ವಿಷಯಕ್ಕೆ ಹೋಗಿ

ಚಿ.ನಾ.ಹಳ್ಳಿ ಭಾಗಕ್ಕೆ ಹೇಮೆ ನೀರು ಹರಿಸಿದ್ದು ಬಿಜೆಪಿ ಸಾಧನೆಯೇ ಹೊರತು ಯಡೆಯೂರಪ್ಪನವರದ್ದಲ್ಲ : ಕೆ.ಎಸ್.ಕೆ

                        ಚಿಕ್ಕನಾಯಕನಹಳ್ಳಿ ಭಾಗಕ್ಕೆ ಶಾಶ್ವತ ಕುಡಿಯುವ ನೀರನ್ನು ಕಲ್ಪಿಸುವ ದೃಷ್ಠಿಯಿಂದ ಈ ಭಾಗಕ್ಕೆ 102ಕೋಟಿ ವೆಚ್ಚದಲ್ಲಿ ಯೋಜನೆಯನ್ನು ರೂಪಿಸಿ,ಶಂಕುಸ್ಥಾಪನೆಯನ್ನು ನೆರವೇರಿಸಿ,ಕಾಮಗಾರಿಗೆ ಚಾಲನೆಗೊಂಡಿರುವುದು ಬಿಜೆಪಿ ಸರ್ಕಾರದ ಸಾಧನೆಯೇ ಹೊರತು,ತಾನು ಹೇಮಾವತಿ ಹರಿಕಾರ,ಅದು ತನ್ನಿಂದಾಯಿತೆಂದು ಯಡೆಯೂರಪ್ಪನವರು ಹೇಳಿಕೊಳ್ಳುತ್ತಿರುವುದು ತಪ್ಪು ಎಂದು ಚಿ.ನಾ.ಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಹರಿಹಾಯ್ದರು.
                  ಹುಳಿಯಾರಿನ ಎಪಿಎಂಸಿ ಸಮೀಪದ ಮೈದಾನದಲ್ಲಿ ಮಂಗಳವಾರದಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭಾಗವಹಿಸಿದ್ದ ಬಿಜೆಪಿ ಪಕ್ಷದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,ಚಿ.ನಾ.ಹಳ್ಳಿ ಭಾಗಕ್ಕೆ ಹೇಮಾವತಿ ನೀರು ಹರಿಸುವ ನಿಟ್ಟಿನಲ್ಲಿ ನನ್ನಿ ಇಚ್ಚಾಶಕ್ತಿ ಹಾಘು ಅವಿರತ ಪ್ರಯತ್ನದ ಫಲವಾಗಿ ಮೊದಲು ಕೆ.ಎಸ್.ಈಶ್ವರಪ್ಪ ಸರ್ವೆಕಾರ್ಯಕ್ಕೆ ಹಣ ಬಿಡುಗಡೆ ಮಾಡಿಸಿದರೆ ನಂತರ ಬಸವರಾಜ ಬೊಮ್ಮಾಯಿಯವರು ಸರ್ವೆ ಹಾಗೂ ತಾಂತ್ರಿಕ ಕಾರ್ಯಗಳನ್ನು ಕೈಗೊಂಡು ತಾಲ್ಲೂಕಿನ 26 ಕೆರೆಗಳಿಗೆ ಹೇಮೆ ನೀರು ಹರಿಸಬಹುದಾಗಿದೆ ಎಂದು 102 ಕೋಟಿ ರೂಗಳ ಕಾರ್ಯಕ್ಕೆ ಒಪ್ಪಿಗೆ ಸೂಚಿಸುತ್ತಿದ್ದಂತೆ ಹಣ ಬಿಡುಗಡೆ ಮಾಡಿದ್ದಲ್ಲದೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಈ ಬೃಹತ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದು ಈಗಾಗಲೆ ಕಾಮಗಾರಿ ಚಾಲನೆಗೊಂಡಿದೆ.ಇದನ್ನು ಕಂಡ ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ತಾನು ಹೇಮಾವತಿ ನೀರು ಹರಿಸುವ ಯೋಜನೆ ಮಂಜೂರು ಮಾಡಿಸಿದ್ದು ಎನ್ನುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಅಪಪ್ರಚಾರ: ಕಿರಣ್ ಕುಮಾರ್ ಬಿಜೆಪಿಯನ್ನು ತೊರೆದು ಕೆಜೆಪಿ ಸೇರಿ ಗುಬ್ಬಿ ತಾಲ್ಲೂಕಿನಿಂದ ಸ್ಪರ್ಧಿಸುತ್ತಾರೆಂದು ತಮ್ಮ ಮೇಲೆ ಅನೇಕ ಸುಳ್ಳುವದಂತಿಗಳನ್ನು ಸೃಷ್ಠಿಸುವ ಮೂಲಕ ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲವನ್ನು ಸೃಷ್ಠಿಸುತ್ತಾ, ಮತದಾರರ ಮನವೊಲಿಸಲು ಕೆಜೆಪಿ ಪಕ್ಷದ ಮುಖಂಡರು ಮುಂದಾಗಿದ್ದರು.ಇದಕ್ಕೆಲ್ಲಾ ಪ್ರತ್ಯುತ್ತರವಾಗಿ ತಾವು ಬೆಜೆಪಿಯಿಂದಲ್ಲೇ ಸ್ಪರ್ಧಿಸಿದ್ದು ತಮ್ಮೊಂದಿಗೆ ಕ್ಷೇತ್ರದ ಮತದಾರರಿದ್ದಾರೆಂದರು.
           ಚಿ.ನಾ.ಹಳ್ಳಿ ಕ್ಷೇತ್ರದ ಹಾಲಿ ಶಾಸಕರು ತಾವು ನಡೆಸಬೇಕಿದ್ದ ಬಗರ್ ಹುಕುಂ,ಕೆಜಿಡಿ ಸಭೆಯನ್ನಾಗಲಿ ಸಮರ್ಪಕವಾಗಿ ನಡೆಸದೆ,ಜನತೆಯ ಸಮಸ್ಯೆಗಳನ್ನು ಆಲಿಸದೆ ಕ್ಷೇತ್ರದ ಅಭಿವೃದ್ದಿಯನ್ನು ಬದಿಗೊತ್ತಿ ಸದಾಕಾಲ ಬೆಂಗಳೂರಿಗೆ ಪ್ರಯಾಣ ಬೆಳೆಸಿ,ಅಲ್ಲಿಂದಲ್ಲೆ ಕ್ಷೇತ್ರದಲ್ಲಿ ತಮಗೆ ಬೇಕಾದ ರೀತಿಯಲ್ಲಿ ಆಡಳಿತ ನಡೆಸುತ್ತಾ ತಾಲೂಕಿಗೆ ರಾಜ್ಯದ ಬಿಜೆಪಿ ಸರ್ಕಾರ ಯಾವುದೇ ಅನುದಾನಗಳನ್ನು ನೀಡಿಲ್ಲ ಎಂದು ಪೊಳ್ಳು ಮಾತುಗಳನ್ನಾಡುತ್ತಿದ್ದಾರೆ.ಆದರೆ ಕ್ಷೇತ್ರದ ಅಭಿವೃದ್ದಿಗಾಗಿ 300 ಕೋಟಿಯಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದು,ಬಿಜೆಪಿ ಸರ್ಕಾರ ಯಾವುದೇ ರೀತಿಯ ತಾರತಮ್ಯತೆಯನ್ನು ತೊರಿಲ್ಲವೆಂಬುದನ್ನು ಶಾಸಕರು ಮರೆಯುವಂತಿಲ್ಲ ಎಂದು ತಿಳಿಸಿದರು.
ಹುಳಿಯಾರಿನಲ್ಲಿ ನಡೆದ ಬಿಜೆಪಿ ಪಕ್ಷದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಮಾತನಾಡಿದರು.
              ಕ್ಷೇತ್ರದ ಮತ್ತೊಬ್ಬ ಮಾಜಿ ಶಾಸಕ ತಮ್ಮ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ,ಚಿ.ನಾ.ಹಳ್ಳಿ ತಾಲ್ಲೂಕಿಗೆ ಹೆಮಾವತಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದವರು,ಇಂದು ಈ ಭಾಗಕ್ಕೆ ಹೇವಾವತಿ ನೀರು ಹರಿಯುವ ಕಾರ್ಯಕ್ಕೆ ಚಾಲನೆಗೊಂಡಿರುವುದನ್ನು ಕಂಡು ಈ ಕಾರ್ಯವನ್ನು ಸ್ಥಗಿತಗೊಳಿಸಲು ಕೆಲ ವಾಮ ಮಾರ್ಗಗಳ ಅನುಸರಿಸಿ ಚಾಲನೆಗೊಂಡಿರುವ ಕಾಮಗಾರಿ ಕೆಲಸವನ್ನು ಸ್ಥಗಿತಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ ,ಇವರುಗಳ ಪೊಳ್ಳು ಬೆದರಿಕೆಗೆ ತಾವು ಮಣಿಯುವುದಿಲ್ಲ ಎಂದು ಗುಡುಗಿದರು.

         ಒಟ್ಟಾರೆ ಕೆಜೆಪಿಯ ಅಪಪ್ರಚಾರ,ಜೆಡಿಎಸ್ ನ ಆಸೆ ಅಮಿಷಗಳಿಗೆ ಮತದಾರರು ಬಲಿಯಾಗದೆ ತತ್ವಸಿದ್ದಾಂತಕ್ಕೆ ಬದ್ಧವಾಗಿರುವ ಬಿಜೆಪಿ ಬೆಂಬಲಿಸುವಂತೆ ಕೋರಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...