಣಿಕೆ ಸಂಧರ್ಭದಲ್ಲಿ ಕೆಜೆಪಿ ಅಭ್ಯರ್ಥಿ ಮಾಧುಸ್ವಾಮಿ ಅವರು ಮುಂದಿರುವುದು ಕಂಡು ಬಂದಿದ್ದು, ಬಿಜೆಪಿ ಹಾಗೂ ಕೆಜೆಪಿ ಪಕ್ಷಗಳ ತೀವ್ರ ಪೈಪೂಟಿಯ ನಡುವೆಯೂ ನಂತರದ ಸುತ್ತುಗಳಲ್ಲಿ ಜೆಡಿಎಸ್ ಅಂತರವನ್ನು ಕಾಯ್ದುಕೊಂಡು ಕೆಜೆಪಿಯ ಮಾಧುಸ್ವಾಮಿಯವರಿಗಿಂತ 11,139 ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ಜೆಡಿಎಸ್ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು ಜಯಶೀಲರಾಗಿದ್ದು ಕ್ಷೇತ್ರದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದೆ.
ಕಳೆದ ಬಾರಿ 67046 ಮತಗಳನ್ನು ಪಡೆದು 29044 ಮತಗಳ ಅಂತರದಲ್ಲಿ ಚುನಾಯಿತರಾಗಿದ್ದ ಸಿಬಿಎಸ್, ಈ ಬಾರಿ ಬಿಜೆಪಿ ಹಾಗೂ ಕೆಜೆಪಿ ಪಕ್ಷಗಳ ತೀವ್ರ ಪೈಪೂಟಿಯ ನಡುವೆಯೂ 11,139 ಮತಗಳ ಅಂತರದಲ್ಲಿ ಜಯಗಳಿಸಿದ್ದು ಮೊದಲನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಯುನಿಂದ ಸ್ಪರ್ಥಿಸಿದ್ದ ಮಾಧುಸ್ವಾಮಿ ಮೂರನೇ ಸ್ಥಾನ ಪಡೆದಿದ್ದರು.ಆದರೆ ಈ ಬಾರಿ ಜೆಡಿಯು ತೊರೆದು ಯಡಿಯೂರಪ್ಪನವರೊಂದಿಗೆ ಸೇರಿ ನೂತನ ಕೆಜೆಪಿಯಿಂದ ಕಣಕಿಳಿದಿದ್ದು 49,620 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಕಳೆದ ಚುನಾವಣೆಯಲ್ಲಿ 38,002 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದ ಬಿಜೆಪಿಯ ಕೆ.ಎಸ್.ಕಿರಣ್ ಕುಮಾರ್ ಈ ಬಾರಿ 29,150 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಸಾಸಲು ಸತೀಶ್ 10,344 ಮತಗಳನ್ನು ಪಡೆದು ನಾಲ್ಕನೇ ಸ್ಥಾನವನ್ನು ಹಾಗೂ ರೈತಸಂಘದ ಅಭ್ಯರ್ಥಿ ಕೆಂಕೆರೆ ಸತೀಶ್ 2086 ಪಡೆದಿದ್ದು,ಇತರೆ ಅಭ್ಯರ್ಥಿಗಳು 8082 ಮತಗಳನ್ನು ಪಡೆದಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 1,60,041ರಷ್ಟು ಮತದಾನವಾಗಿದೆ.
ಜೆಡಿಎಸ್ ಪಕ್ಷದಿಂದ ಹಾಲಿ ಶಾಸಕರಾಗಿದ್ದ ಸಿ.ಬಿ.ಸುರೇಶ್ ಬಾಬು ಮತ್ತೆ ಮರು ಆಯ್ಕೆ ಬಯಸಿ ಈ ಬಾರಿ ಕಣದಲಿದ್ದರು. ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ದಿ ಕಾರ್ಯ ಮಾಡಿಲ್ಲ,ಗೆದ್ದ ಮೇಲೆ ಜನರ ಕೈಗೆ ಸಿಗದಂತೆ ಬೆಂಗಳೂರಲ್ಲಿ ಕುಳಿತು ಆಡಳಿತ ನಡೆಸುತ್ತಾರೆಂಬ ಪ್ರತಿ ಪಕ್ಷಗಳ ಪ್ರತಿರೋಧಗಳ ನಡುವೆ ಈ ಬಾರಿ ಜಯಶೀಲರಾಗಿದ್ದು, ಕಳೆದ ಬಾರಿ 67046 ಮತಗಳನ್ನು ಪಡೆದಿದ್ದ ಇವರು 29044 ಮತಗಳ ಅಂತರದಲ್ಲಿ ಗೆದಿದ್ದರು.ಆದರೆ ಈ ಬಾರಿ 60,759 ಮತಗಳನ್ನು ಪಡೆದು 11,139 ಮತಗಳ ಅಂತರದಲ್ಲಿ ಜಯಗಳಿಸಿದ್ದರೂ ಸಹ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 17,905 ಮತಗಳು ಕಡಿಮೆಯಾಗಿರುವುದು ಸ್ವಲ್ಪ ಹಿನ್ನೆಡೆಯೆ ಎನ್ನಬಹುದಾಗಿದೆ. ಕುರುಬ ಸಮುದಾಯಕ್ಕೆ ಸೇರಿರುವ ಇವರನ್ನು ಈ ಬಾರಿಯೂ ಕ್ಷೇತ್ರದ ಜನ ಬೆಂಬಲಿಸಿದ್ದು ,ತಮ್ಮ ಮತ ಹಾಕುವ ಮೂಲಕ ಅವರನ್ನು ಗೆಲುವಿನ ದಾರಿಯಲ್ಲಿ ಕೊಂಡುಯ್ಯದಿದ್ದು, ಸತತ ಎರಡನೇ ಬಾರಿ ಗೆಲ್ಲುವ ಮುಖೇನ ಜನರ ವಿಶ್ವಾಸಕ್ಕೆ ಅರ್ಹರಾಗಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.