ವಿಷಯಕ್ಕೆ ಹೋಗಿ

ಹಿಂದೂ ಸಮಾಜವನ್ನು ಅಂಧಕಾರದಿಂದ ಬೆಳಕಿನೆಡೆಗೆ ತಂದವರು ಬಸವಣ್ಣ

 
ಸಮಾರಂಭದ ಉದ್ಘಾಟನೆಯಲ್ಲಿ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿ,ಜಿಲ್ಲಾ ಬಸವ ಸೇನೆಯ ಜಿಲ್ಲಾಧ್ಯಕ್ಷ ಗಂಗರಾಜು ,ಕೆಂಕೆರೆ ಬಸವಕೇಂದ್ರದ ಗಂಗಾಧರಯ್ಯ,ವೀರಶೈವ ಸಮಾಜದ ಅಧ್ಯಕ್ಷ ಜಿ.ಎಂ.ನೀಲಕಂಠಯ್ಯ,ಕಾರ್ಯದರ್ಶಿ ಗಂಗಾಧರಯ್ಯ
        ಹಿಂದೂ ಸಮಾಜದಲ್ಲಿದ್ದ ಅನೇಕ ಮೂಢನಂಬಿಕೆಗಳ ವಿರುದ್ದ ದನಿಯೆತ್ತಿ, ಯಾವುದೇ ಜಾತಿಯಲ್ಲಿ ಮೇಲುಕೀಳೆಂಬುದಿಲ್ಲ, ಎಲ್ಲಾ ಕುಲದವರು ಒಂದೇ ಎಂಬ ವಿಶಾಲ ಮನೋಭಾವವನ್ನು ಪ್ರತಿಯೊಬ್ಬ ಮಾನವರು ಹೊಂದಿ ತಮ್ಮತಮ್ಮ ಕಾಯದ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಎಂದು ಸಾರುತ್ತಾ ಹಿಂದೂ ಸಮಾಜದಲ್ಲಿನ ಅಂಧಕಾರವನ್ನು ತೊಡೆದು ಬೆಳಕಿನೆಡೆಗೆ ಕೊಂಡೊಯ್ದವರು ಮಹಾನ್ ಮಾನವತಾವಾದಿ ಬಸವಣ್ಣ ಎಂದು ಕುಪ್ಪೂರು ಗದ್ದಿಗೆ ಸಂಸ್ಥಾನದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.
 
ಹುಳಿಯಾರು ಹೋಬಳಿ ವಿರಶೈವ ಸಮಾಜ ಹಾಗೂ ಬಸವೇಶ್ವರ ಪತ್ತಿನ ಸಹಕಾರ ಸಂಘದವತಿಯಿಂದ ಪಟ್ಟಣದ ವೀರಭದ್ರೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ವಿಶ್ವಗುರು ಶ್ರೀ ಬಸವೇಶ್ವರರ ಜಯಂತ್ಯೋತ್ಸವದ ಸಾನಿಧ್ಯದವಹಿಸಿದ್ದ ಅವರು ಆಶೀರ್ವಚನ ನೀಡಿ ಮಾತನಾಡಿದರು.
ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿಜೀ ಆಶೀರ್ವಚನ ನೀಡಿದರು.
 12ನೇ ಶತಮಾದಲ್ಲಿ ಹಿಂದೂ ಧರ್ಮದಲ್ಲಿ ಹೊಸ ಧರ್ಮಕ್ರಾಂತಿಯನ್ನು ಹುಟ್ಟು ಹಾಕಿದ ಬಸವಣ್ಣನವರ ವಚನಗಳ ಸಂದೇಶ ಇಂದಿಗೂ ಪ್ರಸ್ತುತವಾಗಿದ್ದು ಸಮಾಜದ ಬದಲಾವಣೆಗೆ ಅಗತ್ಯವಾಗಿವೆ. ಬ್ರಾಹ್ಮಣ ಕುಲದಿಂದ ಬಂದ ಬಸವಣ್ಣ ವೀರಶೈವ ಕುಲದ ಆಚಾರವಿಚಾರಗಳನ್ನು ಒಪ್ಪಿ ಅದೇ ದಾರಿಯಲ್ಲಿ ಮುನ್ನೆಡೆಯುತ್ತಾ ನೂರಾರು ಶಿವಶರಣರನ್ನು ಒಗ್ಗೂಡಿಸಿದ್ದಲ್ಲದೆ ಕಾಯಕದ ಮಹತ್ವ ವನ್ನು ಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಟ್ಟ ಮಹಾನ್ ವ್ಯಕ್ತಿ ಎಂದರು. ವಿರಶೈವ ಎಂದರೆ ಹುಟ್ಟಿನಿಂದಲೇ ವೀರತ್ವವನ್ನು ಹೊಂದಿ ಜನ್ಮತಾಳಿದವನು.ಇಂತಹ ಕುಲದಲ್ಲಿ ಜನಿಸಿದ ನಾವೆಲ್ಲರೂ ಸಂಘಟಿತರಾಗುವ ಮೂಲಕ ಸಮಾಜದಲ್ಲಿ ಏಳ್ಗೆಯನ್ನು ಹೊಂದಬೇಕು ಎಂದರು.ಅಂಗಲಿಂಗ ಶುದ್ದಿಯಿಂದಿದ್ದರೆ ಜೀವನದಲ್ಲಿ ಯಶಸ್ಸುಲಭಿಸುತ್ತದೆ.ಅ ನಿಟ್ಟಿನಲ್ಲಿ ಸದಾಕಾಲ ಕೂಡಲಸಂಗಮನ ನೆನೆಯುವಂತೆ ತಿಳಿಸಿದರು.

ಸಂಜೆ ಅಷ್ಠಮಂಡಲ ಮಂಟಪದಲ್ಲಿ ಬಸವೇಶ್ವರರ ಭಾವಚಿತ್ರದೊಂದಿಗೆ ಪ್ರಾರಂಭವಾದ ಮೆರವಣಿಗೆಯಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಬೆಳ್ತಂಗಡಿ ಗಿರಿಧರ ಶೆಟ್ಟಿ ಬೊಂಬೆ ಬಳಗದಿಂದ ಹಾಲಕ್ಕಿ ಕುಣಿತ, ನಾದಸ್ವರ,ಕಡೂರಿನ ಬಸವಶ್ರೀ ಮಹಿಳಾ ತಂಡದವರಿಂದ ವೀರಗಾಸೆ,ಚಿಕ್ಕನಹಳ್ಳಿ ಶ್ರೀ ವಿರಭದ್ರೇಶ್ವರ ಜಾನಪದ ಕಲಾವಿದರ ಸಂಘದಿಂದ ವೀರಭದ್ರನ ಕುಣಿತ, ಕೆಂಕೆರೆ ಬಸವಕೇಂದ್ರ ಹಾಗೂ ಅಕ್ಕಮಹಾದೇವಿ ಮಹಿಳಾ ಸಂಘದಿಂದ ವಚನ ಗಾಯನ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳಿಂದ ವೈವಿಧ್ಯಮಯ ಪ್ರದರ್ಶನ ಹಾಗೂ ಮದ್ದುಗುಂಡಿನ ಪ್ರದರ್ಶನ ಉತ್ಸವದುದ್ದಕ್ಕೂ ನಡೆದು ನಂತರ ಅನ್ನಸಂತರ್ಪಣೆ ಜರುಗಿತು.
ಮಹಿಳಾ ವೀರಗಾಸೆ ತಂಡ
           ಜಯಂತ್ಯೋತ್ಸವನ್ನು ಜಿಲ್ಲಾ ಬಸವ ಸೇನೆಯ ಜಿಲ್ಲಾಧ್ಯಕ್ಷ ಗಂಗರಾಜು ಉದ್ಘಾಟಿಸಿದರು.ಕೆಂಕೆರೆ ಬಸವಕೇಂದ್ರದ ಗಂಗಾಧರಯ್ಯ ಪ್ರಾಸ್ತಾವಿಕ ನುಡಿ ನುಡಿದರು. ವೀರಶೈವ ಸಮಾಜದ ಅಧ್ಯಕ್ಷ ಜಿ.ಎಂ.ನೀಲಕಂಠಯ್ಯ ಅಧ್ಯಕ್ಷತೆವಹಿಸಿದ್ದು, ಕಾರ್ಯದರ್ಶಿ ಗಂಗಾಧರಯ್ಯ,ಜಿಲ್ಲಾ ಎಪಿಎಂಸಿ ಉಪಾಧ್ಯಕ್ಷ ಶಿವಕುಮಾರ್,ಪತ್ರಿಕಾ ಸಂಪಾದಕ ಸತೀಶ್ ಉಪಸ್ಥಿತರಿದ್ದ ಧಾರ್ಮಿಕ ಸಮಾರಂಭವನ್ನು ಡಿ.ರಮೇಶ್ ನಿರೂಪಿಸಿ, ಉಮೇಶ್ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.