ವಿಷಯಕ್ಕೆ ಹೋಗಿ

ಹಿಂದೂ ಸಮಾಜವನ್ನು ಅಂಧಕಾರದಿಂದ ಬೆಳಕಿನೆಡೆಗೆ ತಂದವರು ಬಸವಣ್ಣ

 
ಸಮಾರಂಭದ ಉದ್ಘಾಟನೆಯಲ್ಲಿ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿ,ಜಿಲ್ಲಾ ಬಸವ ಸೇನೆಯ ಜಿಲ್ಲಾಧ್ಯಕ್ಷ ಗಂಗರಾಜು ,ಕೆಂಕೆರೆ ಬಸವಕೇಂದ್ರದ ಗಂಗಾಧರಯ್ಯ,ವೀರಶೈವ ಸಮಾಜದ ಅಧ್ಯಕ್ಷ ಜಿ.ಎಂ.ನೀಲಕಂಠಯ್ಯ,ಕಾರ್ಯದರ್ಶಿ ಗಂಗಾಧರಯ್ಯ
        ಹಿಂದೂ ಸಮಾಜದಲ್ಲಿದ್ದ ಅನೇಕ ಮೂಢನಂಬಿಕೆಗಳ ವಿರುದ್ದ ದನಿಯೆತ್ತಿ, ಯಾವುದೇ ಜಾತಿಯಲ್ಲಿ ಮೇಲುಕೀಳೆಂಬುದಿಲ್ಲ, ಎಲ್ಲಾ ಕುಲದವರು ಒಂದೇ ಎಂಬ ವಿಶಾಲ ಮನೋಭಾವವನ್ನು ಪ್ರತಿಯೊಬ್ಬ ಮಾನವರು ಹೊಂದಿ ತಮ್ಮತಮ್ಮ ಕಾಯದ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಎಂದು ಸಾರುತ್ತಾ ಹಿಂದೂ ಸಮಾಜದಲ್ಲಿನ ಅಂಧಕಾರವನ್ನು ತೊಡೆದು ಬೆಳಕಿನೆಡೆಗೆ ಕೊಂಡೊಯ್ದವರು ಮಹಾನ್ ಮಾನವತಾವಾದಿ ಬಸವಣ್ಣ ಎಂದು ಕುಪ್ಪೂರು ಗದ್ದಿಗೆ ಸಂಸ್ಥಾನದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.
 
ಹುಳಿಯಾರು ಹೋಬಳಿ ವಿರಶೈವ ಸಮಾಜ ಹಾಗೂ ಬಸವೇಶ್ವರ ಪತ್ತಿನ ಸಹಕಾರ ಸಂಘದವತಿಯಿಂದ ಪಟ್ಟಣದ ವೀರಭದ್ರೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ವಿಶ್ವಗುರು ಶ್ರೀ ಬಸವೇಶ್ವರರ ಜಯಂತ್ಯೋತ್ಸವದ ಸಾನಿಧ್ಯದವಹಿಸಿದ್ದ ಅವರು ಆಶೀರ್ವಚನ ನೀಡಿ ಮಾತನಾಡಿದರು.
ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿಜೀ ಆಶೀರ್ವಚನ ನೀಡಿದರು.
 12ನೇ ಶತಮಾದಲ್ಲಿ ಹಿಂದೂ ಧರ್ಮದಲ್ಲಿ ಹೊಸ ಧರ್ಮಕ್ರಾಂತಿಯನ್ನು ಹುಟ್ಟು ಹಾಕಿದ ಬಸವಣ್ಣನವರ ವಚನಗಳ ಸಂದೇಶ ಇಂದಿಗೂ ಪ್ರಸ್ತುತವಾಗಿದ್ದು ಸಮಾಜದ ಬದಲಾವಣೆಗೆ ಅಗತ್ಯವಾಗಿವೆ. ಬ್ರಾಹ್ಮಣ ಕುಲದಿಂದ ಬಂದ ಬಸವಣ್ಣ ವೀರಶೈವ ಕುಲದ ಆಚಾರವಿಚಾರಗಳನ್ನು ಒಪ್ಪಿ ಅದೇ ದಾರಿಯಲ್ಲಿ ಮುನ್ನೆಡೆಯುತ್ತಾ ನೂರಾರು ಶಿವಶರಣರನ್ನು ಒಗ್ಗೂಡಿಸಿದ್ದಲ್ಲದೆ ಕಾಯಕದ ಮಹತ್ವ ವನ್ನು ಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಟ್ಟ ಮಹಾನ್ ವ್ಯಕ್ತಿ ಎಂದರು. ವಿರಶೈವ ಎಂದರೆ ಹುಟ್ಟಿನಿಂದಲೇ ವೀರತ್ವವನ್ನು ಹೊಂದಿ ಜನ್ಮತಾಳಿದವನು.ಇಂತಹ ಕುಲದಲ್ಲಿ ಜನಿಸಿದ ನಾವೆಲ್ಲರೂ ಸಂಘಟಿತರಾಗುವ ಮೂಲಕ ಸಮಾಜದಲ್ಲಿ ಏಳ್ಗೆಯನ್ನು ಹೊಂದಬೇಕು ಎಂದರು.ಅಂಗಲಿಂಗ ಶುದ್ದಿಯಿಂದಿದ್ದರೆ ಜೀವನದಲ್ಲಿ ಯಶಸ್ಸುಲಭಿಸುತ್ತದೆ.ಅ ನಿಟ್ಟಿನಲ್ಲಿ ಸದಾಕಾಲ ಕೂಡಲಸಂಗಮನ ನೆನೆಯುವಂತೆ ತಿಳಿಸಿದರು.

ಸಂಜೆ ಅಷ್ಠಮಂಡಲ ಮಂಟಪದಲ್ಲಿ ಬಸವೇಶ್ವರರ ಭಾವಚಿತ್ರದೊಂದಿಗೆ ಪ್ರಾರಂಭವಾದ ಮೆರವಣಿಗೆಯಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಬೆಳ್ತಂಗಡಿ ಗಿರಿಧರ ಶೆಟ್ಟಿ ಬೊಂಬೆ ಬಳಗದಿಂದ ಹಾಲಕ್ಕಿ ಕುಣಿತ, ನಾದಸ್ವರ,ಕಡೂರಿನ ಬಸವಶ್ರೀ ಮಹಿಳಾ ತಂಡದವರಿಂದ ವೀರಗಾಸೆ,ಚಿಕ್ಕನಹಳ್ಳಿ ಶ್ರೀ ವಿರಭದ್ರೇಶ್ವರ ಜಾನಪದ ಕಲಾವಿದರ ಸಂಘದಿಂದ ವೀರಭದ್ರನ ಕುಣಿತ, ಕೆಂಕೆರೆ ಬಸವಕೇಂದ್ರ ಹಾಗೂ ಅಕ್ಕಮಹಾದೇವಿ ಮಹಿಳಾ ಸಂಘದಿಂದ ವಚನ ಗಾಯನ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳಿಂದ ವೈವಿಧ್ಯಮಯ ಪ್ರದರ್ಶನ ಹಾಗೂ ಮದ್ದುಗುಂಡಿನ ಪ್ರದರ್ಶನ ಉತ್ಸವದುದ್ದಕ್ಕೂ ನಡೆದು ನಂತರ ಅನ್ನಸಂತರ್ಪಣೆ ಜರುಗಿತು.
ಮಹಿಳಾ ವೀರಗಾಸೆ ತಂಡ
           ಜಯಂತ್ಯೋತ್ಸವನ್ನು ಜಿಲ್ಲಾ ಬಸವ ಸೇನೆಯ ಜಿಲ್ಲಾಧ್ಯಕ್ಷ ಗಂಗರಾಜು ಉದ್ಘಾಟಿಸಿದರು.ಕೆಂಕೆರೆ ಬಸವಕೇಂದ್ರದ ಗಂಗಾಧರಯ್ಯ ಪ್ರಾಸ್ತಾವಿಕ ನುಡಿ ನುಡಿದರು. ವೀರಶೈವ ಸಮಾಜದ ಅಧ್ಯಕ್ಷ ಜಿ.ಎಂ.ನೀಲಕಂಠಯ್ಯ ಅಧ್ಯಕ್ಷತೆವಹಿಸಿದ್ದು, ಕಾರ್ಯದರ್ಶಿ ಗಂಗಾಧರಯ್ಯ,ಜಿಲ್ಲಾ ಎಪಿಎಂಸಿ ಉಪಾಧ್ಯಕ್ಷ ಶಿವಕುಮಾರ್,ಪತ್ರಿಕಾ ಸಂಪಾದಕ ಸತೀಶ್ ಉಪಸ್ಥಿತರಿದ್ದ ಧಾರ್ಮಿಕ ಸಮಾರಂಭವನ್ನು ಡಿ.ರಮೇಶ್ ನಿರೂಪಿಸಿ, ಉಮೇಶ್ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...