ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಶೇ.75.36 ರಷ್ಟು ಮತದಾನ

         ಚಿ.ನಾ.ಹಳ್ಳಿ ವಿಧಾನಸಭಾ ಚುನಾವಣೆಯು ಭಾನುವಾರ ಶಾಂತಿಯುತವಾಗಿ ನಡೆದಿದ್ದು, ಚಿ.ನಾ.ಹಳ್ಳಿ ಕ್ಷೇತ್ರದಲ್ಲಿ ಒಟ್ಟು ಶೇ.81.16ರಷ್ಟು ಹಾಗೂ ಕ್ಷೇತ್ರದ ಪ್ರಮುಖ ಕೇಂದ್ರವಾಗಿ ಬಿಂಬಿತವಾಗಿರುವ ಹುಳಿಯಾರಿನಲ್ಲಿ ಒಟ್ಟು ಶೇ.75.36 ರಷ್ಟು ಮತದಾನವಾಗಿದೆ. ಹುಳಿಯಾರು ಪಟ್ಟಣದಲ್ಲಿ ಒಟ್ಟು 13 ಮತಗಟ್ಟೆಗಳನ್ನು ಎಂಪಿಎಸ್ ಶಾಲೆಯಲ್ಲಿ 9 ಮತಕೇಂದ್ರಗಳನ್ನು,ಉರ್ದು ಶಾಲೆಯಲ್ಲಿ ಎರಡು ಮತಗಟ್ಟೆಗಳನ್ನು,ಸೋಮಜ್ಜನ ಪಾಳ್ಯ ಹಾಗೂ ಹುಳಿಯಾರು-ಕೆಂಕೆರೆ ಪ್ರೌಢಶಾಲೆಯಲ್ಲಿ ತಲಾ ಒಂದೊಂದು ಮತಗಟ್ಟೆಳನ್ನು ಸ್ಥಾಪಿಸಲಾಗಿತ್ತು.
       ಬೆಳಗಿನ ತಂಪಿನ ವಾತಾವರಣದಲ್ಲಿ ಚುರುಕಾಗಿದ್ದ ಮತದಾನ ಬಿಸಿಲೇರಿಕೆ ನಂತರ ಸ್ವಲ್ಪ ಕುಗ್ಗಿದರೂ ಸಹ ಮಧಾಹ್ನದ ನಂತರ ಬಂದ ತುಂತುರು ಸೊನೆ ಮಳೆಯ ತಂಪಿನಿಂದಾಗಿ ಮತ್ತೆ ಮತದಾರರು ಮತಗಟ್ಟೆಗಳಿಗೆ ದಾವಿಸಲಾರಂಭಿಸುವ ಮೂಲಕ ಮತ್ತೆ ಚುರುಕುಗೊಂಡ ಮತದಾನ ನಡೆಯಿತು.

ಹುಳಿಯಾರಿನ ಮತಗಟ್ಟೆಗಳಲ್ಲಿ ಮತ ಚಲಾಯಿಸಿದ ಪುರುಷ ಹಾಗೂ ಮಹಿಳೆಯರ ವಿವರ:
ಮತಗಟ್ಟೆ 1 : ಪುರುಷರು 185, ಮಳೆಯರು 176 ಒಟ್ಟು 361 ಶೇ.68.76
ಮತಗಟ್ಟೆ 2: ಪುರುಷರು 241, ಮಳೆಯರು 198 ಒಟ್ಟು 439 ಶೇ. 68.27
ಮತಗಟ್ಟೆ 3 :ಪುರುಷರು 264, ಮಳೆಯರು 245 ಒಟ್ಟು 509 ಶೇ. 71.29
ಮತಗಟ್ಟೆ 4 : ಪುರುಷರು 172, ಮಳೆಯರು 190 ಒಟ್ಟು 362 ಶೇ. 75.89
ಮತಗಟ್ಟೆ 5: ಪುರುಷರು 406, ಮಳೆಯರು 408 ಒಟ್ಟು 814 ಶೇ.71.65
ಮತಗಟ್ಟೆ 6: ಪುರುಷರು 226, ಮಳೆಯರು 236 ಒಟ್ಟು 462 ಶೇ.69.79
ಮತಗಟ್ಟೆ 7: ಪುರುಷರು 266, ಮಳೆಯರು 270 ಒಟ್ಟು 536 ಶೇ.82.21
ಮತಗಟ್ಟೆ 8: ಪುರುಷರು 310, ಮಳೆಯರು 332ಒಟ್ಟು 642 ಶೇ.73.62
ಮತಗಟ್ಟೆ 9: ಪುರುಷರು 437, ಮಳೆಯರು 402 ಒಟ್ಟು 839 ಶೇ. 75.93
ಮತಗಟ್ಟೆ 10: ಪುರುಷರು 271, ಮಳೆಯರು 286 ಒಟ್ಟು 557 ಶೇ.73.87
ಮತಗಟ್ಟೆ 11 : ಪುರುಷರು 233, ಮಳೆಯರು 269 ಒಟ್ಟು 502 ಶೇ. 78.68
ಮತಗಟ್ಟೆ 12: ಪುರುಷರು 344, ಮಳೆಯರು 311 ಒಟ್ಟು 655 ಶೇ.88.16
ಮತಗಟ್ಟೆ 13: ಪುರುಷರು 498, ಮಳೆಯರು 451 ಒಟ್ಟು 949 ಶೇ.81.67 

ಹೋಬಳಿ ವ್ಯಾಪ್ತಿಯ ಹುಳಿಯಾರು,ಕೆಂಕೆರೆ,ಯಳನಡು, ಕೋರಗೆರೆ,ತಿರುಮಲಾಪುರ,ದೊಡ್ಡಬಿದರೆ, ಬರಕನಹಾಲ್,ದಸೂಡಿ,ಹೊಯ್ಸಲಕಟ್ಟೆ,ಗಾಣಧಾಳು ಗ್ರಾ.ಪಂ.ಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು ಕೆಂಕೆರೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಶೇ.82.22ರಷ್ಟು ಮತದಾನವಾಗಿದೆ. ಬಿಜೆಪಿ ಅಭ್ಯರ್ಥಿ ಕೆ.ಎಸ್.ಕಿರಣ್ ಕುಮಾರ್ ಹುಳಿಯಾರಿನ 35ನೇ ಮತಗಟ್ಟೆಯಲ್ಲಿ ಮತಚಲಾಯಿಸಿದರೆ,ರೈತಸಂಘದ ಅಭ್ಯರ್ಥಿ ಕೆಂಕೆರೆ ಸತೀಶ್ ಕೆಂಕೆರೆಯ ಮತಗಟ್ಟೆಯ ಮತ ಕೇಂದ್ರದಲ್ಲಿ ಮತಚಲಾಯಿಸಿದರು.ಕೆಂಕೆರೆ ಮತಗಟ್ಟೆಯಲ್ಲಿ ತಾ.ಪಂ.ಸದಸ್ಯ ನವೀನ್,ಗಂಗಣ್ಣ,ಮಂಜುನಾಥ್ ಮೊದಲು ಮತಚಲಾಯಿಸಿದ್ದಾರೆ. ಅಭ್ಯರ್ಥಿಗಳ ಬೆಂಬಲಿಗರ ಪ್ರಚಾರ ಕಾವು ಸಂಜೆವರೆಗೂ ಮುಂದುವದಿತ್ತು.ಕಣದಲ್ಲಿರುವ 11 ಅಭ್ಯರ್ಥಿಗಳ ಹಣೆಬರಹ ಭಾನುವಾರ ನಿರ್ಧಾರವಾಗಿದ್ದು, ಮತದಾರರ ಒಲವು ಯಾರಿಗೆ ವ್ಯಕ್ತವಾಗಿದೆ,ಮತಾಧೀಶನ ನಿಲುವೇನೆಂದು ಅರಿಯಲು,ಫಲಿತಾಂಶಕ್ಕಾಗಿ ಕಾಯಬೇಕಿದ್ದು,ಇನ್ನೆರಡು ದಿನದಲ್ಲಿ ಫಲಿತಾಂಶ ಹೊರಬೀಳಲಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.